Homeಮುಖಪುಟಘರ್ಷಣೆ ನಿರೋಧಕ ಸಾಧನ ಏಕಿರಲಿಲ್ಲ?; ರೈಲ್ವೆ ಸಚಿವರ ಎದುರಿಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಶ್ನೆ

ಘರ್ಷಣೆ ನಿರೋಧಕ ಸಾಧನ ಏಕಿರಲಿಲ್ಲ?; ರೈಲ್ವೆ ಸಚಿವರ ಎದುರಿಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಶ್ನೆ

- Advertisement -
- Advertisement -

ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತವನ್ನು ‘ಶತಮಾನದ ಅತಿದೊಡ್ಡ’ ದುರಂತ ಎಂದು ಕರೆದಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ರೈಲುಗಳಲ್ಲಿ Anti-collision device (ಘರ್ಷಣೆ ನಿರೋಧಕ ಸಾಧನ) ಏಕಿರಲಿಲ್ಲ? ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಪ್ರಶ್ನಿಸಿದ್ದಾರೆ.

ರೈಲುಗಳಲ್ಲಿ ಏಕೆ ಆಂಟಿ-ಕಲ್ಯೂಷನ್ ಡಿವೈಸ್ಇದ್ದಿದ್ದರೆ ದುರಂತವನ್ನು ತಡೆಯಬಹುದಿತ್ತು. ಆ ಸಾಧನವನ್ನು ರೈಲುಗಳಲ್ಲಿ ಏಕೆ ಅಳವಡಿಸಲಾಗಿಲ್ಲ ಎಂದು ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

“ಇದು ಈ ಶತಮಾನದ ಅತಿ ದೊಡ್ಡ ರೈಲು ಅಪಘಾತವಾಗಿದ್ದು, ಇದರ ಹಿಂದೆ ಏನಾದರೂ ಕೈವಾಡವಿರಬೇಕು. ಈ ಕುರಿತು ಸೂಕ್ತ ತನಿಖೆ ನಡೆಸಿ, ಸತ್ಯ ಹೊರಬರಬೇಕು. Anti-collision device ಏಕೆ ಕೆಲಸ ಮಾಡಲಿಲ್ಲ?” ಎಂದು ವೈಷ್ಣವ್ ಅವರ ಪಕ್ಕದಲ್ಲಿ ನಿಂತು ಪ್ರಶ್ನಿಸಿದ್ದಾರೆ.

“ಕೋರಮಂಡಲ್ ಅತ್ಯುತ್ತಮ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಒಂದಾಗಿದೆ. ನಾನು ಮೂರು ಬಾರಿ ರೈಲ್ವೆ ಸಚಿವಳಾಗಿದ್ದೆ. ನಾನು ನೋಡಿದ ಪ್ರಕಾರ ಇದು 21 ನೇ ಶತಮಾನದ ಅತಿದೊಡ್ಡ ರೈಲ್ವೆ ಅಪಘಾತವಾಗಿದೆ. ನನಗೆ ತಿಳಿದ ಮಟ್ಟಿಗೆ ರೈಲಿನಲ್ಲಿ Anti-collision device ಇರಲಿಲ್ಲ. ಆ  ಸಾಧನ ರೈಲಿನಲ್ಲಿ ಇದ್ದಿದ್ದರೆ ಹೀಗಾಗುತ್ತಿರಲಿಲ್ಲ… ಸತ್ತವರನ್ನು ಮರಳಿ ತರಲು ಸಾಧ್ಯವಿಲ್ಲ ಆದರೆ ಈಗ ನಮ್ಮ ಕೆಲಸ ರಕ್ಷಣಾ ಕಾರ್ಯಾಚರಣೆ ಮತ್ತು ಸಹಜ ಸ್ಥಿತಿಯ ಮರುಸ್ಥಾಪನೆಯಾಗಿದೆ” ಎಂದು ಅವರು ಹೇಳಿದ್ದಾರೆ.

ನಾನು ಇಲ್ಲಿ ರೈಲ್ವೆ ಸಚಿವರು ಮತ್ತು ಬಿಜೆಪಿ ಸಂಸದರೊಂದಿಗೆ ನಿಂತಿದ್ದೇನೆ. ಬಂಗಾಳ ಸರ್ಕಾರವು ಅಪಘಾತದಲ್ಲಿ ಮರಣ ಹೊಂದಿಗೆ ನಮ್ಮ ರಾಜ್ಯದ ಜನರಿ ಕುಟುಂಬಗಳಿಗೆ ತಲಾ ₹ 5 ಲಕ್ಷ ನೀಡಲಿದೆ ಮತ್ತು ಕೆಲಸ ಪೂರ್ಣಗೊಳ್ಳುವವರೆಗೆ ರೈಲ್ವೆ ಮತ್ತು ಒಡಿಶಾ ಸರ್ಕಾರದೊಂದಿಗೆ ಸಹಕರಿಸುತ್ತದೆ. ನಾವು ಹೆಚ್ಚಿನ ವೈದ್ಯಕೀಯ ಸಹಾಯಕ್ಕಾಗಿ ಬಂಗಾಳದಿಂದ ಒಡಿಶಾಗೆ ಎರಡು ಬಸ್ಸುಗಳು ಮತ್ತು 40 ವೈದ್ಯರನ್ನು ಸಹ ಕಳುಹಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

Anti-collision device ಎಂದರೇನು?

Anti-collision device ಎಂಬುದು ರೈಲು-ಘರ್ಷಣೆ ತಡೆಗಟ್ಟುವ ವ್ಯವಸ್ಥೆಯಾಗಿದ್ದು, ಇದನ್ನು ರಾಜಾರಾಮ್ ಬೊಜ್ಜಿ ಎಂಬುವವರು ಕಂಡು ಹಿಡಿದಿದ್ದಾರೆ. ಇದನ್ನು ರೈಲುಗಳಲ್ಲಿ ಅಳವಡಿಸಿದರೆ ಅದು ರೇಡಿಯೋ ತರಂಗಾಂತರ ಮೂಲಕ ಎದುರಿಗೆ ಬರುವ ರೈಲುಗಳ ಮಾಹಿತಿಯನ್ನು ರವಾನಿಸುತ್ತದೆ. ಅಲ್ಲದೇ ಎದುರಿಗೆ 3 ಕಿ.ಮೀ ವ್ಯಾಪ್ತಿಯಲ್ಲಿ ರೈಲು ಬರುತ್ತಿರುವಾಗಲೇ ಅದು ಸ್ವಯಂಚಾಲಿತವಾಗಿ ಬ್ರೇಕ್‌ ಅನ್ನು ಒತ್ತುತ್ತದೆ. ಅಂದರೆ ಅವು 30 ಕಿಮೀ/ಗಂ ಅಥವಾ ಪರ್ಯಾಯ ಪೂರ್ವನಿರ್ಧರಿತ ವೇಗಕ್ಕೆ ಕ್ಷೀಣಿಸಲು ಬ್ರೇಕ್ ಹಾಕುತ್ತವೆ. ಆ ಮೂಲಕ ಅಪಘಾತ ತಡೆಗಟ್ಟುವಲ್ಲಿ ಶಸಕ್ತವಾಗಿದೆ ಎಂಬ ಖ್ಯಾತಿ ಪಡೆದಿದೆ.

ಈ ರೀತಿಯ Anti-collision device ಗಳನ್ನು ರೈಲ್ವೇ ಹಳಿ ಕ್ರಾಸಿಂಗ್‌ ಗೇಟ್‌ಗಳಲ್ಲಿ ಸಹ ಅಳವಡಿಸುತ್ತಾರೆ. ರೈಲುಗಳು ಗೇಟುಗಳ 2 ಕಿ.ಮೀ ದೂರ ಇರುವಾಗಲೇ ವೇಗವನ್ನು ಕಡಿತಗೊಳಿಸಲು ಸೂಚನೆ ನೀಡುತ್ತವೆ ಎನ್ನಲಾಗಿದೆ.

ಒಂದು ಲೊಕೊ ಎಸಿಡಿಯು ಇತರ ರೈಲು ಬೌಂಡ್ ಎಸಿಡಿಗಳಿಂದ ಹಸ್ತಚಾಲಿತ ‘ಎಸ್‌ಒಎಸ್’ ಸಂದೇಶವನ್ನು ಸ್ವೀಕರಿಸಿದರೆ ಅಥವಾ ಅದರ ರೇಡಿಯಲ್ ವ್ಯಾಪ್ತಿಯ ಮೂರು ಕಿಲೋಮೀಟರ್‌ಗಳೊಳಗಿನ ಸ್ಟೇಷನ್ ಎಸಿಡಿ, ರೈಲನ್ನು ನಿಲುಗಡೆಗೆ ತರಲು ಅದು ಸ್ವಯಂಚಾಲಿತವಾಗಿ ಬ್ರೇಕ್‌ಗಳನ್ನು ಅನ್ವಯಿಸುತ್ತದೆ. ಈ ಕುರಿತ ಹೆಚ್ಚಿನ ಮಾಹಿಗೆ ಕೆಳಗಿನ ವಿಡಿಯೋ  ನೋಡಿ.

ಇದನ್ನೂ ಓದಿ; ಇತ್ತೀಚಿನ ವರ್ಷಗಳಲ್ಲಿ ಭಾರತ ಕಂಡ ಭೀಕರ ರೈಲು ದುರಂತಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....