Homeಮುಖಪುಟಜನರನ್ನು ಕಂಬಕ್ಕೆ ಕಟ್ಟಿ ಥಳಿಸಲು ನಿಮಗೆ ಅಧಿಕಾರ ಕೊಟ್ಟವರು ಯಾರು? ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ...

ಜನರನ್ನು ಕಂಬಕ್ಕೆ ಕಟ್ಟಿ ಥಳಿಸಲು ನಿಮಗೆ ಅಧಿಕಾರ ಕೊಟ್ಟವರು ಯಾರು? ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್‌

- Advertisement -
- Advertisement -

ಗುಜರಾತ್‌ನ ಖೇಡಾ ಜಿಲ್ಲೆಯ ಹಳ್ಳಿಯೊಂದರಲ್ಲಿ 2022ರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಐವರನ್ನು ಸಾರ್ವಜನಿಕವಾಗಿ ಥಳಿಸಿದ್ದ ಗುಜರಾತ್ ಪೊಲೀಸರನ್ನು ಸುಪ್ರೀಂ ಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದ್ದು, “ಜನರನ್ನು ಕಂಬಕ್ಕೆ ಕಟ್ಟಿ ಥಳಿಸುವ ಅಧಿಕಾರ ನಿಮಗೆ ಎಲ್ಲಿಂದ ಬಂತು? ಎಂದು ಪ್ರಶ್ನಿಸಿದೆ.

ಅಕ್ಟೋಬರ್ 19,2023ರ ಗುಜರಾತ್ ಹೈಕೋರ್ಟ್‌ ಆದೇಶದ ವಿರುದ್ಧ ಆರೋಪಿಗಳಾದ ಇನ್ಸ್‌ಪೆಕ್ಟರ್ ಎವಿ ಪರ್ಮಾರ್, ಸಬ್ ಇನ್ಸ್‌ಪೆಕ್ಟರ್ ಡಿಬಿ ಕುಮಾವತ್, ಹೆಡ್ ಕಾನ್‌ಸ್ಟೆಬಲ್ ಕೆಎಲ್ ದಾಭಿ ಮತ್ತು ಕಾನ್‌ಸ್ಟೇಬಲ್‌ ಆರ್‌ಆರ್ ದಾಭಿ ಎಂಬ ನಾಲ್ವರು ಪೊಲೀಸ್ ಸಿಬ್ಬಂದಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ವಿಚಾರಣೆ ನಡೆಸಿತು.

ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುವ ಸಂಬಂಧ ಸುಪ್ರೀಂ ಕೋರ್ಟ್‌ ನೀಡಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹೈಕೋರ್ಟ್‌ ಪೊಲೀಸರಿಗೆ 14 ದಿನಗಳ ಸರಳ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನು ಒಂದು ಹಂತದಲ್ಲಿ ಸುಪ್ರೀಂ ಕೋರ್ಟ್‌ ಎತ್ತಿ ಹಿಡಿಯಿತು.

“ಜನರನ್ನು ಕಂಬಕ್ಕೆ ಕಟ್ಟಿ ಥಳಿಸಲು ಕಾನೂನಿನಡಿಯಲ್ಲಿ ನಿಮಗೆ ಅಧಿಕಾರವಿದೆಯೇ? ‘ಹೋಗಿ ಜೈಲು ಶಿಕ್ಷೆ ಆನಂದಿಸಿ’ ಎಂದು ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಗವಾಯಿ ಪೊಲೀಸರಿಗೆ ಖಾರವಾಗಿ ಹೇಳಿದರು.

ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಮತ್ತೊಬ್ಬ ನ್ಯಾಯಮೂರ್ತಿ ಮೆಹ್ತಾ ಅವರು, “ಜನರನ್ನು ಕಂಬಕ್ಕೆ ಕಟ್ಟಿ ಹಾಕಿವುದು, ಸಾರ್ವಜನಿಕವಾಗಿ ಅವರಿಗೆ ಥಳಿಸುವುದು ಮತ್ತು ವಿಡಿಯೋ ರೆಕಾರ್ಡ್‌ ಮಾಡೋದು ಇದು ಯಾವ ರೀತಿಯ ದೌರ್ಜನ್ಯ? ಎಂದು ಪ್ರಶ್ನಿಸಿದರು. ಇಷ್ಟೆಲ್ಲಾ ಆದ ನಂತರ ನೀವು ಈ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಬೇಕೆಂದು ಬಯಸ್ತೀರಿ ಎಂದರು.

ಪೊಲೀಸರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದ್ಧಾರ್ಥ್ ದವೆ, ಪೊಲೀಸರು ಈಗಾಗಲೇ ಕ್ರಿಮಿನಲ್ ಮೊಕದ್ದಮೆ, ಇಲಾಖಾ ಪ್ರಕ್ರಿಯೆಗಳು ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ (ಎನ್‌ಹೆಚ್‌ಆರ್‌ಸಿ) ವಿಚಾರಣೆಯನ್ನು ಎದುರಿಸುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇಲ್ಲಿ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್‌ನ ಅಧಿಕಾರ ವ್ಯಾಪ್ತಿಯನ್ನು ಪ್ರಶ್ನಿಸಿದ್ದೇವೆ ಎಂದು ದವೆ ನ್ಯಾಯಾಲಯದ ಗಮನಕ್ಕೆ ತಂದರು. ಪೊಲೀಸರು ಉದ್ದೇಶಪೂರ್ವಕವಾಗಿ ನ್ಯಾಯಾಂಗ ನಿಂದನೆಯ ಯಾವುದೇ ಅಪರಾಧವನ್ನು ಮಾಡಿಲ್ಲ. ಶಂಕಿತ ಆರೋಪಿಗಳನ್ನು ಬಂಧಿಸುವಾಗ ಮಾರ್ಗಸೂಚಿಗಳನ್ನು ಪಾಲಿಸುವಂತೆ ಮಾತ್ರ ಸುಪ್ರೀಂಕೋರ್ಟ್‌ ಹೇಳಿದೆ ಎಂದು 1996 ರ ಡಿಕೆ ಬಸು ಪ್ರಕರಣದ ತೀರ್ಪನ್ನು ದವೆ ಉಲ್ಲೇಖಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿ ಅವರು, ಡಿಕೆ ಬಸು ಪ್ರಕರಣದ ತೀರ್ಪು ಏನೆಂದು ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯೂ ತಿಳಿದುಕೊಳ್ಳಬೇಕು. ಕಾನೂನು ವಿದ್ಯಾರ್ಥಿಗಳಾದ ನಾವು ಡಿಕೆ ಬಸು ತೀರ್ಪಿನ ಬಗ್ಗೆ ಅಧ್ಯಯನ ಮಾಡಿದ್ದೇವೆ ಎಂದು ಹೇಳಿದರು.

ಈ ವೇಳೆ ಪ್ರತಿವಾದ ಮಂಡಿಸಿದ ವಕೀಲ ದವೆ, ಹೈಕೋರ್ಟ್‌ನ ನ್ಯಾಯಾಂಗ ನಿಂದನೆ ನ್ಯಾಯ ವ್ಯಾಪ್ತಿಯಲ್ಲಿ ಆರೋಪಿ ಪೊಲೀಸರ ವಿರುದ್ದ ಕಾನೂನು ಕ್ರಮ ಜರುಗಿಸಲು ಸಾಧ್ಯವಿಲ್ಲ ಎಂದರು.

ನ್ಯಾಯಮೂರ್ತಿ ಗವಾಯಿ ಅವರು ಆರೋಪಿ ಪೊಲೀಸರ ವಿರುದ್ಧ ದಾಖಲಾಗಿರುವ ಖಾಸಗಿ ದೂರಿನ ಸ್ಥಿತಿಯನ್ನು ಪ್ರಶ್ನಿಸಿದರು. ಇದು ಬಾಕಿ ಇದೆ ಎಂದು ದೂರುದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಐ.ಎಚ್.ಸೈಯದ್ ಹೇಳಿದರು. ಬಳಿಕ ನ್ಯಾಯಮೂರ್ತಿ ಗವಾಯಿ ಅವರು ಪೊಲೀಸರ ವಿರುದ್ದ ಶಿಕ್ಷೆಗೆ ತಡೆಯಾಜ್ಞೆ ನೀಡಿದರು.

ಅಕ್ಟೋಬರ್‌ 2022ರಲ್ಲಿ ಗುಜರಾತ್‌ನ ಖೇಡಾ ಜಿಲ್ಲೆಯ ಉಂಧೇಲಾ ಗ್ರಾಮದಲ್ಲಿ ನಡೆದ ಗರ್ಬಾ ಕಾರ್ಯಕ್ರಮಕ್ಕೆ ಕಲ್ಲು ಎಸೆದ ಪ್ರಕರಣದ ಆರೋಪಿಗಳೆಂದು 13 ಜನರನ್ನು ಗುರುತಿಸಲಾಗಿತ್ತು. ಈ ಪೈಕಿ ಅರ್ಜಿದಾರರಾದ ಐವರು ಮುಸ್ಲಿಮರು ಸೇರಿದ್ದರು. ಪೊಲೀಸರು ಇವರನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಥಳಿಸಿದ್ದರು.

ಈ ಪ್ರಕರಣ ಸಂಬಂಧ ಅಕ್ಟೋಬರ್ 19,2023 ರಂದು ತೀರ್ಪು ನೀಡಿದ್ದ ಗುಜರಾತ್‌ ಹೈಕೋರ್ಟ್, ನಾಲ್ವರು ಪೊಲೀಸರನ್ನು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಪರಿಗಣಿಸಿತ್ತು. 14 ದಿನಗಳ ಕಾಲ ಜೈಲಿನಲ್ಲಿ ಕಳೆಯಲು ಆದೇಶಿಸಿತ್ತು. ಹೈಕೋರ್ಟ್‌ ಆದೇಶದ ವಿರುದ್ದ ಪೊಲೀಸರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಇದನ್ನೂ ಓದಿ : ರಾಮಮಂದಿರ ಉದ್ಘಾಟನೆಯಂದು ಸಂವಿಧಾನದ ಪೀಠಿಕೆ ಹಂಚಿಕೊಂಡ ನಟ, ನಟಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...