Homeಆರೋಗ್ಯಕೊರೋನಾವೈರಸ್‌ ಕುರಿತ ಊಹಾಪೋಹಗಳಿಗೆ WHO ಸ್ಪಷ್ಟನೆ: ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ಗೊತ್ತೆ?

ಕೊರೋನಾವೈರಸ್‌ ಕುರಿತ ಊಹಾಪೋಹಗಳಿಗೆ WHO ಸ್ಪಷ್ಟನೆ: ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ಗೊತ್ತೆ?

- Advertisement -
- Advertisement -

ಕೊರೋನಾ ವೈರಸ್‌ ಹರಡುತ್ತಿರುವ ಸಮಯದಲ್ಲಿ ಅದಕ್ಕಿಂತಲೂ ವೇಗವಾಗಿ ಅದರ ಕುರಿತ ಸುಳ್ಳು ಸುದ್ದಿಯಗಳು, ತಪ್ಪು ಅಭಿಪ್ರಾಯಗಳು ಹರಡುತ್ತಿವೆ. ಈ ಕುರಿತು ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದೆಂದು ವಿಶ್ವ ಆರೋಗ್ಯ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಒಂದಷ್ಟು ಸ್ಪಷ್ಟನೆಗಳನ್ನು ನೀಡಿದೆ. ಅವುಗಳೆಂದರೆ…

  • ಬೆಳ್ಳುಳ್ಳಿಯು ಆರೋಗ್ಯಕರ ಆಹಾರ; ಅದರಲ್ಲಿ ಹಲವು ಸೂಕ್ಷ್ಮಾಣುಗಳ ನಿರೋಧಕ ಶಕ್ತಿ ಇರಬಹುದು; ಆದರೆ ಅದನ್ನು ತಿನ್ನುವುದರಿಂದ ಹೊಸ ಕೊರೋನಾವೈರಸ್ ವಿರುದ್ಧ ರಕ್ಷಣೆ ಸಿಗುತ್ತದೆ ಎಂಬುದಕ್ಕೆ ಪುರಾವೆಗಳಿಲ್ಲ.
  • ಮೂಗನ್ನು ಪದೇ ಪದೇ ಸಲೈನ್‌ನಿಂದ (ಉಪ್ಪು ನೀರು, ಕ್ಷಾರ) ತೊಳೆಯುವುದರಿಂದ ಉಸಿರಾಟದ ಸೋಂಕು ತಡೆದ ಬಗ್ಗೆ ನಿದರ್ಶನಗಳಿಲ್ಲ.
  • ಚೀನಾದ ವಸ್ತುಗಳಿಂದ ಕೊರೋನಾವೈರಸ್ ಬರುತ್ತದೆ ಎಂದೇನಿಲ್ಲ; ಹಾಗಿದ್ದೂ ಚೀನಾದ ವಸ್ತುಗಳನ್ನು ಪಡೆಯುವಾಗ ಅದರ ಪೊಟ್ಟಣವನ್ನು ಶುಚಿಗೊಳಿಸಿ ಮತ್ತು ಅದನ್ನು ಮುಟ್ಟಿದ ಮೇಲೆ ಕೈಗಳನ್ನು ಸಾಬೂನು ಮತ್ತು ನೀರಿನಿಂದ ತೊಳೆದುಕೊಳ್ಳಿರಿ.
  • ಹೊಸ ಕೊರೋನಾವೈರಸ್ ಉಷ್ಣ ಮತ್ತು ಶೀತ ಪ್ರದೇಶಗಳೆಂದು ಪರಿಗಣಿಸದೆ ಎಲ್ಲಾ ಪ್ರದೇಶಗಳಲ್ಲೂ ವರ್ಗಾವಣೆ ಆಗುತ್ತದೆ. ಆಗಾಗ್ಗೆ ಕೈ ತೊಳೆದುಕೊಳ್ಳುವುದೇ ಇದಕ್ಕಿರುವ ಅತ್ಯುತ್ತಮ ತಡೆ.
  • ಶೀತಗಾಳಿ ಮತ್ತು ಮಂಜಿನಿಂದ ಕೊರೋನಾವೈರಸ್ ಸಾಯುವುದಿಲ್ಲ.
  • ಬಿಸಿನೀರಿನ ಸ್ನಾನ ಮಾಡುವುದರಿಂದ ಹೊಸ ಕೊರೋನಾವೈರಸ್ ಕಾಯಿಲೆಯನ್ನು ತಡೆಯಲು ಆಗುವುದಿಲ್ಲ.
  • ಸೊಳ್ಳೆ ಕಡಿತದಿಂದ ಹೊಸ ಕೊರೋನಾವೈರಸ್ ಸೋಂಕು ಬರುವುದಿಲ್ಲ. ಇದು ಮುಖ್ಯತಃ ಶ್ವಾಸನಾಳದ ವೈರಸ್; ಸೋಂಕಿನ ವ್ಯಕ್ತಿ ಸೀನಿದಾಗ, ಕೆಮ್ಮಿದಾಗ ಹೊರಬೀಳುವ ಎಂಜಲಿನ ಕಣಗಳಿಂದ ಹರಡುತ್ತದೆ.
  • ಸಾಕುಪ್ರಾಣಿಗಳಿಗೆ ಕೊರೋನಾವೈರಸ್ ಬರುತ್ತದೆ ಎಂಬುದಕ್ಕೆ ಪುರಾವೆಗಳಿಲ್ಲ; ಆದಾಗ್ಯೂ ಅಂತಹ ಸಾಕುಪ್ರಾಣಿಗಳನ್ನು ಮುಟ್ಟಿದಾಗ ಚೆನ್ನಾಗಿ ಕೈ ತೊಳೆದುಕೊಳ್ಳಿ.
  • ಹೊಸ ಕೊರೋನಾವೈರಸ್ ಯಾವುದೇ ವಯಸ್ಸಿನ ವ್ಯಕ್ತಿಗೂ ಬರಬಹುದು.
  • ಆಂಟಿ-ಬಯಾಟಿಕ್‌ಗಳು ಕೇವಲ ಬ್ಯಾಕ್ಟೀರಿಯಾ ತಡೆಗೆ ನೆರವಾಗುತ್ತವೆಯೇ ಹೊರತು ಕೊರೋನಾವೈರಸ್ ವಿರುದ್ಧ ಬಳಕೆಗೆ ಬರುವುದಿಲ್ಲ.
  • ನ್ಯೂಮೋನಿಯ ಲಸಿಕೆಯು ಕೊರೋನಾವೈರಸ್ ಗೆ ಚಿಕಿತ್ಸೆ ಅಲ್ಲ. ಆದಾಗ್ಯೂ ನಿಮ್ಮ ಆರೋಗ್ಯಕ್ಕಾಗಿ ಉಸಿರಾಟ ಸಂಬಂಧಿ ಲಸಿಕೆ ಹಾಕಿಸಿಕೊಳ್ಳಬಹುದು.
  • ಥರ್ಮಲ್ ಸ್ಕಾನರ್‌ನಿಂದ ಜ್ವರ ಬಂದವರನ್ನು ಗುರುತಿಸಬಹುದೇ ಹೊರತು 10 ದಿನಗಳ ಒಳಗಿರುವ ಸೋಂಕು ಪೀಡಿತರನ್ನಲ್ಲ; ಅವರಲ್ಲಿ ಇನ್ನೂ ಜ್ವರ ಬರದೇ ಇರಲೂಬಹುದು. (ಸೋಂಕಿನಿಂದ ಜ್ವರ ಬರಲು ಎರಡರಿಂದ ಹತ್ತು ದಿನಗಳು ಬೇಕು).
  • ಹ್ಯಾಂಡ್ ಡ್ರೈಯರ್‌ಗಳಿಂದ ಈ ವೈರಸನ್ನು ಸಾಯಿಸಲು ಸಾಧ್ಯವಿಲ್ಲ. ಆಗಾಗ್ಗೆ ಕೈ ತೊಳೆದುಕೊಳ್ಳುವುದೇ ಸೂಕ್ತ ವಿಧಾನ.
  • ಅಲ್ಟ್ರಾವಯಲೆಟ್ ದೀಪದಿಂದ ಹೊಸ ಕೊರೋನಾವೈರಸ್‌ ಅನ್ನು ಸಾಯಿಸಲು ಬರುವುದಿಲ್ಲ. ಅದನ್ನು ಕೈ ಶುದ್ಧೀಕರಣಕ್ಕೆ ಬಳಸಬಾರದು.
  • ಹೊಸ ಕೊರೋನಾವೈರಸ್ಗೆ ಸದ್ಯಕ್ಕಂತೂ ಯಾವುದೇ ನಿರ್ದಿಷ್ಟ ಔಷಧ ಇಲ್ಲ. ಆದರೆ ಸೋಂಕು ಪೀಡಿತರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಮತ್ತು ಸೂಕ್ತ ಬೆಂಬಲ ನೀಡಬೇಕು.

ದೇಹದ ಮೇಲೆಲ್ಲ ಆಲ್ಕೋಹಾಲ್ ಅಥವಾ ಕ್ಲೋರಿನ್ ಸಿಂಪಡಣೆ ಮಾಡಿದರೆ ದೇಹದ ಒಳಗೆ ಅದಾಗಲೇ ಹೊಕ್ಕಿರಬಹುದಾದ ಹೊಸ ಕೊರೋನಾವೈರಸ್ ಸಾಯುವುದಿಲ್ಲ.

ಮೂಲ: ವಿಶ್ವ ಆರೋಗ್ಯ ಸಂಸ್ಥೆ ವೆಬ್‌ಸೈಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...