Homeಮುಖಪುಟಏನಿದು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ? ಯಾರೆಲ್ಲಾ ಪಡೆದಿದ್ದಾರೆ?

ಏನಿದು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ? ಯಾರೆಲ್ಲಾ ಪಡೆದಿದ್ದಾರೆ?

- Advertisement -
- Advertisement -

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಭಾರತೀಯ ಚಿತ್ರರಂಗದಲ್ಲಿ ಜೀವಮಾನದ ಸಾಧನೆ ಮಾಡಿದವರಿಗೆ ಭಾರತ ಸರ್ಕಾರವು ನೀಡುವ ಅತ್ಯುತ್ತಮ ವಾರ್ಷಿಕ ಪ್ರಶಸ್ತಿ. ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರು ಪಡೆದಿರುವ ದಾದಾಸಾಹೇಬ್ ಫಾಲ್ಕೆಯವರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಭಾರಿ ಈ ಪ್ರಶಸ್ತಿಗೆ ಹಿಂದಿ ಚಿತ್ರರಂಗದ ಹಿರಿಯ ಪ್ರಸಿದ್ದ ನಟ ಅಮಿತಾಬ್ ಬಚ್ಚನ್‌ರವರು ಭಾಜನರಾಗಿದ್ದಾರೆ.

ಚಿತ್ರಕೃಪೆ: ಸತೀಶ್ ಆಚಾರ್ಯ

ಈ ಪ್ರಶಸ್ತಿಯನ್ನು 1969ರಲ್ಲಿ ಇಂದಿರಾ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರ ಆರಂಭಿಸಿತು. ಈ ಪ್ರಶಸ್ತಿಯನ್ನು ಪ್ರತಿ ವರ್ಷ ‘ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನದ ಸಂದರ್ಭ’ದಲ್ಲಿ ನೀಡಲಾಗುತ್ತದೆ. ಮೊಟ್ಟ ಮೊದಲ ಪ್ರಶಸ್ತಿಯನ್ನು ಬಾಲಿಹುಡ್‌ನ ಖ್ಯಾತ ನಟಿ ದೇವಿಕಾರಾಣೀಯವರಿಗೆ 1969ರಲ್ಲಿ ನೀಡಲಾಯಿತು. 43ನೇ ಪ್ರಶಸ್ತಿಯನ್ನು 1995ರಲ್ಲಿ ಕನ್ನಡದ ಮೇರು ನಟ ಡಾ.ರಾಜ್ ಕುಮಾರ್ ಅವರಿಗೆ ನೀಡಿ ಗೌರವಿಸಲಾಗಿದೆ. ರಾಜ್ ಕುಮಾರ್ ಅವರು ಫಾಲ್ಕೆ ಪ್ರಶಸ್ತಿ ಪಡೆದ ಕನ್ನಡ ಚಿತ್ರರಂಗದ ಏಕೈಕ ನಟರೆಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಈ ಪ್ರಶಸ್ತಿಯನ್ನು ಕೇವಲ ಬೆರಳೆಣಿಕೆಯ ಸಿನಿಮಾಗಳಲ್ಲಿ ಮಿಂಚಿದವರಿಗೆ ನೀಡಲಾಗುವುದಿಲ್ಲ. ಭಾರತೀಯ ಚಿತ್ರರಂಗದಲ್ಲಿ ಸಾಕಷ್ಟು ಅನುಭವ ಮತ್ತು ಚಿತ್ರರಂಗದಲ್ಲಿ ಸುಧೀರ್ಘ ಕೊಡುಗೆ ನೀಡಿದವರಿಗೆ ಭಾರತ ಸರ್ಕಾರ ನೀಡಲಾಗುವ ಪ್ರಶಸ್ತಿ ಇದು.

ಯಾರೂ ಈ ದಾದಾಸಾಹೇಬ್ ಫಾಲ್ಕೆ?

ಮಹಾರಾಷ್ಟ್ರದ ಹಾಗೂ ಭಾರತದ ಬೆಳ್ಳಿತೆರೆಯ ಇತಿಹಾಸದಲ್ಲಿ, ಎಂದೆಂದಿಗೂ ಮರೆಯಲಾರದ ವ್ಯಕ್ತಿಯಾಗಿ ಫಾಲ್ಕೆಯವರು ವಿಜೃಂಭಿಸುತ್ತಿದ್ದಾರೆ. ಭಾರತೀಯ ಚಿತ್ರರಂಗದ ಪಿತಾಮಹರೆಂದು ಕರೆಯಲ್ಪಡುವ ದಾದಾ ಸಾಹೇಬ್ ಫಾಲ್ಕೆಯವರ ಮೂಲ ಹೆಸರು ದುಂಡಿರಾಜ್ ಗೋವಿಂದ ಫಾಲ್ಕೆ. ಇವರು ವೃತ್ತಿಯಲ್ಲಿ ಸಂಸ್ಕೃತ ಪ್ರಾಧ್ಯಾಪಕರು. ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿದ್ದ ಫಾಲ್ಕೆಯವರು ವೃತ್ತಿ ಜೀವನಕ್ಕಾಗಿ ಮುಂಬಯಿಯಲ್ಲಿ ನೆಲೆಸಿದ್ದರು.

ಅದೃಷ್ಟವಶಾತ್ ಇವರಿಗೆ ಮುಂಬೈನ ಪ್ರಸಿದ್ಧ ‘ಜೆ.ಜೆ.ಸ್ಕೂಲ್ ಆಫ್ ಆರ್ಟ್ಸ್‌ನಲ್ಲಿ ಚಿತ್ರಕಲಾ ತರಗತಿ’ಗೆ ಪ್ರವೇಶ ದೊರಕಿತು. ನಂತರ ಮುಂದಿನ ಕಲಿಕೆಗಾಗಿ ‘ಬರೋಡದ ಕಲಾಭವನ’ ಸೇರಿದರು. ಶಿಕ್ಷಣವನ್ನು ಮುಗಿಸಿದ ಇವರಿಗೆ ‘ಸರಕಾರಿ ಪ್ರಾಚ್ಯವಸ್ತು ಇಲಾಖೆ’ಯಲ್ಲಿ ‘ಚಿತ್ರಕಾರ’ರಾಗಿ, ‘ಛಾಯಾಚಿತ್ರಗಾರ’ರಾಗಿ 1903 ರಲ್ಲಿ ‘ಖಾಯಂ ನೌಕರಿ’ಯಲ್ಲಿ ಭರ್ತಿಯಾದರು. ಅಲ್ಲಿ ‘ಪ್ರೊ.ಗುಜ್ಜರ್’ ಎಂಬುವವರು ಇವರ ಆಸಕ್ತಿಯನ್ನು ನೋಡಿ ಛಾಯಾಚಿತ್ರ ವಿಭಾಗದ ಮೇಲ್ವಿಚಾರಕನಾಗಿ ನೇಮಿಸಿದರು. ಅಲ್ಲಿಂದ ಧುಂಡಿರಾಜರು ‘ಫೋಟೋ-ಕೆಮಿಕಲ್ ರಂಗ’ದಲ್ಲಿ ಹಲವಾರು ಸಾಧನೆಗಳನ್ನು ಮಾಡಿದರು.

ಫಾಲ್ಕೆಯವರು ಒಮ್ಮೆ ಬೇಸರ ಕಳೆಯಲೆಂದು “ಲೈಫ್ ಆಫ್ ಕ್ರೈಸ್ಟ್” ಎಂಬ ಇಂಗ್ಲೀಷ್ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಹೋಗಿದ್ದರು. ಚಿತ್ರಮಂದಿರದ ಬಳಿ ಎಸೆದಿದ್ದ ರೀಲಿನ ಸಣ್ಣ ಸಣ್ಣ ತುಣುಕುಗಳನ್ನು ಸಂಗ್ರಹಿಸಿ ಅದನ್ನು ಮಸೂರದ ಸಹಾಯದಿಂದ ನೋಡಿದರು ನಂತರ ಆಟಿಕೆಯ ಸಿನಿಮಾ ಪ್ರದರ್ಶಿಸುವ ಯಂತ್ರವೊಂದನ್ನು, ಸಣ್ಣ ಪ್ರಮಾಣದ ರೀಲನ್ನು ತಂದು ಮನೆ ಗೋಡೆ ಮೇಲೆ ಚಿತ್ರ ಪ್ರದರ್ಶಿಸಿದರು. ಅಲ್ಲಿಂದ ಇವರಿಗೆ ಅಪ್ಪಟ ಭಾರತೀಯ ಚಿತ್ರ ಮಾಡಬೇಕೆಂಬ ಹಂಬಲ ಮೂಡಿತು. ತಮ್ಮ ಸಮಸ್ತ ಆಸ್ತಿಯನ್ನು ಅಡವಿಟ್ಟು, ಚಿತ್ರ ನಿರ್ಮಾಣಕ್ಕೆ ಬೇಕಾಗುವ ಯಂತ್ರೋಪಕರಣಗಳನ್ನು ಖರೀದಿಸಲು ಲಂಡನ್ನಿಗೆ ತೆರಳಿದರು.

ಅಲ್ಲಿನ ‘ಚಿತ್ರ ನಿರ್ಮಾಪಕ ಸಿಸಿಲ್ ‘ ಅವರ ಗರಡಿಯಲ್ಲಿ ಚಲನಚಿತ್ರ ನಿರ್ಮಾಣದ ಎಲ್ಲಾ ವಿಭಾಗಗಳನ್ನು ಅಧ್ಯಯನ ಮಾಡಿ, ಚಿತ್ರ ನಿರ್ಮಾಣದ ಅಚಲ ನಿರ್ಧಾರದೊಂದಿಗೆ ಭಾರತಕ್ಕೆ ಹಿಂದಿರುಗಿದರು. ಫಾಲ್ಕೆಯವರು ತಮ್ಮ ಮನೆಯನ್ನೇ ಫಾಲ್ಕೆ ಫಿಲ್ಮ್ ಸಂಸ್ಥೆಯಾಗಿ ಬಳಸಿಕೊಂಡಿದ್ದರು. ‘ರಾಜಾ ಹರಿಶ್ಚಂದ್ರನ ಕಥೆ’ಯನ್ನು ಸಿನಿಮಾ ಮಾಡಲು ಮುಂದಾದ ಫಾಲ್ಕೆಯವರು ಲೇಖನ, ನಿರ್ಮಾಣ ಕಾರ್ಯ, ನಿರ್ದೇಶನ, ಹಾಗೂ ನಟನೆ ಮತ್ತು ಛಾಯಾಗ್ರಹಣವನ್ನೂ ಒಬ್ಬರೇ ಸಮರ್ಪಕವಾಗಿ ನಿರ್ವಹಿಸಿದರು. ಈ ಚಿತ್ರವೂ ಭಾರತದ ಪ್ರಪಥಮ ಸಿನಿಮಾವೆಂದು ಖ್ಯಾತಿ ಪಡೆಯಿತು.

ಈ ಸಿನಿಮಾದ ಮೂಲಕ ಭಾರತೀಯ ಚಲನಚಿತ್ರರಂಗದ ಮಾಯಾಲೋಕವನ್ನು ಸೃಷ್ಟಿಸಿದ ಕೀರ್ತಿ ಫಾಲ್ಕೆಯವರದ್ದು. ಹಾಗಾಗಿಯೇ ಇವರನ್ನು ಭಾರತೀಯ ಚಿತ್ರರಂಗದ ಪಿತಾಮಹನೆಂದು ಕರೆಯಲಾಗುತ್ತಿದೆ. ಇವರ ನೆನಪಿನಲ್ಲಿ ಕೇಂದ್ರ ಸರ್ಕಾರ ಆರಂಭಿಸಿದ ಪ್ರಶಸ್ತಿ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ. ಜೊತೆಗೆ ಸರ್ಕಾರ ಇವರ ಹೆಸರಿನಲ್ಲಿ ಅಂಚೇ ಚೀಟಿಯನ್ನು ಸಹ ಬಿಡುಗಡೆ ಮಾಡಿತ್ತು.

ನಟ ಯಶ್ ಪಡೆದ ದಕ್ಷಿಣ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಯಾವುದು.

ಭಾರತ ಸರ್ಕಾರ ನೀಡುವ ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ ಅಲ್ಲದೆ, ಫಾಲ್ಕೆಯವರ ಹೆಸರಿನಲ್ಲಿ ಹಲವಾರು ಅಕಾಡೆಮಿಗಳು ಮತ್ತು ಅವಾರ್ಡ್‌ಗಳು ಹುಟ್ಟಿಕೊಂಡಿವೆ. ಅಂತೆಯೆ ದಾದಾಸಾಹೇಬ್ ಫಾಲ್ಕೆ ಇಂಟರ್ ನ್ಯಾಷನಲ್ ಫಿಲ್ಮ ಫೆಸ್ಟ್ ಕೂಡ ಒಂದು. ಇದು ಮೊನ್ನೆ ಹೈದರಾಬಾದ್‌ನಲ್ಲಿ ಕಾರ್ಯಕ್ರಮವನ್ನು ನಡೆಸಿತು. ಮೊತ್ತಮೊದಲ ಬಾರಿಗೆ ಅದು ‘ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ’ಯನ್ನು ನೀಡಿದೆ. ಇದು ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಆ ವರ್ಷ ಹೆಚ್ಚು ಖ್ಯಾತಿ ಪಡೆದ ಮತ್ತು ಉತ್ತಮ ನಟನೆಗೆ ನೀಡಲಾಗುವ ಪ್ರಶಸ್ತಿ. ಕೆಜಿಎಫ್-1 ಸಿನಿಮಾದ ಅಭಿನಯಕ್ಕಾಗಿ ನಟ ಯಶ್ ಈ ಪ್ರಶಸ್ತಿ ವಿಜೇತರಾಗಿದ್ದಾರೆ. ಆದರೆ ಇದು ಭಾರತ ಸರ್ಕಾರ ಪ್ರತಿ ವರ್ಷ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನೀಡಲಾಗುವ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ಯಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...