Homeಮುಖಪುಟಭಾರತದ ಎರಡು ಕೆಮ್ಮು ಸಿರಪ್ ಗಳ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ WHO

ಭಾರತದ ಎರಡು ಕೆಮ್ಮು ಸಿರಪ್ ಗಳ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ WHO

- Advertisement -
- Advertisement -

ಉಜ್ಬೇಕಿಸ್ತಾನ್‌ನಲ್ಲಿರುವ ಮಕ್ಕಳಿಗೆ ಭಾರತದಲ್ಲಿ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಬಳಸದಂತೆ ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದ್ದು, ದೇಶದ 19 ಮಕ್ಕಳ ಸಾವಿನ ನಂತರ ಈ ಹೇಳಿಕೆಯನ್ನು ವಿಶ್ವ ಸಂಸ್ಥೆ ನೀಡಿದೆ.

ಭಾರತದ ಮರಿಯನ್ ಬಯೋಟೆಕ್ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಮಕ್ಕಳಿಗೆ ಬಳಸಬಾರದು ಎಂದು WHO ಹೇಳಿಕೆಯಲ್ಲಿ ತಿಳಿಸಿದೆ. ಕಳೆದ ಡಿಸೆಂಬರ್‌ನಲ್ಲಿ ಸಂಭವಿಸಿದ ಮಕ್ಕಳ ಸಾವಿಗೆ ಭಾರತೀಯ ಫಾರ್ಮಾಸ್ಯುಟಿಕಲ್ ಕಂಪನಿ ತಯಾರಿಸಿದ ಔಷಧಿ ಸೇವಿಸಿದ್ದ ಕಾರಣ ಎಂದು ಉಜ್ಬೇಕಿಸ್ತಾನ್‌ನ ಆರೋಗ್ಯ ಸಚಿವಾಲಯವು ಹೇಳಿಕೆ ನೀಡಿತ್ತು.

AMBRONOL ಸಿರಪ್ ಮತ್ತು DOK-1 ಮ್ಯಾಕ್ಸ್ ಸಿರಪ್ ಹೆಸರಿನ ಉತ್ಪನ್ನಗಳ ಪ್ರಯೋಗಾಲಯ ವಿಶ್ಲೇಷಣೆಯು ಸ್ವೀಕಾರಾರ್ಹವಲ್ಲದ ಪ್ರಮಾಣದ ಡೈಥಿಲೀನ್ ಗ್ಲೈಕೋಲ್ ಮತ್ತು / ಅಥವಾ ಎಥಿಲೀನ್ ಅನ್ನು ಹೊಂದಿರುವುದು ಕಂಡುಬಂದಿದೆ ಎಂದು ಹೇಳಿಕೆ ತಿಳಿಸಿದೆ. ಈ ಎರಡೂ ಔಷಧೀಯ ಕಂಪನಿ ನೋಯ್ಡಾ ಮೂಲದಲ್ಲಿದೆ. WHO ಎಚ್ಚರಿಕೆಯ ಬಗ್ಗೆ ಕಂಪನಿಯಿಂದ ಈ ವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ಅದರ ವೆಬ್‌ಸೈಟ್ ಅನ್ನು ತೆಗೆದುಹಾಕಲಾಗಿದೆ.

WHO ನಿಷೇಧ ಹೇರಿದರೂ ಕೂಡ ಈವರೆಗೂ ತಯಾರಕರು ಈ ಉತ್ಪನ್ನಗಳ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಮಾಹಿತಿ ನೀಡಿಲ್ಲ. ಹಾಗಾಗಿ ಇದೀಗ ಈ ಎರಡು ಉತ್ಪನ್ನಗಳು ಇತರ ದೇಶಗಳಲ್ಲಿ ಮಾರುಕಟ್ಟೆ ಅನುಮೋದನೆಯನ್ನು ಹೊಂದಿರಬಹುದು ಅಥವಾ ಅನೌಪಚಾರಿಕ ಮಾರುಕಟ್ಟೆಗಳ ಮೂಲಕ ಸರಬರಾಜು ಮಾಡಿರಬಹುದು ಎಂದು WHO ಕಳವಳ ವ್ಯಕ್ತಪಡಿಸಿದೆ.

ಇಂತಹ ಕೆಳದರ್ಜೆಯ ಔಷಧಿಗಳಿಂದ ಯಾವುದೇ ರೋಗಿಗಳಿಗೆ ಹಾನಿಯಾಗದಂತೆ ತಡೆಯಲು ಸಧ್ಯ ಮಾರುಕಟ್ಟೆಯಲ್ಲಿರುವ ಇಂತಹ ಉತ್ಪನ್ನಗಳನ್ನು ಪತ್ತೆಹಚ್ಚಬೇಕಿದೆ ಮತ್ತು ತೆಗೆದುಹಾಕಬೇಕಿದೆ. ಪ್ರಪಂಚದಾದ್ಯಂತದ ಈ ಉತ್ಪನ್ನಗಳ ಮೇಲೆ ಕಣ್ಗಾವಲು ಹೆಚ್ಚಿಸಲು ಔಷಧ ನಿಯಂತ್ರಕರನ್ನು WHO ಕೇಳಿಕೊಂಡಿದೆ.

ಇದೀಗ ನೀಷದ ಹೇರಲಾದ ಆ ಸಿರಪ್‌ ಗಳು 21% ರಷ್ಟು ಹೆಚ್ಚಿನ ಪ್ರಮಾಣದಲ್ಲಿ DEG ಅನ್ನು ಒಳಗೊಂಡಿವೆ ಎಂದು ಈ ಹಿಂದೆ ವೈರ್ ವರದಿ ಮಾಡಿತ್ತು. ಆ ಸಿರಪ್ ಗಳಿಂದ ನಮ್ಮ ದೇಶದ 70 ಮಕ್ಕಳ ಸಾವಿಗಿಡಾಗಿದ್ದಾರೆ ಎಂದು ಗ್ಯಾಂಬಿಯಾ ಸಂಸತ್ತು ವರದಿ ನೀಡಿತ್ತು. ಆದರೆ ಭಾರತ ಸರ್ಕಾರ ಮಾತ್ರ ಈವರೆಗೂ  ಆ ವರದಿಯ ಬಗ್ಗೆ ಪ್ರತಿಕ್ರಿಯಿಸಿಲ್ಲ.

ಡಿಸೆಂಬರ್ 27, 2022 ರಂದು ಎರಡು ಉತ್ಪನ್ನಗಳಲ್ಲಿ ಒಂದಾದ ಡಾಕ್ಸ್-1 ಮ್ಯಾಕ್ಸ್ ಸಿರಪ್ ವಿರುದ್ಧ ಉಜ್ಬೇಕಿಸ್ತಾನ್ ಮೊದಲ ಬಾರಿಗೆ ಎಚ್ಚರಿಕೆ ನೀಡಿತ್ತು. ಈವರೆಗೆ, “ತೀವ್ರವಾದ ಉಸಿರಾಟದ ಕಾಯಿಲೆ ಹೊಂದಿರುವ 21 ಮಕ್ಕಳಲ್ಲಿ 18 ಡಾಕ್ -1 ಮ್ಯಾಕ್ಸ್ ಸಿರಪ್ (sic) ತೆಗೆದುಕೊಮಡಿಂದರ ಪರಿಣಾಮವಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.” ಇನ್ನು ಮೃತ ಮಕ್ಕಳು, ಆಸ್ಪತ್ರೆಗೆ ದಾಖಲಾಗುವ ಮೊದಲು, ಈ ಔಷಧಿಯನ್ನು ಮನೆಯಲ್ಲಿ 2-7 ದಿನಗಳವರೆಗೆ ದಿನಕ್ಕೆ 3-4 ಬಾರಿ, 2.5-5 ಮಿಲಿ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಭಾರತೀಯ ಔಷಧ ನಿಯಂತ್ರಕ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ತಂಡವು ಈ ಔಷಧಿಗಳ ಮೇಲೆ ತನಿಖೆ ನಡೆಸಲು ಮಾದರಿಗಳನ್ನು ಸಂಗ್ರಹಿಸಿದೆ. ಇನ್ನು ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಪ್ರತಿಯೊಂದು ಬ್ಯಾಚ್ ಉತ್ಪನ್ನಗಳನ್ನು ತಯಾರಕರು ಸಂರಕ್ಷಿಸಬೇಕು ಮತ್ತು ಆ ಮಾದರಿಗಳನ್ನು ನಿಯಂತ್ರಣ ಮಾದರಿಗಳು ಎಂದು ಕರೆಯಲಾಗುತ್ತದೆ. ಅವು ತನಿಖೆಗೆ ಬಳಕೆಯಾಗಲಿವೆ ಎಂದು ತಿಳಿಸಿಲಾಗಿದೆ.

ಇನ್ನು ಈ ಉತ್ಪನ್ನಗಳ ಮೇಲೆ ಭಾರತದಲ್ಲೂ ತನಿಖೆ ನಡೆಯುತ್ತಿದ್ದ, ಇನ್ನೂ ಫಲಿತಾಂಶಗಳು ಬಂದಿಲ್ಲ. ಆದರೆ ಉತ್ತರ ಪ್ರದೇಶ ರಾಜ್ಯದ ಡ್ರಗ್ ಕಂಟ್ರೋಲರ್ ಮಾತ್ರ ಜನವರಿ 10 ರಂದು ಮರಿಯನ್ ಬಯೋಟೆಕ್‌ನ ಪರವಾನಗಿಯನ್ನು ರದ್ದುಗೊಳಿಸಿದೆ.

ಈ ಬಗ್ಗೆ ನೋಯ್ಡಾದ ಡ್ರಗ್ ಇನ್ಸ್‌ಪೆಕ್ಟರ್ ವೈಭವ್ ಬಬ್ಬರ್ ಪ್ರತಿಕ್ರಿಯೆ ನೀಡಿದ್ದು, “ನಮಗೆ ಸಾಕಷ್ಟು ದಾಖಲೆಗಳನ್ನು ಒದಗಿಸದ ಕಾರಣ ನಾವು ಮೇರಿಯನ್ ಬಯೋಟೆಕ್ ಕಂಪನಿಯ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಿದ್ದೇವೆ. ತಪಾಸಣೆಯ ಸಮಯದಲ್ಲಿ ಅವರು [ಮರಿಯನ್ ಬಯೋಟೆಕ್] ಒದಗಿಸದ ದಾಖಲೆಗಳ ಆಧಾರದ ಮೇಲೆ ರಾಜ್ಯ ಪರವಾನಗಿ ಪ್ರಾಧಿಕಾರದಿಂದ ಶೋಕಾಸ್ ನೋಟಿಸ್ ನೀಡಲಾಗಿದೆ. ಕಂಪನಿಯಲ್ಲಿ ಎಲ್ಲಾ ಔಷಧಗಳ ತಯಾರಿಕೆಯನ್ನು ನಿಲ್ಲಿಸಲಾಗಿದೆ ಎಂದು ANI ಗೆ ತಿಳಿಸಿದ್ದಾರೆ.

ಇದನ್ನು ಓದಿ: ಸ್ಯಾಂಟ್ರೋ ರವಿ BJP ಕಾರ್ಯಕರ್ತ ಎನ್ನುವ ಕಾರಣಕ್ಕೆ ಆತನ ಬಂಧನವಾಗುತ್ತಿಲ್ಲವೇ? ದಿನೇಶ್ ಗುಂಡೂರಾವ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...