Homeಮುಖಪುಟಭಾರತದ ಎರಡು ಕೆಮ್ಮು ಸಿರಪ್ ಗಳ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ WHO

ಭಾರತದ ಎರಡು ಕೆಮ್ಮು ಸಿರಪ್ ಗಳ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ WHO

- Advertisement -
- Advertisement -

ಉಜ್ಬೇಕಿಸ್ತಾನ್‌ನಲ್ಲಿರುವ ಮಕ್ಕಳಿಗೆ ಭಾರತದಲ್ಲಿ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಬಳಸದಂತೆ ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದ್ದು, ದೇಶದ 19 ಮಕ್ಕಳ ಸಾವಿನ ನಂತರ ಈ ಹೇಳಿಕೆಯನ್ನು ವಿಶ್ವ ಸಂಸ್ಥೆ ನೀಡಿದೆ.

ಭಾರತದ ಮರಿಯನ್ ಬಯೋಟೆಕ್ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಮಕ್ಕಳಿಗೆ ಬಳಸಬಾರದು ಎಂದು WHO ಹೇಳಿಕೆಯಲ್ಲಿ ತಿಳಿಸಿದೆ. ಕಳೆದ ಡಿಸೆಂಬರ್‌ನಲ್ಲಿ ಸಂಭವಿಸಿದ ಮಕ್ಕಳ ಸಾವಿಗೆ ಭಾರತೀಯ ಫಾರ್ಮಾಸ್ಯುಟಿಕಲ್ ಕಂಪನಿ ತಯಾರಿಸಿದ ಔಷಧಿ ಸೇವಿಸಿದ್ದ ಕಾರಣ ಎಂದು ಉಜ್ಬೇಕಿಸ್ತಾನ್‌ನ ಆರೋಗ್ಯ ಸಚಿವಾಲಯವು ಹೇಳಿಕೆ ನೀಡಿತ್ತು.

AMBRONOL ಸಿರಪ್ ಮತ್ತು DOK-1 ಮ್ಯಾಕ್ಸ್ ಸಿರಪ್ ಹೆಸರಿನ ಉತ್ಪನ್ನಗಳ ಪ್ರಯೋಗಾಲಯ ವಿಶ್ಲೇಷಣೆಯು ಸ್ವೀಕಾರಾರ್ಹವಲ್ಲದ ಪ್ರಮಾಣದ ಡೈಥಿಲೀನ್ ಗ್ಲೈಕೋಲ್ ಮತ್ತು / ಅಥವಾ ಎಥಿಲೀನ್ ಅನ್ನು ಹೊಂದಿರುವುದು ಕಂಡುಬಂದಿದೆ ಎಂದು ಹೇಳಿಕೆ ತಿಳಿಸಿದೆ. ಈ ಎರಡೂ ಔಷಧೀಯ ಕಂಪನಿ ನೋಯ್ಡಾ ಮೂಲದಲ್ಲಿದೆ. WHO ಎಚ್ಚರಿಕೆಯ ಬಗ್ಗೆ ಕಂಪನಿಯಿಂದ ಈ ವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ಅದರ ವೆಬ್‌ಸೈಟ್ ಅನ್ನು ತೆಗೆದುಹಾಕಲಾಗಿದೆ.

WHO ನಿಷೇಧ ಹೇರಿದರೂ ಕೂಡ ಈವರೆಗೂ ತಯಾರಕರು ಈ ಉತ್ಪನ್ನಗಳ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಮಾಹಿತಿ ನೀಡಿಲ್ಲ. ಹಾಗಾಗಿ ಇದೀಗ ಈ ಎರಡು ಉತ್ಪನ್ನಗಳು ಇತರ ದೇಶಗಳಲ್ಲಿ ಮಾರುಕಟ್ಟೆ ಅನುಮೋದನೆಯನ್ನು ಹೊಂದಿರಬಹುದು ಅಥವಾ ಅನೌಪಚಾರಿಕ ಮಾರುಕಟ್ಟೆಗಳ ಮೂಲಕ ಸರಬರಾಜು ಮಾಡಿರಬಹುದು ಎಂದು WHO ಕಳವಳ ವ್ಯಕ್ತಪಡಿಸಿದೆ.

ಇಂತಹ ಕೆಳದರ್ಜೆಯ ಔಷಧಿಗಳಿಂದ ಯಾವುದೇ ರೋಗಿಗಳಿಗೆ ಹಾನಿಯಾಗದಂತೆ ತಡೆಯಲು ಸಧ್ಯ ಮಾರುಕಟ್ಟೆಯಲ್ಲಿರುವ ಇಂತಹ ಉತ್ಪನ್ನಗಳನ್ನು ಪತ್ತೆಹಚ್ಚಬೇಕಿದೆ ಮತ್ತು ತೆಗೆದುಹಾಕಬೇಕಿದೆ. ಪ್ರಪಂಚದಾದ್ಯಂತದ ಈ ಉತ್ಪನ್ನಗಳ ಮೇಲೆ ಕಣ್ಗಾವಲು ಹೆಚ್ಚಿಸಲು ಔಷಧ ನಿಯಂತ್ರಕರನ್ನು WHO ಕೇಳಿಕೊಂಡಿದೆ.

ಇದೀಗ ನೀಷದ ಹೇರಲಾದ ಆ ಸಿರಪ್‌ ಗಳು 21% ರಷ್ಟು ಹೆಚ್ಚಿನ ಪ್ರಮಾಣದಲ್ಲಿ DEG ಅನ್ನು ಒಳಗೊಂಡಿವೆ ಎಂದು ಈ ಹಿಂದೆ ವೈರ್ ವರದಿ ಮಾಡಿತ್ತು. ಆ ಸಿರಪ್ ಗಳಿಂದ ನಮ್ಮ ದೇಶದ 70 ಮಕ್ಕಳ ಸಾವಿಗಿಡಾಗಿದ್ದಾರೆ ಎಂದು ಗ್ಯಾಂಬಿಯಾ ಸಂಸತ್ತು ವರದಿ ನೀಡಿತ್ತು. ಆದರೆ ಭಾರತ ಸರ್ಕಾರ ಮಾತ್ರ ಈವರೆಗೂ  ಆ ವರದಿಯ ಬಗ್ಗೆ ಪ್ರತಿಕ್ರಿಯಿಸಿಲ್ಲ.

ಡಿಸೆಂಬರ್ 27, 2022 ರಂದು ಎರಡು ಉತ್ಪನ್ನಗಳಲ್ಲಿ ಒಂದಾದ ಡಾಕ್ಸ್-1 ಮ್ಯಾಕ್ಸ್ ಸಿರಪ್ ವಿರುದ್ಧ ಉಜ್ಬೇಕಿಸ್ತಾನ್ ಮೊದಲ ಬಾರಿಗೆ ಎಚ್ಚರಿಕೆ ನೀಡಿತ್ತು. ಈವರೆಗೆ, “ತೀವ್ರವಾದ ಉಸಿರಾಟದ ಕಾಯಿಲೆ ಹೊಂದಿರುವ 21 ಮಕ್ಕಳಲ್ಲಿ 18 ಡಾಕ್ -1 ಮ್ಯಾಕ್ಸ್ ಸಿರಪ್ (sic) ತೆಗೆದುಕೊಮಡಿಂದರ ಪರಿಣಾಮವಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.” ಇನ್ನು ಮೃತ ಮಕ್ಕಳು, ಆಸ್ಪತ್ರೆಗೆ ದಾಖಲಾಗುವ ಮೊದಲು, ಈ ಔಷಧಿಯನ್ನು ಮನೆಯಲ್ಲಿ 2-7 ದಿನಗಳವರೆಗೆ ದಿನಕ್ಕೆ 3-4 ಬಾರಿ, 2.5-5 ಮಿಲಿ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಭಾರತೀಯ ಔಷಧ ನಿಯಂತ್ರಕ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ತಂಡವು ಈ ಔಷಧಿಗಳ ಮೇಲೆ ತನಿಖೆ ನಡೆಸಲು ಮಾದರಿಗಳನ್ನು ಸಂಗ್ರಹಿಸಿದೆ. ಇನ್ನು ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಪ್ರತಿಯೊಂದು ಬ್ಯಾಚ್ ಉತ್ಪನ್ನಗಳನ್ನು ತಯಾರಕರು ಸಂರಕ್ಷಿಸಬೇಕು ಮತ್ತು ಆ ಮಾದರಿಗಳನ್ನು ನಿಯಂತ್ರಣ ಮಾದರಿಗಳು ಎಂದು ಕರೆಯಲಾಗುತ್ತದೆ. ಅವು ತನಿಖೆಗೆ ಬಳಕೆಯಾಗಲಿವೆ ಎಂದು ತಿಳಿಸಿಲಾಗಿದೆ.

ಇನ್ನು ಈ ಉತ್ಪನ್ನಗಳ ಮೇಲೆ ಭಾರತದಲ್ಲೂ ತನಿಖೆ ನಡೆಯುತ್ತಿದ್ದ, ಇನ್ನೂ ಫಲಿತಾಂಶಗಳು ಬಂದಿಲ್ಲ. ಆದರೆ ಉತ್ತರ ಪ್ರದೇಶ ರಾಜ್ಯದ ಡ್ರಗ್ ಕಂಟ್ರೋಲರ್ ಮಾತ್ರ ಜನವರಿ 10 ರಂದು ಮರಿಯನ್ ಬಯೋಟೆಕ್‌ನ ಪರವಾನಗಿಯನ್ನು ರದ್ದುಗೊಳಿಸಿದೆ.

ಈ ಬಗ್ಗೆ ನೋಯ್ಡಾದ ಡ್ರಗ್ ಇನ್ಸ್‌ಪೆಕ್ಟರ್ ವೈಭವ್ ಬಬ್ಬರ್ ಪ್ರತಿಕ್ರಿಯೆ ನೀಡಿದ್ದು, “ನಮಗೆ ಸಾಕಷ್ಟು ದಾಖಲೆಗಳನ್ನು ಒದಗಿಸದ ಕಾರಣ ನಾವು ಮೇರಿಯನ್ ಬಯೋಟೆಕ್ ಕಂಪನಿಯ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಿದ್ದೇವೆ. ತಪಾಸಣೆಯ ಸಮಯದಲ್ಲಿ ಅವರು [ಮರಿಯನ್ ಬಯೋಟೆಕ್] ಒದಗಿಸದ ದಾಖಲೆಗಳ ಆಧಾರದ ಮೇಲೆ ರಾಜ್ಯ ಪರವಾನಗಿ ಪ್ರಾಧಿಕಾರದಿಂದ ಶೋಕಾಸ್ ನೋಟಿಸ್ ನೀಡಲಾಗಿದೆ. ಕಂಪನಿಯಲ್ಲಿ ಎಲ್ಲಾ ಔಷಧಗಳ ತಯಾರಿಕೆಯನ್ನು ನಿಲ್ಲಿಸಲಾಗಿದೆ ಎಂದು ANI ಗೆ ತಿಳಿಸಿದ್ದಾರೆ.

ಇದನ್ನು ಓದಿ: ಸ್ಯಾಂಟ್ರೋ ರವಿ BJP ಕಾರ್ಯಕರ್ತ ಎನ್ನುವ ಕಾರಣಕ್ಕೆ ಆತನ ಬಂಧನವಾಗುತ್ತಿಲ್ಲವೇ? ದಿನೇಶ್ ಗುಂಡೂರಾವ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...