Homeಮುಖಪುಟಭಾರತದ ಎರಡು ಕೆಮ್ಮು ಸಿರಪ್ ಗಳ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ WHO

ಭಾರತದ ಎರಡು ಕೆಮ್ಮು ಸಿರಪ್ ಗಳ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ WHO

- Advertisement -
- Advertisement -

ಉಜ್ಬೇಕಿಸ್ತಾನ್‌ನಲ್ಲಿರುವ ಮಕ್ಕಳಿಗೆ ಭಾರತದಲ್ಲಿ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಬಳಸದಂತೆ ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದ್ದು, ದೇಶದ 19 ಮಕ್ಕಳ ಸಾವಿನ ನಂತರ ಈ ಹೇಳಿಕೆಯನ್ನು ವಿಶ್ವ ಸಂಸ್ಥೆ ನೀಡಿದೆ.

ಭಾರತದ ಮರಿಯನ್ ಬಯೋಟೆಕ್ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಮಕ್ಕಳಿಗೆ ಬಳಸಬಾರದು ಎಂದು WHO ಹೇಳಿಕೆಯಲ್ಲಿ ತಿಳಿಸಿದೆ. ಕಳೆದ ಡಿಸೆಂಬರ್‌ನಲ್ಲಿ ಸಂಭವಿಸಿದ ಮಕ್ಕಳ ಸಾವಿಗೆ ಭಾರತೀಯ ಫಾರ್ಮಾಸ್ಯುಟಿಕಲ್ ಕಂಪನಿ ತಯಾರಿಸಿದ ಔಷಧಿ ಸೇವಿಸಿದ್ದ ಕಾರಣ ಎಂದು ಉಜ್ಬೇಕಿಸ್ತಾನ್‌ನ ಆರೋಗ್ಯ ಸಚಿವಾಲಯವು ಹೇಳಿಕೆ ನೀಡಿತ್ತು.

AMBRONOL ಸಿರಪ್ ಮತ್ತು DOK-1 ಮ್ಯಾಕ್ಸ್ ಸಿರಪ್ ಹೆಸರಿನ ಉತ್ಪನ್ನಗಳ ಪ್ರಯೋಗಾಲಯ ವಿಶ್ಲೇಷಣೆಯು ಸ್ವೀಕಾರಾರ್ಹವಲ್ಲದ ಪ್ರಮಾಣದ ಡೈಥಿಲೀನ್ ಗ್ಲೈಕೋಲ್ ಮತ್ತು / ಅಥವಾ ಎಥಿಲೀನ್ ಅನ್ನು ಹೊಂದಿರುವುದು ಕಂಡುಬಂದಿದೆ ಎಂದು ಹೇಳಿಕೆ ತಿಳಿಸಿದೆ. ಈ ಎರಡೂ ಔಷಧೀಯ ಕಂಪನಿ ನೋಯ್ಡಾ ಮೂಲದಲ್ಲಿದೆ. WHO ಎಚ್ಚರಿಕೆಯ ಬಗ್ಗೆ ಕಂಪನಿಯಿಂದ ಈ ವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ಅದರ ವೆಬ್‌ಸೈಟ್ ಅನ್ನು ತೆಗೆದುಹಾಕಲಾಗಿದೆ.

WHO ನಿಷೇಧ ಹೇರಿದರೂ ಕೂಡ ಈವರೆಗೂ ತಯಾರಕರು ಈ ಉತ್ಪನ್ನಗಳ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಮಾಹಿತಿ ನೀಡಿಲ್ಲ. ಹಾಗಾಗಿ ಇದೀಗ ಈ ಎರಡು ಉತ್ಪನ್ನಗಳು ಇತರ ದೇಶಗಳಲ್ಲಿ ಮಾರುಕಟ್ಟೆ ಅನುಮೋದನೆಯನ್ನು ಹೊಂದಿರಬಹುದು ಅಥವಾ ಅನೌಪಚಾರಿಕ ಮಾರುಕಟ್ಟೆಗಳ ಮೂಲಕ ಸರಬರಾಜು ಮಾಡಿರಬಹುದು ಎಂದು WHO ಕಳವಳ ವ್ಯಕ್ತಪಡಿಸಿದೆ.

ಇಂತಹ ಕೆಳದರ್ಜೆಯ ಔಷಧಿಗಳಿಂದ ಯಾವುದೇ ರೋಗಿಗಳಿಗೆ ಹಾನಿಯಾಗದಂತೆ ತಡೆಯಲು ಸಧ್ಯ ಮಾರುಕಟ್ಟೆಯಲ್ಲಿರುವ ಇಂತಹ ಉತ್ಪನ್ನಗಳನ್ನು ಪತ್ತೆಹಚ್ಚಬೇಕಿದೆ ಮತ್ತು ತೆಗೆದುಹಾಕಬೇಕಿದೆ. ಪ್ರಪಂಚದಾದ್ಯಂತದ ಈ ಉತ್ಪನ್ನಗಳ ಮೇಲೆ ಕಣ್ಗಾವಲು ಹೆಚ್ಚಿಸಲು ಔಷಧ ನಿಯಂತ್ರಕರನ್ನು WHO ಕೇಳಿಕೊಂಡಿದೆ.

ಇದೀಗ ನೀಷದ ಹೇರಲಾದ ಆ ಸಿರಪ್‌ ಗಳು 21% ರಷ್ಟು ಹೆಚ್ಚಿನ ಪ್ರಮಾಣದಲ್ಲಿ DEG ಅನ್ನು ಒಳಗೊಂಡಿವೆ ಎಂದು ಈ ಹಿಂದೆ ವೈರ್ ವರದಿ ಮಾಡಿತ್ತು. ಆ ಸಿರಪ್ ಗಳಿಂದ ನಮ್ಮ ದೇಶದ 70 ಮಕ್ಕಳ ಸಾವಿಗಿಡಾಗಿದ್ದಾರೆ ಎಂದು ಗ್ಯಾಂಬಿಯಾ ಸಂಸತ್ತು ವರದಿ ನೀಡಿತ್ತು. ಆದರೆ ಭಾರತ ಸರ್ಕಾರ ಮಾತ್ರ ಈವರೆಗೂ  ಆ ವರದಿಯ ಬಗ್ಗೆ ಪ್ರತಿಕ್ರಿಯಿಸಿಲ್ಲ.

ಡಿಸೆಂಬರ್ 27, 2022 ರಂದು ಎರಡು ಉತ್ಪನ್ನಗಳಲ್ಲಿ ಒಂದಾದ ಡಾಕ್ಸ್-1 ಮ್ಯಾಕ್ಸ್ ಸಿರಪ್ ವಿರುದ್ಧ ಉಜ್ಬೇಕಿಸ್ತಾನ್ ಮೊದಲ ಬಾರಿಗೆ ಎಚ್ಚರಿಕೆ ನೀಡಿತ್ತು. ಈವರೆಗೆ, “ತೀವ್ರವಾದ ಉಸಿರಾಟದ ಕಾಯಿಲೆ ಹೊಂದಿರುವ 21 ಮಕ್ಕಳಲ್ಲಿ 18 ಡಾಕ್ -1 ಮ್ಯಾಕ್ಸ್ ಸಿರಪ್ (sic) ತೆಗೆದುಕೊಮಡಿಂದರ ಪರಿಣಾಮವಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.” ಇನ್ನು ಮೃತ ಮಕ್ಕಳು, ಆಸ್ಪತ್ರೆಗೆ ದಾಖಲಾಗುವ ಮೊದಲು, ಈ ಔಷಧಿಯನ್ನು ಮನೆಯಲ್ಲಿ 2-7 ದಿನಗಳವರೆಗೆ ದಿನಕ್ಕೆ 3-4 ಬಾರಿ, 2.5-5 ಮಿಲಿ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಭಾರತೀಯ ಔಷಧ ನಿಯಂತ್ರಕ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ತಂಡವು ಈ ಔಷಧಿಗಳ ಮೇಲೆ ತನಿಖೆ ನಡೆಸಲು ಮಾದರಿಗಳನ್ನು ಸಂಗ್ರಹಿಸಿದೆ. ಇನ್ನು ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಪ್ರತಿಯೊಂದು ಬ್ಯಾಚ್ ಉತ್ಪನ್ನಗಳನ್ನು ತಯಾರಕರು ಸಂರಕ್ಷಿಸಬೇಕು ಮತ್ತು ಆ ಮಾದರಿಗಳನ್ನು ನಿಯಂತ್ರಣ ಮಾದರಿಗಳು ಎಂದು ಕರೆಯಲಾಗುತ್ತದೆ. ಅವು ತನಿಖೆಗೆ ಬಳಕೆಯಾಗಲಿವೆ ಎಂದು ತಿಳಿಸಿಲಾಗಿದೆ.

ಇನ್ನು ಈ ಉತ್ಪನ್ನಗಳ ಮೇಲೆ ಭಾರತದಲ್ಲೂ ತನಿಖೆ ನಡೆಯುತ್ತಿದ್ದ, ಇನ್ನೂ ಫಲಿತಾಂಶಗಳು ಬಂದಿಲ್ಲ. ಆದರೆ ಉತ್ತರ ಪ್ರದೇಶ ರಾಜ್ಯದ ಡ್ರಗ್ ಕಂಟ್ರೋಲರ್ ಮಾತ್ರ ಜನವರಿ 10 ರಂದು ಮರಿಯನ್ ಬಯೋಟೆಕ್‌ನ ಪರವಾನಗಿಯನ್ನು ರದ್ದುಗೊಳಿಸಿದೆ.

ಈ ಬಗ್ಗೆ ನೋಯ್ಡಾದ ಡ್ರಗ್ ಇನ್ಸ್‌ಪೆಕ್ಟರ್ ವೈಭವ್ ಬಬ್ಬರ್ ಪ್ರತಿಕ್ರಿಯೆ ನೀಡಿದ್ದು, “ನಮಗೆ ಸಾಕಷ್ಟು ದಾಖಲೆಗಳನ್ನು ಒದಗಿಸದ ಕಾರಣ ನಾವು ಮೇರಿಯನ್ ಬಯೋಟೆಕ್ ಕಂಪನಿಯ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಿದ್ದೇವೆ. ತಪಾಸಣೆಯ ಸಮಯದಲ್ಲಿ ಅವರು [ಮರಿಯನ್ ಬಯೋಟೆಕ್] ಒದಗಿಸದ ದಾಖಲೆಗಳ ಆಧಾರದ ಮೇಲೆ ರಾಜ್ಯ ಪರವಾನಗಿ ಪ್ರಾಧಿಕಾರದಿಂದ ಶೋಕಾಸ್ ನೋಟಿಸ್ ನೀಡಲಾಗಿದೆ. ಕಂಪನಿಯಲ್ಲಿ ಎಲ್ಲಾ ಔಷಧಗಳ ತಯಾರಿಕೆಯನ್ನು ನಿಲ್ಲಿಸಲಾಗಿದೆ ಎಂದು ANI ಗೆ ತಿಳಿಸಿದ್ದಾರೆ.

ಇದನ್ನು ಓದಿ: ಸ್ಯಾಂಟ್ರೋ ರವಿ BJP ಕಾರ್ಯಕರ್ತ ಎನ್ನುವ ಕಾರಣಕ್ಕೆ ಆತನ ಬಂಧನವಾಗುತ್ತಿಲ್ಲವೇ? ದಿನೇಶ್ ಗುಂಡೂರಾವ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...