Homeಕರ್ನಾಟಕಮೇ 23 ಮತ್ತು ಹೊಸ ಸಿಎಂ : ವಾಕ್ಸಮರದಲ್ಲಿ ಮೈತ್ರಿಪಕ್ಷಗಳು, ಭ್ರಮೆಯಲ್ಲಿ ಬಿಎಸ್‍ವೈ

ಮೇ 23 ಮತ್ತು ಹೊಸ ಸಿಎಂ : ವಾಕ್ಸಮರದಲ್ಲಿ ಮೈತ್ರಿಪಕ್ಷಗಳು, ಭ್ರಮೆಯಲ್ಲಿ ಬಿಎಸ್‍ವೈ

ಮೇ 23ರ ಫಲಿತಾಂಶ ರಾಜ್ಯ ಸರ್ಕಾರಕ್ಕೇನೂ ಆಪತ್ತು ತರಲಾರದು. ಇವರಿವರೇ ಕಿತ್ತಾಡಿಕೊಂಡು ಸರ್ಕಾರ ಬೀಳಬೇಕು ಅಥವಾ ಯಡಿಯೂರಪ್ಪ 21ನೇಯ ಸಪ್ಲಿಮೆಂಟರಿಯಲ್ಲಿ ಪಾಸ್ ಆಗಬೇಕು. ಸದ್ಯಕ್ಕೆ ಈ ಎರಡೂ ಆಗುವ ಸಾಧ್ಯತೆಗಳಿಲ್ಲ.

- Advertisement -
- Advertisement -

ಮೇ 23ರಂದು ಲೋಕಸಭಾ ಫಲಿತಾಂಶದ ನಂತರ ನಮ್ಮದೇ ಸರ್ಕಾರ ಎಂದು ಯಡಿಯೂರಪ್ಪ ಹೇಳಿ ಸುಸ್ತಾಗುವ ಹೊತ್ತಿಗೆ, ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಧ್ವನಿ ತೇಲಿ ಬಂತು. ಅದಕ್ಕೆ ಕೌಂಟರ್ ಎಂಬಂತೆ ಜೆಡಿಎಸ್ ಅಧ್ಯಕ್ಷ ವಿಶ್ವನಾಥ್ ಹೇಳಿಕೆ ನೀಡತೊಡಗಿದರು… ಮೇ 23ರ ಫಲಿತಾಂಶಕ್ಕೂ ಹೊಸ ಸಿಎಂ ಅಥವಾ ಹೊಸ ಸರ್ಕಾರಕ್ಕೂ ಅದೆಂತಹ ಸಂಬಂಧ?

ದೇಶ ಮೇ 23ರ ಮಹಾ ಚುನಾವಣಾ ಫಲಿತಾಂಶ ಏನಾಗಬಹುದು ಎಂದು ಯೋಚಿಸುವ ಸಂದರ್ಭದಲ್ಲಿ ರಾಜ್ಯದ ಮೂರೂ ಪಕ್ಷಗಳ ಹಲವು ಪ್ರಮುಖರು ಹೊಸ ಸಿಎಂ ಎಂಬ ಕಲ್ಪನೆಯ ಆಟಕ್ಕೆ ಜೋತು ಬಿದ್ದು, ಹೊಸ ಹೊಸ ಸಾಧ್ಯತೆಗಳನ್ನು ತೇಲಿ ಬಿಡುತ್ತಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹೊಸ ಮುಖ್ಯಮಂತ್ರಿಯ ವಿಷಯ ವಾಕ್ಸಮರಕ್ಕೆ ಕಾರಣವಾಗಿ, ವಿಧಾನಸಭೆ ವಿಸರ್ಜನೆಯಾಗಲಿ ಬಿಡಿ ಎಂಬ ಹಂತದವರೆಗೂ ಹೋಗಿ ಬೇಸರ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ ಎರಡೂ ಪಕ್ಷಗಳ ‘ಹೈ ಕಮಾಂಡ್’ ವಿವಾದ, ಗೊದಲ ಸೃಷ್ಟಿಸಬೇಡಿ ಎಂದು ತಾಕೀತು ಮಾಡಿದ್ದಾರೆ.

ಇವತ್ತು ರವಿವಾರ ರಾಜ್ಯದ ನಾಯಕರನ್ನು ಕರೆಸಿಕೊಂಡು 23ರ ಫಲಿತಾಂಶದ ನಂತರದ ಮುಂದಿನ ನಡೆಯ ಬಗ್ಗೆ ಚರ್ಚಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸದ್ಯಕ್ಕೆ ಮೈತ್ರಿ ಸರ್ಕಾರಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೈತ್ರಿ ಸರ್ಕಾರಕ್ಕೂ 23ರ ಫಲಿತಾಂಶಕ್ಕೂ ಯಾವ ಸಂಬಂಧವೂ ಇಲ್ಲ ಎಂಬಂತೆ ಹೇಳಿಕೆ ನೀಡಿದ್ದಾರೆ.

ಇತ್ತ ದೇವೇಗೌಡರು ಕೂಡ ಬಹಿರಂಗ ಹೇಳಿಕೆ ನೀಡದಂತೆ ತಮ್ಮ ಪಕ್ಷದ ನಾಯಕರಿಗೆ ತಾಕೀತು ಮಾಡಿದ್ದಾರೆ. ಕೇಂದ್ರದಲ್ಲಿ ಈ ಸಲ ಪ್ರಾದೇಶಿಕ ಪಕ್ಷಗಳೇ ನಿರ್ಣಾಯಕ ಎಂದು ನಂಬಿರುವ ಅವರು, ರಾಜ್ಯ ರಾಜಕಾರಣದಲ್ಲಿ ಗೊಂದಲ ಏರ್ಪಡುವುದನ್ನು ಸಹಿಸಲಾರರು. ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ತಮ್ಮ ಪಕ್ಷದ ನಾಯಕರಿಗೆ ಬಾಹ್ಯವಾಗಿ ಮೈತ್ರಿ ಕುರಿತು, ಹೊಸ ಸಿಎಂ ಕುರಿತು ಮಾತನಾಡಿ ಗೊಂದಲ ಸೃಷ್ಟಿ ಮಾಡಬೇಡಿ, ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ತರುವ ಯತ್ನಕ್ಕೆ ಹಿನ್ನಡೆ ಮಾಡಬೇಡಿ ಎಂದಿದ್ದಾರೆ.

ಸದ್ಯಕ್ಕೆ ಅಂದರೆ ಇವತ್ತು ಮಧ್ಯಾಹ್ನದ ಹೊತ್ತಿಗೆ ಮೈತ್ರಿ ಪಕ್ಷಗಳ ನಾಯಕರು ವಾಕ್ಸಮರ ನಿಲ್ಲಿಸಿ ಮೌನಕ್ಕೆ ಶರಣಾಗಿದ್ದಾರೆ. ಆದರೆ, ಮೇ 23ರ ನಂತರ 20 ಶಾಸಕರು ತಮ್ಮ ಕಡೆ ಎಂದು ನಂಬಿರುವ ಯಡಿಯೂರಪ್ಪ ಮತ್ತು ಟೀಮ್ ಮಾತ್ರ ಸರ್ಕಾರ ತಮ್ಮದೇ ಎಂಬ ಗುಂಗಿನಲ್ಲಿದೆ..
ಉಪ ಚುನಾವಣೆಯಲ್ಲಿ ಸೃಷ್ಟಿ!

ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆಗಳ ಪ್ರಚಾರದ ಸಂದರ್ಭದಲ್ಲಿ ರಾಜ್ಯದ ಮೂರೂ ಪಕ್ಷಗಳ ನಾಯಕರು ಪ್ರಚಾರದಲ್ಲಿದ್ದಾಗ ಇದೆಲ್ಲ ರಗಳೆ ಆರಂಭವಾಗಿದೆ. ಒಂದು ಕಡೆ ಯಡಿಯೂರಪ್ಪ ಎರಡು ಸೀಟು ಗೆಲ್ಲಿಸಿ ಕೊಡಿ, ನಾನೇ ಸಿಎಂ ಎಂದು ಬಹಿರಂಗ ಪ್ರಚಾರ ಮಾಡಿದರು. ಇನ್ನೊಂದು ಕಡೆ ಸಿದ್ದರಾಮಯ್ಯ ಅಭಿಮಾನಿ ಶಾಸಕರು ಮೇ 23ರ ನಂತರ ಸಿದ್ದರಾಮಯ್ಯರೇ ಮುಖ್ಯಮಂತ್ರಿ ಎಂದು ಗುಲ್ಲು ಎಬ್ಬಿಸಿದರು. ಇದಕ್ಕೆ ಬಿಜೆಪಿಯ ಈಶ್ವರಪ್ಪ ಇನ್ನಷ್ಟು ಕಿಡಿ ಹಚ್ಚಿದರು. ಆಗ ಅಖಾಡಕ್ಕೆ ಇಳಿದ ರಾಜ್ಯ ಜೆಡಿಎಸ್ ಅಧ್ಯಕ್ಷ ವಿಶ್ವನಾಥರು, ತಮ್ಮ ಬೆಂಬಲಿಗರ ಮೂಲಕ ತಾವೇ ಮುಖ್ಯಮಂತ್ರಿ ಎಂದು ಹೇಳಿಸುವ ಮೂಲಕ ಸಿದ್ದರಾಮಯ್ಯ ಮೈತ್ರಿ ಧರ್ಮಕ್ಕೆ ಮೋಸ ಮಾಡುತ್ತಿದ್ದಾರೆ, ಅವರೇನು ಅತ್ಯುತ್ತಮ ಸಿಎಂ ಆಗಿದ್ದರೆ? ಹಾಗಿದ್ದರೆ 121ರಿಂದ 78ಕ್ಕೆ ಕಾಂಗ್ರೆಸ್ ಕುಸಿಯುತ್ತಿತ್ತೆ? ಎಂದು ಎರಡು ಮೂರು ಕಡೆ ಪ್ರತಿಪಾದಿಸಿದರು. ಆಗ ದೇವೇಗೌಡ ಮತ್ತು ಕುಮಾರಸ್ವಾಮಿ ಮೌನವಾಗಿಯೇ ಇದ್ದರು.

ಇದ್ದಕ್ಕಿದ್ದಂತೆ ಏನಾಯ್ತೋ ಮುಖ್ಯಮಂತ್ರಿ ಕುಮಾರಸ್ವಾಮಿ, ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು. ಅಂಥವರಿಗೆ ಕಾಂಗ್ರೆಸ್ ಅವಕಾಶ ಮಾಡಿಕೊಡಬೇಕಿತ್ತು ಎಂದು ಬಾಂಬ್ ಹಾಕಿದರು. ಸಿದ್ದರಾಮಯ್ಯ ಮುಖ್ಯಮಂತ್ರಿ ಎಂಬ ‘ಗುಪ್ತ’ ಆಂದೋಲನಕ್ಕೆ ಬ್ರೇಕ್ ಹಾಕಲು ಅವರು ಹೀಗೆ ಮಾಡಿದರು ಅನಿಸುತ್ತದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಎರಡರಲ್ಲೂ ಮುಖ್ಯಮಂತ್ರಿ ಆಗುವ ಅರ್ಹತೆಯುಳ್ಳ ಹಲವರಿದ್ದಾರೆ, ಜೆಡಿಎಸ್‍ನ ಎಚ್.ಡಿ. ರೇವಣ್ಣ ಕೂಡ ಅದರಲ್ಲಿ ಒಬ್ಬರು ಎಂದು ಸಿದ್ದರಾಮಯ್ಯ ಒಂದು ಟ್ವೀಟ್ ತೇಲಿಬಿಟ್ಟರು. ದಲಿತ ಮುಖ್ಯಮಂತ್ರಿ ವಿಷಯಕ್ಕೆ ಅಂತೂ ಅವರು ಸ್ಟಾಪ್ ಹಾಕಿದರು.
ಇದೆಲ್ಲದರಿಂದ ರೋಸಿದ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ, ಎರಡೂ ಪಕ್ಷಗಳಲ್ಲಿ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳು ಹೆಚ್ಚುತ್ತಿದ್ದಾರೆ. ಇದು ಮೈತ್ರಿ ಸರ್ಕಾರಕ್ಕೆ ಮಾರಕ. ಈ ಕಿತ್ತಾಟದ ಬದಲು ವಿಧಾನಸಭೆ ವಿಸರ್ಜನೆಯೇ ಸೂಕ್ತ ಎಂದು ಕಿಡಿಕಾರಿದರು.. ಶನಿವಾರ ಪೂರ್ತಿ ಇದೇ ಚರ್ಚೆಯಾಯಿತು.

ಇದನ್ನು ಓದಿ: ರಾಜ್ಯ ಸರ್ಕಾರದ ಭವಿಷ್ಯ ನಿಂತಿರುವುದು ಈ ನಾಲ್ಕು ಅಂಶಗಳ ಮೇಲೆ.

ಆದರೆ ಇವತ್ತಿನ ಮಟ್ಟಿಗೆ ಎರಡೂ ಪಕ್ಷಗಳ ಹೈಕಮಾಂಡ್ ಈ ವಾಕ್ಸಮರ ನಿಲ್ಲಿಸುವಲ್ಲಿ ಸಫಲವಾಗಿದೆ. ಇತ್ತ ಕಡೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಂದರೂ, ಬರದಿದ್ದರೂ ಯಡಿಯೂರಪ್ಪ ಸಿಎಂ ಆಗುವ ಚಾನ್ಸೇ ಇಲ್ಲ. ಅವರಿಗೆ ಉಳಿದಿರುವುದು 20 ಶಾಸಕರ ಖರೀದಿಯ ಆಪ್ಸನ್ ಒಂದೇ. ಅದರಲ್ಲಿ 20 ಸಲ ಫೇಲಾಗಿರುವ ಅವರೀಗ ಮತ್ತೆ ಸಪ್ಲಿಮೆಂಟರಿಗೆ ತಯ್ಯಾರಿ ನಡೆಸಿಯೇ ಇದ್ದಾರೆ.

ಮೇ 23ರ ಫಲಿತಾಂಶ ರಾಜ್ಯ ಸರ್ಕಾರಕ್ಕೇನೂ ಆಪತ್ತು ತರಲಾರದು. ಇವರಿವರೇ ಕಿತ್ತಾಡಿಕೊಂಡು ಸರ್ಕಾರ ಬೀಳಬೇಕು ಅಥವಾ ಯಡಿಯೂರಪ್ಪ 21ನೇಯ ಸಪ್ಲಿಮೆಂಟರಿಯಲ್ಲಿ ಪಾಸ್ ಆಗಬೇಕು. ಸದ್ಯಕ್ಕೆ ಈ ಎರಡೂ ಆಗುವ ಸಾಧ್ಯತೆಗಳಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...