Homeರಾಷ್ಟ್ರೀಯಪತ್ರಕರ್ತ ಜುಬೇರ್‌ ವಿರುದ್ಧ ದೂರು ನೀಡಿದ್ದ ಟ್ವಿಟರ್‌ ಅಕೌಂಟ್‌ ಡಿಲೀಟ್!

ಪತ್ರಕರ್ತ ಜುಬೇರ್‌ ವಿರುದ್ಧ ದೂರು ನೀಡಿದ್ದ ಟ್ವಿಟರ್‌ ಅಕೌಂಟ್‌ ಡಿಲೀಟ್!

ಅನಾಮಧೇಯ ಟ್ವಿಟರ್‌ ಅಕೌಂಟ್‌‌‌ ಬಿಜೆಪಿ ಐಟಿ ಸೆಲ್‌ನದ್ದಾಗಿದೆ ಎಂದು ಸಾಮಾಜಿಕ ಹೋರಾಟಗಾರ ಸಾಕೇತ್‌ ಗೋಖಲೆ ಹೇಳಿದ್ದಾರೆ.

- Advertisement -
- Advertisement -

ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರ ಟ್ವೀಟನ್ನು ಉಲ್ಲೇಖಿಸಿ ದೆಹಲಿ ಪೊಲೀಸರಿಗೆ ದೂರು ನೀಡಿದ್ದ, ‘ಹನುಮಾನ್ ಭಕ್ತ್ @balajikijaiin’ ಎಂಬ ಹೆಸರಿನ ಟ್ವಿಟರ್‌ ಅಕೌಂಟ್ ಇದೀಗ ಡಿಲೀಟ್ ಮಾಡಲಾಗಿದೆ. ಈ ವಿಚಾರವನ್ನು ಸಾಮಾಜಿಕ ಹೋರಾಟಗಾರ, ಟಿಎಂಸಿ ನಾಯಕ ಸಾಕೇತ್‌ ಗೋಖಲೆ ಅವರು ಬಹಿರಂಗಪಡಿಸಿದ್ದಾರೆ.

ಸೋಮವಾರ ಸಂಜೆಯವರೆಗೆ ಟ್ವಿಟರ್‌‌ನಲ್ಲಿ ಕೇವಲ ಒಂದು ಸಂದೇಶವನ್ನು ಪೋಸ್ಟ್ ಮಾಡಿದ್ದ ಮತ್ತು ಕೇವಲ ಮೂರು ಅನುಯಾಯಿಗಳನ್ನು ಹೊಂದಿದ್ದ ಅನಾಮಧೇಯ ಟ್ವಿಟರ್ ಹ್ಯಾಂಡಲ್‌ನ ದೂರಿನ ಆಧಾರದ ಮೇಲೆ ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರನ್ನು ಸೋಮವಾರ ಸಂಜೆ ದೆಹಲಿ ಪೊಲೀಸರು ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊಹಮ್ಮದ್ ಜುಬೇರ್‌ ಅವರು 2018 ರಲ್ಲಿ ಮಾಡಿದ್ದ ಪೋಸ್ಟ್ ಒಂದನ್ನು ಉಲ್ಲೇಖಿಸಿದ್ದ ಅನಾಮಧೇಯ ‘ಹನುಮಾನ್ ಭಕ್ತ್‌‌’ ಹ್ಯಾಂಡಲ್ ಆಕ್ಷೇಪಣೆ ವ್ಯಕ್ತಪಡಿಸಿತ್ತು. ಆ ಪೋಸ್ಟ್‌ನ ಚಿತ್ರದಲ್ಲಿ, ‘ಹನಿಮೂನ್ ಹೋಟೆಲ್’ ಎಂಬ ಬೋರ್ಡಿಗೆ ಬಣ್ಣ ಬಳಿದು, ‘ಹನುಮಾನ್ ಹೋಟೆಲ್’ ಎಂದು ಹಿಂದಿಯಲ್ಲಿ ಬರೆದಂತೆ ತೋರಿಸಲಾಗಿದೆ.

ಇದನ್ನೂ ಓದಿ: ತೀಸ್ತಾ, ಜುಬೇರ್‌‌ ಬಂಧನ ಆತಂಕಕಾರಿ: ನೊಬೆಲ್‌ ಪ್ರಶಸ್ತಿ ಪುರಸ್ಕೃತ ಪತ್ರಕರ್ತೆ ಮಾರಿಯಾ ಪ್ರತಿಕ್ರಿಯೆ

ಆದರೆ ಜುಬೇರ್‌ ಅವರನ್ನು ಬಂಧಿಸಲು ಕಾರಣವಾಗಿರುವ ಚಿತ್ರವೂ ಎಡಿಟ್ ಮಾಡಿರುವ ಚಿತ್ರವಲ್ಲ, ಬದಲಾಗಿ ಈ ಚಿತ್ರವು 1983ರ ಹಿಂದಿ ಚಲನಚಿತ್ರವಾದ ‘ಕಿಸ್ಸಿ ಸೆ ನಾ ಕೆಹನಾ’ ದೃಶ್ಯವಾಗಿದೆ. ‘ಕಿಸ್ಸಿ ಸೆ ನಾ ಕೆಹನಾ’ ಎಂದರೆ ಕನ್ನಡದಲ್ಲಿ ‘ಯಾರಿಗೂ ಹೇಳಬೇಡಿ’ ಎಂದರ್ಥವಿದೆ. ಈ ರೊಮ್ಯಾಂಟಿಕ್ ಹಾಸ್ಯ ಚಲನಚಿತ್ರವನ್ನು ಹೃಷಿಕೇಶ್ ಮುಖರ್ಜಿ ನಿರ್ದೇಶಿಸಿದ್ದು, ಚಲನಚಿತ್ರ ಮಂಡಳಿಯೂ ಅದಕ್ಕೆ ‘ಯು’ (ಎಲ್ಲರೂ ನೋಡಬಹುದಾದ) ಪ್ರಮಾಣಪತ್ರ ನೀಡಿದೆ. ಅಲ್ಲದೆ ಈ ಚಿತ್ರ ಮತ್ತು ದೃಶ್ಯ ಇನ್ನೂ ಯೂಟ್ಯೂಬ್‌ನಲ್ಲಿ ಲಭ್ಯವಿದೆ.

ಜುಬೇರ್‌ ವಿರುದ್ಧ ದೆಹಲಿ ಪೊಲೀಸರು, “ಪೋಸ್ಟ್‌ನಲ್ಲಿನ ಪದಗಳು ಮತ್ತು ಚಿತ್ರವನ್ನು ಮೊಹಮ್ಮದ್ ಜುಬೇರ್‌‌ ಅವರು ನಿರ್ದಿಷ್ಟ ಧಾರ್ಮಿಕ ಸಮುದಾಯದ ವಿರುದ್ಧ ಬಳಸಿದ್ದಾರೆ. ಇದು ತೀವ್ರ ಪ್ರಚೋದನಕಾರಿ ಮತ್ತು ಜನರ ನಡುವೆ ದ್ವೇಷದ ಭಾವನೆಗಳನ್ನು ಹುಟ್ಟುಹಾಕಲು ಸಾಕಾಗುತ್ತದೆ. ಇದು ಸಮಾಜದಲ್ಲಿ ಸಾರ್ವಜನಿಕ ನೆಮ್ಮದಿಯನ್ನು ಕಾಪಾಡಿಕೊಳ್ಳಲು ಹಾನಿಕಾರಕವಾಗಿದೆ” ಎಂದು ಎಫ್‌ಐಆರ್‌ನಲ್ಲಿ ದಾಖಲಿಸಿದ್ದಾರೆ.

ಅದಾಗಿಯೂ ಜುಬೇರ್‌ ಅವರ ವಿರುದ್ಧ ದೂರು ನೀಡಿರುವ ಅನಾಮಧೇಯ ಟ್ವಿಟರ್‌ ಅಕೌಂಟ್‌ ಹನುಮಾನ್ ಭಕ್ತ್ ಬಿಜೆಪಿ ಐಟಿ ಸೆಲ್ಲಿನ ಅಕೌಂಟ್‌ ಆಗಿದೆ ಎಂದು ಸಾಮಾಜಿಕ ಹೋರಾಟಗಾರ ಸಾಕೇತ್‌ ಗೋಖಲೆ ಹೇಳಿದ್ದು, ಅದಕ್ಕೆ ಹಲವು ಆಧಾರಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಜುಬೇರ್‌ ಬಂಧನ: ಬರವಣಿಗೆ, ಟ್ವೀಟ್ ಆಧಾರದಲ್ಲಿ ಪತ್ರಕರ್ತರನ್ನು ಜೈಲಿಗೆ ಹಾಕಬಾರದು- ವಿಶ್ವಸಂಸ್ಥೆ

ಈ ಬಗ್ಗೆ ಟ್ವಿಟರ್‌ನಲ್ಲಿ ಸಾಕ್ಷಿ ಸಮೇತ ದಾಖಲೆ ನೀಡಿರುವ ಸಾಕೇತ್ ಅವರು,“ದೆಹಲಿ ಪೊಲೀಸರನ್ನು ಬಳಸಿಕೊಂಡು ಬಿಜೆಪಿ ಹೇಗೆ ಜುಬೈರ್‌ ಅನ್ನು ಸಿಲುಕಿಸಿದ್ದಾರೆ ಎಂಬುವುದಕ್ಕೆ ಇದು ಸಾಕ್ಷಿ. ಜುಬೈರ್ ವಿರುದ್ಧ ದೂರು ದಾಖಲಿಸಿದ ಬಾಲಾಜಿಕಿಜೈನ್ ಖಾತೆಯನ್ನು ನಾನು ಪರಿಶೀಲಿಸಿದ್ದು, ಅದು ನಿನ್ನೆಯವರೆಗೆ 1 ಅನುಯಾಯಿಗಳನ್ನು ಹೊಂದಿತ್ತು” ಎಂದು ಅವರು ಮಂಗಳವಾರ ಹೇಳಿದ್ದಾರೆ.

ಬಾಲಾಜಿಕಿಜೈನ್ ಅಕೌಂಟ್‌ ಅನ್ನು ಅಕ್ಟೋಬರ್ 2021ರಲ್ಲಿ ರಚಿಸಲಾಗಿದೆ. ಅದು ತನ್ನ ಮೊದಲ ಸಂದೇಶವನ್ನು ಜೂನ್ 19 ರಂದು ಪೋಸ್ಟ್ ಮಾಡಿತ್ತು. ಈ ಪೋಸ್ಟ್‌ನಲ್ಲಿ ಅದು ಜುಬೈರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರನ್ನು ಕೇಳಿತ್ತು.

ಈ ಖಾತೆಯೂ ಫೆಬ್ರವರಿಯಲ್ಲಿ ‘ಸೈನ್‌ಪೋಸ್ಟ್ ಇಂಡಿಯಾ’ ಎಂಬ ಕಂಪನಿಯ ಕುರಿತ ಪೋಸ್ಟ್ ಅನ್ನು ‘ಲೈಕ್’ ಮಾಡಿದೆ ಎಂದು ಸಾಕೇತ್‌ ಗೋಖಲೆ ಸೂಚಿಸಿದ್ದಾರೆ.

ಇದನ್ನೂ ಓದಿ: ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಮತ್ತೆ ನಾಲ್ಕು ದಿನ ಪೊಲೀಸ್ ವಶಕ್ಕೆ

“ಈಗ ಇದು ಆಸಕ್ತಿದಾಯಕವಾಗಿದೆ. ಸೈನ್‌ಪೋಸ್ಟ್ ಇಂಡಿಯಾ ಒಂದು ಸಾಮಾಜಿಕ ಮಾಧ್ಯಮ ಏಜೆನ್ಸಿಯಾಗಿದ್ದು. ಇದು ‘202-ಪ್ರೆಸ್‌ಮ್ಯಾನ್ ಹೌಸ್, ಮುಂಬೈ’ ಎಂಬ ವಿಳಾಸದಲ್ಲಿದ್ದು, ಇದು ತನ್ನ ಗ್ರಾಹಕನಾಗಿ ಬಿಜೆಪಿಯನ್ನು ಹೊಂದಿದೆ. ಬಿಜೆಪಿ ಯುವ ಘಟಕದ ಐಟಿ ಸೆಲ್ ಮುಖ್ಯಸ್ಥ ದೇವಾಂಗ್ ದವೆ ಅವರು ಸೈನ್‌ಪೋಸ್ಟ್ ಇಂಡಿಯಾ ಮತ್ತು ಅದೇ ವಿಳಾಸದಲ್ಲಿರುವ ಇನ್ನೊಂದು ಏಜೆನ್ಸಿಯನ್ನು ಹೊಂದಿದ್ದಾರೆ” ಎಂದು ಅವರು ಹೇಳಿದ್ದಾರೆ.

ದೇವಾಂಗ್ ದವೆ ಅವರು ಬಿಜೆಪಿಯ ‘ಟೆಕ್ ಫಾಗ್‌’ ಎಂಬ ಗುಂಪು ಟ್ರೋಲಿಂಗ್ ಆಪ್‌ನ ಹಿಂದೆ ಇರುವ ಪ್ರಮುಖ ವ್ಯಕ್ತಿಯಾಗಿದ್ದಾರೆ. ‘ಟೆಕ್ ಫಾಗ್‌’ ಎಂಬ ಈ ಆಪ್‌ ಬಿಜೆಪಿಯನ್ನು ವಿರೋಧಿಸುವ ಯಾವುದೇ ವ್ಯಕ್ತಿಯನ್ನು ಗುಂಪಾಗಿ ಗುರಿ ಮಾಡುವ ಒಂದು ಆಪ್‌ ಆಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿ ವಿರುದ್ಧ ಮಾತನಾಡುವ ಯಾವುದೇ ವ್ಯಕ್ತಿಯನ್ನು ಗುರಿ ಮಾಡಿ ಅವರಿಗೆ ಅಶ್ಲೀಲ ಮತ್ತು ಅವಾಚ್ಯ ಬೈಗಳಗಳನ್ನು ಹಲವು ಫೇಕ್ ಅಕೌಂಟ್ ಮೂಲಕ ಗುಂಪಾಗಿ ಕಳುಹಿಸಲಾಗುತ್ತದೆ. ಇದನ್ನು ದೇಶದ ಪ್ರಮುಖ ಸುದ್ದಿ ಜಾಲವಾದ ‘ವೈರ್.ಇನ್’ ಇತ್ತೀಚೆಗೆ ಬಹಿರಂಗಪಡಿಸಿತ್ತು. ಈ ಸುದ್ದಿಯನ್ನು ನೀಡುವ ಇಲ್ಲಿ ಓದಬಹುದಾಗಿದೆ.

ಇದನ್ನೂ ಓದಿ: ‘ಯಾರಿಗೂ ಹೇಳಬೇಡಿ’: ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಬಂಧನಕ್ಕೆ ಕಾರಣ!

“ಬಿಜೆಪಿಯ ಐಟಿ ಸೆಲ್ ಮತ್ತು ಟೆಕ್ ಫಾಗ್‌ನ ಪ್ರಮುಖ ವ್ಯಕ್ತಿ ‘ಬಾಲಾಜಿಕಿಜೈನ್’ ಎಂಬ ನಕಲಿ ಖಾತೆಯನ್ನು ದೆಹಲಿ ಪೊಲೀಸರ ಸಹಕಾರದೊಂದಿಗೆ ಜುಬೈರ್‌ನನ್ನು ಗುರಿಯಾಗಿಸಲು ಮತ್ತು ಸಿಲುಕಿಸಲು ರಚಿಸಿದ್ದಾರೆ ಎಂಬುದು ಸ್ಫಟಿಕದಷ್ಟು ಸ್ಪಷ್ಟವಾಗಿದೆ. ದೆಹಲಿಯ ಸೈಬರ್‌ ಸೆಲ್ ಪೊಲೀಸರು ನಕಲಿ ಪ್ರಕರಣ ದಾಖಲಿಸಲು ಬಿಜೆಪಿಗೆ ಸಹಕರಿಸಿದ್ದಾರೆ. ಜುಬೇರ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ ಇದನ್ನು ನೋಡಬೇಕಾಗಿದೆ” ಎಂದು ಸಾಕೇತ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...