Homeಮುಖಪುಟಭಾರತದ ಎರಡು ಕೆಮ್ಮು ಸಿರಪ್ ಗಳ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ WHO

ಭಾರತದ ಎರಡು ಕೆಮ್ಮು ಸಿರಪ್ ಗಳ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ WHO

- Advertisement -
- Advertisement -

ಉಜ್ಬೇಕಿಸ್ತಾನ್‌ನಲ್ಲಿರುವ ಮಕ್ಕಳಿಗೆ ಭಾರತದಲ್ಲಿ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಬಳಸದಂತೆ ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದ್ದು, ದೇಶದ 19 ಮಕ್ಕಳ ಸಾವಿನ ನಂತರ ಈ ಹೇಳಿಕೆಯನ್ನು ವಿಶ್ವ ಸಂಸ್ಥೆ ನೀಡಿದೆ.

ಭಾರತದ ಮರಿಯನ್ ಬಯೋಟೆಕ್ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಮಕ್ಕಳಿಗೆ ಬಳಸಬಾರದು ಎಂದು WHO ಹೇಳಿಕೆಯಲ್ಲಿ ತಿಳಿಸಿದೆ. ಕಳೆದ ಡಿಸೆಂಬರ್‌ನಲ್ಲಿ ಸಂಭವಿಸಿದ ಮಕ್ಕಳ ಸಾವಿಗೆ ಭಾರತೀಯ ಫಾರ್ಮಾಸ್ಯುಟಿಕಲ್ ಕಂಪನಿ ತಯಾರಿಸಿದ ಔಷಧಿ ಸೇವಿಸಿದ್ದ ಕಾರಣ ಎಂದು ಉಜ್ಬೇಕಿಸ್ತಾನ್‌ನ ಆರೋಗ್ಯ ಸಚಿವಾಲಯವು ಹೇಳಿಕೆ ನೀಡಿತ್ತು.

AMBRONOL ಸಿರಪ್ ಮತ್ತು DOK-1 ಮ್ಯಾಕ್ಸ್ ಸಿರಪ್ ಹೆಸರಿನ ಉತ್ಪನ್ನಗಳ ಪ್ರಯೋಗಾಲಯ ವಿಶ್ಲೇಷಣೆಯು ಸ್ವೀಕಾರಾರ್ಹವಲ್ಲದ ಪ್ರಮಾಣದ ಡೈಥಿಲೀನ್ ಗ್ಲೈಕೋಲ್ ಮತ್ತು / ಅಥವಾ ಎಥಿಲೀನ್ ಅನ್ನು ಹೊಂದಿರುವುದು ಕಂಡುಬಂದಿದೆ ಎಂದು ಹೇಳಿಕೆ ತಿಳಿಸಿದೆ. ಈ ಎರಡೂ ಔಷಧೀಯ ಕಂಪನಿ ನೋಯ್ಡಾ ಮೂಲದಲ್ಲಿದೆ. WHO ಎಚ್ಚರಿಕೆಯ ಬಗ್ಗೆ ಕಂಪನಿಯಿಂದ ಈ ವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ಅದರ ವೆಬ್‌ಸೈಟ್ ಅನ್ನು ತೆಗೆದುಹಾಕಲಾಗಿದೆ.

WHO ನಿಷೇಧ ಹೇರಿದರೂ ಕೂಡ ಈವರೆಗೂ ತಯಾರಕರು ಈ ಉತ್ಪನ್ನಗಳ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಮಾಹಿತಿ ನೀಡಿಲ್ಲ. ಹಾಗಾಗಿ ಇದೀಗ ಈ ಎರಡು ಉತ್ಪನ್ನಗಳು ಇತರ ದೇಶಗಳಲ್ಲಿ ಮಾರುಕಟ್ಟೆ ಅನುಮೋದನೆಯನ್ನು ಹೊಂದಿರಬಹುದು ಅಥವಾ ಅನೌಪಚಾರಿಕ ಮಾರುಕಟ್ಟೆಗಳ ಮೂಲಕ ಸರಬರಾಜು ಮಾಡಿರಬಹುದು ಎಂದು WHO ಕಳವಳ ವ್ಯಕ್ತಪಡಿಸಿದೆ.

ಇಂತಹ ಕೆಳದರ್ಜೆಯ ಔಷಧಿಗಳಿಂದ ಯಾವುದೇ ರೋಗಿಗಳಿಗೆ ಹಾನಿಯಾಗದಂತೆ ತಡೆಯಲು ಸಧ್ಯ ಮಾರುಕಟ್ಟೆಯಲ್ಲಿರುವ ಇಂತಹ ಉತ್ಪನ್ನಗಳನ್ನು ಪತ್ತೆಹಚ್ಚಬೇಕಿದೆ ಮತ್ತು ತೆಗೆದುಹಾಕಬೇಕಿದೆ. ಪ್ರಪಂಚದಾದ್ಯಂತದ ಈ ಉತ್ಪನ್ನಗಳ ಮೇಲೆ ಕಣ್ಗಾವಲು ಹೆಚ್ಚಿಸಲು ಔಷಧ ನಿಯಂತ್ರಕರನ್ನು WHO ಕೇಳಿಕೊಂಡಿದೆ.

ಇದೀಗ ನೀಷದ ಹೇರಲಾದ ಆ ಸಿರಪ್‌ ಗಳು 21% ರಷ್ಟು ಹೆಚ್ಚಿನ ಪ್ರಮಾಣದಲ್ಲಿ DEG ಅನ್ನು ಒಳಗೊಂಡಿವೆ ಎಂದು ಈ ಹಿಂದೆ ವೈರ್ ವರದಿ ಮಾಡಿತ್ತು. ಆ ಸಿರಪ್ ಗಳಿಂದ ನಮ್ಮ ದೇಶದ 70 ಮಕ್ಕಳ ಸಾವಿಗಿಡಾಗಿದ್ದಾರೆ ಎಂದು ಗ್ಯಾಂಬಿಯಾ ಸಂಸತ್ತು ವರದಿ ನೀಡಿತ್ತು. ಆದರೆ ಭಾರತ ಸರ್ಕಾರ ಮಾತ್ರ ಈವರೆಗೂ  ಆ ವರದಿಯ ಬಗ್ಗೆ ಪ್ರತಿಕ್ರಿಯಿಸಿಲ್ಲ.

ಡಿಸೆಂಬರ್ 27, 2022 ರಂದು ಎರಡು ಉತ್ಪನ್ನಗಳಲ್ಲಿ ಒಂದಾದ ಡಾಕ್ಸ್-1 ಮ್ಯಾಕ್ಸ್ ಸಿರಪ್ ವಿರುದ್ಧ ಉಜ್ಬೇಕಿಸ್ತಾನ್ ಮೊದಲ ಬಾರಿಗೆ ಎಚ್ಚರಿಕೆ ನೀಡಿತ್ತು. ಈವರೆಗೆ, “ತೀವ್ರವಾದ ಉಸಿರಾಟದ ಕಾಯಿಲೆ ಹೊಂದಿರುವ 21 ಮಕ್ಕಳಲ್ಲಿ 18 ಡಾಕ್ -1 ಮ್ಯಾಕ್ಸ್ ಸಿರಪ್ (sic) ತೆಗೆದುಕೊಮಡಿಂದರ ಪರಿಣಾಮವಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.” ಇನ್ನು ಮೃತ ಮಕ್ಕಳು, ಆಸ್ಪತ್ರೆಗೆ ದಾಖಲಾಗುವ ಮೊದಲು, ಈ ಔಷಧಿಯನ್ನು ಮನೆಯಲ್ಲಿ 2-7 ದಿನಗಳವರೆಗೆ ದಿನಕ್ಕೆ 3-4 ಬಾರಿ, 2.5-5 ಮಿಲಿ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಭಾರತೀಯ ಔಷಧ ನಿಯಂತ್ರಕ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ತಂಡವು ಈ ಔಷಧಿಗಳ ಮೇಲೆ ತನಿಖೆ ನಡೆಸಲು ಮಾದರಿಗಳನ್ನು ಸಂಗ್ರಹಿಸಿದೆ. ಇನ್ನು ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಪ್ರತಿಯೊಂದು ಬ್ಯಾಚ್ ಉತ್ಪನ್ನಗಳನ್ನು ತಯಾರಕರು ಸಂರಕ್ಷಿಸಬೇಕು ಮತ್ತು ಆ ಮಾದರಿಗಳನ್ನು ನಿಯಂತ್ರಣ ಮಾದರಿಗಳು ಎಂದು ಕರೆಯಲಾಗುತ್ತದೆ. ಅವು ತನಿಖೆಗೆ ಬಳಕೆಯಾಗಲಿವೆ ಎಂದು ತಿಳಿಸಿಲಾಗಿದೆ.

ಇನ್ನು ಈ ಉತ್ಪನ್ನಗಳ ಮೇಲೆ ಭಾರತದಲ್ಲೂ ತನಿಖೆ ನಡೆಯುತ್ತಿದ್ದ, ಇನ್ನೂ ಫಲಿತಾಂಶಗಳು ಬಂದಿಲ್ಲ. ಆದರೆ ಉತ್ತರ ಪ್ರದೇಶ ರಾಜ್ಯದ ಡ್ರಗ್ ಕಂಟ್ರೋಲರ್ ಮಾತ್ರ ಜನವರಿ 10 ರಂದು ಮರಿಯನ್ ಬಯೋಟೆಕ್‌ನ ಪರವಾನಗಿಯನ್ನು ರದ್ದುಗೊಳಿಸಿದೆ.

ಈ ಬಗ್ಗೆ ನೋಯ್ಡಾದ ಡ್ರಗ್ ಇನ್ಸ್‌ಪೆಕ್ಟರ್ ವೈಭವ್ ಬಬ್ಬರ್ ಪ್ರತಿಕ್ರಿಯೆ ನೀಡಿದ್ದು, “ನಮಗೆ ಸಾಕಷ್ಟು ದಾಖಲೆಗಳನ್ನು ಒದಗಿಸದ ಕಾರಣ ನಾವು ಮೇರಿಯನ್ ಬಯೋಟೆಕ್ ಕಂಪನಿಯ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಿದ್ದೇವೆ. ತಪಾಸಣೆಯ ಸಮಯದಲ್ಲಿ ಅವರು [ಮರಿಯನ್ ಬಯೋಟೆಕ್] ಒದಗಿಸದ ದಾಖಲೆಗಳ ಆಧಾರದ ಮೇಲೆ ರಾಜ್ಯ ಪರವಾನಗಿ ಪ್ರಾಧಿಕಾರದಿಂದ ಶೋಕಾಸ್ ನೋಟಿಸ್ ನೀಡಲಾಗಿದೆ. ಕಂಪನಿಯಲ್ಲಿ ಎಲ್ಲಾ ಔಷಧಗಳ ತಯಾರಿಕೆಯನ್ನು ನಿಲ್ಲಿಸಲಾಗಿದೆ ಎಂದು ANI ಗೆ ತಿಳಿಸಿದ್ದಾರೆ.

ಇದನ್ನು ಓದಿ: ಸ್ಯಾಂಟ್ರೋ ರವಿ BJP ಕಾರ್ಯಕರ್ತ ಎನ್ನುವ ಕಾರಣಕ್ಕೆ ಆತನ ಬಂಧನವಾಗುತ್ತಿಲ್ಲವೇ? ದಿನೇಶ್ ಗುಂಡೂರಾವ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...