Homeರಾಷ್ಟ್ರೀಯಪತ್ರಕರ್ತ ಜುಬೇರ್‌ ವಿರುದ್ಧ ದೂರು ನೀಡಿದ್ದ ಟ್ವಿಟರ್‌ ಅಕೌಂಟ್‌ ಡಿಲೀಟ್!

ಪತ್ರಕರ್ತ ಜುಬೇರ್‌ ವಿರುದ್ಧ ದೂರು ನೀಡಿದ್ದ ಟ್ವಿಟರ್‌ ಅಕೌಂಟ್‌ ಡಿಲೀಟ್!

ಅನಾಮಧೇಯ ಟ್ವಿಟರ್‌ ಅಕೌಂಟ್‌‌‌ ಬಿಜೆಪಿ ಐಟಿ ಸೆಲ್‌ನದ್ದಾಗಿದೆ ಎಂದು ಸಾಮಾಜಿಕ ಹೋರಾಟಗಾರ ಸಾಕೇತ್‌ ಗೋಖಲೆ ಹೇಳಿದ್ದಾರೆ.

- Advertisement -
- Advertisement -

ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರ ಟ್ವೀಟನ್ನು ಉಲ್ಲೇಖಿಸಿ ದೆಹಲಿ ಪೊಲೀಸರಿಗೆ ದೂರು ನೀಡಿದ್ದ, ‘ಹನುಮಾನ್ ಭಕ್ತ್ @balajikijaiin’ ಎಂಬ ಹೆಸರಿನ ಟ್ವಿಟರ್‌ ಅಕೌಂಟ್ ಇದೀಗ ಡಿಲೀಟ್ ಮಾಡಲಾಗಿದೆ. ಈ ವಿಚಾರವನ್ನು ಸಾಮಾಜಿಕ ಹೋರಾಟಗಾರ, ಟಿಎಂಸಿ ನಾಯಕ ಸಾಕೇತ್‌ ಗೋಖಲೆ ಅವರು ಬಹಿರಂಗಪಡಿಸಿದ್ದಾರೆ.

ಸೋಮವಾರ ಸಂಜೆಯವರೆಗೆ ಟ್ವಿಟರ್‌‌ನಲ್ಲಿ ಕೇವಲ ಒಂದು ಸಂದೇಶವನ್ನು ಪೋಸ್ಟ್ ಮಾಡಿದ್ದ ಮತ್ತು ಕೇವಲ ಮೂರು ಅನುಯಾಯಿಗಳನ್ನು ಹೊಂದಿದ್ದ ಅನಾಮಧೇಯ ಟ್ವಿಟರ್ ಹ್ಯಾಂಡಲ್‌ನ ದೂರಿನ ಆಧಾರದ ಮೇಲೆ ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರನ್ನು ಸೋಮವಾರ ಸಂಜೆ ದೆಹಲಿ ಪೊಲೀಸರು ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊಹಮ್ಮದ್ ಜುಬೇರ್‌ ಅವರು 2018 ರಲ್ಲಿ ಮಾಡಿದ್ದ ಪೋಸ್ಟ್ ಒಂದನ್ನು ಉಲ್ಲೇಖಿಸಿದ್ದ ಅನಾಮಧೇಯ ‘ಹನುಮಾನ್ ಭಕ್ತ್‌‌’ ಹ್ಯಾಂಡಲ್ ಆಕ್ಷೇಪಣೆ ವ್ಯಕ್ತಪಡಿಸಿತ್ತು. ಆ ಪೋಸ್ಟ್‌ನ ಚಿತ್ರದಲ್ಲಿ, ‘ಹನಿಮೂನ್ ಹೋಟೆಲ್’ ಎಂಬ ಬೋರ್ಡಿಗೆ ಬಣ್ಣ ಬಳಿದು, ‘ಹನುಮಾನ್ ಹೋಟೆಲ್’ ಎಂದು ಹಿಂದಿಯಲ್ಲಿ ಬರೆದಂತೆ ತೋರಿಸಲಾಗಿದೆ.

ಇದನ್ನೂ ಓದಿ: ತೀಸ್ತಾ, ಜುಬೇರ್‌‌ ಬಂಧನ ಆತಂಕಕಾರಿ: ನೊಬೆಲ್‌ ಪ್ರಶಸ್ತಿ ಪುರಸ್ಕೃತ ಪತ್ರಕರ್ತೆ ಮಾರಿಯಾ ಪ್ರತಿಕ್ರಿಯೆ

ಆದರೆ ಜುಬೇರ್‌ ಅವರನ್ನು ಬಂಧಿಸಲು ಕಾರಣವಾಗಿರುವ ಚಿತ್ರವೂ ಎಡಿಟ್ ಮಾಡಿರುವ ಚಿತ್ರವಲ್ಲ, ಬದಲಾಗಿ ಈ ಚಿತ್ರವು 1983ರ ಹಿಂದಿ ಚಲನಚಿತ್ರವಾದ ‘ಕಿಸ್ಸಿ ಸೆ ನಾ ಕೆಹನಾ’ ದೃಶ್ಯವಾಗಿದೆ. ‘ಕಿಸ್ಸಿ ಸೆ ನಾ ಕೆಹನಾ’ ಎಂದರೆ ಕನ್ನಡದಲ್ಲಿ ‘ಯಾರಿಗೂ ಹೇಳಬೇಡಿ’ ಎಂದರ್ಥವಿದೆ. ಈ ರೊಮ್ಯಾಂಟಿಕ್ ಹಾಸ್ಯ ಚಲನಚಿತ್ರವನ್ನು ಹೃಷಿಕೇಶ್ ಮುಖರ್ಜಿ ನಿರ್ದೇಶಿಸಿದ್ದು, ಚಲನಚಿತ್ರ ಮಂಡಳಿಯೂ ಅದಕ್ಕೆ ‘ಯು’ (ಎಲ್ಲರೂ ನೋಡಬಹುದಾದ) ಪ್ರಮಾಣಪತ್ರ ನೀಡಿದೆ. ಅಲ್ಲದೆ ಈ ಚಿತ್ರ ಮತ್ತು ದೃಶ್ಯ ಇನ್ನೂ ಯೂಟ್ಯೂಬ್‌ನಲ್ಲಿ ಲಭ್ಯವಿದೆ.

ಜುಬೇರ್‌ ವಿರುದ್ಧ ದೆಹಲಿ ಪೊಲೀಸರು, “ಪೋಸ್ಟ್‌ನಲ್ಲಿನ ಪದಗಳು ಮತ್ತು ಚಿತ್ರವನ್ನು ಮೊಹಮ್ಮದ್ ಜುಬೇರ್‌‌ ಅವರು ನಿರ್ದಿಷ್ಟ ಧಾರ್ಮಿಕ ಸಮುದಾಯದ ವಿರುದ್ಧ ಬಳಸಿದ್ದಾರೆ. ಇದು ತೀವ್ರ ಪ್ರಚೋದನಕಾರಿ ಮತ್ತು ಜನರ ನಡುವೆ ದ್ವೇಷದ ಭಾವನೆಗಳನ್ನು ಹುಟ್ಟುಹಾಕಲು ಸಾಕಾಗುತ್ತದೆ. ಇದು ಸಮಾಜದಲ್ಲಿ ಸಾರ್ವಜನಿಕ ನೆಮ್ಮದಿಯನ್ನು ಕಾಪಾಡಿಕೊಳ್ಳಲು ಹಾನಿಕಾರಕವಾಗಿದೆ” ಎಂದು ಎಫ್‌ಐಆರ್‌ನಲ್ಲಿ ದಾಖಲಿಸಿದ್ದಾರೆ.

ಅದಾಗಿಯೂ ಜುಬೇರ್‌ ಅವರ ವಿರುದ್ಧ ದೂರು ನೀಡಿರುವ ಅನಾಮಧೇಯ ಟ್ವಿಟರ್‌ ಅಕೌಂಟ್‌ ಹನುಮಾನ್ ಭಕ್ತ್ ಬಿಜೆಪಿ ಐಟಿ ಸೆಲ್ಲಿನ ಅಕೌಂಟ್‌ ಆಗಿದೆ ಎಂದು ಸಾಮಾಜಿಕ ಹೋರಾಟಗಾರ ಸಾಕೇತ್‌ ಗೋಖಲೆ ಹೇಳಿದ್ದು, ಅದಕ್ಕೆ ಹಲವು ಆಧಾರಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಜುಬೇರ್‌ ಬಂಧನ: ಬರವಣಿಗೆ, ಟ್ವೀಟ್ ಆಧಾರದಲ್ಲಿ ಪತ್ರಕರ್ತರನ್ನು ಜೈಲಿಗೆ ಹಾಕಬಾರದು- ವಿಶ್ವಸಂಸ್ಥೆ

ಈ ಬಗ್ಗೆ ಟ್ವಿಟರ್‌ನಲ್ಲಿ ಸಾಕ್ಷಿ ಸಮೇತ ದಾಖಲೆ ನೀಡಿರುವ ಸಾಕೇತ್ ಅವರು,“ದೆಹಲಿ ಪೊಲೀಸರನ್ನು ಬಳಸಿಕೊಂಡು ಬಿಜೆಪಿ ಹೇಗೆ ಜುಬೈರ್‌ ಅನ್ನು ಸಿಲುಕಿಸಿದ್ದಾರೆ ಎಂಬುವುದಕ್ಕೆ ಇದು ಸಾಕ್ಷಿ. ಜುಬೈರ್ ವಿರುದ್ಧ ದೂರು ದಾಖಲಿಸಿದ ಬಾಲಾಜಿಕಿಜೈನ್ ಖಾತೆಯನ್ನು ನಾನು ಪರಿಶೀಲಿಸಿದ್ದು, ಅದು ನಿನ್ನೆಯವರೆಗೆ 1 ಅನುಯಾಯಿಗಳನ್ನು ಹೊಂದಿತ್ತು” ಎಂದು ಅವರು ಮಂಗಳವಾರ ಹೇಳಿದ್ದಾರೆ.

ಬಾಲಾಜಿಕಿಜೈನ್ ಅಕೌಂಟ್‌ ಅನ್ನು ಅಕ್ಟೋಬರ್ 2021ರಲ್ಲಿ ರಚಿಸಲಾಗಿದೆ. ಅದು ತನ್ನ ಮೊದಲ ಸಂದೇಶವನ್ನು ಜೂನ್ 19 ರಂದು ಪೋಸ್ಟ್ ಮಾಡಿತ್ತು. ಈ ಪೋಸ್ಟ್‌ನಲ್ಲಿ ಅದು ಜುಬೈರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರನ್ನು ಕೇಳಿತ್ತು.

ಈ ಖಾತೆಯೂ ಫೆಬ್ರವರಿಯಲ್ಲಿ ‘ಸೈನ್‌ಪೋಸ್ಟ್ ಇಂಡಿಯಾ’ ಎಂಬ ಕಂಪನಿಯ ಕುರಿತ ಪೋಸ್ಟ್ ಅನ್ನು ‘ಲೈಕ್’ ಮಾಡಿದೆ ಎಂದು ಸಾಕೇತ್‌ ಗೋಖಲೆ ಸೂಚಿಸಿದ್ದಾರೆ.

ಇದನ್ನೂ ಓದಿ: ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಮತ್ತೆ ನಾಲ್ಕು ದಿನ ಪೊಲೀಸ್ ವಶಕ್ಕೆ

“ಈಗ ಇದು ಆಸಕ್ತಿದಾಯಕವಾಗಿದೆ. ಸೈನ್‌ಪೋಸ್ಟ್ ಇಂಡಿಯಾ ಒಂದು ಸಾಮಾಜಿಕ ಮಾಧ್ಯಮ ಏಜೆನ್ಸಿಯಾಗಿದ್ದು. ಇದು ‘202-ಪ್ರೆಸ್‌ಮ್ಯಾನ್ ಹೌಸ್, ಮುಂಬೈ’ ಎಂಬ ವಿಳಾಸದಲ್ಲಿದ್ದು, ಇದು ತನ್ನ ಗ್ರಾಹಕನಾಗಿ ಬಿಜೆಪಿಯನ್ನು ಹೊಂದಿದೆ. ಬಿಜೆಪಿ ಯುವ ಘಟಕದ ಐಟಿ ಸೆಲ್ ಮುಖ್ಯಸ್ಥ ದೇವಾಂಗ್ ದವೆ ಅವರು ಸೈನ್‌ಪೋಸ್ಟ್ ಇಂಡಿಯಾ ಮತ್ತು ಅದೇ ವಿಳಾಸದಲ್ಲಿರುವ ಇನ್ನೊಂದು ಏಜೆನ್ಸಿಯನ್ನು ಹೊಂದಿದ್ದಾರೆ” ಎಂದು ಅವರು ಹೇಳಿದ್ದಾರೆ.

ದೇವಾಂಗ್ ದವೆ ಅವರು ಬಿಜೆಪಿಯ ‘ಟೆಕ್ ಫಾಗ್‌’ ಎಂಬ ಗುಂಪು ಟ್ರೋಲಿಂಗ್ ಆಪ್‌ನ ಹಿಂದೆ ಇರುವ ಪ್ರಮುಖ ವ್ಯಕ್ತಿಯಾಗಿದ್ದಾರೆ. ‘ಟೆಕ್ ಫಾಗ್‌’ ಎಂಬ ಈ ಆಪ್‌ ಬಿಜೆಪಿಯನ್ನು ವಿರೋಧಿಸುವ ಯಾವುದೇ ವ್ಯಕ್ತಿಯನ್ನು ಗುಂಪಾಗಿ ಗುರಿ ಮಾಡುವ ಒಂದು ಆಪ್‌ ಆಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿ ವಿರುದ್ಧ ಮಾತನಾಡುವ ಯಾವುದೇ ವ್ಯಕ್ತಿಯನ್ನು ಗುರಿ ಮಾಡಿ ಅವರಿಗೆ ಅಶ್ಲೀಲ ಮತ್ತು ಅವಾಚ್ಯ ಬೈಗಳಗಳನ್ನು ಹಲವು ಫೇಕ್ ಅಕೌಂಟ್ ಮೂಲಕ ಗುಂಪಾಗಿ ಕಳುಹಿಸಲಾಗುತ್ತದೆ. ಇದನ್ನು ದೇಶದ ಪ್ರಮುಖ ಸುದ್ದಿ ಜಾಲವಾದ ‘ವೈರ್.ಇನ್’ ಇತ್ತೀಚೆಗೆ ಬಹಿರಂಗಪಡಿಸಿತ್ತು. ಈ ಸುದ್ದಿಯನ್ನು ನೀಡುವ ಇಲ್ಲಿ ಓದಬಹುದಾಗಿದೆ.

ಇದನ್ನೂ ಓದಿ: ‘ಯಾರಿಗೂ ಹೇಳಬೇಡಿ’: ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಬಂಧನಕ್ಕೆ ಕಾರಣ!

“ಬಿಜೆಪಿಯ ಐಟಿ ಸೆಲ್ ಮತ್ತು ಟೆಕ್ ಫಾಗ್‌ನ ಪ್ರಮುಖ ವ್ಯಕ್ತಿ ‘ಬಾಲಾಜಿಕಿಜೈನ್’ ಎಂಬ ನಕಲಿ ಖಾತೆಯನ್ನು ದೆಹಲಿ ಪೊಲೀಸರ ಸಹಕಾರದೊಂದಿಗೆ ಜುಬೈರ್‌ನನ್ನು ಗುರಿಯಾಗಿಸಲು ಮತ್ತು ಸಿಲುಕಿಸಲು ರಚಿಸಿದ್ದಾರೆ ಎಂಬುದು ಸ್ಫಟಿಕದಷ್ಟು ಸ್ಪಷ್ಟವಾಗಿದೆ. ದೆಹಲಿಯ ಸೈಬರ್‌ ಸೆಲ್ ಪೊಲೀಸರು ನಕಲಿ ಪ್ರಕರಣ ದಾಖಲಿಸಲು ಬಿಜೆಪಿಗೆ ಸಹಕರಿಸಿದ್ದಾರೆ. ಜುಬೇರ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ ಇದನ್ನು ನೋಡಬೇಕಾಗಿದೆ” ಎಂದು ಸಾಕೇತ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...