Homeಮುಖಪುಟಘರ್ಷಣೆ ನಿರೋಧಕ ಸಾಧನ ಏಕಿರಲಿಲ್ಲ?; ರೈಲ್ವೆ ಸಚಿವರ ಎದುರಿಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಶ್ನೆ

ಘರ್ಷಣೆ ನಿರೋಧಕ ಸಾಧನ ಏಕಿರಲಿಲ್ಲ?; ರೈಲ್ವೆ ಸಚಿವರ ಎದುರಿಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಶ್ನೆ

- Advertisement -
- Advertisement -

ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತವನ್ನು ‘ಶತಮಾನದ ಅತಿದೊಡ್ಡ’ ದುರಂತ ಎಂದು ಕರೆದಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ರೈಲುಗಳಲ್ಲಿ Anti-collision device (ಘರ್ಷಣೆ ನಿರೋಧಕ ಸಾಧನ) ಏಕಿರಲಿಲ್ಲ? ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಪ್ರಶ್ನಿಸಿದ್ದಾರೆ.

ರೈಲುಗಳಲ್ಲಿ ಏಕೆ ಆಂಟಿ-ಕಲ್ಯೂಷನ್ ಡಿವೈಸ್ಇದ್ದಿದ್ದರೆ ದುರಂತವನ್ನು ತಡೆಯಬಹುದಿತ್ತು. ಆ ಸಾಧನವನ್ನು ರೈಲುಗಳಲ್ಲಿ ಏಕೆ ಅಳವಡಿಸಲಾಗಿಲ್ಲ ಎಂದು ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

“ಇದು ಈ ಶತಮಾನದ ಅತಿ ದೊಡ್ಡ ರೈಲು ಅಪಘಾತವಾಗಿದ್ದು, ಇದರ ಹಿಂದೆ ಏನಾದರೂ ಕೈವಾಡವಿರಬೇಕು. ಈ ಕುರಿತು ಸೂಕ್ತ ತನಿಖೆ ನಡೆಸಿ, ಸತ್ಯ ಹೊರಬರಬೇಕು. Anti-collision device ಏಕೆ ಕೆಲಸ ಮಾಡಲಿಲ್ಲ?” ಎಂದು ವೈಷ್ಣವ್ ಅವರ ಪಕ್ಕದಲ್ಲಿ ನಿಂತು ಪ್ರಶ್ನಿಸಿದ್ದಾರೆ.

“ಕೋರಮಂಡಲ್ ಅತ್ಯುತ್ತಮ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಒಂದಾಗಿದೆ. ನಾನು ಮೂರು ಬಾರಿ ರೈಲ್ವೆ ಸಚಿವಳಾಗಿದ್ದೆ. ನಾನು ನೋಡಿದ ಪ್ರಕಾರ ಇದು 21 ನೇ ಶತಮಾನದ ಅತಿದೊಡ್ಡ ರೈಲ್ವೆ ಅಪಘಾತವಾಗಿದೆ. ನನಗೆ ತಿಳಿದ ಮಟ್ಟಿಗೆ ರೈಲಿನಲ್ಲಿ Anti-collision device ಇರಲಿಲ್ಲ. ಆ  ಸಾಧನ ರೈಲಿನಲ್ಲಿ ಇದ್ದಿದ್ದರೆ ಹೀಗಾಗುತ್ತಿರಲಿಲ್ಲ… ಸತ್ತವರನ್ನು ಮರಳಿ ತರಲು ಸಾಧ್ಯವಿಲ್ಲ ಆದರೆ ಈಗ ನಮ್ಮ ಕೆಲಸ ರಕ್ಷಣಾ ಕಾರ್ಯಾಚರಣೆ ಮತ್ತು ಸಹಜ ಸ್ಥಿತಿಯ ಮರುಸ್ಥಾಪನೆಯಾಗಿದೆ” ಎಂದು ಅವರು ಹೇಳಿದ್ದಾರೆ.

ನಾನು ಇಲ್ಲಿ ರೈಲ್ವೆ ಸಚಿವರು ಮತ್ತು ಬಿಜೆಪಿ ಸಂಸದರೊಂದಿಗೆ ನಿಂತಿದ್ದೇನೆ. ಬಂಗಾಳ ಸರ್ಕಾರವು ಅಪಘಾತದಲ್ಲಿ ಮರಣ ಹೊಂದಿಗೆ ನಮ್ಮ ರಾಜ್ಯದ ಜನರಿ ಕುಟುಂಬಗಳಿಗೆ ತಲಾ ₹ 5 ಲಕ್ಷ ನೀಡಲಿದೆ ಮತ್ತು ಕೆಲಸ ಪೂರ್ಣಗೊಳ್ಳುವವರೆಗೆ ರೈಲ್ವೆ ಮತ್ತು ಒಡಿಶಾ ಸರ್ಕಾರದೊಂದಿಗೆ ಸಹಕರಿಸುತ್ತದೆ. ನಾವು ಹೆಚ್ಚಿನ ವೈದ್ಯಕೀಯ ಸಹಾಯಕ್ಕಾಗಿ ಬಂಗಾಳದಿಂದ ಒಡಿಶಾಗೆ ಎರಡು ಬಸ್ಸುಗಳು ಮತ್ತು 40 ವೈದ್ಯರನ್ನು ಸಹ ಕಳುಹಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

Anti-collision device ಎಂದರೇನು?

Anti-collision device ಎಂಬುದು ರೈಲು-ಘರ್ಷಣೆ ತಡೆಗಟ್ಟುವ ವ್ಯವಸ್ಥೆಯಾಗಿದ್ದು, ಇದನ್ನು ರಾಜಾರಾಮ್ ಬೊಜ್ಜಿ ಎಂಬುವವರು ಕಂಡು ಹಿಡಿದಿದ್ದಾರೆ. ಇದನ್ನು ರೈಲುಗಳಲ್ಲಿ ಅಳವಡಿಸಿದರೆ ಅದು ರೇಡಿಯೋ ತರಂಗಾಂತರ ಮೂಲಕ ಎದುರಿಗೆ ಬರುವ ರೈಲುಗಳ ಮಾಹಿತಿಯನ್ನು ರವಾನಿಸುತ್ತದೆ. ಅಲ್ಲದೇ ಎದುರಿಗೆ 3 ಕಿ.ಮೀ ವ್ಯಾಪ್ತಿಯಲ್ಲಿ ರೈಲು ಬರುತ್ತಿರುವಾಗಲೇ ಅದು ಸ್ವಯಂಚಾಲಿತವಾಗಿ ಬ್ರೇಕ್‌ ಅನ್ನು ಒತ್ತುತ್ತದೆ. ಅಂದರೆ ಅವು 30 ಕಿಮೀ/ಗಂ ಅಥವಾ ಪರ್ಯಾಯ ಪೂರ್ವನಿರ್ಧರಿತ ವೇಗಕ್ಕೆ ಕ್ಷೀಣಿಸಲು ಬ್ರೇಕ್ ಹಾಕುತ್ತವೆ. ಆ ಮೂಲಕ ಅಪಘಾತ ತಡೆಗಟ್ಟುವಲ್ಲಿ ಶಸಕ್ತವಾಗಿದೆ ಎಂಬ ಖ್ಯಾತಿ ಪಡೆದಿದೆ.

ಈ ರೀತಿಯ Anti-collision device ಗಳನ್ನು ರೈಲ್ವೇ ಹಳಿ ಕ್ರಾಸಿಂಗ್‌ ಗೇಟ್‌ಗಳಲ್ಲಿ ಸಹ ಅಳವಡಿಸುತ್ತಾರೆ. ರೈಲುಗಳು ಗೇಟುಗಳ 2 ಕಿ.ಮೀ ದೂರ ಇರುವಾಗಲೇ ವೇಗವನ್ನು ಕಡಿತಗೊಳಿಸಲು ಸೂಚನೆ ನೀಡುತ್ತವೆ ಎನ್ನಲಾಗಿದೆ.

ಒಂದು ಲೊಕೊ ಎಸಿಡಿಯು ಇತರ ರೈಲು ಬೌಂಡ್ ಎಸಿಡಿಗಳಿಂದ ಹಸ್ತಚಾಲಿತ ‘ಎಸ್‌ಒಎಸ್’ ಸಂದೇಶವನ್ನು ಸ್ವೀಕರಿಸಿದರೆ ಅಥವಾ ಅದರ ರೇಡಿಯಲ್ ವ್ಯಾಪ್ತಿಯ ಮೂರು ಕಿಲೋಮೀಟರ್‌ಗಳೊಳಗಿನ ಸ್ಟೇಷನ್ ಎಸಿಡಿ, ರೈಲನ್ನು ನಿಲುಗಡೆಗೆ ತರಲು ಅದು ಸ್ವಯಂಚಾಲಿತವಾಗಿ ಬ್ರೇಕ್‌ಗಳನ್ನು ಅನ್ವಯಿಸುತ್ತದೆ. ಈ ಕುರಿತ ಹೆಚ್ಚಿನ ಮಾಹಿಗೆ ಕೆಳಗಿನ ವಿಡಿಯೋ  ನೋಡಿ.

ಇದನ್ನೂ ಓದಿ; ಇತ್ತೀಚಿನ ವರ್ಷಗಳಲ್ಲಿ ಭಾರತ ಕಂಡ ಭೀಕರ ರೈಲು ದುರಂತಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....