Homeರಾಷ್ಟ್ರೀಯಪತ್ರಕರ್ತ ಜುಬೇರ್‌ ವಿರುದ್ಧ ದೂರು ನೀಡಿದ್ದ ಟ್ವಿಟರ್‌ ಅಕೌಂಟ್‌ ಡಿಲೀಟ್!

ಪತ್ರಕರ್ತ ಜುಬೇರ್‌ ವಿರುದ್ಧ ದೂರು ನೀಡಿದ್ದ ಟ್ವಿಟರ್‌ ಅಕೌಂಟ್‌ ಡಿಲೀಟ್!

ಅನಾಮಧೇಯ ಟ್ವಿಟರ್‌ ಅಕೌಂಟ್‌‌‌ ಬಿಜೆಪಿ ಐಟಿ ಸೆಲ್‌ನದ್ದಾಗಿದೆ ಎಂದು ಸಾಮಾಜಿಕ ಹೋರಾಟಗಾರ ಸಾಕೇತ್‌ ಗೋಖಲೆ ಹೇಳಿದ್ದಾರೆ.

- Advertisement -
- Advertisement -

ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರ ಟ್ವೀಟನ್ನು ಉಲ್ಲೇಖಿಸಿ ದೆಹಲಿ ಪೊಲೀಸರಿಗೆ ದೂರು ನೀಡಿದ್ದ, ‘ಹನುಮಾನ್ ಭಕ್ತ್ @balajikijaiin’ ಎಂಬ ಹೆಸರಿನ ಟ್ವಿಟರ್‌ ಅಕೌಂಟ್ ಇದೀಗ ಡಿಲೀಟ್ ಮಾಡಲಾಗಿದೆ. ಈ ವಿಚಾರವನ್ನು ಸಾಮಾಜಿಕ ಹೋರಾಟಗಾರ, ಟಿಎಂಸಿ ನಾಯಕ ಸಾಕೇತ್‌ ಗೋಖಲೆ ಅವರು ಬಹಿರಂಗಪಡಿಸಿದ್ದಾರೆ.

ಸೋಮವಾರ ಸಂಜೆಯವರೆಗೆ ಟ್ವಿಟರ್‌‌ನಲ್ಲಿ ಕೇವಲ ಒಂದು ಸಂದೇಶವನ್ನು ಪೋಸ್ಟ್ ಮಾಡಿದ್ದ ಮತ್ತು ಕೇವಲ ಮೂರು ಅನುಯಾಯಿಗಳನ್ನು ಹೊಂದಿದ್ದ ಅನಾಮಧೇಯ ಟ್ವಿಟರ್ ಹ್ಯಾಂಡಲ್‌ನ ದೂರಿನ ಆಧಾರದ ಮೇಲೆ ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರನ್ನು ಸೋಮವಾರ ಸಂಜೆ ದೆಹಲಿ ಪೊಲೀಸರು ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊಹಮ್ಮದ್ ಜುಬೇರ್‌ ಅವರು 2018 ರಲ್ಲಿ ಮಾಡಿದ್ದ ಪೋಸ್ಟ್ ಒಂದನ್ನು ಉಲ್ಲೇಖಿಸಿದ್ದ ಅನಾಮಧೇಯ ‘ಹನುಮಾನ್ ಭಕ್ತ್‌‌’ ಹ್ಯಾಂಡಲ್ ಆಕ್ಷೇಪಣೆ ವ್ಯಕ್ತಪಡಿಸಿತ್ತು. ಆ ಪೋಸ್ಟ್‌ನ ಚಿತ್ರದಲ್ಲಿ, ‘ಹನಿಮೂನ್ ಹೋಟೆಲ್’ ಎಂಬ ಬೋರ್ಡಿಗೆ ಬಣ್ಣ ಬಳಿದು, ‘ಹನುಮಾನ್ ಹೋಟೆಲ್’ ಎಂದು ಹಿಂದಿಯಲ್ಲಿ ಬರೆದಂತೆ ತೋರಿಸಲಾಗಿದೆ.

ಇದನ್ನೂ ಓದಿ: ತೀಸ್ತಾ, ಜುಬೇರ್‌‌ ಬಂಧನ ಆತಂಕಕಾರಿ: ನೊಬೆಲ್‌ ಪ್ರಶಸ್ತಿ ಪುರಸ್ಕೃತ ಪತ್ರಕರ್ತೆ ಮಾರಿಯಾ ಪ್ರತಿಕ್ರಿಯೆ

ಆದರೆ ಜುಬೇರ್‌ ಅವರನ್ನು ಬಂಧಿಸಲು ಕಾರಣವಾಗಿರುವ ಚಿತ್ರವೂ ಎಡಿಟ್ ಮಾಡಿರುವ ಚಿತ್ರವಲ್ಲ, ಬದಲಾಗಿ ಈ ಚಿತ್ರವು 1983ರ ಹಿಂದಿ ಚಲನಚಿತ್ರವಾದ ‘ಕಿಸ್ಸಿ ಸೆ ನಾ ಕೆಹನಾ’ ದೃಶ್ಯವಾಗಿದೆ. ‘ಕಿಸ್ಸಿ ಸೆ ನಾ ಕೆಹನಾ’ ಎಂದರೆ ಕನ್ನಡದಲ್ಲಿ ‘ಯಾರಿಗೂ ಹೇಳಬೇಡಿ’ ಎಂದರ್ಥವಿದೆ. ಈ ರೊಮ್ಯಾಂಟಿಕ್ ಹಾಸ್ಯ ಚಲನಚಿತ್ರವನ್ನು ಹೃಷಿಕೇಶ್ ಮುಖರ್ಜಿ ನಿರ್ದೇಶಿಸಿದ್ದು, ಚಲನಚಿತ್ರ ಮಂಡಳಿಯೂ ಅದಕ್ಕೆ ‘ಯು’ (ಎಲ್ಲರೂ ನೋಡಬಹುದಾದ) ಪ್ರಮಾಣಪತ್ರ ನೀಡಿದೆ. ಅಲ್ಲದೆ ಈ ಚಿತ್ರ ಮತ್ತು ದೃಶ್ಯ ಇನ್ನೂ ಯೂಟ್ಯೂಬ್‌ನಲ್ಲಿ ಲಭ್ಯವಿದೆ.

ಜುಬೇರ್‌ ವಿರುದ್ಧ ದೆಹಲಿ ಪೊಲೀಸರು, “ಪೋಸ್ಟ್‌ನಲ್ಲಿನ ಪದಗಳು ಮತ್ತು ಚಿತ್ರವನ್ನು ಮೊಹಮ್ಮದ್ ಜುಬೇರ್‌‌ ಅವರು ನಿರ್ದಿಷ್ಟ ಧಾರ್ಮಿಕ ಸಮುದಾಯದ ವಿರುದ್ಧ ಬಳಸಿದ್ದಾರೆ. ಇದು ತೀವ್ರ ಪ್ರಚೋದನಕಾರಿ ಮತ್ತು ಜನರ ನಡುವೆ ದ್ವೇಷದ ಭಾವನೆಗಳನ್ನು ಹುಟ್ಟುಹಾಕಲು ಸಾಕಾಗುತ್ತದೆ. ಇದು ಸಮಾಜದಲ್ಲಿ ಸಾರ್ವಜನಿಕ ನೆಮ್ಮದಿಯನ್ನು ಕಾಪಾಡಿಕೊಳ್ಳಲು ಹಾನಿಕಾರಕವಾಗಿದೆ” ಎಂದು ಎಫ್‌ಐಆರ್‌ನಲ್ಲಿ ದಾಖಲಿಸಿದ್ದಾರೆ.

ಅದಾಗಿಯೂ ಜುಬೇರ್‌ ಅವರ ವಿರುದ್ಧ ದೂರು ನೀಡಿರುವ ಅನಾಮಧೇಯ ಟ್ವಿಟರ್‌ ಅಕೌಂಟ್‌ ಹನುಮಾನ್ ಭಕ್ತ್ ಬಿಜೆಪಿ ಐಟಿ ಸೆಲ್ಲಿನ ಅಕೌಂಟ್‌ ಆಗಿದೆ ಎಂದು ಸಾಮಾಜಿಕ ಹೋರಾಟಗಾರ ಸಾಕೇತ್‌ ಗೋಖಲೆ ಹೇಳಿದ್ದು, ಅದಕ್ಕೆ ಹಲವು ಆಧಾರಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಜುಬೇರ್‌ ಬಂಧನ: ಬರವಣಿಗೆ, ಟ್ವೀಟ್ ಆಧಾರದಲ್ಲಿ ಪತ್ರಕರ್ತರನ್ನು ಜೈಲಿಗೆ ಹಾಕಬಾರದು- ವಿಶ್ವಸಂಸ್ಥೆ

ಈ ಬಗ್ಗೆ ಟ್ವಿಟರ್‌ನಲ್ಲಿ ಸಾಕ್ಷಿ ಸಮೇತ ದಾಖಲೆ ನೀಡಿರುವ ಸಾಕೇತ್ ಅವರು,“ದೆಹಲಿ ಪೊಲೀಸರನ್ನು ಬಳಸಿಕೊಂಡು ಬಿಜೆಪಿ ಹೇಗೆ ಜುಬೈರ್‌ ಅನ್ನು ಸಿಲುಕಿಸಿದ್ದಾರೆ ಎಂಬುವುದಕ್ಕೆ ಇದು ಸಾಕ್ಷಿ. ಜುಬೈರ್ ವಿರುದ್ಧ ದೂರು ದಾಖಲಿಸಿದ ಬಾಲಾಜಿಕಿಜೈನ್ ಖಾತೆಯನ್ನು ನಾನು ಪರಿಶೀಲಿಸಿದ್ದು, ಅದು ನಿನ್ನೆಯವರೆಗೆ 1 ಅನುಯಾಯಿಗಳನ್ನು ಹೊಂದಿತ್ತು” ಎಂದು ಅವರು ಮಂಗಳವಾರ ಹೇಳಿದ್ದಾರೆ.

ಬಾಲಾಜಿಕಿಜೈನ್ ಅಕೌಂಟ್‌ ಅನ್ನು ಅಕ್ಟೋಬರ್ 2021ರಲ್ಲಿ ರಚಿಸಲಾಗಿದೆ. ಅದು ತನ್ನ ಮೊದಲ ಸಂದೇಶವನ್ನು ಜೂನ್ 19 ರಂದು ಪೋಸ್ಟ್ ಮಾಡಿತ್ತು. ಈ ಪೋಸ್ಟ್‌ನಲ್ಲಿ ಅದು ಜುಬೈರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರನ್ನು ಕೇಳಿತ್ತು.

ಈ ಖಾತೆಯೂ ಫೆಬ್ರವರಿಯಲ್ಲಿ ‘ಸೈನ್‌ಪೋಸ್ಟ್ ಇಂಡಿಯಾ’ ಎಂಬ ಕಂಪನಿಯ ಕುರಿತ ಪೋಸ್ಟ್ ಅನ್ನು ‘ಲೈಕ್’ ಮಾಡಿದೆ ಎಂದು ಸಾಕೇತ್‌ ಗೋಖಲೆ ಸೂಚಿಸಿದ್ದಾರೆ.

ಇದನ್ನೂ ಓದಿ: ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಮತ್ತೆ ನಾಲ್ಕು ದಿನ ಪೊಲೀಸ್ ವಶಕ್ಕೆ

“ಈಗ ಇದು ಆಸಕ್ತಿದಾಯಕವಾಗಿದೆ. ಸೈನ್‌ಪೋಸ್ಟ್ ಇಂಡಿಯಾ ಒಂದು ಸಾಮಾಜಿಕ ಮಾಧ್ಯಮ ಏಜೆನ್ಸಿಯಾಗಿದ್ದು. ಇದು ‘202-ಪ್ರೆಸ್‌ಮ್ಯಾನ್ ಹೌಸ್, ಮುಂಬೈ’ ಎಂಬ ವಿಳಾಸದಲ್ಲಿದ್ದು, ಇದು ತನ್ನ ಗ್ರಾಹಕನಾಗಿ ಬಿಜೆಪಿಯನ್ನು ಹೊಂದಿದೆ. ಬಿಜೆಪಿ ಯುವ ಘಟಕದ ಐಟಿ ಸೆಲ್ ಮುಖ್ಯಸ್ಥ ದೇವಾಂಗ್ ದವೆ ಅವರು ಸೈನ್‌ಪೋಸ್ಟ್ ಇಂಡಿಯಾ ಮತ್ತು ಅದೇ ವಿಳಾಸದಲ್ಲಿರುವ ಇನ್ನೊಂದು ಏಜೆನ್ಸಿಯನ್ನು ಹೊಂದಿದ್ದಾರೆ” ಎಂದು ಅವರು ಹೇಳಿದ್ದಾರೆ.

ದೇವಾಂಗ್ ದವೆ ಅವರು ಬಿಜೆಪಿಯ ‘ಟೆಕ್ ಫಾಗ್‌’ ಎಂಬ ಗುಂಪು ಟ್ರೋಲಿಂಗ್ ಆಪ್‌ನ ಹಿಂದೆ ಇರುವ ಪ್ರಮುಖ ವ್ಯಕ್ತಿಯಾಗಿದ್ದಾರೆ. ‘ಟೆಕ್ ಫಾಗ್‌’ ಎಂಬ ಈ ಆಪ್‌ ಬಿಜೆಪಿಯನ್ನು ವಿರೋಧಿಸುವ ಯಾವುದೇ ವ್ಯಕ್ತಿಯನ್ನು ಗುಂಪಾಗಿ ಗುರಿ ಮಾಡುವ ಒಂದು ಆಪ್‌ ಆಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿ ವಿರುದ್ಧ ಮಾತನಾಡುವ ಯಾವುದೇ ವ್ಯಕ್ತಿಯನ್ನು ಗುರಿ ಮಾಡಿ ಅವರಿಗೆ ಅಶ್ಲೀಲ ಮತ್ತು ಅವಾಚ್ಯ ಬೈಗಳಗಳನ್ನು ಹಲವು ಫೇಕ್ ಅಕೌಂಟ್ ಮೂಲಕ ಗುಂಪಾಗಿ ಕಳುಹಿಸಲಾಗುತ್ತದೆ. ಇದನ್ನು ದೇಶದ ಪ್ರಮುಖ ಸುದ್ದಿ ಜಾಲವಾದ ‘ವೈರ್.ಇನ್’ ಇತ್ತೀಚೆಗೆ ಬಹಿರಂಗಪಡಿಸಿತ್ತು. ಈ ಸುದ್ದಿಯನ್ನು ನೀಡುವ ಇಲ್ಲಿ ಓದಬಹುದಾಗಿದೆ.

ಇದನ್ನೂ ಓದಿ: ‘ಯಾರಿಗೂ ಹೇಳಬೇಡಿ’: ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಬಂಧನಕ್ಕೆ ಕಾರಣ!

“ಬಿಜೆಪಿಯ ಐಟಿ ಸೆಲ್ ಮತ್ತು ಟೆಕ್ ಫಾಗ್‌ನ ಪ್ರಮುಖ ವ್ಯಕ್ತಿ ‘ಬಾಲಾಜಿಕಿಜೈನ್’ ಎಂಬ ನಕಲಿ ಖಾತೆಯನ್ನು ದೆಹಲಿ ಪೊಲೀಸರ ಸಹಕಾರದೊಂದಿಗೆ ಜುಬೈರ್‌ನನ್ನು ಗುರಿಯಾಗಿಸಲು ಮತ್ತು ಸಿಲುಕಿಸಲು ರಚಿಸಿದ್ದಾರೆ ಎಂಬುದು ಸ್ಫಟಿಕದಷ್ಟು ಸ್ಪಷ್ಟವಾಗಿದೆ. ದೆಹಲಿಯ ಸೈಬರ್‌ ಸೆಲ್ ಪೊಲೀಸರು ನಕಲಿ ಪ್ರಕರಣ ದಾಖಲಿಸಲು ಬಿಜೆಪಿಗೆ ಸಹಕರಿಸಿದ್ದಾರೆ. ಜುಬೇರ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ ಇದನ್ನು ನೋಡಬೇಕಾಗಿದೆ” ಎಂದು ಸಾಕೇತ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...