Homeಮುಖಪುಟಭಾರತದ ಎರಡು ಕೆಮ್ಮು ಸಿರಪ್ ಗಳ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ WHO

ಭಾರತದ ಎರಡು ಕೆಮ್ಮು ಸಿರಪ್ ಗಳ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ WHO

- Advertisement -
- Advertisement -

ಉಜ್ಬೇಕಿಸ್ತಾನ್‌ನಲ್ಲಿರುವ ಮಕ್ಕಳಿಗೆ ಭಾರತದಲ್ಲಿ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಬಳಸದಂತೆ ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದ್ದು, ದೇಶದ 19 ಮಕ್ಕಳ ಸಾವಿನ ನಂತರ ಈ ಹೇಳಿಕೆಯನ್ನು ವಿಶ್ವ ಸಂಸ್ಥೆ ನೀಡಿದೆ.

ಭಾರತದ ಮರಿಯನ್ ಬಯೋಟೆಕ್ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಮಕ್ಕಳಿಗೆ ಬಳಸಬಾರದು ಎಂದು WHO ಹೇಳಿಕೆಯಲ್ಲಿ ತಿಳಿಸಿದೆ. ಕಳೆದ ಡಿಸೆಂಬರ್‌ನಲ್ಲಿ ಸಂಭವಿಸಿದ ಮಕ್ಕಳ ಸಾವಿಗೆ ಭಾರತೀಯ ಫಾರ್ಮಾಸ್ಯುಟಿಕಲ್ ಕಂಪನಿ ತಯಾರಿಸಿದ ಔಷಧಿ ಸೇವಿಸಿದ್ದ ಕಾರಣ ಎಂದು ಉಜ್ಬೇಕಿಸ್ತಾನ್‌ನ ಆರೋಗ್ಯ ಸಚಿವಾಲಯವು ಹೇಳಿಕೆ ನೀಡಿತ್ತು.

AMBRONOL ಸಿರಪ್ ಮತ್ತು DOK-1 ಮ್ಯಾಕ್ಸ್ ಸಿರಪ್ ಹೆಸರಿನ ಉತ್ಪನ್ನಗಳ ಪ್ರಯೋಗಾಲಯ ವಿಶ್ಲೇಷಣೆಯು ಸ್ವೀಕಾರಾರ್ಹವಲ್ಲದ ಪ್ರಮಾಣದ ಡೈಥಿಲೀನ್ ಗ್ಲೈಕೋಲ್ ಮತ್ತು / ಅಥವಾ ಎಥಿಲೀನ್ ಅನ್ನು ಹೊಂದಿರುವುದು ಕಂಡುಬಂದಿದೆ ಎಂದು ಹೇಳಿಕೆ ತಿಳಿಸಿದೆ. ಈ ಎರಡೂ ಔಷಧೀಯ ಕಂಪನಿ ನೋಯ್ಡಾ ಮೂಲದಲ್ಲಿದೆ. WHO ಎಚ್ಚರಿಕೆಯ ಬಗ್ಗೆ ಕಂಪನಿಯಿಂದ ಈ ವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ಅದರ ವೆಬ್‌ಸೈಟ್ ಅನ್ನು ತೆಗೆದುಹಾಕಲಾಗಿದೆ.

WHO ನಿಷೇಧ ಹೇರಿದರೂ ಕೂಡ ಈವರೆಗೂ ತಯಾರಕರು ಈ ಉತ್ಪನ್ನಗಳ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಮಾಹಿತಿ ನೀಡಿಲ್ಲ. ಹಾಗಾಗಿ ಇದೀಗ ಈ ಎರಡು ಉತ್ಪನ್ನಗಳು ಇತರ ದೇಶಗಳಲ್ಲಿ ಮಾರುಕಟ್ಟೆ ಅನುಮೋದನೆಯನ್ನು ಹೊಂದಿರಬಹುದು ಅಥವಾ ಅನೌಪಚಾರಿಕ ಮಾರುಕಟ್ಟೆಗಳ ಮೂಲಕ ಸರಬರಾಜು ಮಾಡಿರಬಹುದು ಎಂದು WHO ಕಳವಳ ವ್ಯಕ್ತಪಡಿಸಿದೆ.

ಇಂತಹ ಕೆಳದರ್ಜೆಯ ಔಷಧಿಗಳಿಂದ ಯಾವುದೇ ರೋಗಿಗಳಿಗೆ ಹಾನಿಯಾಗದಂತೆ ತಡೆಯಲು ಸಧ್ಯ ಮಾರುಕಟ್ಟೆಯಲ್ಲಿರುವ ಇಂತಹ ಉತ್ಪನ್ನಗಳನ್ನು ಪತ್ತೆಹಚ್ಚಬೇಕಿದೆ ಮತ್ತು ತೆಗೆದುಹಾಕಬೇಕಿದೆ. ಪ್ರಪಂಚದಾದ್ಯಂತದ ಈ ಉತ್ಪನ್ನಗಳ ಮೇಲೆ ಕಣ್ಗಾವಲು ಹೆಚ್ಚಿಸಲು ಔಷಧ ನಿಯಂತ್ರಕರನ್ನು WHO ಕೇಳಿಕೊಂಡಿದೆ.

ಇದೀಗ ನೀಷದ ಹೇರಲಾದ ಆ ಸಿರಪ್‌ ಗಳು 21% ರಷ್ಟು ಹೆಚ್ಚಿನ ಪ್ರಮಾಣದಲ್ಲಿ DEG ಅನ್ನು ಒಳಗೊಂಡಿವೆ ಎಂದು ಈ ಹಿಂದೆ ವೈರ್ ವರದಿ ಮಾಡಿತ್ತು. ಆ ಸಿರಪ್ ಗಳಿಂದ ನಮ್ಮ ದೇಶದ 70 ಮಕ್ಕಳ ಸಾವಿಗಿಡಾಗಿದ್ದಾರೆ ಎಂದು ಗ್ಯಾಂಬಿಯಾ ಸಂಸತ್ತು ವರದಿ ನೀಡಿತ್ತು. ಆದರೆ ಭಾರತ ಸರ್ಕಾರ ಮಾತ್ರ ಈವರೆಗೂ  ಆ ವರದಿಯ ಬಗ್ಗೆ ಪ್ರತಿಕ್ರಿಯಿಸಿಲ್ಲ.

ಡಿಸೆಂಬರ್ 27, 2022 ರಂದು ಎರಡು ಉತ್ಪನ್ನಗಳಲ್ಲಿ ಒಂದಾದ ಡಾಕ್ಸ್-1 ಮ್ಯಾಕ್ಸ್ ಸಿರಪ್ ವಿರುದ್ಧ ಉಜ್ಬೇಕಿಸ್ತಾನ್ ಮೊದಲ ಬಾರಿಗೆ ಎಚ್ಚರಿಕೆ ನೀಡಿತ್ತು. ಈವರೆಗೆ, “ತೀವ್ರವಾದ ಉಸಿರಾಟದ ಕಾಯಿಲೆ ಹೊಂದಿರುವ 21 ಮಕ್ಕಳಲ್ಲಿ 18 ಡಾಕ್ -1 ಮ್ಯಾಕ್ಸ್ ಸಿರಪ್ (sic) ತೆಗೆದುಕೊಮಡಿಂದರ ಪರಿಣಾಮವಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.” ಇನ್ನು ಮೃತ ಮಕ್ಕಳು, ಆಸ್ಪತ್ರೆಗೆ ದಾಖಲಾಗುವ ಮೊದಲು, ಈ ಔಷಧಿಯನ್ನು ಮನೆಯಲ್ಲಿ 2-7 ದಿನಗಳವರೆಗೆ ದಿನಕ್ಕೆ 3-4 ಬಾರಿ, 2.5-5 ಮಿಲಿ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಭಾರತೀಯ ಔಷಧ ನಿಯಂತ್ರಕ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ತಂಡವು ಈ ಔಷಧಿಗಳ ಮೇಲೆ ತನಿಖೆ ನಡೆಸಲು ಮಾದರಿಗಳನ್ನು ಸಂಗ್ರಹಿಸಿದೆ. ಇನ್ನು ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಪ್ರತಿಯೊಂದು ಬ್ಯಾಚ್ ಉತ್ಪನ್ನಗಳನ್ನು ತಯಾರಕರು ಸಂರಕ್ಷಿಸಬೇಕು ಮತ್ತು ಆ ಮಾದರಿಗಳನ್ನು ನಿಯಂತ್ರಣ ಮಾದರಿಗಳು ಎಂದು ಕರೆಯಲಾಗುತ್ತದೆ. ಅವು ತನಿಖೆಗೆ ಬಳಕೆಯಾಗಲಿವೆ ಎಂದು ತಿಳಿಸಿಲಾಗಿದೆ.

ಇನ್ನು ಈ ಉತ್ಪನ್ನಗಳ ಮೇಲೆ ಭಾರತದಲ್ಲೂ ತನಿಖೆ ನಡೆಯುತ್ತಿದ್ದ, ಇನ್ನೂ ಫಲಿತಾಂಶಗಳು ಬಂದಿಲ್ಲ. ಆದರೆ ಉತ್ತರ ಪ್ರದೇಶ ರಾಜ್ಯದ ಡ್ರಗ್ ಕಂಟ್ರೋಲರ್ ಮಾತ್ರ ಜನವರಿ 10 ರಂದು ಮರಿಯನ್ ಬಯೋಟೆಕ್‌ನ ಪರವಾನಗಿಯನ್ನು ರದ್ದುಗೊಳಿಸಿದೆ.

ಈ ಬಗ್ಗೆ ನೋಯ್ಡಾದ ಡ್ರಗ್ ಇನ್ಸ್‌ಪೆಕ್ಟರ್ ವೈಭವ್ ಬಬ್ಬರ್ ಪ್ರತಿಕ್ರಿಯೆ ನೀಡಿದ್ದು, “ನಮಗೆ ಸಾಕಷ್ಟು ದಾಖಲೆಗಳನ್ನು ಒದಗಿಸದ ಕಾರಣ ನಾವು ಮೇರಿಯನ್ ಬಯೋಟೆಕ್ ಕಂಪನಿಯ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಿದ್ದೇವೆ. ತಪಾಸಣೆಯ ಸಮಯದಲ್ಲಿ ಅವರು [ಮರಿಯನ್ ಬಯೋಟೆಕ್] ಒದಗಿಸದ ದಾಖಲೆಗಳ ಆಧಾರದ ಮೇಲೆ ರಾಜ್ಯ ಪರವಾನಗಿ ಪ್ರಾಧಿಕಾರದಿಂದ ಶೋಕಾಸ್ ನೋಟಿಸ್ ನೀಡಲಾಗಿದೆ. ಕಂಪನಿಯಲ್ಲಿ ಎಲ್ಲಾ ಔಷಧಗಳ ತಯಾರಿಕೆಯನ್ನು ನಿಲ್ಲಿಸಲಾಗಿದೆ ಎಂದು ANI ಗೆ ತಿಳಿಸಿದ್ದಾರೆ.

ಇದನ್ನು ಓದಿ: ಸ್ಯಾಂಟ್ರೋ ರವಿ BJP ಕಾರ್ಯಕರ್ತ ಎನ್ನುವ ಕಾರಣಕ್ಕೆ ಆತನ ಬಂಧನವಾಗುತ್ತಿಲ್ಲವೇ? ದಿನೇಶ್ ಗುಂಡೂರಾವ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...