Homeಮುಖಪುಟಹಿಂದಿ ಇಷ್ಟಪಡದವರು ವಿದೇಶಿಗರು; ಅವರು ಭಾರತ ಬಿಟ್ಟು ಹೋಗಲಿ: ಯುಪಿ ಸಚಿವ ವಿವಾದ

ಹಿಂದಿ ಇಷ್ಟಪಡದವರು ವಿದೇಶಿಗರು; ಅವರು ಭಾರತ ಬಿಟ್ಟು ಹೋಗಲಿ: ಯುಪಿ ಸಚಿವ ವಿವಾದ

- Advertisement -
- Advertisement -

ಹಿಂದಿ ಭಾಷೆಯ ಚರ್ಚೆಯ ನಡುವೆಯೇ ಉತ್ತರ ಪ್ರದೇಶದ ಸಚಿವ ಸಂಜಯ್ ನಿಶಾದ್ ಅವರು ಹಿಂದಿಯನ್ನು ಇಷ್ಟಪಡದವರು ವಿದೇಶಿಗರಾಗಿದ್ದು, ಹಿಂದಿ ಬಾರದವರು ಭಾರತವನ್ನು ಬಿಟ್ಟು ಬೇರೆಡೆಗೆ ಹೋಗಲಿ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಬಾಲಿವುಡ್ ನಟ ಅಜಯ್ ದೇವಗನ್ ಮತ್ತು ಕನ್ನಡ ನಟ ಕಿಚ್ಚ ಸುದೀಪ್ ನಡುವಿನ ಟ್ವಿಟರ್ ಸಮರದ ನಂತರ ಮತ್ತೆ ಮುನ್ನೆಲೆಗೆ ಬಂದಿರುವ ಭಾಷಾ ಚರ್ಚೆಯ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.

ಉತ್ತರ ಪ್ರದೇಶದ ಮೀನುಗಾರಿಕಾ ಸಚಿವರಾಗಿರುವ ಸಂಜಯ್ ನಿಶಾದ್, “ಭಾರತದಲ್ಲಿ ವಾಸಿಸಲು ಬಯಸುವವರು ಹಿಂದಿಯನ್ನು ಪ್ರೀತಿಸಬೇಕು. ನೀವು ಹಿಂದಿಯನ್ನು ಪ್ರೀತಿಸದಿದ್ದರೆ, ನೀವು ವಿದೇಶಿ ಅಥವಾ ವಿದೇಶಿ ಶಕ್ತಿಗಳೊಂದಿಗೆ ಸಂಬಂಧ ಹೊಂದಿದ್ದೀರಿ ಎಂದು ಭಾವಿಸಲಾಗುತ್ತದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಪ್ರಾದೇಶಿಕ ಭಾಷೆಗಳನ್ನು ಗೌರವಿಸುತ್ತೇವೆ. ಆದರೆ ಇದು ಒಂದು ದೇಶ ಮತ್ತು ಈ ದೇಶವನ್ನು ಸಂವಿಧಾನವು, ಭಾರತ ಎಂದರೆ ‘ಹಿಂದೂಸ್ತಾನ್’ ಎಂದು ಹೇಳುತ್ತದೆ. ಅಂದರೆ ಹಿಂದಿ ಮಾತನಾಡುವವರ ಸ್ಥಳವಾಗಿದೆ ಎಂದು. ಹಿಂದುಸ್ತಾನವು ಹಿಂದಿ ಮಾತನಾಡದೇ ಇರುವವರಿಗೆ ಇರುವ ಸ್ಥಳವಲ್ಲ. ಅವರು ಈ ದೇಶವನ್ನು ಬಿಟ್ಟು ಬೇರೆಡೆ ಹೋಗಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

ಸಂವಿಧಾನದ 343 ನೇ ವಿಧಿ ಮತ್ತು ನಂತರದ ತಿದ್ದುಪಡಿಯ ಪ್ರಕಾರ, ಹಿಂದಿಯನ್ನು ಇಂಗ್ಲಿಷ್ ಜೊತೆಗೆ ಅಧಿಕೃತ ಭಾಷೆಯಾಗಿ ಗುರುತಿಸಲಾಗಿದೆ. ಭಾರತಕ್ಕೆ ಯಾವುದೆ ರಾಷ್ಟ್ರೀಯ ಭಾಷೆ ಇಲ್ಲ. ಅಧಿಕೃತ ಭಾಷೆ ಎಂದರೆ ಸರ್ಕಾರ ಬಳಸುವ ಭಾಷೆ. ರಾಜ್ಯಗಳು ತಮ್ಮ ಅಧಿಕೃತ ಭಾಷೆಯಾಗಿ ಭಾಷೆಯನ್ನು ಗೊತ್ತುಪಡಿಸಬಹುದು. ಅದರಂತೆ ತಮಿಳುನಾಡಿನ ಅಧಿಕೃತ ಭಾಷೆ ತಮಿಳು, ಮತ್ತು ಪಶ್ಚಿಮ ಬಂಗಾಳದ ಅಧಿಕೃತ ಭಾಷೆ ಬಂಗಾಳಿ.

ನಟ ಸುದೀಪ್‌ ಅವರು ಹಿಂದಿ ರಾಷ್ಟ್ರ ಭಾಷೆಯಲ್ಲ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಹಿಂದಿ ಚಿತ್ರ ನಟ ಅಜಯ್‌ ದೇವಗನ್‌‌ ಅವರು ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿ, ‘ಹಿಂದಿ ರಾಷ್ಟ್ರ ಭಾಷೆ’ ಎಂದು ಪ್ರತಿಪಾದಿಸಿದ್ದರು. ಇದನ್ನು ವಿರೋಧಿಸಿ ಸುದೀಪ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

ಸುದೀಪ್ ಅವರ ಹೇಳಿಕೆಯನ್ನು ಬೆಂಬಲಿಸಿ ನಟಿ ರಮ್ಯ ದಿವ್ಯ ಸ್ಪಂದನ, ಶ್ರೀನಗರ ಕಿಟ್ಟಿ, ಚೇತನ್‌ ಅಹಿಂಸಾ ಮತ್ತು ನಿನಾಸಂ ಸತೀಶ್‌ ಸೇರಿದಂತೆ ಹಲವಾರು ಕನ್ನಡದ ನಟ-ನಟಿಯರು ಅಜಯ್ ದೇವಗನ್ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದರು. ಇಷ್ಟೇ ಅಲ್ಲದೆ ರಾಜ್ಯದ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಕೂಡಾ ಸುದೀಪ್ ಅವರನ್ನು ಸಮರ್ಥಿಸಿ ಅಜಯ್ ದೇವಗನ್ ಅವರ ವಿರುದ್ದ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

ಈ ತಿಂಗಳ ಆರಂಭದಲ್ಲಿ, ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಮಾತನಾಡಬೇಕು. ಹಿಂದಿಯನ್ನು ಇಂಗ್ಲಿಷ್‌ಗೆ ಪರ್ಯಾಯವಾಗಿ ಸ್ವೀಕರಿಸಬೇಕು ಎಂದು ಸೂಚಿಸುವ ಮೂಲ ಚರ್ಚೆಯನ್ನು ಹುಟ್ಟುಹಾಕಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...