Homeಮುಖಪುಟಏನಿದು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ? ಯಾರೆಲ್ಲಾ ಪಡೆದಿದ್ದಾರೆ?

ಏನಿದು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ? ಯಾರೆಲ್ಲಾ ಪಡೆದಿದ್ದಾರೆ?

- Advertisement -
- Advertisement -

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಭಾರತೀಯ ಚಿತ್ರರಂಗದಲ್ಲಿ ಜೀವಮಾನದ ಸಾಧನೆ ಮಾಡಿದವರಿಗೆ ಭಾರತ ಸರ್ಕಾರವು ನೀಡುವ ಅತ್ಯುತ್ತಮ ವಾರ್ಷಿಕ ಪ್ರಶಸ್ತಿ. ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರು ಪಡೆದಿರುವ ದಾದಾಸಾಹೇಬ್ ಫಾಲ್ಕೆಯವರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಭಾರಿ ಈ ಪ್ರಶಸ್ತಿಗೆ ಹಿಂದಿ ಚಿತ್ರರಂಗದ ಹಿರಿಯ ಪ್ರಸಿದ್ದ ನಟ ಅಮಿತಾಬ್ ಬಚ್ಚನ್‌ರವರು ಭಾಜನರಾಗಿದ್ದಾರೆ.

ಚಿತ್ರಕೃಪೆ: ಸತೀಶ್ ಆಚಾರ್ಯ

ಈ ಪ್ರಶಸ್ತಿಯನ್ನು 1969ರಲ್ಲಿ ಇಂದಿರಾ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರ ಆರಂಭಿಸಿತು. ಈ ಪ್ರಶಸ್ತಿಯನ್ನು ಪ್ರತಿ ವರ್ಷ ‘ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನದ ಸಂದರ್ಭ’ದಲ್ಲಿ ನೀಡಲಾಗುತ್ತದೆ. ಮೊಟ್ಟ ಮೊದಲ ಪ್ರಶಸ್ತಿಯನ್ನು ಬಾಲಿಹುಡ್‌ನ ಖ್ಯಾತ ನಟಿ ದೇವಿಕಾರಾಣೀಯವರಿಗೆ 1969ರಲ್ಲಿ ನೀಡಲಾಯಿತು. 43ನೇ ಪ್ರಶಸ್ತಿಯನ್ನು 1995ರಲ್ಲಿ ಕನ್ನಡದ ಮೇರು ನಟ ಡಾ.ರಾಜ್ ಕುಮಾರ್ ಅವರಿಗೆ ನೀಡಿ ಗೌರವಿಸಲಾಗಿದೆ. ರಾಜ್ ಕುಮಾರ್ ಅವರು ಫಾಲ್ಕೆ ಪ್ರಶಸ್ತಿ ಪಡೆದ ಕನ್ನಡ ಚಿತ್ರರಂಗದ ಏಕೈಕ ನಟರೆಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಈ ಪ್ರಶಸ್ತಿಯನ್ನು ಕೇವಲ ಬೆರಳೆಣಿಕೆಯ ಸಿನಿಮಾಗಳಲ್ಲಿ ಮಿಂಚಿದವರಿಗೆ ನೀಡಲಾಗುವುದಿಲ್ಲ. ಭಾರತೀಯ ಚಿತ್ರರಂಗದಲ್ಲಿ ಸಾಕಷ್ಟು ಅನುಭವ ಮತ್ತು ಚಿತ್ರರಂಗದಲ್ಲಿ ಸುಧೀರ್ಘ ಕೊಡುಗೆ ನೀಡಿದವರಿಗೆ ಭಾರತ ಸರ್ಕಾರ ನೀಡಲಾಗುವ ಪ್ರಶಸ್ತಿ ಇದು.

ಯಾರೂ ಈ ದಾದಾಸಾಹೇಬ್ ಫಾಲ್ಕೆ?

ಮಹಾರಾಷ್ಟ್ರದ ಹಾಗೂ ಭಾರತದ ಬೆಳ್ಳಿತೆರೆಯ ಇತಿಹಾಸದಲ್ಲಿ, ಎಂದೆಂದಿಗೂ ಮರೆಯಲಾರದ ವ್ಯಕ್ತಿಯಾಗಿ ಫಾಲ್ಕೆಯವರು ವಿಜೃಂಭಿಸುತ್ತಿದ್ದಾರೆ. ಭಾರತೀಯ ಚಿತ್ರರಂಗದ ಪಿತಾಮಹರೆಂದು ಕರೆಯಲ್ಪಡುವ ದಾದಾ ಸಾಹೇಬ್ ಫಾಲ್ಕೆಯವರ ಮೂಲ ಹೆಸರು ದುಂಡಿರಾಜ್ ಗೋವಿಂದ ಫಾಲ್ಕೆ. ಇವರು ವೃತ್ತಿಯಲ್ಲಿ ಸಂಸ್ಕೃತ ಪ್ರಾಧ್ಯಾಪಕರು. ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿದ್ದ ಫಾಲ್ಕೆಯವರು ವೃತ್ತಿ ಜೀವನಕ್ಕಾಗಿ ಮುಂಬಯಿಯಲ್ಲಿ ನೆಲೆಸಿದ್ದರು.

ಅದೃಷ್ಟವಶಾತ್ ಇವರಿಗೆ ಮುಂಬೈನ ಪ್ರಸಿದ್ಧ ‘ಜೆ.ಜೆ.ಸ್ಕೂಲ್ ಆಫ್ ಆರ್ಟ್ಸ್‌ನಲ್ಲಿ ಚಿತ್ರಕಲಾ ತರಗತಿ’ಗೆ ಪ್ರವೇಶ ದೊರಕಿತು. ನಂತರ ಮುಂದಿನ ಕಲಿಕೆಗಾಗಿ ‘ಬರೋಡದ ಕಲಾಭವನ’ ಸೇರಿದರು. ಶಿಕ್ಷಣವನ್ನು ಮುಗಿಸಿದ ಇವರಿಗೆ ‘ಸರಕಾರಿ ಪ್ರಾಚ್ಯವಸ್ತು ಇಲಾಖೆ’ಯಲ್ಲಿ ‘ಚಿತ್ರಕಾರ’ರಾಗಿ, ‘ಛಾಯಾಚಿತ್ರಗಾರ’ರಾಗಿ 1903 ರಲ್ಲಿ ‘ಖಾಯಂ ನೌಕರಿ’ಯಲ್ಲಿ ಭರ್ತಿಯಾದರು. ಅಲ್ಲಿ ‘ಪ್ರೊ.ಗುಜ್ಜರ್’ ಎಂಬುವವರು ಇವರ ಆಸಕ್ತಿಯನ್ನು ನೋಡಿ ಛಾಯಾಚಿತ್ರ ವಿಭಾಗದ ಮೇಲ್ವಿಚಾರಕನಾಗಿ ನೇಮಿಸಿದರು. ಅಲ್ಲಿಂದ ಧುಂಡಿರಾಜರು ‘ಫೋಟೋ-ಕೆಮಿಕಲ್ ರಂಗ’ದಲ್ಲಿ ಹಲವಾರು ಸಾಧನೆಗಳನ್ನು ಮಾಡಿದರು.

ಫಾಲ್ಕೆಯವರು ಒಮ್ಮೆ ಬೇಸರ ಕಳೆಯಲೆಂದು “ಲೈಫ್ ಆಫ್ ಕ್ರೈಸ್ಟ್” ಎಂಬ ಇಂಗ್ಲೀಷ್ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಹೋಗಿದ್ದರು. ಚಿತ್ರಮಂದಿರದ ಬಳಿ ಎಸೆದಿದ್ದ ರೀಲಿನ ಸಣ್ಣ ಸಣ್ಣ ತುಣುಕುಗಳನ್ನು ಸಂಗ್ರಹಿಸಿ ಅದನ್ನು ಮಸೂರದ ಸಹಾಯದಿಂದ ನೋಡಿದರು ನಂತರ ಆಟಿಕೆಯ ಸಿನಿಮಾ ಪ್ರದರ್ಶಿಸುವ ಯಂತ್ರವೊಂದನ್ನು, ಸಣ್ಣ ಪ್ರಮಾಣದ ರೀಲನ್ನು ತಂದು ಮನೆ ಗೋಡೆ ಮೇಲೆ ಚಿತ್ರ ಪ್ರದರ್ಶಿಸಿದರು. ಅಲ್ಲಿಂದ ಇವರಿಗೆ ಅಪ್ಪಟ ಭಾರತೀಯ ಚಿತ್ರ ಮಾಡಬೇಕೆಂಬ ಹಂಬಲ ಮೂಡಿತು. ತಮ್ಮ ಸಮಸ್ತ ಆಸ್ತಿಯನ್ನು ಅಡವಿಟ್ಟು, ಚಿತ್ರ ನಿರ್ಮಾಣಕ್ಕೆ ಬೇಕಾಗುವ ಯಂತ್ರೋಪಕರಣಗಳನ್ನು ಖರೀದಿಸಲು ಲಂಡನ್ನಿಗೆ ತೆರಳಿದರು.

ಅಲ್ಲಿನ ‘ಚಿತ್ರ ನಿರ್ಮಾಪಕ ಸಿಸಿಲ್ ‘ ಅವರ ಗರಡಿಯಲ್ಲಿ ಚಲನಚಿತ್ರ ನಿರ್ಮಾಣದ ಎಲ್ಲಾ ವಿಭಾಗಗಳನ್ನು ಅಧ್ಯಯನ ಮಾಡಿ, ಚಿತ್ರ ನಿರ್ಮಾಣದ ಅಚಲ ನಿರ್ಧಾರದೊಂದಿಗೆ ಭಾರತಕ್ಕೆ ಹಿಂದಿರುಗಿದರು. ಫಾಲ್ಕೆಯವರು ತಮ್ಮ ಮನೆಯನ್ನೇ ಫಾಲ್ಕೆ ಫಿಲ್ಮ್ ಸಂಸ್ಥೆಯಾಗಿ ಬಳಸಿಕೊಂಡಿದ್ದರು. ‘ರಾಜಾ ಹರಿಶ್ಚಂದ್ರನ ಕಥೆ’ಯನ್ನು ಸಿನಿಮಾ ಮಾಡಲು ಮುಂದಾದ ಫಾಲ್ಕೆಯವರು ಲೇಖನ, ನಿರ್ಮಾಣ ಕಾರ್ಯ, ನಿರ್ದೇಶನ, ಹಾಗೂ ನಟನೆ ಮತ್ತು ಛಾಯಾಗ್ರಹಣವನ್ನೂ ಒಬ್ಬರೇ ಸಮರ್ಪಕವಾಗಿ ನಿರ್ವಹಿಸಿದರು. ಈ ಚಿತ್ರವೂ ಭಾರತದ ಪ್ರಪಥಮ ಸಿನಿಮಾವೆಂದು ಖ್ಯಾತಿ ಪಡೆಯಿತು.

ಈ ಸಿನಿಮಾದ ಮೂಲಕ ಭಾರತೀಯ ಚಲನಚಿತ್ರರಂಗದ ಮಾಯಾಲೋಕವನ್ನು ಸೃಷ್ಟಿಸಿದ ಕೀರ್ತಿ ಫಾಲ್ಕೆಯವರದ್ದು. ಹಾಗಾಗಿಯೇ ಇವರನ್ನು ಭಾರತೀಯ ಚಿತ್ರರಂಗದ ಪಿತಾಮಹನೆಂದು ಕರೆಯಲಾಗುತ್ತಿದೆ. ಇವರ ನೆನಪಿನಲ್ಲಿ ಕೇಂದ್ರ ಸರ್ಕಾರ ಆರಂಭಿಸಿದ ಪ್ರಶಸ್ತಿ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ. ಜೊತೆಗೆ ಸರ್ಕಾರ ಇವರ ಹೆಸರಿನಲ್ಲಿ ಅಂಚೇ ಚೀಟಿಯನ್ನು ಸಹ ಬಿಡುಗಡೆ ಮಾಡಿತ್ತು.

ನಟ ಯಶ್ ಪಡೆದ ದಕ್ಷಿಣ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಯಾವುದು.

ಭಾರತ ಸರ್ಕಾರ ನೀಡುವ ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ ಅಲ್ಲದೆ, ಫಾಲ್ಕೆಯವರ ಹೆಸರಿನಲ್ಲಿ ಹಲವಾರು ಅಕಾಡೆಮಿಗಳು ಮತ್ತು ಅವಾರ್ಡ್‌ಗಳು ಹುಟ್ಟಿಕೊಂಡಿವೆ. ಅಂತೆಯೆ ದಾದಾಸಾಹೇಬ್ ಫಾಲ್ಕೆ ಇಂಟರ್ ನ್ಯಾಷನಲ್ ಫಿಲ್ಮ ಫೆಸ್ಟ್ ಕೂಡ ಒಂದು. ಇದು ಮೊನ್ನೆ ಹೈದರಾಬಾದ್‌ನಲ್ಲಿ ಕಾರ್ಯಕ್ರಮವನ್ನು ನಡೆಸಿತು. ಮೊತ್ತಮೊದಲ ಬಾರಿಗೆ ಅದು ‘ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ’ಯನ್ನು ನೀಡಿದೆ. ಇದು ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಆ ವರ್ಷ ಹೆಚ್ಚು ಖ್ಯಾತಿ ಪಡೆದ ಮತ್ತು ಉತ್ತಮ ನಟನೆಗೆ ನೀಡಲಾಗುವ ಪ್ರಶಸ್ತಿ. ಕೆಜಿಎಫ್-1 ಸಿನಿಮಾದ ಅಭಿನಯಕ್ಕಾಗಿ ನಟ ಯಶ್ ಈ ಪ್ರಶಸ್ತಿ ವಿಜೇತರಾಗಿದ್ದಾರೆ. ಆದರೆ ಇದು ಭಾರತ ಸರ್ಕಾರ ಪ್ರತಿ ವರ್ಷ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನೀಡಲಾಗುವ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ಯಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...