Homeಮುಖಪುಟಹಿಂದಿ ಇಷ್ಟಪಡದವರು ವಿದೇಶಿಗರು; ಅವರು ಭಾರತ ಬಿಟ್ಟು ಹೋಗಲಿ: ಯುಪಿ ಸಚಿವ ವಿವಾದ

ಹಿಂದಿ ಇಷ್ಟಪಡದವರು ವಿದೇಶಿಗರು; ಅವರು ಭಾರತ ಬಿಟ್ಟು ಹೋಗಲಿ: ಯುಪಿ ಸಚಿವ ವಿವಾದ

- Advertisement -
- Advertisement -

ಹಿಂದಿ ಭಾಷೆಯ ಚರ್ಚೆಯ ನಡುವೆಯೇ ಉತ್ತರ ಪ್ರದೇಶದ ಸಚಿವ ಸಂಜಯ್ ನಿಶಾದ್ ಅವರು ಹಿಂದಿಯನ್ನು ಇಷ್ಟಪಡದವರು ವಿದೇಶಿಗರಾಗಿದ್ದು, ಹಿಂದಿ ಬಾರದವರು ಭಾರತವನ್ನು ಬಿಟ್ಟು ಬೇರೆಡೆಗೆ ಹೋಗಲಿ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಬಾಲಿವುಡ್ ನಟ ಅಜಯ್ ದೇವಗನ್ ಮತ್ತು ಕನ್ನಡ ನಟ ಕಿಚ್ಚ ಸುದೀಪ್ ನಡುವಿನ ಟ್ವಿಟರ್ ಸಮರದ ನಂತರ ಮತ್ತೆ ಮುನ್ನೆಲೆಗೆ ಬಂದಿರುವ ಭಾಷಾ ಚರ್ಚೆಯ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.

ಉತ್ತರ ಪ್ರದೇಶದ ಮೀನುಗಾರಿಕಾ ಸಚಿವರಾಗಿರುವ ಸಂಜಯ್ ನಿಶಾದ್, “ಭಾರತದಲ್ಲಿ ವಾಸಿಸಲು ಬಯಸುವವರು ಹಿಂದಿಯನ್ನು ಪ್ರೀತಿಸಬೇಕು. ನೀವು ಹಿಂದಿಯನ್ನು ಪ್ರೀತಿಸದಿದ್ದರೆ, ನೀವು ವಿದೇಶಿ ಅಥವಾ ವಿದೇಶಿ ಶಕ್ತಿಗಳೊಂದಿಗೆ ಸಂಬಂಧ ಹೊಂದಿದ್ದೀರಿ ಎಂದು ಭಾವಿಸಲಾಗುತ್ತದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಪ್ರಾದೇಶಿಕ ಭಾಷೆಗಳನ್ನು ಗೌರವಿಸುತ್ತೇವೆ. ಆದರೆ ಇದು ಒಂದು ದೇಶ ಮತ್ತು ಈ ದೇಶವನ್ನು ಸಂವಿಧಾನವು, ಭಾರತ ಎಂದರೆ ‘ಹಿಂದೂಸ್ತಾನ್’ ಎಂದು ಹೇಳುತ್ತದೆ. ಅಂದರೆ ಹಿಂದಿ ಮಾತನಾಡುವವರ ಸ್ಥಳವಾಗಿದೆ ಎಂದು. ಹಿಂದುಸ್ತಾನವು ಹಿಂದಿ ಮಾತನಾಡದೇ ಇರುವವರಿಗೆ ಇರುವ ಸ್ಥಳವಲ್ಲ. ಅವರು ಈ ದೇಶವನ್ನು ಬಿಟ್ಟು ಬೇರೆಡೆ ಹೋಗಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

ಸಂವಿಧಾನದ 343 ನೇ ವಿಧಿ ಮತ್ತು ನಂತರದ ತಿದ್ದುಪಡಿಯ ಪ್ರಕಾರ, ಹಿಂದಿಯನ್ನು ಇಂಗ್ಲಿಷ್ ಜೊತೆಗೆ ಅಧಿಕೃತ ಭಾಷೆಯಾಗಿ ಗುರುತಿಸಲಾಗಿದೆ. ಭಾರತಕ್ಕೆ ಯಾವುದೆ ರಾಷ್ಟ್ರೀಯ ಭಾಷೆ ಇಲ್ಲ. ಅಧಿಕೃತ ಭಾಷೆ ಎಂದರೆ ಸರ್ಕಾರ ಬಳಸುವ ಭಾಷೆ. ರಾಜ್ಯಗಳು ತಮ್ಮ ಅಧಿಕೃತ ಭಾಷೆಯಾಗಿ ಭಾಷೆಯನ್ನು ಗೊತ್ತುಪಡಿಸಬಹುದು. ಅದರಂತೆ ತಮಿಳುನಾಡಿನ ಅಧಿಕೃತ ಭಾಷೆ ತಮಿಳು, ಮತ್ತು ಪಶ್ಚಿಮ ಬಂಗಾಳದ ಅಧಿಕೃತ ಭಾಷೆ ಬಂಗಾಳಿ.

ನಟ ಸುದೀಪ್‌ ಅವರು ಹಿಂದಿ ರಾಷ್ಟ್ರ ಭಾಷೆಯಲ್ಲ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಹಿಂದಿ ಚಿತ್ರ ನಟ ಅಜಯ್‌ ದೇವಗನ್‌‌ ಅವರು ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿ, ‘ಹಿಂದಿ ರಾಷ್ಟ್ರ ಭಾಷೆ’ ಎಂದು ಪ್ರತಿಪಾದಿಸಿದ್ದರು. ಇದನ್ನು ವಿರೋಧಿಸಿ ಸುದೀಪ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

ಸುದೀಪ್ ಅವರ ಹೇಳಿಕೆಯನ್ನು ಬೆಂಬಲಿಸಿ ನಟಿ ರಮ್ಯ ದಿವ್ಯ ಸ್ಪಂದನ, ಶ್ರೀನಗರ ಕಿಟ್ಟಿ, ಚೇತನ್‌ ಅಹಿಂಸಾ ಮತ್ತು ನಿನಾಸಂ ಸತೀಶ್‌ ಸೇರಿದಂತೆ ಹಲವಾರು ಕನ್ನಡದ ನಟ-ನಟಿಯರು ಅಜಯ್ ದೇವಗನ್ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದರು. ಇಷ್ಟೇ ಅಲ್ಲದೆ ರಾಜ್ಯದ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಕೂಡಾ ಸುದೀಪ್ ಅವರನ್ನು ಸಮರ್ಥಿಸಿ ಅಜಯ್ ದೇವಗನ್ ಅವರ ವಿರುದ್ದ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

ಈ ತಿಂಗಳ ಆರಂಭದಲ್ಲಿ, ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಮಾತನಾಡಬೇಕು. ಹಿಂದಿಯನ್ನು ಇಂಗ್ಲಿಷ್‌ಗೆ ಪರ್ಯಾಯವಾಗಿ ಸ್ವೀಕರಿಸಬೇಕು ಎಂದು ಸೂಚಿಸುವ ಮೂಲ ಚರ್ಚೆಯನ್ನು ಹುಟ್ಟುಹಾಕಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....