Homeಕರ್ನಾಟಕಮೇ 23 ಮತ್ತು ಹೊಸ ಸಿಎಂ : ವಾಕ್ಸಮರದಲ್ಲಿ ಮೈತ್ರಿಪಕ್ಷಗಳು, ಭ್ರಮೆಯಲ್ಲಿ ಬಿಎಸ್‍ವೈ

ಮೇ 23 ಮತ್ತು ಹೊಸ ಸಿಎಂ : ವಾಕ್ಸಮರದಲ್ಲಿ ಮೈತ್ರಿಪಕ್ಷಗಳು, ಭ್ರಮೆಯಲ್ಲಿ ಬಿಎಸ್‍ವೈ

ಮೇ 23ರ ಫಲಿತಾಂಶ ರಾಜ್ಯ ಸರ್ಕಾರಕ್ಕೇನೂ ಆಪತ್ತು ತರಲಾರದು. ಇವರಿವರೇ ಕಿತ್ತಾಡಿಕೊಂಡು ಸರ್ಕಾರ ಬೀಳಬೇಕು ಅಥವಾ ಯಡಿಯೂರಪ್ಪ 21ನೇಯ ಸಪ್ಲಿಮೆಂಟರಿಯಲ್ಲಿ ಪಾಸ್ ಆಗಬೇಕು. ಸದ್ಯಕ್ಕೆ ಈ ಎರಡೂ ಆಗುವ ಸಾಧ್ಯತೆಗಳಿಲ್ಲ.

- Advertisement -
- Advertisement -

ಮೇ 23ರಂದು ಲೋಕಸಭಾ ಫಲಿತಾಂಶದ ನಂತರ ನಮ್ಮದೇ ಸರ್ಕಾರ ಎಂದು ಯಡಿಯೂರಪ್ಪ ಹೇಳಿ ಸುಸ್ತಾಗುವ ಹೊತ್ತಿಗೆ, ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಧ್ವನಿ ತೇಲಿ ಬಂತು. ಅದಕ್ಕೆ ಕೌಂಟರ್ ಎಂಬಂತೆ ಜೆಡಿಎಸ್ ಅಧ್ಯಕ್ಷ ವಿಶ್ವನಾಥ್ ಹೇಳಿಕೆ ನೀಡತೊಡಗಿದರು… ಮೇ 23ರ ಫಲಿತಾಂಶಕ್ಕೂ ಹೊಸ ಸಿಎಂ ಅಥವಾ ಹೊಸ ಸರ್ಕಾರಕ್ಕೂ ಅದೆಂತಹ ಸಂಬಂಧ?

ದೇಶ ಮೇ 23ರ ಮಹಾ ಚುನಾವಣಾ ಫಲಿತಾಂಶ ಏನಾಗಬಹುದು ಎಂದು ಯೋಚಿಸುವ ಸಂದರ್ಭದಲ್ಲಿ ರಾಜ್ಯದ ಮೂರೂ ಪಕ್ಷಗಳ ಹಲವು ಪ್ರಮುಖರು ಹೊಸ ಸಿಎಂ ಎಂಬ ಕಲ್ಪನೆಯ ಆಟಕ್ಕೆ ಜೋತು ಬಿದ್ದು, ಹೊಸ ಹೊಸ ಸಾಧ್ಯತೆಗಳನ್ನು ತೇಲಿ ಬಿಡುತ್ತಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹೊಸ ಮುಖ್ಯಮಂತ್ರಿಯ ವಿಷಯ ವಾಕ್ಸಮರಕ್ಕೆ ಕಾರಣವಾಗಿ, ವಿಧಾನಸಭೆ ವಿಸರ್ಜನೆಯಾಗಲಿ ಬಿಡಿ ಎಂಬ ಹಂತದವರೆಗೂ ಹೋಗಿ ಬೇಸರ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ ಎರಡೂ ಪಕ್ಷಗಳ ‘ಹೈ ಕಮಾಂಡ್’ ವಿವಾದ, ಗೊದಲ ಸೃಷ್ಟಿಸಬೇಡಿ ಎಂದು ತಾಕೀತು ಮಾಡಿದ್ದಾರೆ.

ಇವತ್ತು ರವಿವಾರ ರಾಜ್ಯದ ನಾಯಕರನ್ನು ಕರೆಸಿಕೊಂಡು 23ರ ಫಲಿತಾಂಶದ ನಂತರದ ಮುಂದಿನ ನಡೆಯ ಬಗ್ಗೆ ಚರ್ಚಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸದ್ಯಕ್ಕೆ ಮೈತ್ರಿ ಸರ್ಕಾರಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೈತ್ರಿ ಸರ್ಕಾರಕ್ಕೂ 23ರ ಫಲಿತಾಂಶಕ್ಕೂ ಯಾವ ಸಂಬಂಧವೂ ಇಲ್ಲ ಎಂಬಂತೆ ಹೇಳಿಕೆ ನೀಡಿದ್ದಾರೆ.

ಇತ್ತ ದೇವೇಗೌಡರು ಕೂಡ ಬಹಿರಂಗ ಹೇಳಿಕೆ ನೀಡದಂತೆ ತಮ್ಮ ಪಕ್ಷದ ನಾಯಕರಿಗೆ ತಾಕೀತು ಮಾಡಿದ್ದಾರೆ. ಕೇಂದ್ರದಲ್ಲಿ ಈ ಸಲ ಪ್ರಾದೇಶಿಕ ಪಕ್ಷಗಳೇ ನಿರ್ಣಾಯಕ ಎಂದು ನಂಬಿರುವ ಅವರು, ರಾಜ್ಯ ರಾಜಕಾರಣದಲ್ಲಿ ಗೊಂದಲ ಏರ್ಪಡುವುದನ್ನು ಸಹಿಸಲಾರರು. ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ತಮ್ಮ ಪಕ್ಷದ ನಾಯಕರಿಗೆ ಬಾಹ್ಯವಾಗಿ ಮೈತ್ರಿ ಕುರಿತು, ಹೊಸ ಸಿಎಂ ಕುರಿತು ಮಾತನಾಡಿ ಗೊಂದಲ ಸೃಷ್ಟಿ ಮಾಡಬೇಡಿ, ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ತರುವ ಯತ್ನಕ್ಕೆ ಹಿನ್ನಡೆ ಮಾಡಬೇಡಿ ಎಂದಿದ್ದಾರೆ.

ಸದ್ಯಕ್ಕೆ ಅಂದರೆ ಇವತ್ತು ಮಧ್ಯಾಹ್ನದ ಹೊತ್ತಿಗೆ ಮೈತ್ರಿ ಪಕ್ಷಗಳ ನಾಯಕರು ವಾಕ್ಸಮರ ನಿಲ್ಲಿಸಿ ಮೌನಕ್ಕೆ ಶರಣಾಗಿದ್ದಾರೆ. ಆದರೆ, ಮೇ 23ರ ನಂತರ 20 ಶಾಸಕರು ತಮ್ಮ ಕಡೆ ಎಂದು ನಂಬಿರುವ ಯಡಿಯೂರಪ್ಪ ಮತ್ತು ಟೀಮ್ ಮಾತ್ರ ಸರ್ಕಾರ ತಮ್ಮದೇ ಎಂಬ ಗುಂಗಿನಲ್ಲಿದೆ..
ಉಪ ಚುನಾವಣೆಯಲ್ಲಿ ಸೃಷ್ಟಿ!

ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆಗಳ ಪ್ರಚಾರದ ಸಂದರ್ಭದಲ್ಲಿ ರಾಜ್ಯದ ಮೂರೂ ಪಕ್ಷಗಳ ನಾಯಕರು ಪ್ರಚಾರದಲ್ಲಿದ್ದಾಗ ಇದೆಲ್ಲ ರಗಳೆ ಆರಂಭವಾಗಿದೆ. ಒಂದು ಕಡೆ ಯಡಿಯೂರಪ್ಪ ಎರಡು ಸೀಟು ಗೆಲ್ಲಿಸಿ ಕೊಡಿ, ನಾನೇ ಸಿಎಂ ಎಂದು ಬಹಿರಂಗ ಪ್ರಚಾರ ಮಾಡಿದರು. ಇನ್ನೊಂದು ಕಡೆ ಸಿದ್ದರಾಮಯ್ಯ ಅಭಿಮಾನಿ ಶಾಸಕರು ಮೇ 23ರ ನಂತರ ಸಿದ್ದರಾಮಯ್ಯರೇ ಮುಖ್ಯಮಂತ್ರಿ ಎಂದು ಗುಲ್ಲು ಎಬ್ಬಿಸಿದರು. ಇದಕ್ಕೆ ಬಿಜೆಪಿಯ ಈಶ್ವರಪ್ಪ ಇನ್ನಷ್ಟು ಕಿಡಿ ಹಚ್ಚಿದರು. ಆಗ ಅಖಾಡಕ್ಕೆ ಇಳಿದ ರಾಜ್ಯ ಜೆಡಿಎಸ್ ಅಧ್ಯಕ್ಷ ವಿಶ್ವನಾಥರು, ತಮ್ಮ ಬೆಂಬಲಿಗರ ಮೂಲಕ ತಾವೇ ಮುಖ್ಯಮಂತ್ರಿ ಎಂದು ಹೇಳಿಸುವ ಮೂಲಕ ಸಿದ್ದರಾಮಯ್ಯ ಮೈತ್ರಿ ಧರ್ಮಕ್ಕೆ ಮೋಸ ಮಾಡುತ್ತಿದ್ದಾರೆ, ಅವರೇನು ಅತ್ಯುತ್ತಮ ಸಿಎಂ ಆಗಿದ್ದರೆ? ಹಾಗಿದ್ದರೆ 121ರಿಂದ 78ಕ್ಕೆ ಕಾಂಗ್ರೆಸ್ ಕುಸಿಯುತ್ತಿತ್ತೆ? ಎಂದು ಎರಡು ಮೂರು ಕಡೆ ಪ್ರತಿಪಾದಿಸಿದರು. ಆಗ ದೇವೇಗೌಡ ಮತ್ತು ಕುಮಾರಸ್ವಾಮಿ ಮೌನವಾಗಿಯೇ ಇದ್ದರು.

ಇದ್ದಕ್ಕಿದ್ದಂತೆ ಏನಾಯ್ತೋ ಮುಖ್ಯಮಂತ್ರಿ ಕುಮಾರಸ್ವಾಮಿ, ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು. ಅಂಥವರಿಗೆ ಕಾಂಗ್ರೆಸ್ ಅವಕಾಶ ಮಾಡಿಕೊಡಬೇಕಿತ್ತು ಎಂದು ಬಾಂಬ್ ಹಾಕಿದರು. ಸಿದ್ದರಾಮಯ್ಯ ಮುಖ್ಯಮಂತ್ರಿ ಎಂಬ ‘ಗುಪ್ತ’ ಆಂದೋಲನಕ್ಕೆ ಬ್ರೇಕ್ ಹಾಕಲು ಅವರು ಹೀಗೆ ಮಾಡಿದರು ಅನಿಸುತ್ತದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಎರಡರಲ್ಲೂ ಮುಖ್ಯಮಂತ್ರಿ ಆಗುವ ಅರ್ಹತೆಯುಳ್ಳ ಹಲವರಿದ್ದಾರೆ, ಜೆಡಿಎಸ್‍ನ ಎಚ್.ಡಿ. ರೇವಣ್ಣ ಕೂಡ ಅದರಲ್ಲಿ ಒಬ್ಬರು ಎಂದು ಸಿದ್ದರಾಮಯ್ಯ ಒಂದು ಟ್ವೀಟ್ ತೇಲಿಬಿಟ್ಟರು. ದಲಿತ ಮುಖ್ಯಮಂತ್ರಿ ವಿಷಯಕ್ಕೆ ಅಂತೂ ಅವರು ಸ್ಟಾಪ್ ಹಾಕಿದರು.
ಇದೆಲ್ಲದರಿಂದ ರೋಸಿದ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ, ಎರಡೂ ಪಕ್ಷಗಳಲ್ಲಿ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳು ಹೆಚ್ಚುತ್ತಿದ್ದಾರೆ. ಇದು ಮೈತ್ರಿ ಸರ್ಕಾರಕ್ಕೆ ಮಾರಕ. ಈ ಕಿತ್ತಾಟದ ಬದಲು ವಿಧಾನಸಭೆ ವಿಸರ್ಜನೆಯೇ ಸೂಕ್ತ ಎಂದು ಕಿಡಿಕಾರಿದರು.. ಶನಿವಾರ ಪೂರ್ತಿ ಇದೇ ಚರ್ಚೆಯಾಯಿತು.

ಇದನ್ನು ಓದಿ: ರಾಜ್ಯ ಸರ್ಕಾರದ ಭವಿಷ್ಯ ನಿಂತಿರುವುದು ಈ ನಾಲ್ಕು ಅಂಶಗಳ ಮೇಲೆ.

ಆದರೆ ಇವತ್ತಿನ ಮಟ್ಟಿಗೆ ಎರಡೂ ಪಕ್ಷಗಳ ಹೈಕಮಾಂಡ್ ಈ ವಾಕ್ಸಮರ ನಿಲ್ಲಿಸುವಲ್ಲಿ ಸಫಲವಾಗಿದೆ. ಇತ್ತ ಕಡೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಂದರೂ, ಬರದಿದ್ದರೂ ಯಡಿಯೂರಪ್ಪ ಸಿಎಂ ಆಗುವ ಚಾನ್ಸೇ ಇಲ್ಲ. ಅವರಿಗೆ ಉಳಿದಿರುವುದು 20 ಶಾಸಕರ ಖರೀದಿಯ ಆಪ್ಸನ್ ಒಂದೇ. ಅದರಲ್ಲಿ 20 ಸಲ ಫೇಲಾಗಿರುವ ಅವರೀಗ ಮತ್ತೆ ಸಪ್ಲಿಮೆಂಟರಿಗೆ ತಯ್ಯಾರಿ ನಡೆಸಿಯೇ ಇದ್ದಾರೆ.

ಮೇ 23ರ ಫಲಿತಾಂಶ ರಾಜ್ಯ ಸರ್ಕಾರಕ್ಕೇನೂ ಆಪತ್ತು ತರಲಾರದು. ಇವರಿವರೇ ಕಿತ್ತಾಡಿಕೊಂಡು ಸರ್ಕಾರ ಬೀಳಬೇಕು ಅಥವಾ ಯಡಿಯೂರಪ್ಪ 21ನೇಯ ಸಪ್ಲಿಮೆಂಟರಿಯಲ್ಲಿ ಪಾಸ್ ಆಗಬೇಕು. ಸದ್ಯಕ್ಕೆ ಈ ಎರಡೂ ಆಗುವ ಸಾಧ್ಯತೆಗಳಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...