Homeಮುಖಪುಟ'ಕೋವಿಡ್ ರೂಪಾಂತರಿ ಉಲ್ಬಣಕ್ಕೆ ಡಬ್ಲ್ಯೂಎಚ್ಒ ಆತಂಕ; 60 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ'

‘ಕೋವಿಡ್ ರೂಪಾಂತರಿ ಉಲ್ಬಣಕ್ಕೆ ಡಬ್ಲ್ಯೂಎಚ್ಒ ಆತಂಕ; 60 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ’

- Advertisement -
- Advertisement -

ಅಮೆರಿಕಾ, ಚೈನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್-19 ರೂಪಾಂತರಿ ಜೆಎನ್ 1 ಉಲ್ಬಣವಾಗುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ ನೀಡಿದೆ. ಪ್ರಸ್ತುತ ಈ ರೂಪಾಂತರಿ ವೈರಾಣು ಕರ್ನಾಟಕದ ನೆರೆಯ ರಾಜ್ಯ ಕೇರಳದಲ್ಲಿ ಪತ್ತೆಯಾಗಿದ್ದು, ರಾಜ್ಯದ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.

ಕೊಡಗಿನ ಕುಶಾಲನಗರದಲ್ಲಿ ಮಾತಾನಾಡಿದ ಅವರು, ‘ಕೋವಿಡ್-19 ರೂಪಾಂತರಿ ಕುರಿತು ಮೊನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದೇವೆ. ಕೋವಿಡ್ ತಡೆಗಟ್ಟಲು ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ಜೊತೆಗೂ ಸದಸ್ಯರು ಚರ್ಚೆ ನಡೆಸಿದ್ದಾರೆ. ಕೇಂದ್ರದಿಂದ ಕೆಲವು ಸಲಹೆಗಳನ್ನು ಪಡೆದುಕೊಂಡಿದ್ದು, 60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಕಾಯಿಲೆ ಇರುವವರು ಹಾಗೂ ಜ್ವರ, ಕಫ, ಶೀತದ ಲಕ್ಷಣ ಇರುವವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳುವಂತೆ ಮನವಿ ಮಾಡಿದ್ದೇವೆ’ ಎಂದರು.

ಮುಂಜಾಗ್ರತಾ ಕ್ರಮವಾಗಿ, ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳವಂತೆ ಸೂಚನೆ ನೀಡಲಾಗಿದೆ. ಕೇರಳ ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚಿಸಲಾಗಿದೆ. ಕೇರಳದಿಂದ ಬರುವವರನ್ನು ಕಡ್ಡಾಯವಾಗಿ ಪರೀಕ್ಷೆ ಮಾಡುವಂತೆ ಆದೇಶ ನೀಡಿದ್ದೇವೆ’ ಎಂದು ಹೇಳಿದರು.

‘ಉಸಿರಾಟದ ತೊಂದರೆಯಂತ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಕಡ್ಡಾಯವಾಗಿ ಟೆಸ್ಟಿಂಗ್ ಮಾಡಲಾಗುತ್ತದೆ. ಕೋವಿಡ್ ಇರುವುದು ಪತ್ತೆಯಾದರೆ ಏನು ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ. ಗಡಿ ಭಾಗದಲ್ಲಿ ಹೆಚ್ಚು ಟೆಸ್ಟಿಂಗ್ ಮಾಡುತ್ತೇವೆ. ಯಾರ ಯಾರ ಮೇಲೆ ಸಂಶಯ ಇದೆ ಅವರೆಲ್ಲರಿಗೂ ಟೆಸ್ಟ್ ಮಾಡಿಸುತ್ತೇವೆ’ ಎಂದು ತಿಳಿಸಿದರು.

‘ಮುಂದಿನ 2-3 ದಿನಗಳಲ್ಲಿ ರೂಪಾಂತರಿ ವೈರಸ್‌ನ ತೀವ್ರತೆ ಎಷ್ಟಿದೆ ಎಂಬುದು ತಿಳಿಯಲಿದೆ. ಸದ್ಯಕ್ಕೆ ಜನ ಗುಂಪುಗೂಡುವಂತಿಲ್ಲ. ಪ್ರಸ್ತುತ ರಾಜ್ಯದಲ್ಲಿ ಸಹಜ ಸ್ಥಿತಿ ಇದ್ದು, ಪಾಸಿಟಿವ್ ಪ್ರಕರಣಗಳು ಹೆಚ್ಚಾದರೆ ಮಾತ್ರ ಮಾತ್ರ ನಿಯಮಗಳನ್ನು ಜಾರಿ ಮಾಡಬೇಕಾಗುತ್ತದೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ; ಯಾರೂ ಆತಂಕಪಡುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.

ಆತಂಕ ಪಡುವ ಅಗತ್ಯವಿಲ್ಲ: ಕೇರಳ ಆರೋಗ್ಯ ಸಚಿವೆ

ಕೇರಳದಲ್ಲಿ ಪತ್ತೆಯಾಗಿರುವ ಜೆಎನ್1 ಕೋವಿಡ್ ಉಪಪ್ರಭೇದವಾಗಿದ್ದು, ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಭಾನುವಾರ ಹೇಳಿದ್ದಾರೆ.

‘ಆತಂಕ ಪಡುವಂಥದ್ದೇನೂ ಇಲ್ಲ. ಅದೊಂದು ಉಪಪ್ರಭೇದವಾಗಿದ್ದು, ಕೇರಳದಲ್ಲಿ ಅದನ್ನು ಈಗ ಪತ್ತೆ ಹಚ್ಚಲಾಗಿದೆ. 2-3 ತಿಂಗಳುಗಳ ಹಿಂದೆ ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ತಪಾಸಣೆಗೊಳಗಾಗಿದ್ದ ಭಾರತೀಯರಲ್ಲಿ ಈ ಪ್ರಭೇದ ಪತ್ತೆಯಾಗಿತ್ತು. ರತದ ಇತರೆ ರಾಜ್ಯಗಳಲ್ಲಿಯೂ ಈ ವೈರಸ್ ಹರಡಿದೆ. ಆದರೆ, ಕೇರಳವು ಮೊದಲೇ ಪತ್ತೆ ಹಚ್ಚಿದ್ದು, ರಾಜ್ಯದ ಆರೋಗ್ಯ ವ್ಯವಸ್ಥೆ ಉತ್ತಮವಾಗಿರುವುದರಿಂದ ಜಿನೊಮಿಕ್ ಸೀಕ್ವೆನ್ಸಿಂಗ್ ಮೂಲಕ ಅದನ್ನು ನಾವು ಪತ್ತೆ ಹಚ್ಚಲು ಸಾಧ್ಯವಾಗಿದೆ ’ ಎಂದು ತಿಳಿಸಿದರು.

ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ:

ಉಸಿರಾಟದ ಕಾಯಿಲೆಗಳ ಉಲ್ಬಣ ಮತ್ತು ಕೋವಿಡ್-19 ರೂಪಾಂತರಿ ಜೆಎನ್1 ವಿಕಸನಗೊಳ್ಳುತ್ತಿದ್ದು, ಹೆಚ್ಚಿನ ನಿಗಾ ಇಡುವಂತೆ ಸದಸ್ಯ ರಾಷ್ಟ್ರಗಳಿಗೆ ವಿಶ್ವ ಆರೋಗ್ಯ ಸಂಸ್ಥೆ (WHO) ಒತ್ತಾಯಿಸಿದೆ.
ಡಬ್ಲ್ಯೂಎಚ್ಒ ಜಾಗತಿಕ ಸಂಸ್ಥೆಯ ಕೋವಿಡ್-19 ತಾಂತ್ರಿಕ ವಿಭಾಗದ ಮುಖ್ಯಸ್ಥೆ ಮಾರಿಯಾ ವ್ಯಾನ್ ಕೆರ್ಖೋವ್ ಅವರ ವೀಡಿಯೊವನ್ನು ಹಂಚಿಕೊಂಡಿದ್ದು, ಕೋವಿಡ್ 19 ರೂಪಾಂತರಿ ಉಲ್ಬಣಗಳಿಗೆ ಕಾರಣ ಮತ್ತು ತೆಗೆದುಕೊಳ್ಳಲೇಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವಿವರಿಸಲಾಗಿದೆ.

ಉಸಿರಾಟ ಸಂಬಂಧಿ ಕಾಯಿಲೆಗಳು ಉಲ್ಬಣಗೊಳ್ಳುತ್ತಿರುವ ಬಗ್ಗೆ ಮಾತನಾಡಿರುವ ಡಾ ಮಾರಿಯಾ ವ್ಯಾನ್ ಕೆರ್ಕೋವ್, ‘ಈ ರಜಾ ದಿನಗಳಲ್ಲಿ ನಿಮ್ಮ ಕುಟುಂಬಗಳು ಮತ್ತು ಸ್ನೇಹಿತರನ್ನು ಸುರಕ್ಷಿತವಾಗಿರಿಸಲು ಡಬ್ಲ್ಯೂಎಚ್ಒನ ಸಾರ್ವಜನಿಕ ಆರೋಗ್ಯ ಸಲಹೆಯನ್ನು ಅನುಸರಿಸಿ’ ಎಂದು ಮನವಿ ಮಾಡಿದ್ದಾರೆ.

‘ಹಲವಾರು ರೋಗಕಾರಕಗಳು ಪ್ರಪಂಚದಾದ್ಯಂತ ಉಸಿರಾಟದ ಕಾಯಿಲೆಗಳ ಹೆಚ್ಚಳಕ್ಕೆ ಕಾರಣವಾಗಿವೆ. ಕೋವಿಡ್-19, ರೈನೋವೈರಸ್, ಮೈಕೋಪ್ಲಾಸ್ಮಾ ನ್ಯುಮೋನಿಯಾ ಮತ್ತು ಇತರರು SARS-CoV-2 ಸೇರಿದಂತೆ ಹಲವಾರು ರೋಗಕಾರಕಗಳಿಂದಾಗಿ ಪ್ರಪಂಚದಾದ್ಯಂತ ಉಸಿರಾಟದ ಕಾಯಿಲೆಗಳು ಹೆಚ್ಚುತ್ತಿವೆ. ರೂಪಾಂತರಿ ಜೆಎನ್.1 ಅನ್ನು ಈಗಾಗಲೇ ಪತ್ತೆಹಚ್ಚಲಾಗಿದ್ದು, ಅದು ತನ್ನ ಹರಡುವಿಕೆಯನ್ನು ಮುಂದುವರಿಸಿದೆ’ ಎಂದು ಅವರು ಹೇಳಿದ್ದಾರೆ.

‘ರಜಾ ಕಾಲದ ಕೂಟಗಳು ಸೋಂಕು ಸೇರಿದಂತೆ ಉಸಿರಾಟದ ಸೋಂಕುಗಳ ಉಲ್ಬಣಕ್ಕೆ ಕಾರಣವಾಗಿದೆ. ಇದು ಕೇವಲ ಕೋವಿಡ್-19 ಮಾತ್ರವಲ್ಲದೆ; ನಮ್ಮಲ್ಲಿ ಇನ್ಫ್ಲುಯೆನ್ಜಾ ಹಾಗೂ ಇತರ ವೈರಸ್‌ಗಳು ಮತ್ತು ಬ್ಯಾಕ್ಟೀರಿಯಾಗಳಿವೆ. ಪ್ರಪಂಚದ ಇತರ ಭಾಗಗಳಲ್ಲಿ ನಾವು ಚಳಿಗಾಲದ ತಿಂಗಳುಗಳನ್ನು ಪ್ರವೇಶಿಸುತ್ತಿದ್ದೇವೆ. ಜನರು ರಜಾದಿನಗಳಿಗಾಗಿ ಒಟ್ಟುಗೂಡಲು ಪ್ರಾರಂಭಿಸುತ್ತಿದ್ದಾರೆ. ಗುಂಪುಗುಂಪಾಗಿ ಜನರು ಅವರ ಮನೆಯೊಳಗೆ ಸಮಯ ಕಳೆಯುತ್ತಾರೆ. ಅಲ್ಲಿ ಗಾಳಿ ಗುಣಮಟ್ಟ ಕಳಪೆ ಇದ್ದರೆ, ಈ ರೂಪಾಂತರಿ ವೈರಾಣು ಗಾಳಿಯ ಮೂಲಕ ಪರಿಣಾಮಕಾರಿಯಾಗಿ ಹರಡುತ್ತವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ಗಾಝಾದಲ್ಲಿ ಮಾನವೀಯ ಬಿಕ್ಕಟ್ಟು: ಹಸಿವು ತಾಳಲಾರದೆ ಟ್ರಕ್‌ಗಳನ್ನು ತಡೆದು ಆಹಾರ ಕಸಿದುಕೊಳ್ಳುತ್ತಿರುವ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...