Homeಮುಖಪುಟಜನರನ್ನು ಕಂಬಕ್ಕೆ ಕಟ್ಟಿ ಥಳಿಸಲು ನಿಮಗೆ ಅಧಿಕಾರ ಕೊಟ್ಟವರು ಯಾರು? ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ...

ಜನರನ್ನು ಕಂಬಕ್ಕೆ ಕಟ್ಟಿ ಥಳಿಸಲು ನಿಮಗೆ ಅಧಿಕಾರ ಕೊಟ್ಟವರು ಯಾರು? ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್‌

- Advertisement -
- Advertisement -

ಗುಜರಾತ್‌ನ ಖೇಡಾ ಜಿಲ್ಲೆಯ ಹಳ್ಳಿಯೊಂದರಲ್ಲಿ 2022ರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಐವರನ್ನು ಸಾರ್ವಜನಿಕವಾಗಿ ಥಳಿಸಿದ್ದ ಗುಜರಾತ್ ಪೊಲೀಸರನ್ನು ಸುಪ್ರೀಂ ಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದ್ದು, “ಜನರನ್ನು ಕಂಬಕ್ಕೆ ಕಟ್ಟಿ ಥಳಿಸುವ ಅಧಿಕಾರ ನಿಮಗೆ ಎಲ್ಲಿಂದ ಬಂತು? ಎಂದು ಪ್ರಶ್ನಿಸಿದೆ.

ಅಕ್ಟೋಬರ್ 19,2023ರ ಗುಜರಾತ್ ಹೈಕೋರ್ಟ್‌ ಆದೇಶದ ವಿರುದ್ಧ ಆರೋಪಿಗಳಾದ ಇನ್ಸ್‌ಪೆಕ್ಟರ್ ಎವಿ ಪರ್ಮಾರ್, ಸಬ್ ಇನ್ಸ್‌ಪೆಕ್ಟರ್ ಡಿಬಿ ಕುಮಾವತ್, ಹೆಡ್ ಕಾನ್‌ಸ್ಟೆಬಲ್ ಕೆಎಲ್ ದಾಭಿ ಮತ್ತು ಕಾನ್‌ಸ್ಟೇಬಲ್‌ ಆರ್‌ಆರ್ ದಾಭಿ ಎಂಬ ನಾಲ್ವರು ಪೊಲೀಸ್ ಸಿಬ್ಬಂದಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ವಿಚಾರಣೆ ನಡೆಸಿತು.

ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುವ ಸಂಬಂಧ ಸುಪ್ರೀಂ ಕೋರ್ಟ್‌ ನೀಡಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹೈಕೋರ್ಟ್‌ ಪೊಲೀಸರಿಗೆ 14 ದಿನಗಳ ಸರಳ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನು ಒಂದು ಹಂತದಲ್ಲಿ ಸುಪ್ರೀಂ ಕೋರ್ಟ್‌ ಎತ್ತಿ ಹಿಡಿಯಿತು.

“ಜನರನ್ನು ಕಂಬಕ್ಕೆ ಕಟ್ಟಿ ಥಳಿಸಲು ಕಾನೂನಿನಡಿಯಲ್ಲಿ ನಿಮಗೆ ಅಧಿಕಾರವಿದೆಯೇ? ‘ಹೋಗಿ ಜೈಲು ಶಿಕ್ಷೆ ಆನಂದಿಸಿ’ ಎಂದು ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಗವಾಯಿ ಪೊಲೀಸರಿಗೆ ಖಾರವಾಗಿ ಹೇಳಿದರು.

ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಮತ್ತೊಬ್ಬ ನ್ಯಾಯಮೂರ್ತಿ ಮೆಹ್ತಾ ಅವರು, “ಜನರನ್ನು ಕಂಬಕ್ಕೆ ಕಟ್ಟಿ ಹಾಕಿವುದು, ಸಾರ್ವಜನಿಕವಾಗಿ ಅವರಿಗೆ ಥಳಿಸುವುದು ಮತ್ತು ವಿಡಿಯೋ ರೆಕಾರ್ಡ್‌ ಮಾಡೋದು ಇದು ಯಾವ ರೀತಿಯ ದೌರ್ಜನ್ಯ? ಎಂದು ಪ್ರಶ್ನಿಸಿದರು. ಇಷ್ಟೆಲ್ಲಾ ಆದ ನಂತರ ನೀವು ಈ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಬೇಕೆಂದು ಬಯಸ್ತೀರಿ ಎಂದರು.

ಪೊಲೀಸರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದ್ಧಾರ್ಥ್ ದವೆ, ಪೊಲೀಸರು ಈಗಾಗಲೇ ಕ್ರಿಮಿನಲ್ ಮೊಕದ್ದಮೆ, ಇಲಾಖಾ ಪ್ರಕ್ರಿಯೆಗಳು ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ (ಎನ್‌ಹೆಚ್‌ಆರ್‌ಸಿ) ವಿಚಾರಣೆಯನ್ನು ಎದುರಿಸುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇಲ್ಲಿ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್‌ನ ಅಧಿಕಾರ ವ್ಯಾಪ್ತಿಯನ್ನು ಪ್ರಶ್ನಿಸಿದ್ದೇವೆ ಎಂದು ದವೆ ನ್ಯಾಯಾಲಯದ ಗಮನಕ್ಕೆ ತಂದರು. ಪೊಲೀಸರು ಉದ್ದೇಶಪೂರ್ವಕವಾಗಿ ನ್ಯಾಯಾಂಗ ನಿಂದನೆಯ ಯಾವುದೇ ಅಪರಾಧವನ್ನು ಮಾಡಿಲ್ಲ. ಶಂಕಿತ ಆರೋಪಿಗಳನ್ನು ಬಂಧಿಸುವಾಗ ಮಾರ್ಗಸೂಚಿಗಳನ್ನು ಪಾಲಿಸುವಂತೆ ಮಾತ್ರ ಸುಪ್ರೀಂಕೋರ್ಟ್‌ ಹೇಳಿದೆ ಎಂದು 1996 ರ ಡಿಕೆ ಬಸು ಪ್ರಕರಣದ ತೀರ್ಪನ್ನು ದವೆ ಉಲ್ಲೇಖಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿ ಅವರು, ಡಿಕೆ ಬಸು ಪ್ರಕರಣದ ತೀರ್ಪು ಏನೆಂದು ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯೂ ತಿಳಿದುಕೊಳ್ಳಬೇಕು. ಕಾನೂನು ವಿದ್ಯಾರ್ಥಿಗಳಾದ ನಾವು ಡಿಕೆ ಬಸು ತೀರ್ಪಿನ ಬಗ್ಗೆ ಅಧ್ಯಯನ ಮಾಡಿದ್ದೇವೆ ಎಂದು ಹೇಳಿದರು.

ಈ ವೇಳೆ ಪ್ರತಿವಾದ ಮಂಡಿಸಿದ ವಕೀಲ ದವೆ, ಹೈಕೋರ್ಟ್‌ನ ನ್ಯಾಯಾಂಗ ನಿಂದನೆ ನ್ಯಾಯ ವ್ಯಾಪ್ತಿಯಲ್ಲಿ ಆರೋಪಿ ಪೊಲೀಸರ ವಿರುದ್ದ ಕಾನೂನು ಕ್ರಮ ಜರುಗಿಸಲು ಸಾಧ್ಯವಿಲ್ಲ ಎಂದರು.

ನ್ಯಾಯಮೂರ್ತಿ ಗವಾಯಿ ಅವರು ಆರೋಪಿ ಪೊಲೀಸರ ವಿರುದ್ಧ ದಾಖಲಾಗಿರುವ ಖಾಸಗಿ ದೂರಿನ ಸ್ಥಿತಿಯನ್ನು ಪ್ರಶ್ನಿಸಿದರು. ಇದು ಬಾಕಿ ಇದೆ ಎಂದು ದೂರುದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಐ.ಎಚ್.ಸೈಯದ್ ಹೇಳಿದರು. ಬಳಿಕ ನ್ಯಾಯಮೂರ್ತಿ ಗವಾಯಿ ಅವರು ಪೊಲೀಸರ ವಿರುದ್ದ ಶಿಕ್ಷೆಗೆ ತಡೆಯಾಜ್ಞೆ ನೀಡಿದರು.

ಅಕ್ಟೋಬರ್‌ 2022ರಲ್ಲಿ ಗುಜರಾತ್‌ನ ಖೇಡಾ ಜಿಲ್ಲೆಯ ಉಂಧೇಲಾ ಗ್ರಾಮದಲ್ಲಿ ನಡೆದ ಗರ್ಬಾ ಕಾರ್ಯಕ್ರಮಕ್ಕೆ ಕಲ್ಲು ಎಸೆದ ಪ್ರಕರಣದ ಆರೋಪಿಗಳೆಂದು 13 ಜನರನ್ನು ಗುರುತಿಸಲಾಗಿತ್ತು. ಈ ಪೈಕಿ ಅರ್ಜಿದಾರರಾದ ಐವರು ಮುಸ್ಲಿಮರು ಸೇರಿದ್ದರು. ಪೊಲೀಸರು ಇವರನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಥಳಿಸಿದ್ದರು.

ಈ ಪ್ರಕರಣ ಸಂಬಂಧ ಅಕ್ಟೋಬರ್ 19,2023 ರಂದು ತೀರ್ಪು ನೀಡಿದ್ದ ಗುಜರಾತ್‌ ಹೈಕೋರ್ಟ್, ನಾಲ್ವರು ಪೊಲೀಸರನ್ನು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಪರಿಗಣಿಸಿತ್ತು. 14 ದಿನಗಳ ಕಾಲ ಜೈಲಿನಲ್ಲಿ ಕಳೆಯಲು ಆದೇಶಿಸಿತ್ತು. ಹೈಕೋರ್ಟ್‌ ಆದೇಶದ ವಿರುದ್ದ ಪೊಲೀಸರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಇದನ್ನೂ ಓದಿ : ರಾಮಮಂದಿರ ಉದ್ಘಾಟನೆಯಂದು ಸಂವಿಧಾನದ ಪೀಠಿಕೆ ಹಂಚಿಕೊಂಡ ನಟ, ನಟಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...