Homeಕರ್ನಾಟಕಮೇ 23 ಮತ್ತು ಹೊಸ ಸಿಎಂ : ವಾಕ್ಸಮರದಲ್ಲಿ ಮೈತ್ರಿಪಕ್ಷಗಳು, ಭ್ರಮೆಯಲ್ಲಿ ಬಿಎಸ್‍ವೈ

ಮೇ 23 ಮತ್ತು ಹೊಸ ಸಿಎಂ : ವಾಕ್ಸಮರದಲ್ಲಿ ಮೈತ್ರಿಪಕ್ಷಗಳು, ಭ್ರಮೆಯಲ್ಲಿ ಬಿಎಸ್‍ವೈ

ಮೇ 23ರ ಫಲಿತಾಂಶ ರಾಜ್ಯ ಸರ್ಕಾರಕ್ಕೇನೂ ಆಪತ್ತು ತರಲಾರದು. ಇವರಿವರೇ ಕಿತ್ತಾಡಿಕೊಂಡು ಸರ್ಕಾರ ಬೀಳಬೇಕು ಅಥವಾ ಯಡಿಯೂರಪ್ಪ 21ನೇಯ ಸಪ್ಲಿಮೆಂಟರಿಯಲ್ಲಿ ಪಾಸ್ ಆಗಬೇಕು. ಸದ್ಯಕ್ಕೆ ಈ ಎರಡೂ ಆಗುವ ಸಾಧ್ಯತೆಗಳಿಲ್ಲ.

- Advertisement -
- Advertisement -

ಮೇ 23ರಂದು ಲೋಕಸಭಾ ಫಲಿತಾಂಶದ ನಂತರ ನಮ್ಮದೇ ಸರ್ಕಾರ ಎಂದು ಯಡಿಯೂರಪ್ಪ ಹೇಳಿ ಸುಸ್ತಾಗುವ ಹೊತ್ತಿಗೆ, ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಧ್ವನಿ ತೇಲಿ ಬಂತು. ಅದಕ್ಕೆ ಕೌಂಟರ್ ಎಂಬಂತೆ ಜೆಡಿಎಸ್ ಅಧ್ಯಕ್ಷ ವಿಶ್ವನಾಥ್ ಹೇಳಿಕೆ ನೀಡತೊಡಗಿದರು… ಮೇ 23ರ ಫಲಿತಾಂಶಕ್ಕೂ ಹೊಸ ಸಿಎಂ ಅಥವಾ ಹೊಸ ಸರ್ಕಾರಕ್ಕೂ ಅದೆಂತಹ ಸಂಬಂಧ?

ದೇಶ ಮೇ 23ರ ಮಹಾ ಚುನಾವಣಾ ಫಲಿತಾಂಶ ಏನಾಗಬಹುದು ಎಂದು ಯೋಚಿಸುವ ಸಂದರ್ಭದಲ್ಲಿ ರಾಜ್ಯದ ಮೂರೂ ಪಕ್ಷಗಳ ಹಲವು ಪ್ರಮುಖರು ಹೊಸ ಸಿಎಂ ಎಂಬ ಕಲ್ಪನೆಯ ಆಟಕ್ಕೆ ಜೋತು ಬಿದ್ದು, ಹೊಸ ಹೊಸ ಸಾಧ್ಯತೆಗಳನ್ನು ತೇಲಿ ಬಿಡುತ್ತಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹೊಸ ಮುಖ್ಯಮಂತ್ರಿಯ ವಿಷಯ ವಾಕ್ಸಮರಕ್ಕೆ ಕಾರಣವಾಗಿ, ವಿಧಾನಸಭೆ ವಿಸರ್ಜನೆಯಾಗಲಿ ಬಿಡಿ ಎಂಬ ಹಂತದವರೆಗೂ ಹೋಗಿ ಬೇಸರ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ ಎರಡೂ ಪಕ್ಷಗಳ ‘ಹೈ ಕಮಾಂಡ್’ ವಿವಾದ, ಗೊದಲ ಸೃಷ್ಟಿಸಬೇಡಿ ಎಂದು ತಾಕೀತು ಮಾಡಿದ್ದಾರೆ.

ಇವತ್ತು ರವಿವಾರ ರಾಜ್ಯದ ನಾಯಕರನ್ನು ಕರೆಸಿಕೊಂಡು 23ರ ಫಲಿತಾಂಶದ ನಂತರದ ಮುಂದಿನ ನಡೆಯ ಬಗ್ಗೆ ಚರ್ಚಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸದ್ಯಕ್ಕೆ ಮೈತ್ರಿ ಸರ್ಕಾರಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೈತ್ರಿ ಸರ್ಕಾರಕ್ಕೂ 23ರ ಫಲಿತಾಂಶಕ್ಕೂ ಯಾವ ಸಂಬಂಧವೂ ಇಲ್ಲ ಎಂಬಂತೆ ಹೇಳಿಕೆ ನೀಡಿದ್ದಾರೆ.

ಇತ್ತ ದೇವೇಗೌಡರು ಕೂಡ ಬಹಿರಂಗ ಹೇಳಿಕೆ ನೀಡದಂತೆ ತಮ್ಮ ಪಕ್ಷದ ನಾಯಕರಿಗೆ ತಾಕೀತು ಮಾಡಿದ್ದಾರೆ. ಕೇಂದ್ರದಲ್ಲಿ ಈ ಸಲ ಪ್ರಾದೇಶಿಕ ಪಕ್ಷಗಳೇ ನಿರ್ಣಾಯಕ ಎಂದು ನಂಬಿರುವ ಅವರು, ರಾಜ್ಯ ರಾಜಕಾರಣದಲ್ಲಿ ಗೊಂದಲ ಏರ್ಪಡುವುದನ್ನು ಸಹಿಸಲಾರರು. ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ತಮ್ಮ ಪಕ್ಷದ ನಾಯಕರಿಗೆ ಬಾಹ್ಯವಾಗಿ ಮೈತ್ರಿ ಕುರಿತು, ಹೊಸ ಸಿಎಂ ಕುರಿತು ಮಾತನಾಡಿ ಗೊಂದಲ ಸೃಷ್ಟಿ ಮಾಡಬೇಡಿ, ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ತರುವ ಯತ್ನಕ್ಕೆ ಹಿನ್ನಡೆ ಮಾಡಬೇಡಿ ಎಂದಿದ್ದಾರೆ.

ಸದ್ಯಕ್ಕೆ ಅಂದರೆ ಇವತ್ತು ಮಧ್ಯಾಹ್ನದ ಹೊತ್ತಿಗೆ ಮೈತ್ರಿ ಪಕ್ಷಗಳ ನಾಯಕರು ವಾಕ್ಸಮರ ನಿಲ್ಲಿಸಿ ಮೌನಕ್ಕೆ ಶರಣಾಗಿದ್ದಾರೆ. ಆದರೆ, ಮೇ 23ರ ನಂತರ 20 ಶಾಸಕರು ತಮ್ಮ ಕಡೆ ಎಂದು ನಂಬಿರುವ ಯಡಿಯೂರಪ್ಪ ಮತ್ತು ಟೀಮ್ ಮಾತ್ರ ಸರ್ಕಾರ ತಮ್ಮದೇ ಎಂಬ ಗುಂಗಿನಲ್ಲಿದೆ..
ಉಪ ಚುನಾವಣೆಯಲ್ಲಿ ಸೃಷ್ಟಿ!

ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆಗಳ ಪ್ರಚಾರದ ಸಂದರ್ಭದಲ್ಲಿ ರಾಜ್ಯದ ಮೂರೂ ಪಕ್ಷಗಳ ನಾಯಕರು ಪ್ರಚಾರದಲ್ಲಿದ್ದಾಗ ಇದೆಲ್ಲ ರಗಳೆ ಆರಂಭವಾಗಿದೆ. ಒಂದು ಕಡೆ ಯಡಿಯೂರಪ್ಪ ಎರಡು ಸೀಟು ಗೆಲ್ಲಿಸಿ ಕೊಡಿ, ನಾನೇ ಸಿಎಂ ಎಂದು ಬಹಿರಂಗ ಪ್ರಚಾರ ಮಾಡಿದರು. ಇನ್ನೊಂದು ಕಡೆ ಸಿದ್ದರಾಮಯ್ಯ ಅಭಿಮಾನಿ ಶಾಸಕರು ಮೇ 23ರ ನಂತರ ಸಿದ್ದರಾಮಯ್ಯರೇ ಮುಖ್ಯಮಂತ್ರಿ ಎಂದು ಗುಲ್ಲು ಎಬ್ಬಿಸಿದರು. ಇದಕ್ಕೆ ಬಿಜೆಪಿಯ ಈಶ್ವರಪ್ಪ ಇನ್ನಷ್ಟು ಕಿಡಿ ಹಚ್ಚಿದರು. ಆಗ ಅಖಾಡಕ್ಕೆ ಇಳಿದ ರಾಜ್ಯ ಜೆಡಿಎಸ್ ಅಧ್ಯಕ್ಷ ವಿಶ್ವನಾಥರು, ತಮ್ಮ ಬೆಂಬಲಿಗರ ಮೂಲಕ ತಾವೇ ಮುಖ್ಯಮಂತ್ರಿ ಎಂದು ಹೇಳಿಸುವ ಮೂಲಕ ಸಿದ್ದರಾಮಯ್ಯ ಮೈತ್ರಿ ಧರ್ಮಕ್ಕೆ ಮೋಸ ಮಾಡುತ್ತಿದ್ದಾರೆ, ಅವರೇನು ಅತ್ಯುತ್ತಮ ಸಿಎಂ ಆಗಿದ್ದರೆ? ಹಾಗಿದ್ದರೆ 121ರಿಂದ 78ಕ್ಕೆ ಕಾಂಗ್ರೆಸ್ ಕುಸಿಯುತ್ತಿತ್ತೆ? ಎಂದು ಎರಡು ಮೂರು ಕಡೆ ಪ್ರತಿಪಾದಿಸಿದರು. ಆಗ ದೇವೇಗೌಡ ಮತ್ತು ಕುಮಾರಸ್ವಾಮಿ ಮೌನವಾಗಿಯೇ ಇದ್ದರು.

ಇದ್ದಕ್ಕಿದ್ದಂತೆ ಏನಾಯ್ತೋ ಮುಖ್ಯಮಂತ್ರಿ ಕುಮಾರಸ್ವಾಮಿ, ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು. ಅಂಥವರಿಗೆ ಕಾಂಗ್ರೆಸ್ ಅವಕಾಶ ಮಾಡಿಕೊಡಬೇಕಿತ್ತು ಎಂದು ಬಾಂಬ್ ಹಾಕಿದರು. ಸಿದ್ದರಾಮಯ್ಯ ಮುಖ್ಯಮಂತ್ರಿ ಎಂಬ ‘ಗುಪ್ತ’ ಆಂದೋಲನಕ್ಕೆ ಬ್ರೇಕ್ ಹಾಕಲು ಅವರು ಹೀಗೆ ಮಾಡಿದರು ಅನಿಸುತ್ತದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಎರಡರಲ್ಲೂ ಮುಖ್ಯಮಂತ್ರಿ ಆಗುವ ಅರ್ಹತೆಯುಳ್ಳ ಹಲವರಿದ್ದಾರೆ, ಜೆಡಿಎಸ್‍ನ ಎಚ್.ಡಿ. ರೇವಣ್ಣ ಕೂಡ ಅದರಲ್ಲಿ ಒಬ್ಬರು ಎಂದು ಸಿದ್ದರಾಮಯ್ಯ ಒಂದು ಟ್ವೀಟ್ ತೇಲಿಬಿಟ್ಟರು. ದಲಿತ ಮುಖ್ಯಮಂತ್ರಿ ವಿಷಯಕ್ಕೆ ಅಂತೂ ಅವರು ಸ್ಟಾಪ್ ಹಾಕಿದರು.
ಇದೆಲ್ಲದರಿಂದ ರೋಸಿದ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ, ಎರಡೂ ಪಕ್ಷಗಳಲ್ಲಿ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳು ಹೆಚ್ಚುತ್ತಿದ್ದಾರೆ. ಇದು ಮೈತ್ರಿ ಸರ್ಕಾರಕ್ಕೆ ಮಾರಕ. ಈ ಕಿತ್ತಾಟದ ಬದಲು ವಿಧಾನಸಭೆ ವಿಸರ್ಜನೆಯೇ ಸೂಕ್ತ ಎಂದು ಕಿಡಿಕಾರಿದರು.. ಶನಿವಾರ ಪೂರ್ತಿ ಇದೇ ಚರ್ಚೆಯಾಯಿತು.

ಇದನ್ನು ಓದಿ: ರಾಜ್ಯ ಸರ್ಕಾರದ ಭವಿಷ್ಯ ನಿಂತಿರುವುದು ಈ ನಾಲ್ಕು ಅಂಶಗಳ ಮೇಲೆ.

ಆದರೆ ಇವತ್ತಿನ ಮಟ್ಟಿಗೆ ಎರಡೂ ಪಕ್ಷಗಳ ಹೈಕಮಾಂಡ್ ಈ ವಾಕ್ಸಮರ ನಿಲ್ಲಿಸುವಲ್ಲಿ ಸಫಲವಾಗಿದೆ. ಇತ್ತ ಕಡೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಂದರೂ, ಬರದಿದ್ದರೂ ಯಡಿಯೂರಪ್ಪ ಸಿಎಂ ಆಗುವ ಚಾನ್ಸೇ ಇಲ್ಲ. ಅವರಿಗೆ ಉಳಿದಿರುವುದು 20 ಶಾಸಕರ ಖರೀದಿಯ ಆಪ್ಸನ್ ಒಂದೇ. ಅದರಲ್ಲಿ 20 ಸಲ ಫೇಲಾಗಿರುವ ಅವರೀಗ ಮತ್ತೆ ಸಪ್ಲಿಮೆಂಟರಿಗೆ ತಯ್ಯಾರಿ ನಡೆಸಿಯೇ ಇದ್ದಾರೆ.

ಮೇ 23ರ ಫಲಿತಾಂಶ ರಾಜ್ಯ ಸರ್ಕಾರಕ್ಕೇನೂ ಆಪತ್ತು ತರಲಾರದು. ಇವರಿವರೇ ಕಿತ್ತಾಡಿಕೊಂಡು ಸರ್ಕಾರ ಬೀಳಬೇಕು ಅಥವಾ ಯಡಿಯೂರಪ್ಪ 21ನೇಯ ಸಪ್ಲಿಮೆಂಟರಿಯಲ್ಲಿ ಪಾಸ್ ಆಗಬೇಕು. ಸದ್ಯಕ್ಕೆ ಈ ಎರಡೂ ಆಗುವ ಸಾಧ್ಯತೆಗಳಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...