Homeಕರ್ನಾಟಕಮೇ 23 ಮತ್ತು ಹೊಸ ಸಿಎಂ : ವಾಕ್ಸಮರದಲ್ಲಿ ಮೈತ್ರಿಪಕ್ಷಗಳು, ಭ್ರಮೆಯಲ್ಲಿ ಬಿಎಸ್‍ವೈ

ಮೇ 23 ಮತ್ತು ಹೊಸ ಸಿಎಂ : ವಾಕ್ಸಮರದಲ್ಲಿ ಮೈತ್ರಿಪಕ್ಷಗಳು, ಭ್ರಮೆಯಲ್ಲಿ ಬಿಎಸ್‍ವೈ

ಮೇ 23ರ ಫಲಿತಾಂಶ ರಾಜ್ಯ ಸರ್ಕಾರಕ್ಕೇನೂ ಆಪತ್ತು ತರಲಾರದು. ಇವರಿವರೇ ಕಿತ್ತಾಡಿಕೊಂಡು ಸರ್ಕಾರ ಬೀಳಬೇಕು ಅಥವಾ ಯಡಿಯೂರಪ್ಪ 21ನೇಯ ಸಪ್ಲಿಮೆಂಟರಿಯಲ್ಲಿ ಪಾಸ್ ಆಗಬೇಕು. ಸದ್ಯಕ್ಕೆ ಈ ಎರಡೂ ಆಗುವ ಸಾಧ್ಯತೆಗಳಿಲ್ಲ.

- Advertisement -
- Advertisement -

ಮೇ 23ರಂದು ಲೋಕಸಭಾ ಫಲಿತಾಂಶದ ನಂತರ ನಮ್ಮದೇ ಸರ್ಕಾರ ಎಂದು ಯಡಿಯೂರಪ್ಪ ಹೇಳಿ ಸುಸ್ತಾಗುವ ಹೊತ್ತಿಗೆ, ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಧ್ವನಿ ತೇಲಿ ಬಂತು. ಅದಕ್ಕೆ ಕೌಂಟರ್ ಎಂಬಂತೆ ಜೆಡಿಎಸ್ ಅಧ್ಯಕ್ಷ ವಿಶ್ವನಾಥ್ ಹೇಳಿಕೆ ನೀಡತೊಡಗಿದರು… ಮೇ 23ರ ಫಲಿತಾಂಶಕ್ಕೂ ಹೊಸ ಸಿಎಂ ಅಥವಾ ಹೊಸ ಸರ್ಕಾರಕ್ಕೂ ಅದೆಂತಹ ಸಂಬಂಧ?

ದೇಶ ಮೇ 23ರ ಮಹಾ ಚುನಾವಣಾ ಫಲಿತಾಂಶ ಏನಾಗಬಹುದು ಎಂದು ಯೋಚಿಸುವ ಸಂದರ್ಭದಲ್ಲಿ ರಾಜ್ಯದ ಮೂರೂ ಪಕ್ಷಗಳ ಹಲವು ಪ್ರಮುಖರು ಹೊಸ ಸಿಎಂ ಎಂಬ ಕಲ್ಪನೆಯ ಆಟಕ್ಕೆ ಜೋತು ಬಿದ್ದು, ಹೊಸ ಹೊಸ ಸಾಧ್ಯತೆಗಳನ್ನು ತೇಲಿ ಬಿಡುತ್ತಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹೊಸ ಮುಖ್ಯಮಂತ್ರಿಯ ವಿಷಯ ವಾಕ್ಸಮರಕ್ಕೆ ಕಾರಣವಾಗಿ, ವಿಧಾನಸಭೆ ವಿಸರ್ಜನೆಯಾಗಲಿ ಬಿಡಿ ಎಂಬ ಹಂತದವರೆಗೂ ಹೋಗಿ ಬೇಸರ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ ಎರಡೂ ಪಕ್ಷಗಳ ‘ಹೈ ಕಮಾಂಡ್’ ವಿವಾದ, ಗೊದಲ ಸೃಷ್ಟಿಸಬೇಡಿ ಎಂದು ತಾಕೀತು ಮಾಡಿದ್ದಾರೆ.

ಇವತ್ತು ರವಿವಾರ ರಾಜ್ಯದ ನಾಯಕರನ್ನು ಕರೆಸಿಕೊಂಡು 23ರ ಫಲಿತಾಂಶದ ನಂತರದ ಮುಂದಿನ ನಡೆಯ ಬಗ್ಗೆ ಚರ್ಚಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸದ್ಯಕ್ಕೆ ಮೈತ್ರಿ ಸರ್ಕಾರಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೈತ್ರಿ ಸರ್ಕಾರಕ್ಕೂ 23ರ ಫಲಿತಾಂಶಕ್ಕೂ ಯಾವ ಸಂಬಂಧವೂ ಇಲ್ಲ ಎಂಬಂತೆ ಹೇಳಿಕೆ ನೀಡಿದ್ದಾರೆ.

ಇತ್ತ ದೇವೇಗೌಡರು ಕೂಡ ಬಹಿರಂಗ ಹೇಳಿಕೆ ನೀಡದಂತೆ ತಮ್ಮ ಪಕ್ಷದ ನಾಯಕರಿಗೆ ತಾಕೀತು ಮಾಡಿದ್ದಾರೆ. ಕೇಂದ್ರದಲ್ಲಿ ಈ ಸಲ ಪ್ರಾದೇಶಿಕ ಪಕ್ಷಗಳೇ ನಿರ್ಣಾಯಕ ಎಂದು ನಂಬಿರುವ ಅವರು, ರಾಜ್ಯ ರಾಜಕಾರಣದಲ್ಲಿ ಗೊಂದಲ ಏರ್ಪಡುವುದನ್ನು ಸಹಿಸಲಾರರು. ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ತಮ್ಮ ಪಕ್ಷದ ನಾಯಕರಿಗೆ ಬಾಹ್ಯವಾಗಿ ಮೈತ್ರಿ ಕುರಿತು, ಹೊಸ ಸಿಎಂ ಕುರಿತು ಮಾತನಾಡಿ ಗೊಂದಲ ಸೃಷ್ಟಿ ಮಾಡಬೇಡಿ, ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ತರುವ ಯತ್ನಕ್ಕೆ ಹಿನ್ನಡೆ ಮಾಡಬೇಡಿ ಎಂದಿದ್ದಾರೆ.

ಸದ್ಯಕ್ಕೆ ಅಂದರೆ ಇವತ್ತು ಮಧ್ಯಾಹ್ನದ ಹೊತ್ತಿಗೆ ಮೈತ್ರಿ ಪಕ್ಷಗಳ ನಾಯಕರು ವಾಕ್ಸಮರ ನಿಲ್ಲಿಸಿ ಮೌನಕ್ಕೆ ಶರಣಾಗಿದ್ದಾರೆ. ಆದರೆ, ಮೇ 23ರ ನಂತರ 20 ಶಾಸಕರು ತಮ್ಮ ಕಡೆ ಎಂದು ನಂಬಿರುವ ಯಡಿಯೂರಪ್ಪ ಮತ್ತು ಟೀಮ್ ಮಾತ್ರ ಸರ್ಕಾರ ತಮ್ಮದೇ ಎಂಬ ಗುಂಗಿನಲ್ಲಿದೆ..
ಉಪ ಚುನಾವಣೆಯಲ್ಲಿ ಸೃಷ್ಟಿ!

ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆಗಳ ಪ್ರಚಾರದ ಸಂದರ್ಭದಲ್ಲಿ ರಾಜ್ಯದ ಮೂರೂ ಪಕ್ಷಗಳ ನಾಯಕರು ಪ್ರಚಾರದಲ್ಲಿದ್ದಾಗ ಇದೆಲ್ಲ ರಗಳೆ ಆರಂಭವಾಗಿದೆ. ಒಂದು ಕಡೆ ಯಡಿಯೂರಪ್ಪ ಎರಡು ಸೀಟು ಗೆಲ್ಲಿಸಿ ಕೊಡಿ, ನಾನೇ ಸಿಎಂ ಎಂದು ಬಹಿರಂಗ ಪ್ರಚಾರ ಮಾಡಿದರು. ಇನ್ನೊಂದು ಕಡೆ ಸಿದ್ದರಾಮಯ್ಯ ಅಭಿಮಾನಿ ಶಾಸಕರು ಮೇ 23ರ ನಂತರ ಸಿದ್ದರಾಮಯ್ಯರೇ ಮುಖ್ಯಮಂತ್ರಿ ಎಂದು ಗುಲ್ಲು ಎಬ್ಬಿಸಿದರು. ಇದಕ್ಕೆ ಬಿಜೆಪಿಯ ಈಶ್ವರಪ್ಪ ಇನ್ನಷ್ಟು ಕಿಡಿ ಹಚ್ಚಿದರು. ಆಗ ಅಖಾಡಕ್ಕೆ ಇಳಿದ ರಾಜ್ಯ ಜೆಡಿಎಸ್ ಅಧ್ಯಕ್ಷ ವಿಶ್ವನಾಥರು, ತಮ್ಮ ಬೆಂಬಲಿಗರ ಮೂಲಕ ತಾವೇ ಮುಖ್ಯಮಂತ್ರಿ ಎಂದು ಹೇಳಿಸುವ ಮೂಲಕ ಸಿದ್ದರಾಮಯ್ಯ ಮೈತ್ರಿ ಧರ್ಮಕ್ಕೆ ಮೋಸ ಮಾಡುತ್ತಿದ್ದಾರೆ, ಅವರೇನು ಅತ್ಯುತ್ತಮ ಸಿಎಂ ಆಗಿದ್ದರೆ? ಹಾಗಿದ್ದರೆ 121ರಿಂದ 78ಕ್ಕೆ ಕಾಂಗ್ರೆಸ್ ಕುಸಿಯುತ್ತಿತ್ತೆ? ಎಂದು ಎರಡು ಮೂರು ಕಡೆ ಪ್ರತಿಪಾದಿಸಿದರು. ಆಗ ದೇವೇಗೌಡ ಮತ್ತು ಕುಮಾರಸ್ವಾಮಿ ಮೌನವಾಗಿಯೇ ಇದ್ದರು.

ಇದ್ದಕ್ಕಿದ್ದಂತೆ ಏನಾಯ್ತೋ ಮುಖ್ಯಮಂತ್ರಿ ಕುಮಾರಸ್ವಾಮಿ, ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು. ಅಂಥವರಿಗೆ ಕಾಂಗ್ರೆಸ್ ಅವಕಾಶ ಮಾಡಿಕೊಡಬೇಕಿತ್ತು ಎಂದು ಬಾಂಬ್ ಹಾಕಿದರು. ಸಿದ್ದರಾಮಯ್ಯ ಮುಖ್ಯಮಂತ್ರಿ ಎಂಬ ‘ಗುಪ್ತ’ ಆಂದೋಲನಕ್ಕೆ ಬ್ರೇಕ್ ಹಾಕಲು ಅವರು ಹೀಗೆ ಮಾಡಿದರು ಅನಿಸುತ್ತದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಎರಡರಲ್ಲೂ ಮುಖ್ಯಮಂತ್ರಿ ಆಗುವ ಅರ್ಹತೆಯುಳ್ಳ ಹಲವರಿದ್ದಾರೆ, ಜೆಡಿಎಸ್‍ನ ಎಚ್.ಡಿ. ರೇವಣ್ಣ ಕೂಡ ಅದರಲ್ಲಿ ಒಬ್ಬರು ಎಂದು ಸಿದ್ದರಾಮಯ್ಯ ಒಂದು ಟ್ವೀಟ್ ತೇಲಿಬಿಟ್ಟರು. ದಲಿತ ಮುಖ್ಯಮಂತ್ರಿ ವಿಷಯಕ್ಕೆ ಅಂತೂ ಅವರು ಸ್ಟಾಪ್ ಹಾಕಿದರು.
ಇದೆಲ್ಲದರಿಂದ ರೋಸಿದ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ, ಎರಡೂ ಪಕ್ಷಗಳಲ್ಲಿ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳು ಹೆಚ್ಚುತ್ತಿದ್ದಾರೆ. ಇದು ಮೈತ್ರಿ ಸರ್ಕಾರಕ್ಕೆ ಮಾರಕ. ಈ ಕಿತ್ತಾಟದ ಬದಲು ವಿಧಾನಸಭೆ ವಿಸರ್ಜನೆಯೇ ಸೂಕ್ತ ಎಂದು ಕಿಡಿಕಾರಿದರು.. ಶನಿವಾರ ಪೂರ್ತಿ ಇದೇ ಚರ್ಚೆಯಾಯಿತು.

ಇದನ್ನು ಓದಿ: ರಾಜ್ಯ ಸರ್ಕಾರದ ಭವಿಷ್ಯ ನಿಂತಿರುವುದು ಈ ನಾಲ್ಕು ಅಂಶಗಳ ಮೇಲೆ.

ಆದರೆ ಇವತ್ತಿನ ಮಟ್ಟಿಗೆ ಎರಡೂ ಪಕ್ಷಗಳ ಹೈಕಮಾಂಡ್ ಈ ವಾಕ್ಸಮರ ನಿಲ್ಲಿಸುವಲ್ಲಿ ಸಫಲವಾಗಿದೆ. ಇತ್ತ ಕಡೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಂದರೂ, ಬರದಿದ್ದರೂ ಯಡಿಯೂರಪ್ಪ ಸಿಎಂ ಆಗುವ ಚಾನ್ಸೇ ಇಲ್ಲ. ಅವರಿಗೆ ಉಳಿದಿರುವುದು 20 ಶಾಸಕರ ಖರೀದಿಯ ಆಪ್ಸನ್ ಒಂದೇ. ಅದರಲ್ಲಿ 20 ಸಲ ಫೇಲಾಗಿರುವ ಅವರೀಗ ಮತ್ತೆ ಸಪ್ಲಿಮೆಂಟರಿಗೆ ತಯ್ಯಾರಿ ನಡೆಸಿಯೇ ಇದ್ದಾರೆ.

ಮೇ 23ರ ಫಲಿತಾಂಶ ರಾಜ್ಯ ಸರ್ಕಾರಕ್ಕೇನೂ ಆಪತ್ತು ತರಲಾರದು. ಇವರಿವರೇ ಕಿತ್ತಾಡಿಕೊಂಡು ಸರ್ಕಾರ ಬೀಳಬೇಕು ಅಥವಾ ಯಡಿಯೂರಪ್ಪ 21ನೇಯ ಸಪ್ಲಿಮೆಂಟರಿಯಲ್ಲಿ ಪಾಸ್ ಆಗಬೇಕು. ಸದ್ಯಕ್ಕೆ ಈ ಎರಡೂ ಆಗುವ ಸಾಧ್ಯತೆಗಳಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...