Homeಆರೋಗ್ಯಕೊರೋನಾವೈರಸ್‌ ಕುರಿತ ಊಹಾಪೋಹಗಳಿಗೆ WHO ಸ್ಪಷ್ಟನೆ: ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ಗೊತ್ತೆ?

ಕೊರೋನಾವೈರಸ್‌ ಕುರಿತ ಊಹಾಪೋಹಗಳಿಗೆ WHO ಸ್ಪಷ್ಟನೆ: ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ಗೊತ್ತೆ?

- Advertisement -
- Advertisement -

ಕೊರೋನಾ ವೈರಸ್‌ ಹರಡುತ್ತಿರುವ ಸಮಯದಲ್ಲಿ ಅದಕ್ಕಿಂತಲೂ ವೇಗವಾಗಿ ಅದರ ಕುರಿತ ಸುಳ್ಳು ಸುದ್ದಿಯಗಳು, ತಪ್ಪು ಅಭಿಪ್ರಾಯಗಳು ಹರಡುತ್ತಿವೆ. ಈ ಕುರಿತು ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದೆಂದು ವಿಶ್ವ ಆರೋಗ್ಯ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಒಂದಷ್ಟು ಸ್ಪಷ್ಟನೆಗಳನ್ನು ನೀಡಿದೆ. ಅವುಗಳೆಂದರೆ…

  • ಬೆಳ್ಳುಳ್ಳಿಯು ಆರೋಗ್ಯಕರ ಆಹಾರ; ಅದರಲ್ಲಿ ಹಲವು ಸೂಕ್ಷ್ಮಾಣುಗಳ ನಿರೋಧಕ ಶಕ್ತಿ ಇರಬಹುದು; ಆದರೆ ಅದನ್ನು ತಿನ್ನುವುದರಿಂದ ಹೊಸ ಕೊರೋನಾವೈರಸ್ ವಿರುದ್ಧ ರಕ್ಷಣೆ ಸಿಗುತ್ತದೆ ಎಂಬುದಕ್ಕೆ ಪುರಾವೆಗಳಿಲ್ಲ.
  • ಮೂಗನ್ನು ಪದೇ ಪದೇ ಸಲೈನ್‌ನಿಂದ (ಉಪ್ಪು ನೀರು, ಕ್ಷಾರ) ತೊಳೆಯುವುದರಿಂದ ಉಸಿರಾಟದ ಸೋಂಕು ತಡೆದ ಬಗ್ಗೆ ನಿದರ್ಶನಗಳಿಲ್ಲ.
  • ಚೀನಾದ ವಸ್ತುಗಳಿಂದ ಕೊರೋನಾವೈರಸ್ ಬರುತ್ತದೆ ಎಂದೇನಿಲ್ಲ; ಹಾಗಿದ್ದೂ ಚೀನಾದ ವಸ್ತುಗಳನ್ನು ಪಡೆಯುವಾಗ ಅದರ ಪೊಟ್ಟಣವನ್ನು ಶುಚಿಗೊಳಿಸಿ ಮತ್ತು ಅದನ್ನು ಮುಟ್ಟಿದ ಮೇಲೆ ಕೈಗಳನ್ನು ಸಾಬೂನು ಮತ್ತು ನೀರಿನಿಂದ ತೊಳೆದುಕೊಳ್ಳಿರಿ.
  • ಹೊಸ ಕೊರೋನಾವೈರಸ್ ಉಷ್ಣ ಮತ್ತು ಶೀತ ಪ್ರದೇಶಗಳೆಂದು ಪರಿಗಣಿಸದೆ ಎಲ್ಲಾ ಪ್ರದೇಶಗಳಲ್ಲೂ ವರ್ಗಾವಣೆ ಆಗುತ್ತದೆ. ಆಗಾಗ್ಗೆ ಕೈ ತೊಳೆದುಕೊಳ್ಳುವುದೇ ಇದಕ್ಕಿರುವ ಅತ್ಯುತ್ತಮ ತಡೆ.
  • ಶೀತಗಾಳಿ ಮತ್ತು ಮಂಜಿನಿಂದ ಕೊರೋನಾವೈರಸ್ ಸಾಯುವುದಿಲ್ಲ.
  • ಬಿಸಿನೀರಿನ ಸ್ನಾನ ಮಾಡುವುದರಿಂದ ಹೊಸ ಕೊರೋನಾವೈರಸ್ ಕಾಯಿಲೆಯನ್ನು ತಡೆಯಲು ಆಗುವುದಿಲ್ಲ.
  • ಸೊಳ್ಳೆ ಕಡಿತದಿಂದ ಹೊಸ ಕೊರೋನಾವೈರಸ್ ಸೋಂಕು ಬರುವುದಿಲ್ಲ. ಇದು ಮುಖ್ಯತಃ ಶ್ವಾಸನಾಳದ ವೈರಸ್; ಸೋಂಕಿನ ವ್ಯಕ್ತಿ ಸೀನಿದಾಗ, ಕೆಮ್ಮಿದಾಗ ಹೊರಬೀಳುವ ಎಂಜಲಿನ ಕಣಗಳಿಂದ ಹರಡುತ್ತದೆ.
  • ಸಾಕುಪ್ರಾಣಿಗಳಿಗೆ ಕೊರೋನಾವೈರಸ್ ಬರುತ್ತದೆ ಎಂಬುದಕ್ಕೆ ಪುರಾವೆಗಳಿಲ್ಲ; ಆದಾಗ್ಯೂ ಅಂತಹ ಸಾಕುಪ್ರಾಣಿಗಳನ್ನು ಮುಟ್ಟಿದಾಗ ಚೆನ್ನಾಗಿ ಕೈ ತೊಳೆದುಕೊಳ್ಳಿ.
  • ಹೊಸ ಕೊರೋನಾವೈರಸ್ ಯಾವುದೇ ವಯಸ್ಸಿನ ವ್ಯಕ್ತಿಗೂ ಬರಬಹುದು.
  • ಆಂಟಿ-ಬಯಾಟಿಕ್‌ಗಳು ಕೇವಲ ಬ್ಯಾಕ್ಟೀರಿಯಾ ತಡೆಗೆ ನೆರವಾಗುತ್ತವೆಯೇ ಹೊರತು ಕೊರೋನಾವೈರಸ್ ವಿರುದ್ಧ ಬಳಕೆಗೆ ಬರುವುದಿಲ್ಲ.
  • ನ್ಯೂಮೋನಿಯ ಲಸಿಕೆಯು ಕೊರೋನಾವೈರಸ್ ಗೆ ಚಿಕಿತ್ಸೆ ಅಲ್ಲ. ಆದಾಗ್ಯೂ ನಿಮ್ಮ ಆರೋಗ್ಯಕ್ಕಾಗಿ ಉಸಿರಾಟ ಸಂಬಂಧಿ ಲಸಿಕೆ ಹಾಕಿಸಿಕೊಳ್ಳಬಹುದು.
  • ಥರ್ಮಲ್ ಸ್ಕಾನರ್‌ನಿಂದ ಜ್ವರ ಬಂದವರನ್ನು ಗುರುತಿಸಬಹುದೇ ಹೊರತು 10 ದಿನಗಳ ಒಳಗಿರುವ ಸೋಂಕು ಪೀಡಿತರನ್ನಲ್ಲ; ಅವರಲ್ಲಿ ಇನ್ನೂ ಜ್ವರ ಬರದೇ ಇರಲೂಬಹುದು. (ಸೋಂಕಿನಿಂದ ಜ್ವರ ಬರಲು ಎರಡರಿಂದ ಹತ್ತು ದಿನಗಳು ಬೇಕು).
  • ಹ್ಯಾಂಡ್ ಡ್ರೈಯರ್‌ಗಳಿಂದ ಈ ವೈರಸನ್ನು ಸಾಯಿಸಲು ಸಾಧ್ಯವಿಲ್ಲ. ಆಗಾಗ್ಗೆ ಕೈ ತೊಳೆದುಕೊಳ್ಳುವುದೇ ಸೂಕ್ತ ವಿಧಾನ.
  • ಅಲ್ಟ್ರಾವಯಲೆಟ್ ದೀಪದಿಂದ ಹೊಸ ಕೊರೋನಾವೈರಸ್‌ ಅನ್ನು ಸಾಯಿಸಲು ಬರುವುದಿಲ್ಲ. ಅದನ್ನು ಕೈ ಶುದ್ಧೀಕರಣಕ್ಕೆ ಬಳಸಬಾರದು.
  • ಹೊಸ ಕೊರೋನಾವೈರಸ್ಗೆ ಸದ್ಯಕ್ಕಂತೂ ಯಾವುದೇ ನಿರ್ದಿಷ್ಟ ಔಷಧ ಇಲ್ಲ. ಆದರೆ ಸೋಂಕು ಪೀಡಿತರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಮತ್ತು ಸೂಕ್ತ ಬೆಂಬಲ ನೀಡಬೇಕು.

ದೇಹದ ಮೇಲೆಲ್ಲ ಆಲ್ಕೋಹಾಲ್ ಅಥವಾ ಕ್ಲೋರಿನ್ ಸಿಂಪಡಣೆ ಮಾಡಿದರೆ ದೇಹದ ಒಳಗೆ ಅದಾಗಲೇ ಹೊಕ್ಕಿರಬಹುದಾದ ಹೊಸ ಕೊರೋನಾವೈರಸ್ ಸಾಯುವುದಿಲ್ಲ.

ಮೂಲ: ವಿಶ್ವ ಆರೋಗ್ಯ ಸಂಸ್ಥೆ ವೆಬ್‌ಸೈಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...