Homeಆರೋಗ್ಯಕೊರೋನಾವೈರಸ್‌ ಕುರಿತ ಊಹಾಪೋಹಗಳಿಗೆ WHO ಸ್ಪಷ್ಟನೆ: ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ಗೊತ್ತೆ?

ಕೊರೋನಾವೈರಸ್‌ ಕುರಿತ ಊಹಾಪೋಹಗಳಿಗೆ WHO ಸ್ಪಷ್ಟನೆ: ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ಗೊತ್ತೆ?

- Advertisement -
- Advertisement -

ಕೊರೋನಾ ವೈರಸ್‌ ಹರಡುತ್ತಿರುವ ಸಮಯದಲ್ಲಿ ಅದಕ್ಕಿಂತಲೂ ವೇಗವಾಗಿ ಅದರ ಕುರಿತ ಸುಳ್ಳು ಸುದ್ದಿಯಗಳು, ತಪ್ಪು ಅಭಿಪ್ರಾಯಗಳು ಹರಡುತ್ತಿವೆ. ಈ ಕುರಿತು ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದೆಂದು ವಿಶ್ವ ಆರೋಗ್ಯ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಒಂದಷ್ಟು ಸ್ಪಷ್ಟನೆಗಳನ್ನು ನೀಡಿದೆ. ಅವುಗಳೆಂದರೆ…

  • ಬೆಳ್ಳುಳ್ಳಿಯು ಆರೋಗ್ಯಕರ ಆಹಾರ; ಅದರಲ್ಲಿ ಹಲವು ಸೂಕ್ಷ್ಮಾಣುಗಳ ನಿರೋಧಕ ಶಕ್ತಿ ಇರಬಹುದು; ಆದರೆ ಅದನ್ನು ತಿನ್ನುವುದರಿಂದ ಹೊಸ ಕೊರೋನಾವೈರಸ್ ವಿರುದ್ಧ ರಕ್ಷಣೆ ಸಿಗುತ್ತದೆ ಎಂಬುದಕ್ಕೆ ಪುರಾವೆಗಳಿಲ್ಲ.
  • ಮೂಗನ್ನು ಪದೇ ಪದೇ ಸಲೈನ್‌ನಿಂದ (ಉಪ್ಪು ನೀರು, ಕ್ಷಾರ) ತೊಳೆಯುವುದರಿಂದ ಉಸಿರಾಟದ ಸೋಂಕು ತಡೆದ ಬಗ್ಗೆ ನಿದರ್ಶನಗಳಿಲ್ಲ.
  • ಚೀನಾದ ವಸ್ತುಗಳಿಂದ ಕೊರೋನಾವೈರಸ್ ಬರುತ್ತದೆ ಎಂದೇನಿಲ್ಲ; ಹಾಗಿದ್ದೂ ಚೀನಾದ ವಸ್ತುಗಳನ್ನು ಪಡೆಯುವಾಗ ಅದರ ಪೊಟ್ಟಣವನ್ನು ಶುಚಿಗೊಳಿಸಿ ಮತ್ತು ಅದನ್ನು ಮುಟ್ಟಿದ ಮೇಲೆ ಕೈಗಳನ್ನು ಸಾಬೂನು ಮತ್ತು ನೀರಿನಿಂದ ತೊಳೆದುಕೊಳ್ಳಿರಿ.
  • ಹೊಸ ಕೊರೋನಾವೈರಸ್ ಉಷ್ಣ ಮತ್ತು ಶೀತ ಪ್ರದೇಶಗಳೆಂದು ಪರಿಗಣಿಸದೆ ಎಲ್ಲಾ ಪ್ರದೇಶಗಳಲ್ಲೂ ವರ್ಗಾವಣೆ ಆಗುತ್ತದೆ. ಆಗಾಗ್ಗೆ ಕೈ ತೊಳೆದುಕೊಳ್ಳುವುದೇ ಇದಕ್ಕಿರುವ ಅತ್ಯುತ್ತಮ ತಡೆ.
  • ಶೀತಗಾಳಿ ಮತ್ತು ಮಂಜಿನಿಂದ ಕೊರೋನಾವೈರಸ್ ಸಾಯುವುದಿಲ್ಲ.
  • ಬಿಸಿನೀರಿನ ಸ್ನಾನ ಮಾಡುವುದರಿಂದ ಹೊಸ ಕೊರೋನಾವೈರಸ್ ಕಾಯಿಲೆಯನ್ನು ತಡೆಯಲು ಆಗುವುದಿಲ್ಲ.
  • ಸೊಳ್ಳೆ ಕಡಿತದಿಂದ ಹೊಸ ಕೊರೋನಾವೈರಸ್ ಸೋಂಕು ಬರುವುದಿಲ್ಲ. ಇದು ಮುಖ್ಯತಃ ಶ್ವಾಸನಾಳದ ವೈರಸ್; ಸೋಂಕಿನ ವ್ಯಕ್ತಿ ಸೀನಿದಾಗ, ಕೆಮ್ಮಿದಾಗ ಹೊರಬೀಳುವ ಎಂಜಲಿನ ಕಣಗಳಿಂದ ಹರಡುತ್ತದೆ.
  • ಸಾಕುಪ್ರಾಣಿಗಳಿಗೆ ಕೊರೋನಾವೈರಸ್ ಬರುತ್ತದೆ ಎಂಬುದಕ್ಕೆ ಪುರಾವೆಗಳಿಲ್ಲ; ಆದಾಗ್ಯೂ ಅಂತಹ ಸಾಕುಪ್ರಾಣಿಗಳನ್ನು ಮುಟ್ಟಿದಾಗ ಚೆನ್ನಾಗಿ ಕೈ ತೊಳೆದುಕೊಳ್ಳಿ.
  • ಹೊಸ ಕೊರೋನಾವೈರಸ್ ಯಾವುದೇ ವಯಸ್ಸಿನ ವ್ಯಕ್ತಿಗೂ ಬರಬಹುದು.
  • ಆಂಟಿ-ಬಯಾಟಿಕ್‌ಗಳು ಕೇವಲ ಬ್ಯಾಕ್ಟೀರಿಯಾ ತಡೆಗೆ ನೆರವಾಗುತ್ತವೆಯೇ ಹೊರತು ಕೊರೋನಾವೈರಸ್ ವಿರುದ್ಧ ಬಳಕೆಗೆ ಬರುವುದಿಲ್ಲ.
  • ನ್ಯೂಮೋನಿಯ ಲಸಿಕೆಯು ಕೊರೋನಾವೈರಸ್ ಗೆ ಚಿಕಿತ್ಸೆ ಅಲ್ಲ. ಆದಾಗ್ಯೂ ನಿಮ್ಮ ಆರೋಗ್ಯಕ್ಕಾಗಿ ಉಸಿರಾಟ ಸಂಬಂಧಿ ಲಸಿಕೆ ಹಾಕಿಸಿಕೊಳ್ಳಬಹುದು.
  • ಥರ್ಮಲ್ ಸ್ಕಾನರ್‌ನಿಂದ ಜ್ವರ ಬಂದವರನ್ನು ಗುರುತಿಸಬಹುದೇ ಹೊರತು 10 ದಿನಗಳ ಒಳಗಿರುವ ಸೋಂಕು ಪೀಡಿತರನ್ನಲ್ಲ; ಅವರಲ್ಲಿ ಇನ್ನೂ ಜ್ವರ ಬರದೇ ಇರಲೂಬಹುದು. (ಸೋಂಕಿನಿಂದ ಜ್ವರ ಬರಲು ಎರಡರಿಂದ ಹತ್ತು ದಿನಗಳು ಬೇಕು).
  • ಹ್ಯಾಂಡ್ ಡ್ರೈಯರ್‌ಗಳಿಂದ ಈ ವೈರಸನ್ನು ಸಾಯಿಸಲು ಸಾಧ್ಯವಿಲ್ಲ. ಆಗಾಗ್ಗೆ ಕೈ ತೊಳೆದುಕೊಳ್ಳುವುದೇ ಸೂಕ್ತ ವಿಧಾನ.
  • ಅಲ್ಟ್ರಾವಯಲೆಟ್ ದೀಪದಿಂದ ಹೊಸ ಕೊರೋನಾವೈರಸ್‌ ಅನ್ನು ಸಾಯಿಸಲು ಬರುವುದಿಲ್ಲ. ಅದನ್ನು ಕೈ ಶುದ್ಧೀಕರಣಕ್ಕೆ ಬಳಸಬಾರದು.
  • ಹೊಸ ಕೊರೋನಾವೈರಸ್ಗೆ ಸದ್ಯಕ್ಕಂತೂ ಯಾವುದೇ ನಿರ್ದಿಷ್ಟ ಔಷಧ ಇಲ್ಲ. ಆದರೆ ಸೋಂಕು ಪೀಡಿತರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಮತ್ತು ಸೂಕ್ತ ಬೆಂಬಲ ನೀಡಬೇಕು.

ದೇಹದ ಮೇಲೆಲ್ಲ ಆಲ್ಕೋಹಾಲ್ ಅಥವಾ ಕ್ಲೋರಿನ್ ಸಿಂಪಡಣೆ ಮಾಡಿದರೆ ದೇಹದ ಒಳಗೆ ಅದಾಗಲೇ ಹೊಕ್ಕಿರಬಹುದಾದ ಹೊಸ ಕೊರೋನಾವೈರಸ್ ಸಾಯುವುದಿಲ್ಲ.

ಮೂಲ: ವಿಶ್ವ ಆರೋಗ್ಯ ಸಂಸ್ಥೆ ವೆಬ್‌ಸೈಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....