Homeಮುಖಪುಟಜನರನ್ನು ಕಂಬಕ್ಕೆ ಕಟ್ಟಿ ಥಳಿಸಲು ನಿಮಗೆ ಅಧಿಕಾರ ಕೊಟ್ಟವರು ಯಾರು? ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ...

ಜನರನ್ನು ಕಂಬಕ್ಕೆ ಕಟ್ಟಿ ಥಳಿಸಲು ನಿಮಗೆ ಅಧಿಕಾರ ಕೊಟ್ಟವರು ಯಾರು? ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್‌

- Advertisement -
- Advertisement -

ಗುಜರಾತ್‌ನ ಖೇಡಾ ಜಿಲ್ಲೆಯ ಹಳ್ಳಿಯೊಂದರಲ್ಲಿ 2022ರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಐವರನ್ನು ಸಾರ್ವಜನಿಕವಾಗಿ ಥಳಿಸಿದ್ದ ಗುಜರಾತ್ ಪೊಲೀಸರನ್ನು ಸುಪ್ರೀಂ ಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದ್ದು, “ಜನರನ್ನು ಕಂಬಕ್ಕೆ ಕಟ್ಟಿ ಥಳಿಸುವ ಅಧಿಕಾರ ನಿಮಗೆ ಎಲ್ಲಿಂದ ಬಂತು? ಎಂದು ಪ್ರಶ್ನಿಸಿದೆ.

ಅಕ್ಟೋಬರ್ 19,2023ರ ಗುಜರಾತ್ ಹೈಕೋರ್ಟ್‌ ಆದೇಶದ ವಿರುದ್ಧ ಆರೋಪಿಗಳಾದ ಇನ್ಸ್‌ಪೆಕ್ಟರ್ ಎವಿ ಪರ್ಮಾರ್, ಸಬ್ ಇನ್ಸ್‌ಪೆಕ್ಟರ್ ಡಿಬಿ ಕುಮಾವತ್, ಹೆಡ್ ಕಾನ್‌ಸ್ಟೆಬಲ್ ಕೆಎಲ್ ದಾಭಿ ಮತ್ತು ಕಾನ್‌ಸ್ಟೇಬಲ್‌ ಆರ್‌ಆರ್ ದಾಭಿ ಎಂಬ ನಾಲ್ವರು ಪೊಲೀಸ್ ಸಿಬ್ಬಂದಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ವಿಚಾರಣೆ ನಡೆಸಿತು.

ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುವ ಸಂಬಂಧ ಸುಪ್ರೀಂ ಕೋರ್ಟ್‌ ನೀಡಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹೈಕೋರ್ಟ್‌ ಪೊಲೀಸರಿಗೆ 14 ದಿನಗಳ ಸರಳ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನು ಒಂದು ಹಂತದಲ್ಲಿ ಸುಪ್ರೀಂ ಕೋರ್ಟ್‌ ಎತ್ತಿ ಹಿಡಿಯಿತು.

“ಜನರನ್ನು ಕಂಬಕ್ಕೆ ಕಟ್ಟಿ ಥಳಿಸಲು ಕಾನೂನಿನಡಿಯಲ್ಲಿ ನಿಮಗೆ ಅಧಿಕಾರವಿದೆಯೇ? ‘ಹೋಗಿ ಜೈಲು ಶಿಕ್ಷೆ ಆನಂದಿಸಿ’ ಎಂದು ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಗವಾಯಿ ಪೊಲೀಸರಿಗೆ ಖಾರವಾಗಿ ಹೇಳಿದರು.

ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಮತ್ತೊಬ್ಬ ನ್ಯಾಯಮೂರ್ತಿ ಮೆಹ್ತಾ ಅವರು, “ಜನರನ್ನು ಕಂಬಕ್ಕೆ ಕಟ್ಟಿ ಹಾಕಿವುದು, ಸಾರ್ವಜನಿಕವಾಗಿ ಅವರಿಗೆ ಥಳಿಸುವುದು ಮತ್ತು ವಿಡಿಯೋ ರೆಕಾರ್ಡ್‌ ಮಾಡೋದು ಇದು ಯಾವ ರೀತಿಯ ದೌರ್ಜನ್ಯ? ಎಂದು ಪ್ರಶ್ನಿಸಿದರು. ಇಷ್ಟೆಲ್ಲಾ ಆದ ನಂತರ ನೀವು ಈ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಬೇಕೆಂದು ಬಯಸ್ತೀರಿ ಎಂದರು.

ಪೊಲೀಸರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದ್ಧಾರ್ಥ್ ದವೆ, ಪೊಲೀಸರು ಈಗಾಗಲೇ ಕ್ರಿಮಿನಲ್ ಮೊಕದ್ದಮೆ, ಇಲಾಖಾ ಪ್ರಕ್ರಿಯೆಗಳು ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ (ಎನ್‌ಹೆಚ್‌ಆರ್‌ಸಿ) ವಿಚಾರಣೆಯನ್ನು ಎದುರಿಸುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇಲ್ಲಿ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್‌ನ ಅಧಿಕಾರ ವ್ಯಾಪ್ತಿಯನ್ನು ಪ್ರಶ್ನಿಸಿದ್ದೇವೆ ಎಂದು ದವೆ ನ್ಯಾಯಾಲಯದ ಗಮನಕ್ಕೆ ತಂದರು. ಪೊಲೀಸರು ಉದ್ದೇಶಪೂರ್ವಕವಾಗಿ ನ್ಯಾಯಾಂಗ ನಿಂದನೆಯ ಯಾವುದೇ ಅಪರಾಧವನ್ನು ಮಾಡಿಲ್ಲ. ಶಂಕಿತ ಆರೋಪಿಗಳನ್ನು ಬಂಧಿಸುವಾಗ ಮಾರ್ಗಸೂಚಿಗಳನ್ನು ಪಾಲಿಸುವಂತೆ ಮಾತ್ರ ಸುಪ್ರೀಂಕೋರ್ಟ್‌ ಹೇಳಿದೆ ಎಂದು 1996 ರ ಡಿಕೆ ಬಸು ಪ್ರಕರಣದ ತೀರ್ಪನ್ನು ದವೆ ಉಲ್ಲೇಖಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿ ಅವರು, ಡಿಕೆ ಬಸು ಪ್ರಕರಣದ ತೀರ್ಪು ಏನೆಂದು ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯೂ ತಿಳಿದುಕೊಳ್ಳಬೇಕು. ಕಾನೂನು ವಿದ್ಯಾರ್ಥಿಗಳಾದ ನಾವು ಡಿಕೆ ಬಸು ತೀರ್ಪಿನ ಬಗ್ಗೆ ಅಧ್ಯಯನ ಮಾಡಿದ್ದೇವೆ ಎಂದು ಹೇಳಿದರು.

ಈ ವೇಳೆ ಪ್ರತಿವಾದ ಮಂಡಿಸಿದ ವಕೀಲ ದವೆ, ಹೈಕೋರ್ಟ್‌ನ ನ್ಯಾಯಾಂಗ ನಿಂದನೆ ನ್ಯಾಯ ವ್ಯಾಪ್ತಿಯಲ್ಲಿ ಆರೋಪಿ ಪೊಲೀಸರ ವಿರುದ್ದ ಕಾನೂನು ಕ್ರಮ ಜರುಗಿಸಲು ಸಾಧ್ಯವಿಲ್ಲ ಎಂದರು.

ನ್ಯಾಯಮೂರ್ತಿ ಗವಾಯಿ ಅವರು ಆರೋಪಿ ಪೊಲೀಸರ ವಿರುದ್ಧ ದಾಖಲಾಗಿರುವ ಖಾಸಗಿ ದೂರಿನ ಸ್ಥಿತಿಯನ್ನು ಪ್ರಶ್ನಿಸಿದರು. ಇದು ಬಾಕಿ ಇದೆ ಎಂದು ದೂರುದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಐ.ಎಚ್.ಸೈಯದ್ ಹೇಳಿದರು. ಬಳಿಕ ನ್ಯಾಯಮೂರ್ತಿ ಗವಾಯಿ ಅವರು ಪೊಲೀಸರ ವಿರುದ್ದ ಶಿಕ್ಷೆಗೆ ತಡೆಯಾಜ್ಞೆ ನೀಡಿದರು.

ಅಕ್ಟೋಬರ್‌ 2022ರಲ್ಲಿ ಗುಜರಾತ್‌ನ ಖೇಡಾ ಜಿಲ್ಲೆಯ ಉಂಧೇಲಾ ಗ್ರಾಮದಲ್ಲಿ ನಡೆದ ಗರ್ಬಾ ಕಾರ್ಯಕ್ರಮಕ್ಕೆ ಕಲ್ಲು ಎಸೆದ ಪ್ರಕರಣದ ಆರೋಪಿಗಳೆಂದು 13 ಜನರನ್ನು ಗುರುತಿಸಲಾಗಿತ್ತು. ಈ ಪೈಕಿ ಅರ್ಜಿದಾರರಾದ ಐವರು ಮುಸ್ಲಿಮರು ಸೇರಿದ್ದರು. ಪೊಲೀಸರು ಇವರನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಥಳಿಸಿದ್ದರು.

ಈ ಪ್ರಕರಣ ಸಂಬಂಧ ಅಕ್ಟೋಬರ್ 19,2023 ರಂದು ತೀರ್ಪು ನೀಡಿದ್ದ ಗುಜರಾತ್‌ ಹೈಕೋರ್ಟ್, ನಾಲ್ವರು ಪೊಲೀಸರನ್ನು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಪರಿಗಣಿಸಿತ್ತು. 14 ದಿನಗಳ ಕಾಲ ಜೈಲಿನಲ್ಲಿ ಕಳೆಯಲು ಆದೇಶಿಸಿತ್ತು. ಹೈಕೋರ್ಟ್‌ ಆದೇಶದ ವಿರುದ್ದ ಪೊಲೀಸರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಇದನ್ನೂ ಓದಿ : ರಾಮಮಂದಿರ ಉದ್ಘಾಟನೆಯಂದು ಸಂವಿಧಾನದ ಪೀಠಿಕೆ ಹಂಚಿಕೊಂಡ ನಟ, ನಟಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...