Homeಕರ್ನಾಟಕಮೇ 23 ಮತ್ತು ಹೊಸ ಸಿಎಂ : ವಾಕ್ಸಮರದಲ್ಲಿ ಮೈತ್ರಿಪಕ್ಷಗಳು, ಭ್ರಮೆಯಲ್ಲಿ ಬಿಎಸ್‍ವೈ

ಮೇ 23 ಮತ್ತು ಹೊಸ ಸಿಎಂ : ವಾಕ್ಸಮರದಲ್ಲಿ ಮೈತ್ರಿಪಕ್ಷಗಳು, ಭ್ರಮೆಯಲ್ಲಿ ಬಿಎಸ್‍ವೈ

ಮೇ 23ರ ಫಲಿತಾಂಶ ರಾಜ್ಯ ಸರ್ಕಾರಕ್ಕೇನೂ ಆಪತ್ತು ತರಲಾರದು. ಇವರಿವರೇ ಕಿತ್ತಾಡಿಕೊಂಡು ಸರ್ಕಾರ ಬೀಳಬೇಕು ಅಥವಾ ಯಡಿಯೂರಪ್ಪ 21ನೇಯ ಸಪ್ಲಿಮೆಂಟರಿಯಲ್ಲಿ ಪಾಸ್ ಆಗಬೇಕು. ಸದ್ಯಕ್ಕೆ ಈ ಎರಡೂ ಆಗುವ ಸಾಧ್ಯತೆಗಳಿಲ್ಲ.

- Advertisement -
- Advertisement -

ಮೇ 23ರಂದು ಲೋಕಸಭಾ ಫಲಿತಾಂಶದ ನಂತರ ನಮ್ಮದೇ ಸರ್ಕಾರ ಎಂದು ಯಡಿಯೂರಪ್ಪ ಹೇಳಿ ಸುಸ್ತಾಗುವ ಹೊತ್ತಿಗೆ, ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಧ್ವನಿ ತೇಲಿ ಬಂತು. ಅದಕ್ಕೆ ಕೌಂಟರ್ ಎಂಬಂತೆ ಜೆಡಿಎಸ್ ಅಧ್ಯಕ್ಷ ವಿಶ್ವನಾಥ್ ಹೇಳಿಕೆ ನೀಡತೊಡಗಿದರು… ಮೇ 23ರ ಫಲಿತಾಂಶಕ್ಕೂ ಹೊಸ ಸಿಎಂ ಅಥವಾ ಹೊಸ ಸರ್ಕಾರಕ್ಕೂ ಅದೆಂತಹ ಸಂಬಂಧ?

ದೇಶ ಮೇ 23ರ ಮಹಾ ಚುನಾವಣಾ ಫಲಿತಾಂಶ ಏನಾಗಬಹುದು ಎಂದು ಯೋಚಿಸುವ ಸಂದರ್ಭದಲ್ಲಿ ರಾಜ್ಯದ ಮೂರೂ ಪಕ್ಷಗಳ ಹಲವು ಪ್ರಮುಖರು ಹೊಸ ಸಿಎಂ ಎಂಬ ಕಲ್ಪನೆಯ ಆಟಕ್ಕೆ ಜೋತು ಬಿದ್ದು, ಹೊಸ ಹೊಸ ಸಾಧ್ಯತೆಗಳನ್ನು ತೇಲಿ ಬಿಡುತ್ತಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹೊಸ ಮುಖ್ಯಮಂತ್ರಿಯ ವಿಷಯ ವಾಕ್ಸಮರಕ್ಕೆ ಕಾರಣವಾಗಿ, ವಿಧಾನಸಭೆ ವಿಸರ್ಜನೆಯಾಗಲಿ ಬಿಡಿ ಎಂಬ ಹಂತದವರೆಗೂ ಹೋಗಿ ಬೇಸರ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ ಎರಡೂ ಪಕ್ಷಗಳ ‘ಹೈ ಕಮಾಂಡ್’ ವಿವಾದ, ಗೊದಲ ಸೃಷ್ಟಿಸಬೇಡಿ ಎಂದು ತಾಕೀತು ಮಾಡಿದ್ದಾರೆ.

ಇವತ್ತು ರವಿವಾರ ರಾಜ್ಯದ ನಾಯಕರನ್ನು ಕರೆಸಿಕೊಂಡು 23ರ ಫಲಿತಾಂಶದ ನಂತರದ ಮುಂದಿನ ನಡೆಯ ಬಗ್ಗೆ ಚರ್ಚಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸದ್ಯಕ್ಕೆ ಮೈತ್ರಿ ಸರ್ಕಾರಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೈತ್ರಿ ಸರ್ಕಾರಕ್ಕೂ 23ರ ಫಲಿತಾಂಶಕ್ಕೂ ಯಾವ ಸಂಬಂಧವೂ ಇಲ್ಲ ಎಂಬಂತೆ ಹೇಳಿಕೆ ನೀಡಿದ್ದಾರೆ.

ಇತ್ತ ದೇವೇಗೌಡರು ಕೂಡ ಬಹಿರಂಗ ಹೇಳಿಕೆ ನೀಡದಂತೆ ತಮ್ಮ ಪಕ್ಷದ ನಾಯಕರಿಗೆ ತಾಕೀತು ಮಾಡಿದ್ದಾರೆ. ಕೇಂದ್ರದಲ್ಲಿ ಈ ಸಲ ಪ್ರಾದೇಶಿಕ ಪಕ್ಷಗಳೇ ನಿರ್ಣಾಯಕ ಎಂದು ನಂಬಿರುವ ಅವರು, ರಾಜ್ಯ ರಾಜಕಾರಣದಲ್ಲಿ ಗೊಂದಲ ಏರ್ಪಡುವುದನ್ನು ಸಹಿಸಲಾರರು. ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ತಮ್ಮ ಪಕ್ಷದ ನಾಯಕರಿಗೆ ಬಾಹ್ಯವಾಗಿ ಮೈತ್ರಿ ಕುರಿತು, ಹೊಸ ಸಿಎಂ ಕುರಿತು ಮಾತನಾಡಿ ಗೊಂದಲ ಸೃಷ್ಟಿ ಮಾಡಬೇಡಿ, ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ತರುವ ಯತ್ನಕ್ಕೆ ಹಿನ್ನಡೆ ಮಾಡಬೇಡಿ ಎಂದಿದ್ದಾರೆ.

ಸದ್ಯಕ್ಕೆ ಅಂದರೆ ಇವತ್ತು ಮಧ್ಯಾಹ್ನದ ಹೊತ್ತಿಗೆ ಮೈತ್ರಿ ಪಕ್ಷಗಳ ನಾಯಕರು ವಾಕ್ಸಮರ ನಿಲ್ಲಿಸಿ ಮೌನಕ್ಕೆ ಶರಣಾಗಿದ್ದಾರೆ. ಆದರೆ, ಮೇ 23ರ ನಂತರ 20 ಶಾಸಕರು ತಮ್ಮ ಕಡೆ ಎಂದು ನಂಬಿರುವ ಯಡಿಯೂರಪ್ಪ ಮತ್ತು ಟೀಮ್ ಮಾತ್ರ ಸರ್ಕಾರ ತಮ್ಮದೇ ಎಂಬ ಗುಂಗಿನಲ್ಲಿದೆ..
ಉಪ ಚುನಾವಣೆಯಲ್ಲಿ ಸೃಷ್ಟಿ!

ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆಗಳ ಪ್ರಚಾರದ ಸಂದರ್ಭದಲ್ಲಿ ರಾಜ್ಯದ ಮೂರೂ ಪಕ್ಷಗಳ ನಾಯಕರು ಪ್ರಚಾರದಲ್ಲಿದ್ದಾಗ ಇದೆಲ್ಲ ರಗಳೆ ಆರಂಭವಾಗಿದೆ. ಒಂದು ಕಡೆ ಯಡಿಯೂರಪ್ಪ ಎರಡು ಸೀಟು ಗೆಲ್ಲಿಸಿ ಕೊಡಿ, ನಾನೇ ಸಿಎಂ ಎಂದು ಬಹಿರಂಗ ಪ್ರಚಾರ ಮಾಡಿದರು. ಇನ್ನೊಂದು ಕಡೆ ಸಿದ್ದರಾಮಯ್ಯ ಅಭಿಮಾನಿ ಶಾಸಕರು ಮೇ 23ರ ನಂತರ ಸಿದ್ದರಾಮಯ್ಯರೇ ಮುಖ್ಯಮಂತ್ರಿ ಎಂದು ಗುಲ್ಲು ಎಬ್ಬಿಸಿದರು. ಇದಕ್ಕೆ ಬಿಜೆಪಿಯ ಈಶ್ವರಪ್ಪ ಇನ್ನಷ್ಟು ಕಿಡಿ ಹಚ್ಚಿದರು. ಆಗ ಅಖಾಡಕ್ಕೆ ಇಳಿದ ರಾಜ್ಯ ಜೆಡಿಎಸ್ ಅಧ್ಯಕ್ಷ ವಿಶ್ವನಾಥರು, ತಮ್ಮ ಬೆಂಬಲಿಗರ ಮೂಲಕ ತಾವೇ ಮುಖ್ಯಮಂತ್ರಿ ಎಂದು ಹೇಳಿಸುವ ಮೂಲಕ ಸಿದ್ದರಾಮಯ್ಯ ಮೈತ್ರಿ ಧರ್ಮಕ್ಕೆ ಮೋಸ ಮಾಡುತ್ತಿದ್ದಾರೆ, ಅವರೇನು ಅತ್ಯುತ್ತಮ ಸಿಎಂ ಆಗಿದ್ದರೆ? ಹಾಗಿದ್ದರೆ 121ರಿಂದ 78ಕ್ಕೆ ಕಾಂಗ್ರೆಸ್ ಕುಸಿಯುತ್ತಿತ್ತೆ? ಎಂದು ಎರಡು ಮೂರು ಕಡೆ ಪ್ರತಿಪಾದಿಸಿದರು. ಆಗ ದೇವೇಗೌಡ ಮತ್ತು ಕುಮಾರಸ್ವಾಮಿ ಮೌನವಾಗಿಯೇ ಇದ್ದರು.

ಇದ್ದಕ್ಕಿದ್ದಂತೆ ಏನಾಯ್ತೋ ಮುಖ್ಯಮಂತ್ರಿ ಕುಮಾರಸ್ವಾಮಿ, ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು. ಅಂಥವರಿಗೆ ಕಾಂಗ್ರೆಸ್ ಅವಕಾಶ ಮಾಡಿಕೊಡಬೇಕಿತ್ತು ಎಂದು ಬಾಂಬ್ ಹಾಕಿದರು. ಸಿದ್ದರಾಮಯ್ಯ ಮುಖ್ಯಮಂತ್ರಿ ಎಂಬ ‘ಗುಪ್ತ’ ಆಂದೋಲನಕ್ಕೆ ಬ್ರೇಕ್ ಹಾಕಲು ಅವರು ಹೀಗೆ ಮಾಡಿದರು ಅನಿಸುತ್ತದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಎರಡರಲ್ಲೂ ಮುಖ್ಯಮಂತ್ರಿ ಆಗುವ ಅರ್ಹತೆಯುಳ್ಳ ಹಲವರಿದ್ದಾರೆ, ಜೆಡಿಎಸ್‍ನ ಎಚ್.ಡಿ. ರೇವಣ್ಣ ಕೂಡ ಅದರಲ್ಲಿ ಒಬ್ಬರು ಎಂದು ಸಿದ್ದರಾಮಯ್ಯ ಒಂದು ಟ್ವೀಟ್ ತೇಲಿಬಿಟ್ಟರು. ದಲಿತ ಮುಖ್ಯಮಂತ್ರಿ ವಿಷಯಕ್ಕೆ ಅಂತೂ ಅವರು ಸ್ಟಾಪ್ ಹಾಕಿದರು.
ಇದೆಲ್ಲದರಿಂದ ರೋಸಿದ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ, ಎರಡೂ ಪಕ್ಷಗಳಲ್ಲಿ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳು ಹೆಚ್ಚುತ್ತಿದ್ದಾರೆ. ಇದು ಮೈತ್ರಿ ಸರ್ಕಾರಕ್ಕೆ ಮಾರಕ. ಈ ಕಿತ್ತಾಟದ ಬದಲು ವಿಧಾನಸಭೆ ವಿಸರ್ಜನೆಯೇ ಸೂಕ್ತ ಎಂದು ಕಿಡಿಕಾರಿದರು.. ಶನಿವಾರ ಪೂರ್ತಿ ಇದೇ ಚರ್ಚೆಯಾಯಿತು.

ಇದನ್ನು ಓದಿ: ರಾಜ್ಯ ಸರ್ಕಾರದ ಭವಿಷ್ಯ ನಿಂತಿರುವುದು ಈ ನಾಲ್ಕು ಅಂಶಗಳ ಮೇಲೆ.

ಆದರೆ ಇವತ್ತಿನ ಮಟ್ಟಿಗೆ ಎರಡೂ ಪಕ್ಷಗಳ ಹೈಕಮಾಂಡ್ ಈ ವಾಕ್ಸಮರ ನಿಲ್ಲಿಸುವಲ್ಲಿ ಸಫಲವಾಗಿದೆ. ಇತ್ತ ಕಡೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಂದರೂ, ಬರದಿದ್ದರೂ ಯಡಿಯೂರಪ್ಪ ಸಿಎಂ ಆಗುವ ಚಾನ್ಸೇ ಇಲ್ಲ. ಅವರಿಗೆ ಉಳಿದಿರುವುದು 20 ಶಾಸಕರ ಖರೀದಿಯ ಆಪ್ಸನ್ ಒಂದೇ. ಅದರಲ್ಲಿ 20 ಸಲ ಫೇಲಾಗಿರುವ ಅವರೀಗ ಮತ್ತೆ ಸಪ್ಲಿಮೆಂಟರಿಗೆ ತಯ್ಯಾರಿ ನಡೆಸಿಯೇ ಇದ್ದಾರೆ.

ಮೇ 23ರ ಫಲಿತಾಂಶ ರಾಜ್ಯ ಸರ್ಕಾರಕ್ಕೇನೂ ಆಪತ್ತು ತರಲಾರದು. ಇವರಿವರೇ ಕಿತ್ತಾಡಿಕೊಂಡು ಸರ್ಕಾರ ಬೀಳಬೇಕು ಅಥವಾ ಯಡಿಯೂರಪ್ಪ 21ನೇಯ ಸಪ್ಲಿಮೆಂಟರಿಯಲ್ಲಿ ಪಾಸ್ ಆಗಬೇಕು. ಸದ್ಯಕ್ಕೆ ಈ ಎರಡೂ ಆಗುವ ಸಾಧ್ಯತೆಗಳಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...