Homeಆರೋಗ್ಯಕೊರೋನಾವೈರಸ್‌ ಕುರಿತ ಊಹಾಪೋಹಗಳಿಗೆ WHO ಸ್ಪಷ್ಟನೆ: ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ಗೊತ್ತೆ?

ಕೊರೋನಾವೈರಸ್‌ ಕುರಿತ ಊಹಾಪೋಹಗಳಿಗೆ WHO ಸ್ಪಷ್ಟನೆ: ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ಗೊತ್ತೆ?

- Advertisement -
- Advertisement -

ಕೊರೋನಾ ವೈರಸ್‌ ಹರಡುತ್ತಿರುವ ಸಮಯದಲ್ಲಿ ಅದಕ್ಕಿಂತಲೂ ವೇಗವಾಗಿ ಅದರ ಕುರಿತ ಸುಳ್ಳು ಸುದ್ದಿಯಗಳು, ತಪ್ಪು ಅಭಿಪ್ರಾಯಗಳು ಹರಡುತ್ತಿವೆ. ಈ ಕುರಿತು ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದೆಂದು ವಿಶ್ವ ಆರೋಗ್ಯ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಒಂದಷ್ಟು ಸ್ಪಷ್ಟನೆಗಳನ್ನು ನೀಡಿದೆ. ಅವುಗಳೆಂದರೆ…

  • ಬೆಳ್ಳುಳ್ಳಿಯು ಆರೋಗ್ಯಕರ ಆಹಾರ; ಅದರಲ್ಲಿ ಹಲವು ಸೂಕ್ಷ್ಮಾಣುಗಳ ನಿರೋಧಕ ಶಕ್ತಿ ಇರಬಹುದು; ಆದರೆ ಅದನ್ನು ತಿನ್ನುವುದರಿಂದ ಹೊಸ ಕೊರೋನಾವೈರಸ್ ವಿರುದ್ಧ ರಕ್ಷಣೆ ಸಿಗುತ್ತದೆ ಎಂಬುದಕ್ಕೆ ಪುರಾವೆಗಳಿಲ್ಲ.
  • ಮೂಗನ್ನು ಪದೇ ಪದೇ ಸಲೈನ್‌ನಿಂದ (ಉಪ್ಪು ನೀರು, ಕ್ಷಾರ) ತೊಳೆಯುವುದರಿಂದ ಉಸಿರಾಟದ ಸೋಂಕು ತಡೆದ ಬಗ್ಗೆ ನಿದರ್ಶನಗಳಿಲ್ಲ.
  • ಚೀನಾದ ವಸ್ತುಗಳಿಂದ ಕೊರೋನಾವೈರಸ್ ಬರುತ್ತದೆ ಎಂದೇನಿಲ್ಲ; ಹಾಗಿದ್ದೂ ಚೀನಾದ ವಸ್ತುಗಳನ್ನು ಪಡೆಯುವಾಗ ಅದರ ಪೊಟ್ಟಣವನ್ನು ಶುಚಿಗೊಳಿಸಿ ಮತ್ತು ಅದನ್ನು ಮುಟ್ಟಿದ ಮೇಲೆ ಕೈಗಳನ್ನು ಸಾಬೂನು ಮತ್ತು ನೀರಿನಿಂದ ತೊಳೆದುಕೊಳ್ಳಿರಿ.
  • ಹೊಸ ಕೊರೋನಾವೈರಸ್ ಉಷ್ಣ ಮತ್ತು ಶೀತ ಪ್ರದೇಶಗಳೆಂದು ಪರಿಗಣಿಸದೆ ಎಲ್ಲಾ ಪ್ರದೇಶಗಳಲ್ಲೂ ವರ್ಗಾವಣೆ ಆಗುತ್ತದೆ. ಆಗಾಗ್ಗೆ ಕೈ ತೊಳೆದುಕೊಳ್ಳುವುದೇ ಇದಕ್ಕಿರುವ ಅತ್ಯುತ್ತಮ ತಡೆ.
  • ಶೀತಗಾಳಿ ಮತ್ತು ಮಂಜಿನಿಂದ ಕೊರೋನಾವೈರಸ್ ಸಾಯುವುದಿಲ್ಲ.
  • ಬಿಸಿನೀರಿನ ಸ್ನಾನ ಮಾಡುವುದರಿಂದ ಹೊಸ ಕೊರೋನಾವೈರಸ್ ಕಾಯಿಲೆಯನ್ನು ತಡೆಯಲು ಆಗುವುದಿಲ್ಲ.
  • ಸೊಳ್ಳೆ ಕಡಿತದಿಂದ ಹೊಸ ಕೊರೋನಾವೈರಸ್ ಸೋಂಕು ಬರುವುದಿಲ್ಲ. ಇದು ಮುಖ್ಯತಃ ಶ್ವಾಸನಾಳದ ವೈರಸ್; ಸೋಂಕಿನ ವ್ಯಕ್ತಿ ಸೀನಿದಾಗ, ಕೆಮ್ಮಿದಾಗ ಹೊರಬೀಳುವ ಎಂಜಲಿನ ಕಣಗಳಿಂದ ಹರಡುತ್ತದೆ.
  • ಸಾಕುಪ್ರಾಣಿಗಳಿಗೆ ಕೊರೋನಾವೈರಸ್ ಬರುತ್ತದೆ ಎಂಬುದಕ್ಕೆ ಪುರಾವೆಗಳಿಲ್ಲ; ಆದಾಗ್ಯೂ ಅಂತಹ ಸಾಕುಪ್ರಾಣಿಗಳನ್ನು ಮುಟ್ಟಿದಾಗ ಚೆನ್ನಾಗಿ ಕೈ ತೊಳೆದುಕೊಳ್ಳಿ.
  • ಹೊಸ ಕೊರೋನಾವೈರಸ್ ಯಾವುದೇ ವಯಸ್ಸಿನ ವ್ಯಕ್ತಿಗೂ ಬರಬಹುದು.
  • ಆಂಟಿ-ಬಯಾಟಿಕ್‌ಗಳು ಕೇವಲ ಬ್ಯಾಕ್ಟೀರಿಯಾ ತಡೆಗೆ ನೆರವಾಗುತ್ತವೆಯೇ ಹೊರತು ಕೊರೋನಾವೈರಸ್ ವಿರುದ್ಧ ಬಳಕೆಗೆ ಬರುವುದಿಲ್ಲ.
  • ನ್ಯೂಮೋನಿಯ ಲಸಿಕೆಯು ಕೊರೋನಾವೈರಸ್ ಗೆ ಚಿಕಿತ್ಸೆ ಅಲ್ಲ. ಆದಾಗ್ಯೂ ನಿಮ್ಮ ಆರೋಗ್ಯಕ್ಕಾಗಿ ಉಸಿರಾಟ ಸಂಬಂಧಿ ಲಸಿಕೆ ಹಾಕಿಸಿಕೊಳ್ಳಬಹುದು.
  • ಥರ್ಮಲ್ ಸ್ಕಾನರ್‌ನಿಂದ ಜ್ವರ ಬಂದವರನ್ನು ಗುರುತಿಸಬಹುದೇ ಹೊರತು 10 ದಿನಗಳ ಒಳಗಿರುವ ಸೋಂಕು ಪೀಡಿತರನ್ನಲ್ಲ; ಅವರಲ್ಲಿ ಇನ್ನೂ ಜ್ವರ ಬರದೇ ಇರಲೂಬಹುದು. (ಸೋಂಕಿನಿಂದ ಜ್ವರ ಬರಲು ಎರಡರಿಂದ ಹತ್ತು ದಿನಗಳು ಬೇಕು).
  • ಹ್ಯಾಂಡ್ ಡ್ರೈಯರ್‌ಗಳಿಂದ ಈ ವೈರಸನ್ನು ಸಾಯಿಸಲು ಸಾಧ್ಯವಿಲ್ಲ. ಆಗಾಗ್ಗೆ ಕೈ ತೊಳೆದುಕೊಳ್ಳುವುದೇ ಸೂಕ್ತ ವಿಧಾನ.
  • ಅಲ್ಟ್ರಾವಯಲೆಟ್ ದೀಪದಿಂದ ಹೊಸ ಕೊರೋನಾವೈರಸ್‌ ಅನ್ನು ಸಾಯಿಸಲು ಬರುವುದಿಲ್ಲ. ಅದನ್ನು ಕೈ ಶುದ್ಧೀಕರಣಕ್ಕೆ ಬಳಸಬಾರದು.
  • ಹೊಸ ಕೊರೋನಾವೈರಸ್ಗೆ ಸದ್ಯಕ್ಕಂತೂ ಯಾವುದೇ ನಿರ್ದಿಷ್ಟ ಔಷಧ ಇಲ್ಲ. ಆದರೆ ಸೋಂಕು ಪೀಡಿತರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಮತ್ತು ಸೂಕ್ತ ಬೆಂಬಲ ನೀಡಬೇಕು.

ದೇಹದ ಮೇಲೆಲ್ಲ ಆಲ್ಕೋಹಾಲ್ ಅಥವಾ ಕ್ಲೋರಿನ್ ಸಿಂಪಡಣೆ ಮಾಡಿದರೆ ದೇಹದ ಒಳಗೆ ಅದಾಗಲೇ ಹೊಕ್ಕಿರಬಹುದಾದ ಹೊಸ ಕೊರೋನಾವೈರಸ್ ಸಾಯುವುದಿಲ್ಲ.

ಮೂಲ: ವಿಶ್ವ ಆರೋಗ್ಯ ಸಂಸ್ಥೆ ವೆಬ್‌ಸೈಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...