Homeಮುಖಪುಟ'ಕೋವಿಡ್ ರೂಪಾಂತರಿ ಉಲ್ಬಣಕ್ಕೆ ಡಬ್ಲ್ಯೂಎಚ್ಒ ಆತಂಕ; 60 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ'

‘ಕೋವಿಡ್ ರೂಪಾಂತರಿ ಉಲ್ಬಣಕ್ಕೆ ಡಬ್ಲ್ಯೂಎಚ್ಒ ಆತಂಕ; 60 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ’

- Advertisement -
- Advertisement -

ಅಮೆರಿಕಾ, ಚೈನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್-19 ರೂಪಾಂತರಿ ಜೆಎನ್ 1 ಉಲ್ಬಣವಾಗುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ ನೀಡಿದೆ. ಪ್ರಸ್ತುತ ಈ ರೂಪಾಂತರಿ ವೈರಾಣು ಕರ್ನಾಟಕದ ನೆರೆಯ ರಾಜ್ಯ ಕೇರಳದಲ್ಲಿ ಪತ್ತೆಯಾಗಿದ್ದು, ರಾಜ್ಯದ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.

ಕೊಡಗಿನ ಕುಶಾಲನಗರದಲ್ಲಿ ಮಾತಾನಾಡಿದ ಅವರು, ‘ಕೋವಿಡ್-19 ರೂಪಾಂತರಿ ಕುರಿತು ಮೊನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದೇವೆ. ಕೋವಿಡ್ ತಡೆಗಟ್ಟಲು ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ಜೊತೆಗೂ ಸದಸ್ಯರು ಚರ್ಚೆ ನಡೆಸಿದ್ದಾರೆ. ಕೇಂದ್ರದಿಂದ ಕೆಲವು ಸಲಹೆಗಳನ್ನು ಪಡೆದುಕೊಂಡಿದ್ದು, 60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಕಾಯಿಲೆ ಇರುವವರು ಹಾಗೂ ಜ್ವರ, ಕಫ, ಶೀತದ ಲಕ್ಷಣ ಇರುವವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳುವಂತೆ ಮನವಿ ಮಾಡಿದ್ದೇವೆ’ ಎಂದರು.

ಮುಂಜಾಗ್ರತಾ ಕ್ರಮವಾಗಿ, ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳವಂತೆ ಸೂಚನೆ ನೀಡಲಾಗಿದೆ. ಕೇರಳ ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚಿಸಲಾಗಿದೆ. ಕೇರಳದಿಂದ ಬರುವವರನ್ನು ಕಡ್ಡಾಯವಾಗಿ ಪರೀಕ್ಷೆ ಮಾಡುವಂತೆ ಆದೇಶ ನೀಡಿದ್ದೇವೆ’ ಎಂದು ಹೇಳಿದರು.

‘ಉಸಿರಾಟದ ತೊಂದರೆಯಂತ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಕಡ್ಡಾಯವಾಗಿ ಟೆಸ್ಟಿಂಗ್ ಮಾಡಲಾಗುತ್ತದೆ. ಕೋವಿಡ್ ಇರುವುದು ಪತ್ತೆಯಾದರೆ ಏನು ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ. ಗಡಿ ಭಾಗದಲ್ಲಿ ಹೆಚ್ಚು ಟೆಸ್ಟಿಂಗ್ ಮಾಡುತ್ತೇವೆ. ಯಾರ ಯಾರ ಮೇಲೆ ಸಂಶಯ ಇದೆ ಅವರೆಲ್ಲರಿಗೂ ಟೆಸ್ಟ್ ಮಾಡಿಸುತ್ತೇವೆ’ ಎಂದು ತಿಳಿಸಿದರು.

‘ಮುಂದಿನ 2-3 ದಿನಗಳಲ್ಲಿ ರೂಪಾಂತರಿ ವೈರಸ್‌ನ ತೀವ್ರತೆ ಎಷ್ಟಿದೆ ಎಂಬುದು ತಿಳಿಯಲಿದೆ. ಸದ್ಯಕ್ಕೆ ಜನ ಗುಂಪುಗೂಡುವಂತಿಲ್ಲ. ಪ್ರಸ್ತುತ ರಾಜ್ಯದಲ್ಲಿ ಸಹಜ ಸ್ಥಿತಿ ಇದ್ದು, ಪಾಸಿಟಿವ್ ಪ್ರಕರಣಗಳು ಹೆಚ್ಚಾದರೆ ಮಾತ್ರ ಮಾತ್ರ ನಿಯಮಗಳನ್ನು ಜಾರಿ ಮಾಡಬೇಕಾಗುತ್ತದೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ; ಯಾರೂ ಆತಂಕಪಡುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.

ಆತಂಕ ಪಡುವ ಅಗತ್ಯವಿಲ್ಲ: ಕೇರಳ ಆರೋಗ್ಯ ಸಚಿವೆ

ಕೇರಳದಲ್ಲಿ ಪತ್ತೆಯಾಗಿರುವ ಜೆಎನ್1 ಕೋವಿಡ್ ಉಪಪ್ರಭೇದವಾಗಿದ್ದು, ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಭಾನುವಾರ ಹೇಳಿದ್ದಾರೆ.

‘ಆತಂಕ ಪಡುವಂಥದ್ದೇನೂ ಇಲ್ಲ. ಅದೊಂದು ಉಪಪ್ರಭೇದವಾಗಿದ್ದು, ಕೇರಳದಲ್ಲಿ ಅದನ್ನು ಈಗ ಪತ್ತೆ ಹಚ್ಚಲಾಗಿದೆ. 2-3 ತಿಂಗಳುಗಳ ಹಿಂದೆ ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ತಪಾಸಣೆಗೊಳಗಾಗಿದ್ದ ಭಾರತೀಯರಲ್ಲಿ ಈ ಪ್ರಭೇದ ಪತ್ತೆಯಾಗಿತ್ತು. ರತದ ಇತರೆ ರಾಜ್ಯಗಳಲ್ಲಿಯೂ ಈ ವೈರಸ್ ಹರಡಿದೆ. ಆದರೆ, ಕೇರಳವು ಮೊದಲೇ ಪತ್ತೆ ಹಚ್ಚಿದ್ದು, ರಾಜ್ಯದ ಆರೋಗ್ಯ ವ್ಯವಸ್ಥೆ ಉತ್ತಮವಾಗಿರುವುದರಿಂದ ಜಿನೊಮಿಕ್ ಸೀಕ್ವೆನ್ಸಿಂಗ್ ಮೂಲಕ ಅದನ್ನು ನಾವು ಪತ್ತೆ ಹಚ್ಚಲು ಸಾಧ್ಯವಾಗಿದೆ ’ ಎಂದು ತಿಳಿಸಿದರು.

ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ:

ಉಸಿರಾಟದ ಕಾಯಿಲೆಗಳ ಉಲ್ಬಣ ಮತ್ತು ಕೋವಿಡ್-19 ರೂಪಾಂತರಿ ಜೆಎನ್1 ವಿಕಸನಗೊಳ್ಳುತ್ತಿದ್ದು, ಹೆಚ್ಚಿನ ನಿಗಾ ಇಡುವಂತೆ ಸದಸ್ಯ ರಾಷ್ಟ್ರಗಳಿಗೆ ವಿಶ್ವ ಆರೋಗ್ಯ ಸಂಸ್ಥೆ (WHO) ಒತ್ತಾಯಿಸಿದೆ.
ಡಬ್ಲ್ಯೂಎಚ್ಒ ಜಾಗತಿಕ ಸಂಸ್ಥೆಯ ಕೋವಿಡ್-19 ತಾಂತ್ರಿಕ ವಿಭಾಗದ ಮುಖ್ಯಸ್ಥೆ ಮಾರಿಯಾ ವ್ಯಾನ್ ಕೆರ್ಖೋವ್ ಅವರ ವೀಡಿಯೊವನ್ನು ಹಂಚಿಕೊಂಡಿದ್ದು, ಕೋವಿಡ್ 19 ರೂಪಾಂತರಿ ಉಲ್ಬಣಗಳಿಗೆ ಕಾರಣ ಮತ್ತು ತೆಗೆದುಕೊಳ್ಳಲೇಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವಿವರಿಸಲಾಗಿದೆ.

ಉಸಿರಾಟ ಸಂಬಂಧಿ ಕಾಯಿಲೆಗಳು ಉಲ್ಬಣಗೊಳ್ಳುತ್ತಿರುವ ಬಗ್ಗೆ ಮಾತನಾಡಿರುವ ಡಾ ಮಾರಿಯಾ ವ್ಯಾನ್ ಕೆರ್ಕೋವ್, ‘ಈ ರಜಾ ದಿನಗಳಲ್ಲಿ ನಿಮ್ಮ ಕುಟುಂಬಗಳು ಮತ್ತು ಸ್ನೇಹಿತರನ್ನು ಸುರಕ್ಷಿತವಾಗಿರಿಸಲು ಡಬ್ಲ್ಯೂಎಚ್ಒನ ಸಾರ್ವಜನಿಕ ಆರೋಗ್ಯ ಸಲಹೆಯನ್ನು ಅನುಸರಿಸಿ’ ಎಂದು ಮನವಿ ಮಾಡಿದ್ದಾರೆ.

‘ಹಲವಾರು ರೋಗಕಾರಕಗಳು ಪ್ರಪಂಚದಾದ್ಯಂತ ಉಸಿರಾಟದ ಕಾಯಿಲೆಗಳ ಹೆಚ್ಚಳಕ್ಕೆ ಕಾರಣವಾಗಿವೆ. ಕೋವಿಡ್-19, ರೈನೋವೈರಸ್, ಮೈಕೋಪ್ಲಾಸ್ಮಾ ನ್ಯುಮೋನಿಯಾ ಮತ್ತು ಇತರರು SARS-CoV-2 ಸೇರಿದಂತೆ ಹಲವಾರು ರೋಗಕಾರಕಗಳಿಂದಾಗಿ ಪ್ರಪಂಚದಾದ್ಯಂತ ಉಸಿರಾಟದ ಕಾಯಿಲೆಗಳು ಹೆಚ್ಚುತ್ತಿವೆ. ರೂಪಾಂತರಿ ಜೆಎನ್.1 ಅನ್ನು ಈಗಾಗಲೇ ಪತ್ತೆಹಚ್ಚಲಾಗಿದ್ದು, ಅದು ತನ್ನ ಹರಡುವಿಕೆಯನ್ನು ಮುಂದುವರಿಸಿದೆ’ ಎಂದು ಅವರು ಹೇಳಿದ್ದಾರೆ.

‘ರಜಾ ಕಾಲದ ಕೂಟಗಳು ಸೋಂಕು ಸೇರಿದಂತೆ ಉಸಿರಾಟದ ಸೋಂಕುಗಳ ಉಲ್ಬಣಕ್ಕೆ ಕಾರಣವಾಗಿದೆ. ಇದು ಕೇವಲ ಕೋವಿಡ್-19 ಮಾತ್ರವಲ್ಲದೆ; ನಮ್ಮಲ್ಲಿ ಇನ್ಫ್ಲುಯೆನ್ಜಾ ಹಾಗೂ ಇತರ ವೈರಸ್‌ಗಳು ಮತ್ತು ಬ್ಯಾಕ್ಟೀರಿಯಾಗಳಿವೆ. ಪ್ರಪಂಚದ ಇತರ ಭಾಗಗಳಲ್ಲಿ ನಾವು ಚಳಿಗಾಲದ ತಿಂಗಳುಗಳನ್ನು ಪ್ರವೇಶಿಸುತ್ತಿದ್ದೇವೆ. ಜನರು ರಜಾದಿನಗಳಿಗಾಗಿ ಒಟ್ಟುಗೂಡಲು ಪ್ರಾರಂಭಿಸುತ್ತಿದ್ದಾರೆ. ಗುಂಪುಗುಂಪಾಗಿ ಜನರು ಅವರ ಮನೆಯೊಳಗೆ ಸಮಯ ಕಳೆಯುತ್ತಾರೆ. ಅಲ್ಲಿ ಗಾಳಿ ಗುಣಮಟ್ಟ ಕಳಪೆ ಇದ್ದರೆ, ಈ ರೂಪಾಂತರಿ ವೈರಾಣು ಗಾಳಿಯ ಮೂಲಕ ಪರಿಣಾಮಕಾರಿಯಾಗಿ ಹರಡುತ್ತವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ಗಾಝಾದಲ್ಲಿ ಮಾನವೀಯ ಬಿಕ್ಕಟ್ಟು: ಹಸಿವು ತಾಳಲಾರದೆ ಟ್ರಕ್‌ಗಳನ್ನು ತಡೆದು ಆಹಾರ ಕಸಿದುಕೊಳ್ಳುತ್ತಿರುವ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...