Homeರಾಷ್ಟ್ರೀಯಪತ್ರಕರ್ತ ಜುಬೇರ್‌ ವಿರುದ್ಧ ದೂರು ನೀಡಿದ್ದ ಟ್ವಿಟರ್‌ ಅಕೌಂಟ್‌ ಡಿಲೀಟ್!

ಪತ್ರಕರ್ತ ಜುಬೇರ್‌ ವಿರುದ್ಧ ದೂರು ನೀಡಿದ್ದ ಟ್ವಿಟರ್‌ ಅಕೌಂಟ್‌ ಡಿಲೀಟ್!

ಅನಾಮಧೇಯ ಟ್ವಿಟರ್‌ ಅಕೌಂಟ್‌‌‌ ಬಿಜೆಪಿ ಐಟಿ ಸೆಲ್‌ನದ್ದಾಗಿದೆ ಎಂದು ಸಾಮಾಜಿಕ ಹೋರಾಟಗಾರ ಸಾಕೇತ್‌ ಗೋಖಲೆ ಹೇಳಿದ್ದಾರೆ.

- Advertisement -
- Advertisement -

ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರ ಟ್ವೀಟನ್ನು ಉಲ್ಲೇಖಿಸಿ ದೆಹಲಿ ಪೊಲೀಸರಿಗೆ ದೂರು ನೀಡಿದ್ದ, ‘ಹನುಮಾನ್ ಭಕ್ತ್ @balajikijaiin’ ಎಂಬ ಹೆಸರಿನ ಟ್ವಿಟರ್‌ ಅಕೌಂಟ್ ಇದೀಗ ಡಿಲೀಟ್ ಮಾಡಲಾಗಿದೆ. ಈ ವಿಚಾರವನ್ನು ಸಾಮಾಜಿಕ ಹೋರಾಟಗಾರ, ಟಿಎಂಸಿ ನಾಯಕ ಸಾಕೇತ್‌ ಗೋಖಲೆ ಅವರು ಬಹಿರಂಗಪಡಿಸಿದ್ದಾರೆ.

ಸೋಮವಾರ ಸಂಜೆಯವರೆಗೆ ಟ್ವಿಟರ್‌‌ನಲ್ಲಿ ಕೇವಲ ಒಂದು ಸಂದೇಶವನ್ನು ಪೋಸ್ಟ್ ಮಾಡಿದ್ದ ಮತ್ತು ಕೇವಲ ಮೂರು ಅನುಯಾಯಿಗಳನ್ನು ಹೊಂದಿದ್ದ ಅನಾಮಧೇಯ ಟ್ವಿಟರ್ ಹ್ಯಾಂಡಲ್‌ನ ದೂರಿನ ಆಧಾರದ ಮೇಲೆ ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರನ್ನು ಸೋಮವಾರ ಸಂಜೆ ದೆಹಲಿ ಪೊಲೀಸರು ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊಹಮ್ಮದ್ ಜುಬೇರ್‌ ಅವರು 2018 ರಲ್ಲಿ ಮಾಡಿದ್ದ ಪೋಸ್ಟ್ ಒಂದನ್ನು ಉಲ್ಲೇಖಿಸಿದ್ದ ಅನಾಮಧೇಯ ‘ಹನುಮಾನ್ ಭಕ್ತ್‌‌’ ಹ್ಯಾಂಡಲ್ ಆಕ್ಷೇಪಣೆ ವ್ಯಕ್ತಪಡಿಸಿತ್ತು. ಆ ಪೋಸ್ಟ್‌ನ ಚಿತ್ರದಲ್ಲಿ, ‘ಹನಿಮೂನ್ ಹೋಟೆಲ್’ ಎಂಬ ಬೋರ್ಡಿಗೆ ಬಣ್ಣ ಬಳಿದು, ‘ಹನುಮಾನ್ ಹೋಟೆಲ್’ ಎಂದು ಹಿಂದಿಯಲ್ಲಿ ಬರೆದಂತೆ ತೋರಿಸಲಾಗಿದೆ.

ಇದನ್ನೂ ಓದಿ: ತೀಸ್ತಾ, ಜುಬೇರ್‌‌ ಬಂಧನ ಆತಂಕಕಾರಿ: ನೊಬೆಲ್‌ ಪ್ರಶಸ್ತಿ ಪುರಸ್ಕೃತ ಪತ್ರಕರ್ತೆ ಮಾರಿಯಾ ಪ್ರತಿಕ್ರಿಯೆ

ಆದರೆ ಜುಬೇರ್‌ ಅವರನ್ನು ಬಂಧಿಸಲು ಕಾರಣವಾಗಿರುವ ಚಿತ್ರವೂ ಎಡಿಟ್ ಮಾಡಿರುವ ಚಿತ್ರವಲ್ಲ, ಬದಲಾಗಿ ಈ ಚಿತ್ರವು 1983ರ ಹಿಂದಿ ಚಲನಚಿತ್ರವಾದ ‘ಕಿಸ್ಸಿ ಸೆ ನಾ ಕೆಹನಾ’ ದೃಶ್ಯವಾಗಿದೆ. ‘ಕಿಸ್ಸಿ ಸೆ ನಾ ಕೆಹನಾ’ ಎಂದರೆ ಕನ್ನಡದಲ್ಲಿ ‘ಯಾರಿಗೂ ಹೇಳಬೇಡಿ’ ಎಂದರ್ಥವಿದೆ. ಈ ರೊಮ್ಯಾಂಟಿಕ್ ಹಾಸ್ಯ ಚಲನಚಿತ್ರವನ್ನು ಹೃಷಿಕೇಶ್ ಮುಖರ್ಜಿ ನಿರ್ದೇಶಿಸಿದ್ದು, ಚಲನಚಿತ್ರ ಮಂಡಳಿಯೂ ಅದಕ್ಕೆ ‘ಯು’ (ಎಲ್ಲರೂ ನೋಡಬಹುದಾದ) ಪ್ರಮಾಣಪತ್ರ ನೀಡಿದೆ. ಅಲ್ಲದೆ ಈ ಚಿತ್ರ ಮತ್ತು ದೃಶ್ಯ ಇನ್ನೂ ಯೂಟ್ಯೂಬ್‌ನಲ್ಲಿ ಲಭ್ಯವಿದೆ.

ಜುಬೇರ್‌ ವಿರುದ್ಧ ದೆಹಲಿ ಪೊಲೀಸರು, “ಪೋಸ್ಟ್‌ನಲ್ಲಿನ ಪದಗಳು ಮತ್ತು ಚಿತ್ರವನ್ನು ಮೊಹಮ್ಮದ್ ಜುಬೇರ್‌‌ ಅವರು ನಿರ್ದಿಷ್ಟ ಧಾರ್ಮಿಕ ಸಮುದಾಯದ ವಿರುದ್ಧ ಬಳಸಿದ್ದಾರೆ. ಇದು ತೀವ್ರ ಪ್ರಚೋದನಕಾರಿ ಮತ್ತು ಜನರ ನಡುವೆ ದ್ವೇಷದ ಭಾವನೆಗಳನ್ನು ಹುಟ್ಟುಹಾಕಲು ಸಾಕಾಗುತ್ತದೆ. ಇದು ಸಮಾಜದಲ್ಲಿ ಸಾರ್ವಜನಿಕ ನೆಮ್ಮದಿಯನ್ನು ಕಾಪಾಡಿಕೊಳ್ಳಲು ಹಾನಿಕಾರಕವಾಗಿದೆ” ಎಂದು ಎಫ್‌ಐಆರ್‌ನಲ್ಲಿ ದಾಖಲಿಸಿದ್ದಾರೆ.

ಅದಾಗಿಯೂ ಜುಬೇರ್‌ ಅವರ ವಿರುದ್ಧ ದೂರು ನೀಡಿರುವ ಅನಾಮಧೇಯ ಟ್ವಿಟರ್‌ ಅಕೌಂಟ್‌ ಹನುಮಾನ್ ಭಕ್ತ್ ಬಿಜೆಪಿ ಐಟಿ ಸೆಲ್ಲಿನ ಅಕೌಂಟ್‌ ಆಗಿದೆ ಎಂದು ಸಾಮಾಜಿಕ ಹೋರಾಟಗಾರ ಸಾಕೇತ್‌ ಗೋಖಲೆ ಹೇಳಿದ್ದು, ಅದಕ್ಕೆ ಹಲವು ಆಧಾರಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಜುಬೇರ್‌ ಬಂಧನ: ಬರವಣಿಗೆ, ಟ್ವೀಟ್ ಆಧಾರದಲ್ಲಿ ಪತ್ರಕರ್ತರನ್ನು ಜೈಲಿಗೆ ಹಾಕಬಾರದು- ವಿಶ್ವಸಂಸ್ಥೆ

ಈ ಬಗ್ಗೆ ಟ್ವಿಟರ್‌ನಲ್ಲಿ ಸಾಕ್ಷಿ ಸಮೇತ ದಾಖಲೆ ನೀಡಿರುವ ಸಾಕೇತ್ ಅವರು,“ದೆಹಲಿ ಪೊಲೀಸರನ್ನು ಬಳಸಿಕೊಂಡು ಬಿಜೆಪಿ ಹೇಗೆ ಜುಬೈರ್‌ ಅನ್ನು ಸಿಲುಕಿಸಿದ್ದಾರೆ ಎಂಬುವುದಕ್ಕೆ ಇದು ಸಾಕ್ಷಿ. ಜುಬೈರ್ ವಿರುದ್ಧ ದೂರು ದಾಖಲಿಸಿದ ಬಾಲಾಜಿಕಿಜೈನ್ ಖಾತೆಯನ್ನು ನಾನು ಪರಿಶೀಲಿಸಿದ್ದು, ಅದು ನಿನ್ನೆಯವರೆಗೆ 1 ಅನುಯಾಯಿಗಳನ್ನು ಹೊಂದಿತ್ತು” ಎಂದು ಅವರು ಮಂಗಳವಾರ ಹೇಳಿದ್ದಾರೆ.

ಬಾಲಾಜಿಕಿಜೈನ್ ಅಕೌಂಟ್‌ ಅನ್ನು ಅಕ್ಟೋಬರ್ 2021ರಲ್ಲಿ ರಚಿಸಲಾಗಿದೆ. ಅದು ತನ್ನ ಮೊದಲ ಸಂದೇಶವನ್ನು ಜೂನ್ 19 ರಂದು ಪೋಸ್ಟ್ ಮಾಡಿತ್ತು. ಈ ಪೋಸ್ಟ್‌ನಲ್ಲಿ ಅದು ಜುಬೈರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರನ್ನು ಕೇಳಿತ್ತು.

ಈ ಖಾತೆಯೂ ಫೆಬ್ರವರಿಯಲ್ಲಿ ‘ಸೈನ್‌ಪೋಸ್ಟ್ ಇಂಡಿಯಾ’ ಎಂಬ ಕಂಪನಿಯ ಕುರಿತ ಪೋಸ್ಟ್ ಅನ್ನು ‘ಲೈಕ್’ ಮಾಡಿದೆ ಎಂದು ಸಾಕೇತ್‌ ಗೋಖಲೆ ಸೂಚಿಸಿದ್ದಾರೆ.

ಇದನ್ನೂ ಓದಿ: ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಮತ್ತೆ ನಾಲ್ಕು ದಿನ ಪೊಲೀಸ್ ವಶಕ್ಕೆ

“ಈಗ ಇದು ಆಸಕ್ತಿದಾಯಕವಾಗಿದೆ. ಸೈನ್‌ಪೋಸ್ಟ್ ಇಂಡಿಯಾ ಒಂದು ಸಾಮಾಜಿಕ ಮಾಧ್ಯಮ ಏಜೆನ್ಸಿಯಾಗಿದ್ದು. ಇದು ‘202-ಪ್ರೆಸ್‌ಮ್ಯಾನ್ ಹೌಸ್, ಮುಂಬೈ’ ಎಂಬ ವಿಳಾಸದಲ್ಲಿದ್ದು, ಇದು ತನ್ನ ಗ್ರಾಹಕನಾಗಿ ಬಿಜೆಪಿಯನ್ನು ಹೊಂದಿದೆ. ಬಿಜೆಪಿ ಯುವ ಘಟಕದ ಐಟಿ ಸೆಲ್ ಮುಖ್ಯಸ್ಥ ದೇವಾಂಗ್ ದವೆ ಅವರು ಸೈನ್‌ಪೋಸ್ಟ್ ಇಂಡಿಯಾ ಮತ್ತು ಅದೇ ವಿಳಾಸದಲ್ಲಿರುವ ಇನ್ನೊಂದು ಏಜೆನ್ಸಿಯನ್ನು ಹೊಂದಿದ್ದಾರೆ” ಎಂದು ಅವರು ಹೇಳಿದ್ದಾರೆ.

ದೇವಾಂಗ್ ದವೆ ಅವರು ಬಿಜೆಪಿಯ ‘ಟೆಕ್ ಫಾಗ್‌’ ಎಂಬ ಗುಂಪು ಟ್ರೋಲಿಂಗ್ ಆಪ್‌ನ ಹಿಂದೆ ಇರುವ ಪ್ರಮುಖ ವ್ಯಕ್ತಿಯಾಗಿದ್ದಾರೆ. ‘ಟೆಕ್ ಫಾಗ್‌’ ಎಂಬ ಈ ಆಪ್‌ ಬಿಜೆಪಿಯನ್ನು ವಿರೋಧಿಸುವ ಯಾವುದೇ ವ್ಯಕ್ತಿಯನ್ನು ಗುಂಪಾಗಿ ಗುರಿ ಮಾಡುವ ಒಂದು ಆಪ್‌ ಆಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿ ವಿರುದ್ಧ ಮಾತನಾಡುವ ಯಾವುದೇ ವ್ಯಕ್ತಿಯನ್ನು ಗುರಿ ಮಾಡಿ ಅವರಿಗೆ ಅಶ್ಲೀಲ ಮತ್ತು ಅವಾಚ್ಯ ಬೈಗಳಗಳನ್ನು ಹಲವು ಫೇಕ್ ಅಕೌಂಟ್ ಮೂಲಕ ಗುಂಪಾಗಿ ಕಳುಹಿಸಲಾಗುತ್ತದೆ. ಇದನ್ನು ದೇಶದ ಪ್ರಮುಖ ಸುದ್ದಿ ಜಾಲವಾದ ‘ವೈರ್.ಇನ್’ ಇತ್ತೀಚೆಗೆ ಬಹಿರಂಗಪಡಿಸಿತ್ತು. ಈ ಸುದ್ದಿಯನ್ನು ನೀಡುವ ಇಲ್ಲಿ ಓದಬಹುದಾಗಿದೆ.

ಇದನ್ನೂ ಓದಿ: ‘ಯಾರಿಗೂ ಹೇಳಬೇಡಿ’: ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಬಂಧನಕ್ಕೆ ಕಾರಣ!

“ಬಿಜೆಪಿಯ ಐಟಿ ಸೆಲ್ ಮತ್ತು ಟೆಕ್ ಫಾಗ್‌ನ ಪ್ರಮುಖ ವ್ಯಕ್ತಿ ‘ಬಾಲಾಜಿಕಿಜೈನ್’ ಎಂಬ ನಕಲಿ ಖಾತೆಯನ್ನು ದೆಹಲಿ ಪೊಲೀಸರ ಸಹಕಾರದೊಂದಿಗೆ ಜುಬೈರ್‌ನನ್ನು ಗುರಿಯಾಗಿಸಲು ಮತ್ತು ಸಿಲುಕಿಸಲು ರಚಿಸಿದ್ದಾರೆ ಎಂಬುದು ಸ್ಫಟಿಕದಷ್ಟು ಸ್ಪಷ್ಟವಾಗಿದೆ. ದೆಹಲಿಯ ಸೈಬರ್‌ ಸೆಲ್ ಪೊಲೀಸರು ನಕಲಿ ಪ್ರಕರಣ ದಾಖಲಿಸಲು ಬಿಜೆಪಿಗೆ ಸಹಕರಿಸಿದ್ದಾರೆ. ಜುಬೇರ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ ಇದನ್ನು ನೋಡಬೇಕಾಗಿದೆ” ಎಂದು ಸಾಕೇತ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...