Homeಮುಖಪುಟಭಾರತದ ಎರಡು ಕೆಮ್ಮು ಸಿರಪ್ ಗಳ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ WHO

ಭಾರತದ ಎರಡು ಕೆಮ್ಮು ಸಿರಪ್ ಗಳ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ WHO

- Advertisement -
- Advertisement -

ಉಜ್ಬೇಕಿಸ್ತಾನ್‌ನಲ್ಲಿರುವ ಮಕ್ಕಳಿಗೆ ಭಾರತದಲ್ಲಿ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಬಳಸದಂತೆ ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದ್ದು, ದೇಶದ 19 ಮಕ್ಕಳ ಸಾವಿನ ನಂತರ ಈ ಹೇಳಿಕೆಯನ್ನು ವಿಶ್ವ ಸಂಸ್ಥೆ ನೀಡಿದೆ.

ಭಾರತದ ಮರಿಯನ್ ಬಯೋಟೆಕ್ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಮಕ್ಕಳಿಗೆ ಬಳಸಬಾರದು ಎಂದು WHO ಹೇಳಿಕೆಯಲ್ಲಿ ತಿಳಿಸಿದೆ. ಕಳೆದ ಡಿಸೆಂಬರ್‌ನಲ್ಲಿ ಸಂಭವಿಸಿದ ಮಕ್ಕಳ ಸಾವಿಗೆ ಭಾರತೀಯ ಫಾರ್ಮಾಸ್ಯುಟಿಕಲ್ ಕಂಪನಿ ತಯಾರಿಸಿದ ಔಷಧಿ ಸೇವಿಸಿದ್ದ ಕಾರಣ ಎಂದು ಉಜ್ಬೇಕಿಸ್ತಾನ್‌ನ ಆರೋಗ್ಯ ಸಚಿವಾಲಯವು ಹೇಳಿಕೆ ನೀಡಿತ್ತು.

AMBRONOL ಸಿರಪ್ ಮತ್ತು DOK-1 ಮ್ಯಾಕ್ಸ್ ಸಿರಪ್ ಹೆಸರಿನ ಉತ್ಪನ್ನಗಳ ಪ್ರಯೋಗಾಲಯ ವಿಶ್ಲೇಷಣೆಯು ಸ್ವೀಕಾರಾರ್ಹವಲ್ಲದ ಪ್ರಮಾಣದ ಡೈಥಿಲೀನ್ ಗ್ಲೈಕೋಲ್ ಮತ್ತು / ಅಥವಾ ಎಥಿಲೀನ್ ಅನ್ನು ಹೊಂದಿರುವುದು ಕಂಡುಬಂದಿದೆ ಎಂದು ಹೇಳಿಕೆ ತಿಳಿಸಿದೆ. ಈ ಎರಡೂ ಔಷಧೀಯ ಕಂಪನಿ ನೋಯ್ಡಾ ಮೂಲದಲ್ಲಿದೆ. WHO ಎಚ್ಚರಿಕೆಯ ಬಗ್ಗೆ ಕಂಪನಿಯಿಂದ ಈ ವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ಅದರ ವೆಬ್‌ಸೈಟ್ ಅನ್ನು ತೆಗೆದುಹಾಕಲಾಗಿದೆ.

WHO ನಿಷೇಧ ಹೇರಿದರೂ ಕೂಡ ಈವರೆಗೂ ತಯಾರಕರು ಈ ಉತ್ಪನ್ನಗಳ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಮಾಹಿತಿ ನೀಡಿಲ್ಲ. ಹಾಗಾಗಿ ಇದೀಗ ಈ ಎರಡು ಉತ್ಪನ್ನಗಳು ಇತರ ದೇಶಗಳಲ್ಲಿ ಮಾರುಕಟ್ಟೆ ಅನುಮೋದನೆಯನ್ನು ಹೊಂದಿರಬಹುದು ಅಥವಾ ಅನೌಪಚಾರಿಕ ಮಾರುಕಟ್ಟೆಗಳ ಮೂಲಕ ಸರಬರಾಜು ಮಾಡಿರಬಹುದು ಎಂದು WHO ಕಳವಳ ವ್ಯಕ್ತಪಡಿಸಿದೆ.

ಇಂತಹ ಕೆಳದರ್ಜೆಯ ಔಷಧಿಗಳಿಂದ ಯಾವುದೇ ರೋಗಿಗಳಿಗೆ ಹಾನಿಯಾಗದಂತೆ ತಡೆಯಲು ಸಧ್ಯ ಮಾರುಕಟ್ಟೆಯಲ್ಲಿರುವ ಇಂತಹ ಉತ್ಪನ್ನಗಳನ್ನು ಪತ್ತೆಹಚ್ಚಬೇಕಿದೆ ಮತ್ತು ತೆಗೆದುಹಾಕಬೇಕಿದೆ. ಪ್ರಪಂಚದಾದ್ಯಂತದ ಈ ಉತ್ಪನ್ನಗಳ ಮೇಲೆ ಕಣ್ಗಾವಲು ಹೆಚ್ಚಿಸಲು ಔಷಧ ನಿಯಂತ್ರಕರನ್ನು WHO ಕೇಳಿಕೊಂಡಿದೆ.

ಇದೀಗ ನೀಷದ ಹೇರಲಾದ ಆ ಸಿರಪ್‌ ಗಳು 21% ರಷ್ಟು ಹೆಚ್ಚಿನ ಪ್ರಮಾಣದಲ್ಲಿ DEG ಅನ್ನು ಒಳಗೊಂಡಿವೆ ಎಂದು ಈ ಹಿಂದೆ ವೈರ್ ವರದಿ ಮಾಡಿತ್ತು. ಆ ಸಿರಪ್ ಗಳಿಂದ ನಮ್ಮ ದೇಶದ 70 ಮಕ್ಕಳ ಸಾವಿಗಿಡಾಗಿದ್ದಾರೆ ಎಂದು ಗ್ಯಾಂಬಿಯಾ ಸಂಸತ್ತು ವರದಿ ನೀಡಿತ್ತು. ಆದರೆ ಭಾರತ ಸರ್ಕಾರ ಮಾತ್ರ ಈವರೆಗೂ  ಆ ವರದಿಯ ಬಗ್ಗೆ ಪ್ರತಿಕ್ರಿಯಿಸಿಲ್ಲ.

ಡಿಸೆಂಬರ್ 27, 2022 ರಂದು ಎರಡು ಉತ್ಪನ್ನಗಳಲ್ಲಿ ಒಂದಾದ ಡಾಕ್ಸ್-1 ಮ್ಯಾಕ್ಸ್ ಸಿರಪ್ ವಿರುದ್ಧ ಉಜ್ಬೇಕಿಸ್ತಾನ್ ಮೊದಲ ಬಾರಿಗೆ ಎಚ್ಚರಿಕೆ ನೀಡಿತ್ತು. ಈವರೆಗೆ, “ತೀವ್ರವಾದ ಉಸಿರಾಟದ ಕಾಯಿಲೆ ಹೊಂದಿರುವ 21 ಮಕ್ಕಳಲ್ಲಿ 18 ಡಾಕ್ -1 ಮ್ಯಾಕ್ಸ್ ಸಿರಪ್ (sic) ತೆಗೆದುಕೊಮಡಿಂದರ ಪರಿಣಾಮವಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.” ಇನ್ನು ಮೃತ ಮಕ್ಕಳು, ಆಸ್ಪತ್ರೆಗೆ ದಾಖಲಾಗುವ ಮೊದಲು, ಈ ಔಷಧಿಯನ್ನು ಮನೆಯಲ್ಲಿ 2-7 ದಿನಗಳವರೆಗೆ ದಿನಕ್ಕೆ 3-4 ಬಾರಿ, 2.5-5 ಮಿಲಿ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಭಾರತೀಯ ಔಷಧ ನಿಯಂತ್ರಕ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ತಂಡವು ಈ ಔಷಧಿಗಳ ಮೇಲೆ ತನಿಖೆ ನಡೆಸಲು ಮಾದರಿಗಳನ್ನು ಸಂಗ್ರಹಿಸಿದೆ. ಇನ್ನು ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಪ್ರತಿಯೊಂದು ಬ್ಯಾಚ್ ಉತ್ಪನ್ನಗಳನ್ನು ತಯಾರಕರು ಸಂರಕ್ಷಿಸಬೇಕು ಮತ್ತು ಆ ಮಾದರಿಗಳನ್ನು ನಿಯಂತ್ರಣ ಮಾದರಿಗಳು ಎಂದು ಕರೆಯಲಾಗುತ್ತದೆ. ಅವು ತನಿಖೆಗೆ ಬಳಕೆಯಾಗಲಿವೆ ಎಂದು ತಿಳಿಸಿಲಾಗಿದೆ.

ಇನ್ನು ಈ ಉತ್ಪನ್ನಗಳ ಮೇಲೆ ಭಾರತದಲ್ಲೂ ತನಿಖೆ ನಡೆಯುತ್ತಿದ್ದ, ಇನ್ನೂ ಫಲಿತಾಂಶಗಳು ಬಂದಿಲ್ಲ. ಆದರೆ ಉತ್ತರ ಪ್ರದೇಶ ರಾಜ್ಯದ ಡ್ರಗ್ ಕಂಟ್ರೋಲರ್ ಮಾತ್ರ ಜನವರಿ 10 ರಂದು ಮರಿಯನ್ ಬಯೋಟೆಕ್‌ನ ಪರವಾನಗಿಯನ್ನು ರದ್ದುಗೊಳಿಸಿದೆ.

ಈ ಬಗ್ಗೆ ನೋಯ್ಡಾದ ಡ್ರಗ್ ಇನ್ಸ್‌ಪೆಕ್ಟರ್ ವೈಭವ್ ಬಬ್ಬರ್ ಪ್ರತಿಕ್ರಿಯೆ ನೀಡಿದ್ದು, “ನಮಗೆ ಸಾಕಷ್ಟು ದಾಖಲೆಗಳನ್ನು ಒದಗಿಸದ ಕಾರಣ ನಾವು ಮೇರಿಯನ್ ಬಯೋಟೆಕ್ ಕಂಪನಿಯ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಿದ್ದೇವೆ. ತಪಾಸಣೆಯ ಸಮಯದಲ್ಲಿ ಅವರು [ಮರಿಯನ್ ಬಯೋಟೆಕ್] ಒದಗಿಸದ ದಾಖಲೆಗಳ ಆಧಾರದ ಮೇಲೆ ರಾಜ್ಯ ಪರವಾನಗಿ ಪ್ರಾಧಿಕಾರದಿಂದ ಶೋಕಾಸ್ ನೋಟಿಸ್ ನೀಡಲಾಗಿದೆ. ಕಂಪನಿಯಲ್ಲಿ ಎಲ್ಲಾ ಔಷಧಗಳ ತಯಾರಿಕೆಯನ್ನು ನಿಲ್ಲಿಸಲಾಗಿದೆ ಎಂದು ANI ಗೆ ತಿಳಿಸಿದ್ದಾರೆ.

ಇದನ್ನು ಓದಿ: ಸ್ಯಾಂಟ್ರೋ ರವಿ BJP ಕಾರ್ಯಕರ್ತ ಎನ್ನುವ ಕಾರಣಕ್ಕೆ ಆತನ ಬಂಧನವಾಗುತ್ತಿಲ್ಲವೇ? ದಿನೇಶ್ ಗುಂಡೂರಾವ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...