Homeಮುಖಪುಟ'ಕೋವಿಡ್ ರೂಪಾಂತರಿ ಉಲ್ಬಣಕ್ಕೆ ಡಬ್ಲ್ಯೂಎಚ್ಒ ಆತಂಕ; 60 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ'

‘ಕೋವಿಡ್ ರೂಪಾಂತರಿ ಉಲ್ಬಣಕ್ಕೆ ಡಬ್ಲ್ಯೂಎಚ್ಒ ಆತಂಕ; 60 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ’

- Advertisement -
- Advertisement -

ಅಮೆರಿಕಾ, ಚೈನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್-19 ರೂಪಾಂತರಿ ಜೆಎನ್ 1 ಉಲ್ಬಣವಾಗುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ ನೀಡಿದೆ. ಪ್ರಸ್ತುತ ಈ ರೂಪಾಂತರಿ ವೈರಾಣು ಕರ್ನಾಟಕದ ನೆರೆಯ ರಾಜ್ಯ ಕೇರಳದಲ್ಲಿ ಪತ್ತೆಯಾಗಿದ್ದು, ರಾಜ್ಯದ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.

ಕೊಡಗಿನ ಕುಶಾಲನಗರದಲ್ಲಿ ಮಾತಾನಾಡಿದ ಅವರು, ‘ಕೋವಿಡ್-19 ರೂಪಾಂತರಿ ಕುರಿತು ಮೊನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದೇವೆ. ಕೋವಿಡ್ ತಡೆಗಟ್ಟಲು ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ಜೊತೆಗೂ ಸದಸ್ಯರು ಚರ್ಚೆ ನಡೆಸಿದ್ದಾರೆ. ಕೇಂದ್ರದಿಂದ ಕೆಲವು ಸಲಹೆಗಳನ್ನು ಪಡೆದುಕೊಂಡಿದ್ದು, 60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಕಾಯಿಲೆ ಇರುವವರು ಹಾಗೂ ಜ್ವರ, ಕಫ, ಶೀತದ ಲಕ್ಷಣ ಇರುವವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳುವಂತೆ ಮನವಿ ಮಾಡಿದ್ದೇವೆ’ ಎಂದರು.

ಮುಂಜಾಗ್ರತಾ ಕ್ರಮವಾಗಿ, ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳವಂತೆ ಸೂಚನೆ ನೀಡಲಾಗಿದೆ. ಕೇರಳ ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚಿಸಲಾಗಿದೆ. ಕೇರಳದಿಂದ ಬರುವವರನ್ನು ಕಡ್ಡಾಯವಾಗಿ ಪರೀಕ್ಷೆ ಮಾಡುವಂತೆ ಆದೇಶ ನೀಡಿದ್ದೇವೆ’ ಎಂದು ಹೇಳಿದರು.

‘ಉಸಿರಾಟದ ತೊಂದರೆಯಂತ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಕಡ್ಡಾಯವಾಗಿ ಟೆಸ್ಟಿಂಗ್ ಮಾಡಲಾಗುತ್ತದೆ. ಕೋವಿಡ್ ಇರುವುದು ಪತ್ತೆಯಾದರೆ ಏನು ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ. ಗಡಿ ಭಾಗದಲ್ಲಿ ಹೆಚ್ಚು ಟೆಸ್ಟಿಂಗ್ ಮಾಡುತ್ತೇವೆ. ಯಾರ ಯಾರ ಮೇಲೆ ಸಂಶಯ ಇದೆ ಅವರೆಲ್ಲರಿಗೂ ಟೆಸ್ಟ್ ಮಾಡಿಸುತ್ತೇವೆ’ ಎಂದು ತಿಳಿಸಿದರು.

‘ಮುಂದಿನ 2-3 ದಿನಗಳಲ್ಲಿ ರೂಪಾಂತರಿ ವೈರಸ್‌ನ ತೀವ್ರತೆ ಎಷ್ಟಿದೆ ಎಂಬುದು ತಿಳಿಯಲಿದೆ. ಸದ್ಯಕ್ಕೆ ಜನ ಗುಂಪುಗೂಡುವಂತಿಲ್ಲ. ಪ್ರಸ್ತುತ ರಾಜ್ಯದಲ್ಲಿ ಸಹಜ ಸ್ಥಿತಿ ಇದ್ದು, ಪಾಸಿಟಿವ್ ಪ್ರಕರಣಗಳು ಹೆಚ್ಚಾದರೆ ಮಾತ್ರ ಮಾತ್ರ ನಿಯಮಗಳನ್ನು ಜಾರಿ ಮಾಡಬೇಕಾಗುತ್ತದೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ; ಯಾರೂ ಆತಂಕಪಡುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.

ಆತಂಕ ಪಡುವ ಅಗತ್ಯವಿಲ್ಲ: ಕೇರಳ ಆರೋಗ್ಯ ಸಚಿವೆ

ಕೇರಳದಲ್ಲಿ ಪತ್ತೆಯಾಗಿರುವ ಜೆಎನ್1 ಕೋವಿಡ್ ಉಪಪ್ರಭೇದವಾಗಿದ್ದು, ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಭಾನುವಾರ ಹೇಳಿದ್ದಾರೆ.

‘ಆತಂಕ ಪಡುವಂಥದ್ದೇನೂ ಇಲ್ಲ. ಅದೊಂದು ಉಪಪ್ರಭೇದವಾಗಿದ್ದು, ಕೇರಳದಲ್ಲಿ ಅದನ್ನು ಈಗ ಪತ್ತೆ ಹಚ್ಚಲಾಗಿದೆ. 2-3 ತಿಂಗಳುಗಳ ಹಿಂದೆ ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ತಪಾಸಣೆಗೊಳಗಾಗಿದ್ದ ಭಾರತೀಯರಲ್ಲಿ ಈ ಪ್ರಭೇದ ಪತ್ತೆಯಾಗಿತ್ತು. ರತದ ಇತರೆ ರಾಜ್ಯಗಳಲ್ಲಿಯೂ ಈ ವೈರಸ್ ಹರಡಿದೆ. ಆದರೆ, ಕೇರಳವು ಮೊದಲೇ ಪತ್ತೆ ಹಚ್ಚಿದ್ದು, ರಾಜ್ಯದ ಆರೋಗ್ಯ ವ್ಯವಸ್ಥೆ ಉತ್ತಮವಾಗಿರುವುದರಿಂದ ಜಿನೊಮಿಕ್ ಸೀಕ್ವೆನ್ಸಿಂಗ್ ಮೂಲಕ ಅದನ್ನು ನಾವು ಪತ್ತೆ ಹಚ್ಚಲು ಸಾಧ್ಯವಾಗಿದೆ ’ ಎಂದು ತಿಳಿಸಿದರು.

ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ:

ಉಸಿರಾಟದ ಕಾಯಿಲೆಗಳ ಉಲ್ಬಣ ಮತ್ತು ಕೋವಿಡ್-19 ರೂಪಾಂತರಿ ಜೆಎನ್1 ವಿಕಸನಗೊಳ್ಳುತ್ತಿದ್ದು, ಹೆಚ್ಚಿನ ನಿಗಾ ಇಡುವಂತೆ ಸದಸ್ಯ ರಾಷ್ಟ್ರಗಳಿಗೆ ವಿಶ್ವ ಆರೋಗ್ಯ ಸಂಸ್ಥೆ (WHO) ಒತ್ತಾಯಿಸಿದೆ.
ಡಬ್ಲ್ಯೂಎಚ್ಒ ಜಾಗತಿಕ ಸಂಸ್ಥೆಯ ಕೋವಿಡ್-19 ತಾಂತ್ರಿಕ ವಿಭಾಗದ ಮುಖ್ಯಸ್ಥೆ ಮಾರಿಯಾ ವ್ಯಾನ್ ಕೆರ್ಖೋವ್ ಅವರ ವೀಡಿಯೊವನ್ನು ಹಂಚಿಕೊಂಡಿದ್ದು, ಕೋವಿಡ್ 19 ರೂಪಾಂತರಿ ಉಲ್ಬಣಗಳಿಗೆ ಕಾರಣ ಮತ್ತು ತೆಗೆದುಕೊಳ್ಳಲೇಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವಿವರಿಸಲಾಗಿದೆ.

ಉಸಿರಾಟ ಸಂಬಂಧಿ ಕಾಯಿಲೆಗಳು ಉಲ್ಬಣಗೊಳ್ಳುತ್ತಿರುವ ಬಗ್ಗೆ ಮಾತನಾಡಿರುವ ಡಾ ಮಾರಿಯಾ ವ್ಯಾನ್ ಕೆರ್ಕೋವ್, ‘ಈ ರಜಾ ದಿನಗಳಲ್ಲಿ ನಿಮ್ಮ ಕುಟುಂಬಗಳು ಮತ್ತು ಸ್ನೇಹಿತರನ್ನು ಸುರಕ್ಷಿತವಾಗಿರಿಸಲು ಡಬ್ಲ್ಯೂಎಚ್ಒನ ಸಾರ್ವಜನಿಕ ಆರೋಗ್ಯ ಸಲಹೆಯನ್ನು ಅನುಸರಿಸಿ’ ಎಂದು ಮನವಿ ಮಾಡಿದ್ದಾರೆ.

‘ಹಲವಾರು ರೋಗಕಾರಕಗಳು ಪ್ರಪಂಚದಾದ್ಯಂತ ಉಸಿರಾಟದ ಕಾಯಿಲೆಗಳ ಹೆಚ್ಚಳಕ್ಕೆ ಕಾರಣವಾಗಿವೆ. ಕೋವಿಡ್-19, ರೈನೋವೈರಸ್, ಮೈಕೋಪ್ಲಾಸ್ಮಾ ನ್ಯುಮೋನಿಯಾ ಮತ್ತು ಇತರರು SARS-CoV-2 ಸೇರಿದಂತೆ ಹಲವಾರು ರೋಗಕಾರಕಗಳಿಂದಾಗಿ ಪ್ರಪಂಚದಾದ್ಯಂತ ಉಸಿರಾಟದ ಕಾಯಿಲೆಗಳು ಹೆಚ್ಚುತ್ತಿವೆ. ರೂಪಾಂತರಿ ಜೆಎನ್.1 ಅನ್ನು ಈಗಾಗಲೇ ಪತ್ತೆಹಚ್ಚಲಾಗಿದ್ದು, ಅದು ತನ್ನ ಹರಡುವಿಕೆಯನ್ನು ಮುಂದುವರಿಸಿದೆ’ ಎಂದು ಅವರು ಹೇಳಿದ್ದಾರೆ.

‘ರಜಾ ಕಾಲದ ಕೂಟಗಳು ಸೋಂಕು ಸೇರಿದಂತೆ ಉಸಿರಾಟದ ಸೋಂಕುಗಳ ಉಲ್ಬಣಕ್ಕೆ ಕಾರಣವಾಗಿದೆ. ಇದು ಕೇವಲ ಕೋವಿಡ್-19 ಮಾತ್ರವಲ್ಲದೆ; ನಮ್ಮಲ್ಲಿ ಇನ್ಫ್ಲುಯೆನ್ಜಾ ಹಾಗೂ ಇತರ ವೈರಸ್‌ಗಳು ಮತ್ತು ಬ್ಯಾಕ್ಟೀರಿಯಾಗಳಿವೆ. ಪ್ರಪಂಚದ ಇತರ ಭಾಗಗಳಲ್ಲಿ ನಾವು ಚಳಿಗಾಲದ ತಿಂಗಳುಗಳನ್ನು ಪ್ರವೇಶಿಸುತ್ತಿದ್ದೇವೆ. ಜನರು ರಜಾದಿನಗಳಿಗಾಗಿ ಒಟ್ಟುಗೂಡಲು ಪ್ರಾರಂಭಿಸುತ್ತಿದ್ದಾರೆ. ಗುಂಪುಗುಂಪಾಗಿ ಜನರು ಅವರ ಮನೆಯೊಳಗೆ ಸಮಯ ಕಳೆಯುತ್ತಾರೆ. ಅಲ್ಲಿ ಗಾಳಿ ಗುಣಮಟ್ಟ ಕಳಪೆ ಇದ್ದರೆ, ಈ ರೂಪಾಂತರಿ ವೈರಾಣು ಗಾಳಿಯ ಮೂಲಕ ಪರಿಣಾಮಕಾರಿಯಾಗಿ ಹರಡುತ್ತವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ಗಾಝಾದಲ್ಲಿ ಮಾನವೀಯ ಬಿಕ್ಕಟ್ಟು: ಹಸಿವು ತಾಳಲಾರದೆ ಟ್ರಕ್‌ಗಳನ್ನು ತಡೆದು ಆಹಾರ ಕಸಿದುಕೊಳ್ಳುತ್ತಿರುವ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...