Homeಮುಖಪುಟಘರ್ಷಣೆ ನಿರೋಧಕ ಸಾಧನ ಏಕಿರಲಿಲ್ಲ?; ರೈಲ್ವೆ ಸಚಿವರ ಎದುರಿಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಶ್ನೆ

ಘರ್ಷಣೆ ನಿರೋಧಕ ಸಾಧನ ಏಕಿರಲಿಲ್ಲ?; ರೈಲ್ವೆ ಸಚಿವರ ಎದುರಿಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಶ್ನೆ

- Advertisement -
- Advertisement -

ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತವನ್ನು ‘ಶತಮಾನದ ಅತಿದೊಡ್ಡ’ ದುರಂತ ಎಂದು ಕರೆದಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ರೈಲುಗಳಲ್ಲಿ Anti-collision device (ಘರ್ಷಣೆ ನಿರೋಧಕ ಸಾಧನ) ಏಕಿರಲಿಲ್ಲ? ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಪ್ರಶ್ನಿಸಿದ್ದಾರೆ.

ರೈಲುಗಳಲ್ಲಿ ಏಕೆ ಆಂಟಿ-ಕಲ್ಯೂಷನ್ ಡಿವೈಸ್ಇದ್ದಿದ್ದರೆ ದುರಂತವನ್ನು ತಡೆಯಬಹುದಿತ್ತು. ಆ ಸಾಧನವನ್ನು ರೈಲುಗಳಲ್ಲಿ ಏಕೆ ಅಳವಡಿಸಲಾಗಿಲ್ಲ ಎಂದು ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

“ಇದು ಈ ಶತಮಾನದ ಅತಿ ದೊಡ್ಡ ರೈಲು ಅಪಘಾತವಾಗಿದ್ದು, ಇದರ ಹಿಂದೆ ಏನಾದರೂ ಕೈವಾಡವಿರಬೇಕು. ಈ ಕುರಿತು ಸೂಕ್ತ ತನಿಖೆ ನಡೆಸಿ, ಸತ್ಯ ಹೊರಬರಬೇಕು. Anti-collision device ಏಕೆ ಕೆಲಸ ಮಾಡಲಿಲ್ಲ?” ಎಂದು ವೈಷ್ಣವ್ ಅವರ ಪಕ್ಕದಲ್ಲಿ ನಿಂತು ಪ್ರಶ್ನಿಸಿದ್ದಾರೆ.

“ಕೋರಮಂಡಲ್ ಅತ್ಯುತ್ತಮ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಒಂದಾಗಿದೆ. ನಾನು ಮೂರು ಬಾರಿ ರೈಲ್ವೆ ಸಚಿವಳಾಗಿದ್ದೆ. ನಾನು ನೋಡಿದ ಪ್ರಕಾರ ಇದು 21 ನೇ ಶತಮಾನದ ಅತಿದೊಡ್ಡ ರೈಲ್ವೆ ಅಪಘಾತವಾಗಿದೆ. ನನಗೆ ತಿಳಿದ ಮಟ್ಟಿಗೆ ರೈಲಿನಲ್ಲಿ Anti-collision device ಇರಲಿಲ್ಲ. ಆ  ಸಾಧನ ರೈಲಿನಲ್ಲಿ ಇದ್ದಿದ್ದರೆ ಹೀಗಾಗುತ್ತಿರಲಿಲ್ಲ… ಸತ್ತವರನ್ನು ಮರಳಿ ತರಲು ಸಾಧ್ಯವಿಲ್ಲ ಆದರೆ ಈಗ ನಮ್ಮ ಕೆಲಸ ರಕ್ಷಣಾ ಕಾರ್ಯಾಚರಣೆ ಮತ್ತು ಸಹಜ ಸ್ಥಿತಿಯ ಮರುಸ್ಥಾಪನೆಯಾಗಿದೆ” ಎಂದು ಅವರು ಹೇಳಿದ್ದಾರೆ.

ನಾನು ಇಲ್ಲಿ ರೈಲ್ವೆ ಸಚಿವರು ಮತ್ತು ಬಿಜೆಪಿ ಸಂಸದರೊಂದಿಗೆ ನಿಂತಿದ್ದೇನೆ. ಬಂಗಾಳ ಸರ್ಕಾರವು ಅಪಘಾತದಲ್ಲಿ ಮರಣ ಹೊಂದಿಗೆ ನಮ್ಮ ರಾಜ್ಯದ ಜನರಿ ಕುಟುಂಬಗಳಿಗೆ ತಲಾ ₹ 5 ಲಕ್ಷ ನೀಡಲಿದೆ ಮತ್ತು ಕೆಲಸ ಪೂರ್ಣಗೊಳ್ಳುವವರೆಗೆ ರೈಲ್ವೆ ಮತ್ತು ಒಡಿಶಾ ಸರ್ಕಾರದೊಂದಿಗೆ ಸಹಕರಿಸುತ್ತದೆ. ನಾವು ಹೆಚ್ಚಿನ ವೈದ್ಯಕೀಯ ಸಹಾಯಕ್ಕಾಗಿ ಬಂಗಾಳದಿಂದ ಒಡಿಶಾಗೆ ಎರಡು ಬಸ್ಸುಗಳು ಮತ್ತು 40 ವೈದ್ಯರನ್ನು ಸಹ ಕಳುಹಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

Anti-collision device ಎಂದರೇನು?

Anti-collision device ಎಂಬುದು ರೈಲು-ಘರ್ಷಣೆ ತಡೆಗಟ್ಟುವ ವ್ಯವಸ್ಥೆಯಾಗಿದ್ದು, ಇದನ್ನು ರಾಜಾರಾಮ್ ಬೊಜ್ಜಿ ಎಂಬುವವರು ಕಂಡು ಹಿಡಿದಿದ್ದಾರೆ. ಇದನ್ನು ರೈಲುಗಳಲ್ಲಿ ಅಳವಡಿಸಿದರೆ ಅದು ರೇಡಿಯೋ ತರಂಗಾಂತರ ಮೂಲಕ ಎದುರಿಗೆ ಬರುವ ರೈಲುಗಳ ಮಾಹಿತಿಯನ್ನು ರವಾನಿಸುತ್ತದೆ. ಅಲ್ಲದೇ ಎದುರಿಗೆ 3 ಕಿ.ಮೀ ವ್ಯಾಪ್ತಿಯಲ್ಲಿ ರೈಲು ಬರುತ್ತಿರುವಾಗಲೇ ಅದು ಸ್ವಯಂಚಾಲಿತವಾಗಿ ಬ್ರೇಕ್‌ ಅನ್ನು ಒತ್ತುತ್ತದೆ. ಅಂದರೆ ಅವು 30 ಕಿಮೀ/ಗಂ ಅಥವಾ ಪರ್ಯಾಯ ಪೂರ್ವನಿರ್ಧರಿತ ವೇಗಕ್ಕೆ ಕ್ಷೀಣಿಸಲು ಬ್ರೇಕ್ ಹಾಕುತ್ತವೆ. ಆ ಮೂಲಕ ಅಪಘಾತ ತಡೆಗಟ್ಟುವಲ್ಲಿ ಶಸಕ್ತವಾಗಿದೆ ಎಂಬ ಖ್ಯಾತಿ ಪಡೆದಿದೆ.

ಈ ರೀತಿಯ Anti-collision device ಗಳನ್ನು ರೈಲ್ವೇ ಹಳಿ ಕ್ರಾಸಿಂಗ್‌ ಗೇಟ್‌ಗಳಲ್ಲಿ ಸಹ ಅಳವಡಿಸುತ್ತಾರೆ. ರೈಲುಗಳು ಗೇಟುಗಳ 2 ಕಿ.ಮೀ ದೂರ ಇರುವಾಗಲೇ ವೇಗವನ್ನು ಕಡಿತಗೊಳಿಸಲು ಸೂಚನೆ ನೀಡುತ್ತವೆ ಎನ್ನಲಾಗಿದೆ.

ಒಂದು ಲೊಕೊ ಎಸಿಡಿಯು ಇತರ ರೈಲು ಬೌಂಡ್ ಎಸಿಡಿಗಳಿಂದ ಹಸ್ತಚಾಲಿತ ‘ಎಸ್‌ಒಎಸ್’ ಸಂದೇಶವನ್ನು ಸ್ವೀಕರಿಸಿದರೆ ಅಥವಾ ಅದರ ರೇಡಿಯಲ್ ವ್ಯಾಪ್ತಿಯ ಮೂರು ಕಿಲೋಮೀಟರ್‌ಗಳೊಳಗಿನ ಸ್ಟೇಷನ್ ಎಸಿಡಿ, ರೈಲನ್ನು ನಿಲುಗಡೆಗೆ ತರಲು ಅದು ಸ್ವಯಂಚಾಲಿತವಾಗಿ ಬ್ರೇಕ್‌ಗಳನ್ನು ಅನ್ವಯಿಸುತ್ತದೆ. ಈ ಕುರಿತ ಹೆಚ್ಚಿನ ಮಾಹಿಗೆ ಕೆಳಗಿನ ವಿಡಿಯೋ  ನೋಡಿ.

ಇದನ್ನೂ ಓದಿ; ಇತ್ತೀಚಿನ ವರ್ಷಗಳಲ್ಲಿ ಭಾರತ ಕಂಡ ಭೀಕರ ರೈಲು ದುರಂತಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...