Homeಮುಖಪುಟ‘ಗೋವು ತಿಂದು ಗೋವಿನ೦ತಾದವನು’ - ಎನ್‌.ಕೆ. ಹನುಮಂತಯ್ಯ

‘ಗೋವು ತಿಂದು ಗೋವಿನ೦ತಾದವನು’ – ಎನ್‌.ಕೆ. ಹನುಮಂತಯ್ಯ

- Advertisement -
- Advertisement -

ಮಾಂಸಾಹಾರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಮಾಂಸ ತಿನ್ನುವವರನ್ನು ರಾಕ್ಷಸರು, ಕ್ರೂರಿಗಳು ಎಂದು ಬಿಂಬಿಸಲಾಗುತ್ತಿದೆ. ಆದರೆ ಅದನ್ನು ವಿರೋಧಿಸಿ ಈಗಾಗಲೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಾರ ‘ಬಾಡು ಸಪ್ತಾಹ’ ಆಚರಿಸುವಂತೆ ಕರೆ ನೀಡಲಾಗಿದೆ. ಈ ಎಲ್ಲಾ ಚರ್ಚೆಗಳ ಹಿನ್ನಲೆಯಲ್ಲಿ ಕನ್ನಡದ ಖ್ಯಾತ ಬಂಡಾಯ ಕವಿ ಎನ್‌.ಕೆ. ಹನುಮಂತಯ್ಯ ಅವರು ಬರೆದಿರುವ ‘ಗೋವು ತಿಂದು ಗೋವಿನಂತಾದವನು’ ಎಂಬ ಕವಿತೆಯ ಆಯ್ದ ಸಾಲುಗಳು ನಾನುಗೌರಿ.ಕಾಂ ಓದುಗರಿಗಾಗಿ.

ಅಸ್ಪೃಶ್ಯ!
ಹೌದು; ನಾನು ಗೋವು ತಿನ್ನುತ್ತೇನೆ
ಗೋವು ತಿಂದು ಗೋವಿನಂತಾಗಿ
ಗಿರಿ ಕಣಿವೆ ಬಯಲೊಳಗೆಲ್ಲ
ಕುಣಿಯುತ್ತೇನೆ
ನೆಲದ ಮೇಲೆಯೇ ನಿಂತು
ಬಾಲ ಎತ್ತಿ ಕಾಮನಬಿಲ್ಲಿಗೆ
ಬಡಿಯುತ್ತೇನೆ
ಮಳೆಮೋಡಗಳ ತಿವಿದು
ಸುಡುಗಾಡಿಗೆ ಕೆಡವುತ್ತೇನೆ

ಅಸ್ಪೃಶ್ಯ!
ಹೌದು; ನಾನು ಗೋವು ತಿನ್ನುತ್ತೇನೆ
ಗೋವು ತಿಂದು ಗೋವಿನಂತಾಗಿ
ರೋಮರೋಮಗಳಲ್ಲು ಕೆಚ್ಚಲನು ಹೊತ್ತು
ತಿರುಗುತ್ತೇನೆ
ಕಸದ ತೊಟ್ಟಿಯಲಿ ಬಿದ್ದ ಕೂಸುಗಳಿಗೆ
ಹಾಲು ಕುಡಿಸುತ್ತೇನೆ

ಅಸ್ಪೃಶ್ಯ!
ಹೌದು; ನಾನು ಗೋವು ತಿಂದು
ಗೋವಿನಂತಾದವನು
ನೀವು ನೀಡುವ ಮೇವು ತಿಂದು
ನಿಮ್ಮಂಥ ಮನುಷ್ಯನಾಗಲಾರೆ
ಮನುಷ್ಯರನ್ನು ತಿನ್ನಲಾರೆ

ಇದನ್ನೂ ಓದಿ: ಕ್ರಿಯಾ ಮಾಧ್ಯಮ ಪ್ರಕಟನೆಯ ‘ಪ್ಯಾರಿಸ್ ಕಮ್ಯೂನ್-150’  

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...