Homeಮುಖಪುಟಹಿಂದಿ ಇಷ್ಟಪಡದವರು ವಿದೇಶಿಗರು; ಅವರು ಭಾರತ ಬಿಟ್ಟು ಹೋಗಲಿ: ಯುಪಿ ಸಚಿವ ವಿವಾದ

ಹಿಂದಿ ಇಷ್ಟಪಡದವರು ವಿದೇಶಿಗರು; ಅವರು ಭಾರತ ಬಿಟ್ಟು ಹೋಗಲಿ: ಯುಪಿ ಸಚಿವ ವಿವಾದ

- Advertisement -
- Advertisement -

ಹಿಂದಿ ಭಾಷೆಯ ಚರ್ಚೆಯ ನಡುವೆಯೇ ಉತ್ತರ ಪ್ರದೇಶದ ಸಚಿವ ಸಂಜಯ್ ನಿಶಾದ್ ಅವರು ಹಿಂದಿಯನ್ನು ಇಷ್ಟಪಡದವರು ವಿದೇಶಿಗರಾಗಿದ್ದು, ಹಿಂದಿ ಬಾರದವರು ಭಾರತವನ್ನು ಬಿಟ್ಟು ಬೇರೆಡೆಗೆ ಹೋಗಲಿ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಬಾಲಿವುಡ್ ನಟ ಅಜಯ್ ದೇವಗನ್ ಮತ್ತು ಕನ್ನಡ ನಟ ಕಿಚ್ಚ ಸುದೀಪ್ ನಡುವಿನ ಟ್ವಿಟರ್ ಸಮರದ ನಂತರ ಮತ್ತೆ ಮುನ್ನೆಲೆಗೆ ಬಂದಿರುವ ಭಾಷಾ ಚರ್ಚೆಯ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.

ಉತ್ತರ ಪ್ರದೇಶದ ಮೀನುಗಾರಿಕಾ ಸಚಿವರಾಗಿರುವ ಸಂಜಯ್ ನಿಶಾದ್, “ಭಾರತದಲ್ಲಿ ವಾಸಿಸಲು ಬಯಸುವವರು ಹಿಂದಿಯನ್ನು ಪ್ರೀತಿಸಬೇಕು. ನೀವು ಹಿಂದಿಯನ್ನು ಪ್ರೀತಿಸದಿದ್ದರೆ, ನೀವು ವಿದೇಶಿ ಅಥವಾ ವಿದೇಶಿ ಶಕ್ತಿಗಳೊಂದಿಗೆ ಸಂಬಂಧ ಹೊಂದಿದ್ದೀರಿ ಎಂದು ಭಾವಿಸಲಾಗುತ್ತದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಪ್ರಾದೇಶಿಕ ಭಾಷೆಗಳನ್ನು ಗೌರವಿಸುತ್ತೇವೆ. ಆದರೆ ಇದು ಒಂದು ದೇಶ ಮತ್ತು ಈ ದೇಶವನ್ನು ಸಂವಿಧಾನವು, ಭಾರತ ಎಂದರೆ ‘ಹಿಂದೂಸ್ತಾನ್’ ಎಂದು ಹೇಳುತ್ತದೆ. ಅಂದರೆ ಹಿಂದಿ ಮಾತನಾಡುವವರ ಸ್ಥಳವಾಗಿದೆ ಎಂದು. ಹಿಂದುಸ್ತಾನವು ಹಿಂದಿ ಮಾತನಾಡದೇ ಇರುವವರಿಗೆ ಇರುವ ಸ್ಥಳವಲ್ಲ. ಅವರು ಈ ದೇಶವನ್ನು ಬಿಟ್ಟು ಬೇರೆಡೆ ಹೋಗಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

ಸಂವಿಧಾನದ 343 ನೇ ವಿಧಿ ಮತ್ತು ನಂತರದ ತಿದ್ದುಪಡಿಯ ಪ್ರಕಾರ, ಹಿಂದಿಯನ್ನು ಇಂಗ್ಲಿಷ್ ಜೊತೆಗೆ ಅಧಿಕೃತ ಭಾಷೆಯಾಗಿ ಗುರುತಿಸಲಾಗಿದೆ. ಭಾರತಕ್ಕೆ ಯಾವುದೆ ರಾಷ್ಟ್ರೀಯ ಭಾಷೆ ಇಲ್ಲ. ಅಧಿಕೃತ ಭಾಷೆ ಎಂದರೆ ಸರ್ಕಾರ ಬಳಸುವ ಭಾಷೆ. ರಾಜ್ಯಗಳು ತಮ್ಮ ಅಧಿಕೃತ ಭಾಷೆಯಾಗಿ ಭಾಷೆಯನ್ನು ಗೊತ್ತುಪಡಿಸಬಹುದು. ಅದರಂತೆ ತಮಿಳುನಾಡಿನ ಅಧಿಕೃತ ಭಾಷೆ ತಮಿಳು, ಮತ್ತು ಪಶ್ಚಿಮ ಬಂಗಾಳದ ಅಧಿಕೃತ ಭಾಷೆ ಬಂಗಾಳಿ.

ನಟ ಸುದೀಪ್‌ ಅವರು ಹಿಂದಿ ರಾಷ್ಟ್ರ ಭಾಷೆಯಲ್ಲ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಹಿಂದಿ ಚಿತ್ರ ನಟ ಅಜಯ್‌ ದೇವಗನ್‌‌ ಅವರು ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿ, ‘ಹಿಂದಿ ರಾಷ್ಟ್ರ ಭಾಷೆ’ ಎಂದು ಪ್ರತಿಪಾದಿಸಿದ್ದರು. ಇದನ್ನು ವಿರೋಧಿಸಿ ಸುದೀಪ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

ಸುದೀಪ್ ಅವರ ಹೇಳಿಕೆಯನ್ನು ಬೆಂಬಲಿಸಿ ನಟಿ ರಮ್ಯ ದಿವ್ಯ ಸ್ಪಂದನ, ಶ್ರೀನಗರ ಕಿಟ್ಟಿ, ಚೇತನ್‌ ಅಹಿಂಸಾ ಮತ್ತು ನಿನಾಸಂ ಸತೀಶ್‌ ಸೇರಿದಂತೆ ಹಲವಾರು ಕನ್ನಡದ ನಟ-ನಟಿಯರು ಅಜಯ್ ದೇವಗನ್ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದರು. ಇಷ್ಟೇ ಅಲ್ಲದೆ ರಾಜ್ಯದ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಕೂಡಾ ಸುದೀಪ್ ಅವರನ್ನು ಸಮರ್ಥಿಸಿ ಅಜಯ್ ದೇವಗನ್ ಅವರ ವಿರುದ್ದ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

ಈ ತಿಂಗಳ ಆರಂಭದಲ್ಲಿ, ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಮಾತನಾಡಬೇಕು. ಹಿಂದಿಯನ್ನು ಇಂಗ್ಲಿಷ್‌ಗೆ ಪರ್ಯಾಯವಾಗಿ ಸ್ವೀಕರಿಸಬೇಕು ಎಂದು ಸೂಚಿಸುವ ಮೂಲ ಚರ್ಚೆಯನ್ನು ಹುಟ್ಟುಹಾಕಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...