Homeಮುಖಪುಟಘರ್ಷಣೆ ನಿರೋಧಕ ಸಾಧನ ಏಕಿರಲಿಲ್ಲ?; ರೈಲ್ವೆ ಸಚಿವರ ಎದುರಿಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಶ್ನೆ

ಘರ್ಷಣೆ ನಿರೋಧಕ ಸಾಧನ ಏಕಿರಲಿಲ್ಲ?; ರೈಲ್ವೆ ಸಚಿವರ ಎದುರಿಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಶ್ನೆ

- Advertisement -
- Advertisement -

ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತವನ್ನು ‘ಶತಮಾನದ ಅತಿದೊಡ್ಡ’ ದುರಂತ ಎಂದು ಕರೆದಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ರೈಲುಗಳಲ್ಲಿ Anti-collision device (ಘರ್ಷಣೆ ನಿರೋಧಕ ಸಾಧನ) ಏಕಿರಲಿಲ್ಲ? ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಪ್ರಶ್ನಿಸಿದ್ದಾರೆ.

ರೈಲುಗಳಲ್ಲಿ ಏಕೆ ಆಂಟಿ-ಕಲ್ಯೂಷನ್ ಡಿವೈಸ್ಇದ್ದಿದ್ದರೆ ದುರಂತವನ್ನು ತಡೆಯಬಹುದಿತ್ತು. ಆ ಸಾಧನವನ್ನು ರೈಲುಗಳಲ್ಲಿ ಏಕೆ ಅಳವಡಿಸಲಾಗಿಲ್ಲ ಎಂದು ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

“ಇದು ಈ ಶತಮಾನದ ಅತಿ ದೊಡ್ಡ ರೈಲು ಅಪಘಾತವಾಗಿದ್ದು, ಇದರ ಹಿಂದೆ ಏನಾದರೂ ಕೈವಾಡವಿರಬೇಕು. ಈ ಕುರಿತು ಸೂಕ್ತ ತನಿಖೆ ನಡೆಸಿ, ಸತ್ಯ ಹೊರಬರಬೇಕು. Anti-collision device ಏಕೆ ಕೆಲಸ ಮಾಡಲಿಲ್ಲ?” ಎಂದು ವೈಷ್ಣವ್ ಅವರ ಪಕ್ಕದಲ್ಲಿ ನಿಂತು ಪ್ರಶ್ನಿಸಿದ್ದಾರೆ.

“ಕೋರಮಂಡಲ್ ಅತ್ಯುತ್ತಮ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಒಂದಾಗಿದೆ. ನಾನು ಮೂರು ಬಾರಿ ರೈಲ್ವೆ ಸಚಿವಳಾಗಿದ್ದೆ. ನಾನು ನೋಡಿದ ಪ್ರಕಾರ ಇದು 21 ನೇ ಶತಮಾನದ ಅತಿದೊಡ್ಡ ರೈಲ್ವೆ ಅಪಘಾತವಾಗಿದೆ. ನನಗೆ ತಿಳಿದ ಮಟ್ಟಿಗೆ ರೈಲಿನಲ್ಲಿ Anti-collision device ಇರಲಿಲ್ಲ. ಆ  ಸಾಧನ ರೈಲಿನಲ್ಲಿ ಇದ್ದಿದ್ದರೆ ಹೀಗಾಗುತ್ತಿರಲಿಲ್ಲ… ಸತ್ತವರನ್ನು ಮರಳಿ ತರಲು ಸಾಧ್ಯವಿಲ್ಲ ಆದರೆ ಈಗ ನಮ್ಮ ಕೆಲಸ ರಕ್ಷಣಾ ಕಾರ್ಯಾಚರಣೆ ಮತ್ತು ಸಹಜ ಸ್ಥಿತಿಯ ಮರುಸ್ಥಾಪನೆಯಾಗಿದೆ” ಎಂದು ಅವರು ಹೇಳಿದ್ದಾರೆ.

ನಾನು ಇಲ್ಲಿ ರೈಲ್ವೆ ಸಚಿವರು ಮತ್ತು ಬಿಜೆಪಿ ಸಂಸದರೊಂದಿಗೆ ನಿಂತಿದ್ದೇನೆ. ಬಂಗಾಳ ಸರ್ಕಾರವು ಅಪಘಾತದಲ್ಲಿ ಮರಣ ಹೊಂದಿಗೆ ನಮ್ಮ ರಾಜ್ಯದ ಜನರಿ ಕುಟುಂಬಗಳಿಗೆ ತಲಾ ₹ 5 ಲಕ್ಷ ನೀಡಲಿದೆ ಮತ್ತು ಕೆಲಸ ಪೂರ್ಣಗೊಳ್ಳುವವರೆಗೆ ರೈಲ್ವೆ ಮತ್ತು ಒಡಿಶಾ ಸರ್ಕಾರದೊಂದಿಗೆ ಸಹಕರಿಸುತ್ತದೆ. ನಾವು ಹೆಚ್ಚಿನ ವೈದ್ಯಕೀಯ ಸಹಾಯಕ್ಕಾಗಿ ಬಂಗಾಳದಿಂದ ಒಡಿಶಾಗೆ ಎರಡು ಬಸ್ಸುಗಳು ಮತ್ತು 40 ವೈದ್ಯರನ್ನು ಸಹ ಕಳುಹಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

Anti-collision device ಎಂದರೇನು?

Anti-collision device ಎಂಬುದು ರೈಲು-ಘರ್ಷಣೆ ತಡೆಗಟ್ಟುವ ವ್ಯವಸ್ಥೆಯಾಗಿದ್ದು, ಇದನ್ನು ರಾಜಾರಾಮ್ ಬೊಜ್ಜಿ ಎಂಬುವವರು ಕಂಡು ಹಿಡಿದಿದ್ದಾರೆ. ಇದನ್ನು ರೈಲುಗಳಲ್ಲಿ ಅಳವಡಿಸಿದರೆ ಅದು ರೇಡಿಯೋ ತರಂಗಾಂತರ ಮೂಲಕ ಎದುರಿಗೆ ಬರುವ ರೈಲುಗಳ ಮಾಹಿತಿಯನ್ನು ರವಾನಿಸುತ್ತದೆ. ಅಲ್ಲದೇ ಎದುರಿಗೆ 3 ಕಿ.ಮೀ ವ್ಯಾಪ್ತಿಯಲ್ಲಿ ರೈಲು ಬರುತ್ತಿರುವಾಗಲೇ ಅದು ಸ್ವಯಂಚಾಲಿತವಾಗಿ ಬ್ರೇಕ್‌ ಅನ್ನು ಒತ್ತುತ್ತದೆ. ಅಂದರೆ ಅವು 30 ಕಿಮೀ/ಗಂ ಅಥವಾ ಪರ್ಯಾಯ ಪೂರ್ವನಿರ್ಧರಿತ ವೇಗಕ್ಕೆ ಕ್ಷೀಣಿಸಲು ಬ್ರೇಕ್ ಹಾಕುತ್ತವೆ. ಆ ಮೂಲಕ ಅಪಘಾತ ತಡೆಗಟ್ಟುವಲ್ಲಿ ಶಸಕ್ತವಾಗಿದೆ ಎಂಬ ಖ್ಯಾತಿ ಪಡೆದಿದೆ.

ಈ ರೀತಿಯ Anti-collision device ಗಳನ್ನು ರೈಲ್ವೇ ಹಳಿ ಕ್ರಾಸಿಂಗ್‌ ಗೇಟ್‌ಗಳಲ್ಲಿ ಸಹ ಅಳವಡಿಸುತ್ತಾರೆ. ರೈಲುಗಳು ಗೇಟುಗಳ 2 ಕಿ.ಮೀ ದೂರ ಇರುವಾಗಲೇ ವೇಗವನ್ನು ಕಡಿತಗೊಳಿಸಲು ಸೂಚನೆ ನೀಡುತ್ತವೆ ಎನ್ನಲಾಗಿದೆ.

ಒಂದು ಲೊಕೊ ಎಸಿಡಿಯು ಇತರ ರೈಲು ಬೌಂಡ್ ಎಸಿಡಿಗಳಿಂದ ಹಸ್ತಚಾಲಿತ ‘ಎಸ್‌ಒಎಸ್’ ಸಂದೇಶವನ್ನು ಸ್ವೀಕರಿಸಿದರೆ ಅಥವಾ ಅದರ ರೇಡಿಯಲ್ ವ್ಯಾಪ್ತಿಯ ಮೂರು ಕಿಲೋಮೀಟರ್‌ಗಳೊಳಗಿನ ಸ್ಟೇಷನ್ ಎಸಿಡಿ, ರೈಲನ್ನು ನಿಲುಗಡೆಗೆ ತರಲು ಅದು ಸ್ವಯಂಚಾಲಿತವಾಗಿ ಬ್ರೇಕ್‌ಗಳನ್ನು ಅನ್ವಯಿಸುತ್ತದೆ. ಈ ಕುರಿತ ಹೆಚ್ಚಿನ ಮಾಹಿಗೆ ಕೆಳಗಿನ ವಿಡಿಯೋ  ನೋಡಿ.

ಇದನ್ನೂ ಓದಿ; ಇತ್ತೀಚಿನ ವರ್ಷಗಳಲ್ಲಿ ಭಾರತ ಕಂಡ ಭೀಕರ ರೈಲು ದುರಂತಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...