Homeಕರ್ನಾಟಕಮೇ 23 ಮತ್ತು ಹೊಸ ಸಿಎಂ : ವಾಕ್ಸಮರದಲ್ಲಿ ಮೈತ್ರಿಪಕ್ಷಗಳು, ಭ್ರಮೆಯಲ್ಲಿ ಬಿಎಸ್‍ವೈ

ಮೇ 23 ಮತ್ತು ಹೊಸ ಸಿಎಂ : ವಾಕ್ಸಮರದಲ್ಲಿ ಮೈತ್ರಿಪಕ್ಷಗಳು, ಭ್ರಮೆಯಲ್ಲಿ ಬಿಎಸ್‍ವೈ

ಮೇ 23ರ ಫಲಿತಾಂಶ ರಾಜ್ಯ ಸರ್ಕಾರಕ್ಕೇನೂ ಆಪತ್ತು ತರಲಾರದು. ಇವರಿವರೇ ಕಿತ್ತಾಡಿಕೊಂಡು ಸರ್ಕಾರ ಬೀಳಬೇಕು ಅಥವಾ ಯಡಿಯೂರಪ್ಪ 21ನೇಯ ಸಪ್ಲಿಮೆಂಟರಿಯಲ್ಲಿ ಪಾಸ್ ಆಗಬೇಕು. ಸದ್ಯಕ್ಕೆ ಈ ಎರಡೂ ಆಗುವ ಸಾಧ್ಯತೆಗಳಿಲ್ಲ.

- Advertisement -
- Advertisement -

ಮೇ 23ರಂದು ಲೋಕಸಭಾ ಫಲಿತಾಂಶದ ನಂತರ ನಮ್ಮದೇ ಸರ್ಕಾರ ಎಂದು ಯಡಿಯೂರಪ್ಪ ಹೇಳಿ ಸುಸ್ತಾಗುವ ಹೊತ್ತಿಗೆ, ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಧ್ವನಿ ತೇಲಿ ಬಂತು. ಅದಕ್ಕೆ ಕೌಂಟರ್ ಎಂಬಂತೆ ಜೆಡಿಎಸ್ ಅಧ್ಯಕ್ಷ ವಿಶ್ವನಾಥ್ ಹೇಳಿಕೆ ನೀಡತೊಡಗಿದರು… ಮೇ 23ರ ಫಲಿತಾಂಶಕ್ಕೂ ಹೊಸ ಸಿಎಂ ಅಥವಾ ಹೊಸ ಸರ್ಕಾರಕ್ಕೂ ಅದೆಂತಹ ಸಂಬಂಧ?

ದೇಶ ಮೇ 23ರ ಮಹಾ ಚುನಾವಣಾ ಫಲಿತಾಂಶ ಏನಾಗಬಹುದು ಎಂದು ಯೋಚಿಸುವ ಸಂದರ್ಭದಲ್ಲಿ ರಾಜ್ಯದ ಮೂರೂ ಪಕ್ಷಗಳ ಹಲವು ಪ್ರಮುಖರು ಹೊಸ ಸಿಎಂ ಎಂಬ ಕಲ್ಪನೆಯ ಆಟಕ್ಕೆ ಜೋತು ಬಿದ್ದು, ಹೊಸ ಹೊಸ ಸಾಧ್ಯತೆಗಳನ್ನು ತೇಲಿ ಬಿಡುತ್ತಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹೊಸ ಮುಖ್ಯಮಂತ್ರಿಯ ವಿಷಯ ವಾಕ್ಸಮರಕ್ಕೆ ಕಾರಣವಾಗಿ, ವಿಧಾನಸಭೆ ವಿಸರ್ಜನೆಯಾಗಲಿ ಬಿಡಿ ಎಂಬ ಹಂತದವರೆಗೂ ಹೋಗಿ ಬೇಸರ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ ಎರಡೂ ಪಕ್ಷಗಳ ‘ಹೈ ಕಮಾಂಡ್’ ವಿವಾದ, ಗೊದಲ ಸೃಷ್ಟಿಸಬೇಡಿ ಎಂದು ತಾಕೀತು ಮಾಡಿದ್ದಾರೆ.

ಇವತ್ತು ರವಿವಾರ ರಾಜ್ಯದ ನಾಯಕರನ್ನು ಕರೆಸಿಕೊಂಡು 23ರ ಫಲಿತಾಂಶದ ನಂತರದ ಮುಂದಿನ ನಡೆಯ ಬಗ್ಗೆ ಚರ್ಚಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸದ್ಯಕ್ಕೆ ಮೈತ್ರಿ ಸರ್ಕಾರಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೈತ್ರಿ ಸರ್ಕಾರಕ್ಕೂ 23ರ ಫಲಿತಾಂಶಕ್ಕೂ ಯಾವ ಸಂಬಂಧವೂ ಇಲ್ಲ ಎಂಬಂತೆ ಹೇಳಿಕೆ ನೀಡಿದ್ದಾರೆ.

ಇತ್ತ ದೇವೇಗೌಡರು ಕೂಡ ಬಹಿರಂಗ ಹೇಳಿಕೆ ನೀಡದಂತೆ ತಮ್ಮ ಪಕ್ಷದ ನಾಯಕರಿಗೆ ತಾಕೀತು ಮಾಡಿದ್ದಾರೆ. ಕೇಂದ್ರದಲ್ಲಿ ಈ ಸಲ ಪ್ರಾದೇಶಿಕ ಪಕ್ಷಗಳೇ ನಿರ್ಣಾಯಕ ಎಂದು ನಂಬಿರುವ ಅವರು, ರಾಜ್ಯ ರಾಜಕಾರಣದಲ್ಲಿ ಗೊಂದಲ ಏರ್ಪಡುವುದನ್ನು ಸಹಿಸಲಾರರು. ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ತಮ್ಮ ಪಕ್ಷದ ನಾಯಕರಿಗೆ ಬಾಹ್ಯವಾಗಿ ಮೈತ್ರಿ ಕುರಿತು, ಹೊಸ ಸಿಎಂ ಕುರಿತು ಮಾತನಾಡಿ ಗೊಂದಲ ಸೃಷ್ಟಿ ಮಾಡಬೇಡಿ, ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ತರುವ ಯತ್ನಕ್ಕೆ ಹಿನ್ನಡೆ ಮಾಡಬೇಡಿ ಎಂದಿದ್ದಾರೆ.

ಸದ್ಯಕ್ಕೆ ಅಂದರೆ ಇವತ್ತು ಮಧ್ಯಾಹ್ನದ ಹೊತ್ತಿಗೆ ಮೈತ್ರಿ ಪಕ್ಷಗಳ ನಾಯಕರು ವಾಕ್ಸಮರ ನಿಲ್ಲಿಸಿ ಮೌನಕ್ಕೆ ಶರಣಾಗಿದ್ದಾರೆ. ಆದರೆ, ಮೇ 23ರ ನಂತರ 20 ಶಾಸಕರು ತಮ್ಮ ಕಡೆ ಎಂದು ನಂಬಿರುವ ಯಡಿಯೂರಪ್ಪ ಮತ್ತು ಟೀಮ್ ಮಾತ್ರ ಸರ್ಕಾರ ತಮ್ಮದೇ ಎಂಬ ಗುಂಗಿನಲ್ಲಿದೆ..
ಉಪ ಚುನಾವಣೆಯಲ್ಲಿ ಸೃಷ್ಟಿ!

ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆಗಳ ಪ್ರಚಾರದ ಸಂದರ್ಭದಲ್ಲಿ ರಾಜ್ಯದ ಮೂರೂ ಪಕ್ಷಗಳ ನಾಯಕರು ಪ್ರಚಾರದಲ್ಲಿದ್ದಾಗ ಇದೆಲ್ಲ ರಗಳೆ ಆರಂಭವಾಗಿದೆ. ಒಂದು ಕಡೆ ಯಡಿಯೂರಪ್ಪ ಎರಡು ಸೀಟು ಗೆಲ್ಲಿಸಿ ಕೊಡಿ, ನಾನೇ ಸಿಎಂ ಎಂದು ಬಹಿರಂಗ ಪ್ರಚಾರ ಮಾಡಿದರು. ಇನ್ನೊಂದು ಕಡೆ ಸಿದ್ದರಾಮಯ್ಯ ಅಭಿಮಾನಿ ಶಾಸಕರು ಮೇ 23ರ ನಂತರ ಸಿದ್ದರಾಮಯ್ಯರೇ ಮುಖ್ಯಮಂತ್ರಿ ಎಂದು ಗುಲ್ಲು ಎಬ್ಬಿಸಿದರು. ಇದಕ್ಕೆ ಬಿಜೆಪಿಯ ಈಶ್ವರಪ್ಪ ಇನ್ನಷ್ಟು ಕಿಡಿ ಹಚ್ಚಿದರು. ಆಗ ಅಖಾಡಕ್ಕೆ ಇಳಿದ ರಾಜ್ಯ ಜೆಡಿಎಸ್ ಅಧ್ಯಕ್ಷ ವಿಶ್ವನಾಥರು, ತಮ್ಮ ಬೆಂಬಲಿಗರ ಮೂಲಕ ತಾವೇ ಮುಖ್ಯಮಂತ್ರಿ ಎಂದು ಹೇಳಿಸುವ ಮೂಲಕ ಸಿದ್ದರಾಮಯ್ಯ ಮೈತ್ರಿ ಧರ್ಮಕ್ಕೆ ಮೋಸ ಮಾಡುತ್ತಿದ್ದಾರೆ, ಅವರೇನು ಅತ್ಯುತ್ತಮ ಸಿಎಂ ಆಗಿದ್ದರೆ? ಹಾಗಿದ್ದರೆ 121ರಿಂದ 78ಕ್ಕೆ ಕಾಂಗ್ರೆಸ್ ಕುಸಿಯುತ್ತಿತ್ತೆ? ಎಂದು ಎರಡು ಮೂರು ಕಡೆ ಪ್ರತಿಪಾದಿಸಿದರು. ಆಗ ದೇವೇಗೌಡ ಮತ್ತು ಕುಮಾರಸ್ವಾಮಿ ಮೌನವಾಗಿಯೇ ಇದ್ದರು.

ಇದ್ದಕ್ಕಿದ್ದಂತೆ ಏನಾಯ್ತೋ ಮುಖ್ಯಮಂತ್ರಿ ಕುಮಾರಸ್ವಾಮಿ, ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು. ಅಂಥವರಿಗೆ ಕಾಂಗ್ರೆಸ್ ಅವಕಾಶ ಮಾಡಿಕೊಡಬೇಕಿತ್ತು ಎಂದು ಬಾಂಬ್ ಹಾಕಿದರು. ಸಿದ್ದರಾಮಯ್ಯ ಮುಖ್ಯಮಂತ್ರಿ ಎಂಬ ‘ಗುಪ್ತ’ ಆಂದೋಲನಕ್ಕೆ ಬ್ರೇಕ್ ಹಾಕಲು ಅವರು ಹೀಗೆ ಮಾಡಿದರು ಅನಿಸುತ್ತದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಎರಡರಲ್ಲೂ ಮುಖ್ಯಮಂತ್ರಿ ಆಗುವ ಅರ್ಹತೆಯುಳ್ಳ ಹಲವರಿದ್ದಾರೆ, ಜೆಡಿಎಸ್‍ನ ಎಚ್.ಡಿ. ರೇವಣ್ಣ ಕೂಡ ಅದರಲ್ಲಿ ಒಬ್ಬರು ಎಂದು ಸಿದ್ದರಾಮಯ್ಯ ಒಂದು ಟ್ವೀಟ್ ತೇಲಿಬಿಟ್ಟರು. ದಲಿತ ಮುಖ್ಯಮಂತ್ರಿ ವಿಷಯಕ್ಕೆ ಅಂತೂ ಅವರು ಸ್ಟಾಪ್ ಹಾಕಿದರು.
ಇದೆಲ್ಲದರಿಂದ ರೋಸಿದ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ, ಎರಡೂ ಪಕ್ಷಗಳಲ್ಲಿ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳು ಹೆಚ್ಚುತ್ತಿದ್ದಾರೆ. ಇದು ಮೈತ್ರಿ ಸರ್ಕಾರಕ್ಕೆ ಮಾರಕ. ಈ ಕಿತ್ತಾಟದ ಬದಲು ವಿಧಾನಸಭೆ ವಿಸರ್ಜನೆಯೇ ಸೂಕ್ತ ಎಂದು ಕಿಡಿಕಾರಿದರು.. ಶನಿವಾರ ಪೂರ್ತಿ ಇದೇ ಚರ್ಚೆಯಾಯಿತು.

ಇದನ್ನು ಓದಿ: ರಾಜ್ಯ ಸರ್ಕಾರದ ಭವಿಷ್ಯ ನಿಂತಿರುವುದು ಈ ನಾಲ್ಕು ಅಂಶಗಳ ಮೇಲೆ.

ಆದರೆ ಇವತ್ತಿನ ಮಟ್ಟಿಗೆ ಎರಡೂ ಪಕ್ಷಗಳ ಹೈಕಮಾಂಡ್ ಈ ವಾಕ್ಸಮರ ನಿಲ್ಲಿಸುವಲ್ಲಿ ಸಫಲವಾಗಿದೆ. ಇತ್ತ ಕಡೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಂದರೂ, ಬರದಿದ್ದರೂ ಯಡಿಯೂರಪ್ಪ ಸಿಎಂ ಆಗುವ ಚಾನ್ಸೇ ಇಲ್ಲ. ಅವರಿಗೆ ಉಳಿದಿರುವುದು 20 ಶಾಸಕರ ಖರೀದಿಯ ಆಪ್ಸನ್ ಒಂದೇ. ಅದರಲ್ಲಿ 20 ಸಲ ಫೇಲಾಗಿರುವ ಅವರೀಗ ಮತ್ತೆ ಸಪ್ಲಿಮೆಂಟರಿಗೆ ತಯ್ಯಾರಿ ನಡೆಸಿಯೇ ಇದ್ದಾರೆ.

ಮೇ 23ರ ಫಲಿತಾಂಶ ರಾಜ್ಯ ಸರ್ಕಾರಕ್ಕೇನೂ ಆಪತ್ತು ತರಲಾರದು. ಇವರಿವರೇ ಕಿತ್ತಾಡಿಕೊಂಡು ಸರ್ಕಾರ ಬೀಳಬೇಕು ಅಥವಾ ಯಡಿಯೂರಪ್ಪ 21ನೇಯ ಸಪ್ಲಿಮೆಂಟರಿಯಲ್ಲಿ ಪಾಸ್ ಆಗಬೇಕು. ಸದ್ಯಕ್ಕೆ ಈ ಎರಡೂ ಆಗುವ ಸಾಧ್ಯತೆಗಳಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...