Homeರಾಷ್ಟ್ರೀಯಪತ್ರಕರ್ತ ಜುಬೇರ್‌ ವಿರುದ್ಧ ದೂರು ನೀಡಿದ್ದ ಟ್ವಿಟರ್‌ ಅಕೌಂಟ್‌ ಡಿಲೀಟ್!

ಪತ್ರಕರ್ತ ಜುಬೇರ್‌ ವಿರುದ್ಧ ದೂರು ನೀಡಿದ್ದ ಟ್ವಿಟರ್‌ ಅಕೌಂಟ್‌ ಡಿಲೀಟ್!

ಅನಾಮಧೇಯ ಟ್ವಿಟರ್‌ ಅಕೌಂಟ್‌‌‌ ಬಿಜೆಪಿ ಐಟಿ ಸೆಲ್‌ನದ್ದಾಗಿದೆ ಎಂದು ಸಾಮಾಜಿಕ ಹೋರಾಟಗಾರ ಸಾಕೇತ್‌ ಗೋಖಲೆ ಹೇಳಿದ್ದಾರೆ.

- Advertisement -
- Advertisement -

ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರ ಟ್ವೀಟನ್ನು ಉಲ್ಲೇಖಿಸಿ ದೆಹಲಿ ಪೊಲೀಸರಿಗೆ ದೂರು ನೀಡಿದ್ದ, ‘ಹನುಮಾನ್ ಭಕ್ತ್ @balajikijaiin’ ಎಂಬ ಹೆಸರಿನ ಟ್ವಿಟರ್‌ ಅಕೌಂಟ್ ಇದೀಗ ಡಿಲೀಟ್ ಮಾಡಲಾಗಿದೆ. ಈ ವಿಚಾರವನ್ನು ಸಾಮಾಜಿಕ ಹೋರಾಟಗಾರ, ಟಿಎಂಸಿ ನಾಯಕ ಸಾಕೇತ್‌ ಗೋಖಲೆ ಅವರು ಬಹಿರಂಗಪಡಿಸಿದ್ದಾರೆ.

ಸೋಮವಾರ ಸಂಜೆಯವರೆಗೆ ಟ್ವಿಟರ್‌‌ನಲ್ಲಿ ಕೇವಲ ಒಂದು ಸಂದೇಶವನ್ನು ಪೋಸ್ಟ್ ಮಾಡಿದ್ದ ಮತ್ತು ಕೇವಲ ಮೂರು ಅನುಯಾಯಿಗಳನ್ನು ಹೊಂದಿದ್ದ ಅನಾಮಧೇಯ ಟ್ವಿಟರ್ ಹ್ಯಾಂಡಲ್‌ನ ದೂರಿನ ಆಧಾರದ ಮೇಲೆ ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರನ್ನು ಸೋಮವಾರ ಸಂಜೆ ದೆಹಲಿ ಪೊಲೀಸರು ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊಹಮ್ಮದ್ ಜುಬೇರ್‌ ಅವರು 2018 ರಲ್ಲಿ ಮಾಡಿದ್ದ ಪೋಸ್ಟ್ ಒಂದನ್ನು ಉಲ್ಲೇಖಿಸಿದ್ದ ಅನಾಮಧೇಯ ‘ಹನುಮಾನ್ ಭಕ್ತ್‌‌’ ಹ್ಯಾಂಡಲ್ ಆಕ್ಷೇಪಣೆ ವ್ಯಕ್ತಪಡಿಸಿತ್ತು. ಆ ಪೋಸ್ಟ್‌ನ ಚಿತ್ರದಲ್ಲಿ, ‘ಹನಿಮೂನ್ ಹೋಟೆಲ್’ ಎಂಬ ಬೋರ್ಡಿಗೆ ಬಣ್ಣ ಬಳಿದು, ‘ಹನುಮಾನ್ ಹೋಟೆಲ್’ ಎಂದು ಹಿಂದಿಯಲ್ಲಿ ಬರೆದಂತೆ ತೋರಿಸಲಾಗಿದೆ.

ಇದನ್ನೂ ಓದಿ: ತೀಸ್ತಾ, ಜುಬೇರ್‌‌ ಬಂಧನ ಆತಂಕಕಾರಿ: ನೊಬೆಲ್‌ ಪ್ರಶಸ್ತಿ ಪುರಸ್ಕೃತ ಪತ್ರಕರ್ತೆ ಮಾರಿಯಾ ಪ್ರತಿಕ್ರಿಯೆ

ಆದರೆ ಜುಬೇರ್‌ ಅವರನ್ನು ಬಂಧಿಸಲು ಕಾರಣವಾಗಿರುವ ಚಿತ್ರವೂ ಎಡಿಟ್ ಮಾಡಿರುವ ಚಿತ್ರವಲ್ಲ, ಬದಲಾಗಿ ಈ ಚಿತ್ರವು 1983ರ ಹಿಂದಿ ಚಲನಚಿತ್ರವಾದ ‘ಕಿಸ್ಸಿ ಸೆ ನಾ ಕೆಹನಾ’ ದೃಶ್ಯವಾಗಿದೆ. ‘ಕಿಸ್ಸಿ ಸೆ ನಾ ಕೆಹನಾ’ ಎಂದರೆ ಕನ್ನಡದಲ್ಲಿ ‘ಯಾರಿಗೂ ಹೇಳಬೇಡಿ’ ಎಂದರ್ಥವಿದೆ. ಈ ರೊಮ್ಯಾಂಟಿಕ್ ಹಾಸ್ಯ ಚಲನಚಿತ್ರವನ್ನು ಹೃಷಿಕೇಶ್ ಮುಖರ್ಜಿ ನಿರ್ದೇಶಿಸಿದ್ದು, ಚಲನಚಿತ್ರ ಮಂಡಳಿಯೂ ಅದಕ್ಕೆ ‘ಯು’ (ಎಲ್ಲರೂ ನೋಡಬಹುದಾದ) ಪ್ರಮಾಣಪತ್ರ ನೀಡಿದೆ. ಅಲ್ಲದೆ ಈ ಚಿತ್ರ ಮತ್ತು ದೃಶ್ಯ ಇನ್ನೂ ಯೂಟ್ಯೂಬ್‌ನಲ್ಲಿ ಲಭ್ಯವಿದೆ.

ಜುಬೇರ್‌ ವಿರುದ್ಧ ದೆಹಲಿ ಪೊಲೀಸರು, “ಪೋಸ್ಟ್‌ನಲ್ಲಿನ ಪದಗಳು ಮತ್ತು ಚಿತ್ರವನ್ನು ಮೊಹಮ್ಮದ್ ಜುಬೇರ್‌‌ ಅವರು ನಿರ್ದಿಷ್ಟ ಧಾರ್ಮಿಕ ಸಮುದಾಯದ ವಿರುದ್ಧ ಬಳಸಿದ್ದಾರೆ. ಇದು ತೀವ್ರ ಪ್ರಚೋದನಕಾರಿ ಮತ್ತು ಜನರ ನಡುವೆ ದ್ವೇಷದ ಭಾವನೆಗಳನ್ನು ಹುಟ್ಟುಹಾಕಲು ಸಾಕಾಗುತ್ತದೆ. ಇದು ಸಮಾಜದಲ್ಲಿ ಸಾರ್ವಜನಿಕ ನೆಮ್ಮದಿಯನ್ನು ಕಾಪಾಡಿಕೊಳ್ಳಲು ಹಾನಿಕಾರಕವಾಗಿದೆ” ಎಂದು ಎಫ್‌ಐಆರ್‌ನಲ್ಲಿ ದಾಖಲಿಸಿದ್ದಾರೆ.

ಅದಾಗಿಯೂ ಜುಬೇರ್‌ ಅವರ ವಿರುದ್ಧ ದೂರು ನೀಡಿರುವ ಅನಾಮಧೇಯ ಟ್ವಿಟರ್‌ ಅಕೌಂಟ್‌ ಹನುಮಾನ್ ಭಕ್ತ್ ಬಿಜೆಪಿ ಐಟಿ ಸೆಲ್ಲಿನ ಅಕೌಂಟ್‌ ಆಗಿದೆ ಎಂದು ಸಾಮಾಜಿಕ ಹೋರಾಟಗಾರ ಸಾಕೇತ್‌ ಗೋಖಲೆ ಹೇಳಿದ್ದು, ಅದಕ್ಕೆ ಹಲವು ಆಧಾರಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಜುಬೇರ್‌ ಬಂಧನ: ಬರವಣಿಗೆ, ಟ್ವೀಟ್ ಆಧಾರದಲ್ಲಿ ಪತ್ರಕರ್ತರನ್ನು ಜೈಲಿಗೆ ಹಾಕಬಾರದು- ವಿಶ್ವಸಂಸ್ಥೆ

ಈ ಬಗ್ಗೆ ಟ್ವಿಟರ್‌ನಲ್ಲಿ ಸಾಕ್ಷಿ ಸಮೇತ ದಾಖಲೆ ನೀಡಿರುವ ಸಾಕೇತ್ ಅವರು,“ದೆಹಲಿ ಪೊಲೀಸರನ್ನು ಬಳಸಿಕೊಂಡು ಬಿಜೆಪಿ ಹೇಗೆ ಜುಬೈರ್‌ ಅನ್ನು ಸಿಲುಕಿಸಿದ್ದಾರೆ ಎಂಬುವುದಕ್ಕೆ ಇದು ಸಾಕ್ಷಿ. ಜುಬೈರ್ ವಿರುದ್ಧ ದೂರು ದಾಖಲಿಸಿದ ಬಾಲಾಜಿಕಿಜೈನ್ ಖಾತೆಯನ್ನು ನಾನು ಪರಿಶೀಲಿಸಿದ್ದು, ಅದು ನಿನ್ನೆಯವರೆಗೆ 1 ಅನುಯಾಯಿಗಳನ್ನು ಹೊಂದಿತ್ತು” ಎಂದು ಅವರು ಮಂಗಳವಾರ ಹೇಳಿದ್ದಾರೆ.

ಬಾಲಾಜಿಕಿಜೈನ್ ಅಕೌಂಟ್‌ ಅನ್ನು ಅಕ್ಟೋಬರ್ 2021ರಲ್ಲಿ ರಚಿಸಲಾಗಿದೆ. ಅದು ತನ್ನ ಮೊದಲ ಸಂದೇಶವನ್ನು ಜೂನ್ 19 ರಂದು ಪೋಸ್ಟ್ ಮಾಡಿತ್ತು. ಈ ಪೋಸ್ಟ್‌ನಲ್ಲಿ ಅದು ಜುಬೈರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರನ್ನು ಕೇಳಿತ್ತು.

ಈ ಖಾತೆಯೂ ಫೆಬ್ರವರಿಯಲ್ಲಿ ‘ಸೈನ್‌ಪೋಸ್ಟ್ ಇಂಡಿಯಾ’ ಎಂಬ ಕಂಪನಿಯ ಕುರಿತ ಪೋಸ್ಟ್ ಅನ್ನು ‘ಲೈಕ್’ ಮಾಡಿದೆ ಎಂದು ಸಾಕೇತ್‌ ಗೋಖಲೆ ಸೂಚಿಸಿದ್ದಾರೆ.

ಇದನ್ನೂ ಓದಿ: ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಮತ್ತೆ ನಾಲ್ಕು ದಿನ ಪೊಲೀಸ್ ವಶಕ್ಕೆ

“ಈಗ ಇದು ಆಸಕ್ತಿದಾಯಕವಾಗಿದೆ. ಸೈನ್‌ಪೋಸ್ಟ್ ಇಂಡಿಯಾ ಒಂದು ಸಾಮಾಜಿಕ ಮಾಧ್ಯಮ ಏಜೆನ್ಸಿಯಾಗಿದ್ದು. ಇದು ‘202-ಪ್ರೆಸ್‌ಮ್ಯಾನ್ ಹೌಸ್, ಮುಂಬೈ’ ಎಂಬ ವಿಳಾಸದಲ್ಲಿದ್ದು, ಇದು ತನ್ನ ಗ್ರಾಹಕನಾಗಿ ಬಿಜೆಪಿಯನ್ನು ಹೊಂದಿದೆ. ಬಿಜೆಪಿ ಯುವ ಘಟಕದ ಐಟಿ ಸೆಲ್ ಮುಖ್ಯಸ್ಥ ದೇವಾಂಗ್ ದವೆ ಅವರು ಸೈನ್‌ಪೋಸ್ಟ್ ಇಂಡಿಯಾ ಮತ್ತು ಅದೇ ವಿಳಾಸದಲ್ಲಿರುವ ಇನ್ನೊಂದು ಏಜೆನ್ಸಿಯನ್ನು ಹೊಂದಿದ್ದಾರೆ” ಎಂದು ಅವರು ಹೇಳಿದ್ದಾರೆ.

ದೇವಾಂಗ್ ದವೆ ಅವರು ಬಿಜೆಪಿಯ ‘ಟೆಕ್ ಫಾಗ್‌’ ಎಂಬ ಗುಂಪು ಟ್ರೋಲಿಂಗ್ ಆಪ್‌ನ ಹಿಂದೆ ಇರುವ ಪ್ರಮುಖ ವ್ಯಕ್ತಿಯಾಗಿದ್ದಾರೆ. ‘ಟೆಕ್ ಫಾಗ್‌’ ಎಂಬ ಈ ಆಪ್‌ ಬಿಜೆಪಿಯನ್ನು ವಿರೋಧಿಸುವ ಯಾವುದೇ ವ್ಯಕ್ತಿಯನ್ನು ಗುಂಪಾಗಿ ಗುರಿ ಮಾಡುವ ಒಂದು ಆಪ್‌ ಆಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿ ವಿರುದ್ಧ ಮಾತನಾಡುವ ಯಾವುದೇ ವ್ಯಕ್ತಿಯನ್ನು ಗುರಿ ಮಾಡಿ ಅವರಿಗೆ ಅಶ್ಲೀಲ ಮತ್ತು ಅವಾಚ್ಯ ಬೈಗಳಗಳನ್ನು ಹಲವು ಫೇಕ್ ಅಕೌಂಟ್ ಮೂಲಕ ಗುಂಪಾಗಿ ಕಳುಹಿಸಲಾಗುತ್ತದೆ. ಇದನ್ನು ದೇಶದ ಪ್ರಮುಖ ಸುದ್ದಿ ಜಾಲವಾದ ‘ವೈರ್.ಇನ್’ ಇತ್ತೀಚೆಗೆ ಬಹಿರಂಗಪಡಿಸಿತ್ತು. ಈ ಸುದ್ದಿಯನ್ನು ನೀಡುವ ಇಲ್ಲಿ ಓದಬಹುದಾಗಿದೆ.

ಇದನ್ನೂ ಓದಿ: ‘ಯಾರಿಗೂ ಹೇಳಬೇಡಿ’: ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಬಂಧನಕ್ಕೆ ಕಾರಣ!

“ಬಿಜೆಪಿಯ ಐಟಿ ಸೆಲ್ ಮತ್ತು ಟೆಕ್ ಫಾಗ್‌ನ ಪ್ರಮುಖ ವ್ಯಕ್ತಿ ‘ಬಾಲಾಜಿಕಿಜೈನ್’ ಎಂಬ ನಕಲಿ ಖಾತೆಯನ್ನು ದೆಹಲಿ ಪೊಲೀಸರ ಸಹಕಾರದೊಂದಿಗೆ ಜುಬೈರ್‌ನನ್ನು ಗುರಿಯಾಗಿಸಲು ಮತ್ತು ಸಿಲುಕಿಸಲು ರಚಿಸಿದ್ದಾರೆ ಎಂಬುದು ಸ್ಫಟಿಕದಷ್ಟು ಸ್ಪಷ್ಟವಾಗಿದೆ. ದೆಹಲಿಯ ಸೈಬರ್‌ ಸೆಲ್ ಪೊಲೀಸರು ನಕಲಿ ಪ್ರಕರಣ ದಾಖಲಿಸಲು ಬಿಜೆಪಿಗೆ ಸಹಕರಿಸಿದ್ದಾರೆ. ಜುಬೇರ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ ಇದನ್ನು ನೋಡಬೇಕಾಗಿದೆ” ಎಂದು ಸಾಕೇತ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...