Homeಮುಖಪುಟಭಾರತದ ಎರಡು ಕೆಮ್ಮು ಸಿರಪ್ ಗಳ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ WHO

ಭಾರತದ ಎರಡು ಕೆಮ್ಮು ಸಿರಪ್ ಗಳ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ WHO

- Advertisement -
- Advertisement -

ಉಜ್ಬೇಕಿಸ್ತಾನ್‌ನಲ್ಲಿರುವ ಮಕ್ಕಳಿಗೆ ಭಾರತದಲ್ಲಿ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಬಳಸದಂತೆ ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದ್ದು, ದೇಶದ 19 ಮಕ್ಕಳ ಸಾವಿನ ನಂತರ ಈ ಹೇಳಿಕೆಯನ್ನು ವಿಶ್ವ ಸಂಸ್ಥೆ ನೀಡಿದೆ.

ಭಾರತದ ಮರಿಯನ್ ಬಯೋಟೆಕ್ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಮಕ್ಕಳಿಗೆ ಬಳಸಬಾರದು ಎಂದು WHO ಹೇಳಿಕೆಯಲ್ಲಿ ತಿಳಿಸಿದೆ. ಕಳೆದ ಡಿಸೆಂಬರ್‌ನಲ್ಲಿ ಸಂಭವಿಸಿದ ಮಕ್ಕಳ ಸಾವಿಗೆ ಭಾರತೀಯ ಫಾರ್ಮಾಸ್ಯುಟಿಕಲ್ ಕಂಪನಿ ತಯಾರಿಸಿದ ಔಷಧಿ ಸೇವಿಸಿದ್ದ ಕಾರಣ ಎಂದು ಉಜ್ಬೇಕಿಸ್ತಾನ್‌ನ ಆರೋಗ್ಯ ಸಚಿವಾಲಯವು ಹೇಳಿಕೆ ನೀಡಿತ್ತು.

AMBRONOL ಸಿರಪ್ ಮತ್ತು DOK-1 ಮ್ಯಾಕ್ಸ್ ಸಿರಪ್ ಹೆಸರಿನ ಉತ್ಪನ್ನಗಳ ಪ್ರಯೋಗಾಲಯ ವಿಶ್ಲೇಷಣೆಯು ಸ್ವೀಕಾರಾರ್ಹವಲ್ಲದ ಪ್ರಮಾಣದ ಡೈಥಿಲೀನ್ ಗ್ಲೈಕೋಲ್ ಮತ್ತು / ಅಥವಾ ಎಥಿಲೀನ್ ಅನ್ನು ಹೊಂದಿರುವುದು ಕಂಡುಬಂದಿದೆ ಎಂದು ಹೇಳಿಕೆ ತಿಳಿಸಿದೆ. ಈ ಎರಡೂ ಔಷಧೀಯ ಕಂಪನಿ ನೋಯ್ಡಾ ಮೂಲದಲ್ಲಿದೆ. WHO ಎಚ್ಚರಿಕೆಯ ಬಗ್ಗೆ ಕಂಪನಿಯಿಂದ ಈ ವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ಅದರ ವೆಬ್‌ಸೈಟ್ ಅನ್ನು ತೆಗೆದುಹಾಕಲಾಗಿದೆ.

WHO ನಿಷೇಧ ಹೇರಿದರೂ ಕೂಡ ಈವರೆಗೂ ತಯಾರಕರು ಈ ಉತ್ಪನ್ನಗಳ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಮಾಹಿತಿ ನೀಡಿಲ್ಲ. ಹಾಗಾಗಿ ಇದೀಗ ಈ ಎರಡು ಉತ್ಪನ್ನಗಳು ಇತರ ದೇಶಗಳಲ್ಲಿ ಮಾರುಕಟ್ಟೆ ಅನುಮೋದನೆಯನ್ನು ಹೊಂದಿರಬಹುದು ಅಥವಾ ಅನೌಪಚಾರಿಕ ಮಾರುಕಟ್ಟೆಗಳ ಮೂಲಕ ಸರಬರಾಜು ಮಾಡಿರಬಹುದು ಎಂದು WHO ಕಳವಳ ವ್ಯಕ್ತಪಡಿಸಿದೆ.

ಇಂತಹ ಕೆಳದರ್ಜೆಯ ಔಷಧಿಗಳಿಂದ ಯಾವುದೇ ರೋಗಿಗಳಿಗೆ ಹಾನಿಯಾಗದಂತೆ ತಡೆಯಲು ಸಧ್ಯ ಮಾರುಕಟ್ಟೆಯಲ್ಲಿರುವ ಇಂತಹ ಉತ್ಪನ್ನಗಳನ್ನು ಪತ್ತೆಹಚ್ಚಬೇಕಿದೆ ಮತ್ತು ತೆಗೆದುಹಾಕಬೇಕಿದೆ. ಪ್ರಪಂಚದಾದ್ಯಂತದ ಈ ಉತ್ಪನ್ನಗಳ ಮೇಲೆ ಕಣ್ಗಾವಲು ಹೆಚ್ಚಿಸಲು ಔಷಧ ನಿಯಂತ್ರಕರನ್ನು WHO ಕೇಳಿಕೊಂಡಿದೆ.

ಇದೀಗ ನೀಷದ ಹೇರಲಾದ ಆ ಸಿರಪ್‌ ಗಳು 21% ರಷ್ಟು ಹೆಚ್ಚಿನ ಪ್ರಮಾಣದಲ್ಲಿ DEG ಅನ್ನು ಒಳಗೊಂಡಿವೆ ಎಂದು ಈ ಹಿಂದೆ ವೈರ್ ವರದಿ ಮಾಡಿತ್ತು. ಆ ಸಿರಪ್ ಗಳಿಂದ ನಮ್ಮ ದೇಶದ 70 ಮಕ್ಕಳ ಸಾವಿಗಿಡಾಗಿದ್ದಾರೆ ಎಂದು ಗ್ಯಾಂಬಿಯಾ ಸಂಸತ್ತು ವರದಿ ನೀಡಿತ್ತು. ಆದರೆ ಭಾರತ ಸರ್ಕಾರ ಮಾತ್ರ ಈವರೆಗೂ  ಆ ವರದಿಯ ಬಗ್ಗೆ ಪ್ರತಿಕ್ರಿಯಿಸಿಲ್ಲ.

ಡಿಸೆಂಬರ್ 27, 2022 ರಂದು ಎರಡು ಉತ್ಪನ್ನಗಳಲ್ಲಿ ಒಂದಾದ ಡಾಕ್ಸ್-1 ಮ್ಯಾಕ್ಸ್ ಸಿರಪ್ ವಿರುದ್ಧ ಉಜ್ಬೇಕಿಸ್ತಾನ್ ಮೊದಲ ಬಾರಿಗೆ ಎಚ್ಚರಿಕೆ ನೀಡಿತ್ತು. ಈವರೆಗೆ, “ತೀವ್ರವಾದ ಉಸಿರಾಟದ ಕಾಯಿಲೆ ಹೊಂದಿರುವ 21 ಮಕ್ಕಳಲ್ಲಿ 18 ಡಾಕ್ -1 ಮ್ಯಾಕ್ಸ್ ಸಿರಪ್ (sic) ತೆಗೆದುಕೊಮಡಿಂದರ ಪರಿಣಾಮವಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.” ಇನ್ನು ಮೃತ ಮಕ್ಕಳು, ಆಸ್ಪತ್ರೆಗೆ ದಾಖಲಾಗುವ ಮೊದಲು, ಈ ಔಷಧಿಯನ್ನು ಮನೆಯಲ್ಲಿ 2-7 ದಿನಗಳವರೆಗೆ ದಿನಕ್ಕೆ 3-4 ಬಾರಿ, 2.5-5 ಮಿಲಿ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಭಾರತೀಯ ಔಷಧ ನಿಯಂತ್ರಕ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ತಂಡವು ಈ ಔಷಧಿಗಳ ಮೇಲೆ ತನಿಖೆ ನಡೆಸಲು ಮಾದರಿಗಳನ್ನು ಸಂಗ್ರಹಿಸಿದೆ. ಇನ್ನು ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಪ್ರತಿಯೊಂದು ಬ್ಯಾಚ್ ಉತ್ಪನ್ನಗಳನ್ನು ತಯಾರಕರು ಸಂರಕ್ಷಿಸಬೇಕು ಮತ್ತು ಆ ಮಾದರಿಗಳನ್ನು ನಿಯಂತ್ರಣ ಮಾದರಿಗಳು ಎಂದು ಕರೆಯಲಾಗುತ್ತದೆ. ಅವು ತನಿಖೆಗೆ ಬಳಕೆಯಾಗಲಿವೆ ಎಂದು ತಿಳಿಸಿಲಾಗಿದೆ.

ಇನ್ನು ಈ ಉತ್ಪನ್ನಗಳ ಮೇಲೆ ಭಾರತದಲ್ಲೂ ತನಿಖೆ ನಡೆಯುತ್ತಿದ್ದ, ಇನ್ನೂ ಫಲಿತಾಂಶಗಳು ಬಂದಿಲ್ಲ. ಆದರೆ ಉತ್ತರ ಪ್ರದೇಶ ರಾಜ್ಯದ ಡ್ರಗ್ ಕಂಟ್ರೋಲರ್ ಮಾತ್ರ ಜನವರಿ 10 ರಂದು ಮರಿಯನ್ ಬಯೋಟೆಕ್‌ನ ಪರವಾನಗಿಯನ್ನು ರದ್ದುಗೊಳಿಸಿದೆ.

ಈ ಬಗ್ಗೆ ನೋಯ್ಡಾದ ಡ್ರಗ್ ಇನ್ಸ್‌ಪೆಕ್ಟರ್ ವೈಭವ್ ಬಬ್ಬರ್ ಪ್ರತಿಕ್ರಿಯೆ ನೀಡಿದ್ದು, “ನಮಗೆ ಸಾಕಷ್ಟು ದಾಖಲೆಗಳನ್ನು ಒದಗಿಸದ ಕಾರಣ ನಾವು ಮೇರಿಯನ್ ಬಯೋಟೆಕ್ ಕಂಪನಿಯ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಿದ್ದೇವೆ. ತಪಾಸಣೆಯ ಸಮಯದಲ್ಲಿ ಅವರು [ಮರಿಯನ್ ಬಯೋಟೆಕ್] ಒದಗಿಸದ ದಾಖಲೆಗಳ ಆಧಾರದ ಮೇಲೆ ರಾಜ್ಯ ಪರವಾನಗಿ ಪ್ರಾಧಿಕಾರದಿಂದ ಶೋಕಾಸ್ ನೋಟಿಸ್ ನೀಡಲಾಗಿದೆ. ಕಂಪನಿಯಲ್ಲಿ ಎಲ್ಲಾ ಔಷಧಗಳ ತಯಾರಿಕೆಯನ್ನು ನಿಲ್ಲಿಸಲಾಗಿದೆ ಎಂದು ANI ಗೆ ತಿಳಿಸಿದ್ದಾರೆ.

ಇದನ್ನು ಓದಿ: ಸ್ಯಾಂಟ್ರೋ ರವಿ BJP ಕಾರ್ಯಕರ್ತ ಎನ್ನುವ ಕಾರಣಕ್ಕೆ ಆತನ ಬಂಧನವಾಗುತ್ತಿಲ್ಲವೇ? ದಿನೇಶ್ ಗುಂಡೂರಾವ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...