Homeಮುಖಪುಟಏನಿದು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ? ಯಾರೆಲ್ಲಾ ಪಡೆದಿದ್ದಾರೆ?

ಏನಿದು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ? ಯಾರೆಲ್ಲಾ ಪಡೆದಿದ್ದಾರೆ?

- Advertisement -
- Advertisement -

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಭಾರತೀಯ ಚಿತ್ರರಂಗದಲ್ಲಿ ಜೀವಮಾನದ ಸಾಧನೆ ಮಾಡಿದವರಿಗೆ ಭಾರತ ಸರ್ಕಾರವು ನೀಡುವ ಅತ್ಯುತ್ತಮ ವಾರ್ಷಿಕ ಪ್ರಶಸ್ತಿ. ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರು ಪಡೆದಿರುವ ದಾದಾಸಾಹೇಬ್ ಫಾಲ್ಕೆಯವರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಭಾರಿ ಈ ಪ್ರಶಸ್ತಿಗೆ ಹಿಂದಿ ಚಿತ್ರರಂಗದ ಹಿರಿಯ ಪ್ರಸಿದ್ದ ನಟ ಅಮಿತಾಬ್ ಬಚ್ಚನ್‌ರವರು ಭಾಜನರಾಗಿದ್ದಾರೆ.

ಚಿತ್ರಕೃಪೆ: ಸತೀಶ್ ಆಚಾರ್ಯ

ಈ ಪ್ರಶಸ್ತಿಯನ್ನು 1969ರಲ್ಲಿ ಇಂದಿರಾ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರ ಆರಂಭಿಸಿತು. ಈ ಪ್ರಶಸ್ತಿಯನ್ನು ಪ್ರತಿ ವರ್ಷ ‘ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನದ ಸಂದರ್ಭ’ದಲ್ಲಿ ನೀಡಲಾಗುತ್ತದೆ. ಮೊಟ್ಟ ಮೊದಲ ಪ್ರಶಸ್ತಿಯನ್ನು ಬಾಲಿಹುಡ್‌ನ ಖ್ಯಾತ ನಟಿ ದೇವಿಕಾರಾಣೀಯವರಿಗೆ 1969ರಲ್ಲಿ ನೀಡಲಾಯಿತು. 43ನೇ ಪ್ರಶಸ್ತಿಯನ್ನು 1995ರಲ್ಲಿ ಕನ್ನಡದ ಮೇರು ನಟ ಡಾ.ರಾಜ್ ಕುಮಾರ್ ಅವರಿಗೆ ನೀಡಿ ಗೌರವಿಸಲಾಗಿದೆ. ರಾಜ್ ಕುಮಾರ್ ಅವರು ಫಾಲ್ಕೆ ಪ್ರಶಸ್ತಿ ಪಡೆದ ಕನ್ನಡ ಚಿತ್ರರಂಗದ ಏಕೈಕ ನಟರೆಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಈ ಪ್ರಶಸ್ತಿಯನ್ನು ಕೇವಲ ಬೆರಳೆಣಿಕೆಯ ಸಿನಿಮಾಗಳಲ್ಲಿ ಮಿಂಚಿದವರಿಗೆ ನೀಡಲಾಗುವುದಿಲ್ಲ. ಭಾರತೀಯ ಚಿತ್ರರಂಗದಲ್ಲಿ ಸಾಕಷ್ಟು ಅನುಭವ ಮತ್ತು ಚಿತ್ರರಂಗದಲ್ಲಿ ಸುಧೀರ್ಘ ಕೊಡುಗೆ ನೀಡಿದವರಿಗೆ ಭಾರತ ಸರ್ಕಾರ ನೀಡಲಾಗುವ ಪ್ರಶಸ್ತಿ ಇದು.

ಯಾರೂ ಈ ದಾದಾಸಾಹೇಬ್ ಫಾಲ್ಕೆ?

ಮಹಾರಾಷ್ಟ್ರದ ಹಾಗೂ ಭಾರತದ ಬೆಳ್ಳಿತೆರೆಯ ಇತಿಹಾಸದಲ್ಲಿ, ಎಂದೆಂದಿಗೂ ಮರೆಯಲಾರದ ವ್ಯಕ್ತಿಯಾಗಿ ಫಾಲ್ಕೆಯವರು ವಿಜೃಂಭಿಸುತ್ತಿದ್ದಾರೆ. ಭಾರತೀಯ ಚಿತ್ರರಂಗದ ಪಿತಾಮಹರೆಂದು ಕರೆಯಲ್ಪಡುವ ದಾದಾ ಸಾಹೇಬ್ ಫಾಲ್ಕೆಯವರ ಮೂಲ ಹೆಸರು ದುಂಡಿರಾಜ್ ಗೋವಿಂದ ಫಾಲ್ಕೆ. ಇವರು ವೃತ್ತಿಯಲ್ಲಿ ಸಂಸ್ಕೃತ ಪ್ರಾಧ್ಯಾಪಕರು. ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿದ್ದ ಫಾಲ್ಕೆಯವರು ವೃತ್ತಿ ಜೀವನಕ್ಕಾಗಿ ಮುಂಬಯಿಯಲ್ಲಿ ನೆಲೆಸಿದ್ದರು.

ಅದೃಷ್ಟವಶಾತ್ ಇವರಿಗೆ ಮುಂಬೈನ ಪ್ರಸಿದ್ಧ ‘ಜೆ.ಜೆ.ಸ್ಕೂಲ್ ಆಫ್ ಆರ್ಟ್ಸ್‌ನಲ್ಲಿ ಚಿತ್ರಕಲಾ ತರಗತಿ’ಗೆ ಪ್ರವೇಶ ದೊರಕಿತು. ನಂತರ ಮುಂದಿನ ಕಲಿಕೆಗಾಗಿ ‘ಬರೋಡದ ಕಲಾಭವನ’ ಸೇರಿದರು. ಶಿಕ್ಷಣವನ್ನು ಮುಗಿಸಿದ ಇವರಿಗೆ ‘ಸರಕಾರಿ ಪ್ರಾಚ್ಯವಸ್ತು ಇಲಾಖೆ’ಯಲ್ಲಿ ‘ಚಿತ್ರಕಾರ’ರಾಗಿ, ‘ಛಾಯಾಚಿತ್ರಗಾರ’ರಾಗಿ 1903 ರಲ್ಲಿ ‘ಖಾಯಂ ನೌಕರಿ’ಯಲ್ಲಿ ಭರ್ತಿಯಾದರು. ಅಲ್ಲಿ ‘ಪ್ರೊ.ಗುಜ್ಜರ್’ ಎಂಬುವವರು ಇವರ ಆಸಕ್ತಿಯನ್ನು ನೋಡಿ ಛಾಯಾಚಿತ್ರ ವಿಭಾಗದ ಮೇಲ್ವಿಚಾರಕನಾಗಿ ನೇಮಿಸಿದರು. ಅಲ್ಲಿಂದ ಧುಂಡಿರಾಜರು ‘ಫೋಟೋ-ಕೆಮಿಕಲ್ ರಂಗ’ದಲ್ಲಿ ಹಲವಾರು ಸಾಧನೆಗಳನ್ನು ಮಾಡಿದರು.

ಫಾಲ್ಕೆಯವರು ಒಮ್ಮೆ ಬೇಸರ ಕಳೆಯಲೆಂದು “ಲೈಫ್ ಆಫ್ ಕ್ರೈಸ್ಟ್” ಎಂಬ ಇಂಗ್ಲೀಷ್ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಹೋಗಿದ್ದರು. ಚಿತ್ರಮಂದಿರದ ಬಳಿ ಎಸೆದಿದ್ದ ರೀಲಿನ ಸಣ್ಣ ಸಣ್ಣ ತುಣುಕುಗಳನ್ನು ಸಂಗ್ರಹಿಸಿ ಅದನ್ನು ಮಸೂರದ ಸಹಾಯದಿಂದ ನೋಡಿದರು ನಂತರ ಆಟಿಕೆಯ ಸಿನಿಮಾ ಪ್ರದರ್ಶಿಸುವ ಯಂತ್ರವೊಂದನ್ನು, ಸಣ್ಣ ಪ್ರಮಾಣದ ರೀಲನ್ನು ತಂದು ಮನೆ ಗೋಡೆ ಮೇಲೆ ಚಿತ್ರ ಪ್ರದರ್ಶಿಸಿದರು. ಅಲ್ಲಿಂದ ಇವರಿಗೆ ಅಪ್ಪಟ ಭಾರತೀಯ ಚಿತ್ರ ಮಾಡಬೇಕೆಂಬ ಹಂಬಲ ಮೂಡಿತು. ತಮ್ಮ ಸಮಸ್ತ ಆಸ್ತಿಯನ್ನು ಅಡವಿಟ್ಟು, ಚಿತ್ರ ನಿರ್ಮಾಣಕ್ಕೆ ಬೇಕಾಗುವ ಯಂತ್ರೋಪಕರಣಗಳನ್ನು ಖರೀದಿಸಲು ಲಂಡನ್ನಿಗೆ ತೆರಳಿದರು.

ಅಲ್ಲಿನ ‘ಚಿತ್ರ ನಿರ್ಮಾಪಕ ಸಿಸಿಲ್ ‘ ಅವರ ಗರಡಿಯಲ್ಲಿ ಚಲನಚಿತ್ರ ನಿರ್ಮಾಣದ ಎಲ್ಲಾ ವಿಭಾಗಗಳನ್ನು ಅಧ್ಯಯನ ಮಾಡಿ, ಚಿತ್ರ ನಿರ್ಮಾಣದ ಅಚಲ ನಿರ್ಧಾರದೊಂದಿಗೆ ಭಾರತಕ್ಕೆ ಹಿಂದಿರುಗಿದರು. ಫಾಲ್ಕೆಯವರು ತಮ್ಮ ಮನೆಯನ್ನೇ ಫಾಲ್ಕೆ ಫಿಲ್ಮ್ ಸಂಸ್ಥೆಯಾಗಿ ಬಳಸಿಕೊಂಡಿದ್ದರು. ‘ರಾಜಾ ಹರಿಶ್ಚಂದ್ರನ ಕಥೆ’ಯನ್ನು ಸಿನಿಮಾ ಮಾಡಲು ಮುಂದಾದ ಫಾಲ್ಕೆಯವರು ಲೇಖನ, ನಿರ್ಮಾಣ ಕಾರ್ಯ, ನಿರ್ದೇಶನ, ಹಾಗೂ ನಟನೆ ಮತ್ತು ಛಾಯಾಗ್ರಹಣವನ್ನೂ ಒಬ್ಬರೇ ಸಮರ್ಪಕವಾಗಿ ನಿರ್ವಹಿಸಿದರು. ಈ ಚಿತ್ರವೂ ಭಾರತದ ಪ್ರಪಥಮ ಸಿನಿಮಾವೆಂದು ಖ್ಯಾತಿ ಪಡೆಯಿತು.

ಈ ಸಿನಿಮಾದ ಮೂಲಕ ಭಾರತೀಯ ಚಲನಚಿತ್ರರಂಗದ ಮಾಯಾಲೋಕವನ್ನು ಸೃಷ್ಟಿಸಿದ ಕೀರ್ತಿ ಫಾಲ್ಕೆಯವರದ್ದು. ಹಾಗಾಗಿಯೇ ಇವರನ್ನು ಭಾರತೀಯ ಚಿತ್ರರಂಗದ ಪಿತಾಮಹನೆಂದು ಕರೆಯಲಾಗುತ್ತಿದೆ. ಇವರ ನೆನಪಿನಲ್ಲಿ ಕೇಂದ್ರ ಸರ್ಕಾರ ಆರಂಭಿಸಿದ ಪ್ರಶಸ್ತಿ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ. ಜೊತೆಗೆ ಸರ್ಕಾರ ಇವರ ಹೆಸರಿನಲ್ಲಿ ಅಂಚೇ ಚೀಟಿಯನ್ನು ಸಹ ಬಿಡುಗಡೆ ಮಾಡಿತ್ತು.

ನಟ ಯಶ್ ಪಡೆದ ದಕ್ಷಿಣ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಯಾವುದು.

ಭಾರತ ಸರ್ಕಾರ ನೀಡುವ ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ ಅಲ್ಲದೆ, ಫಾಲ್ಕೆಯವರ ಹೆಸರಿನಲ್ಲಿ ಹಲವಾರು ಅಕಾಡೆಮಿಗಳು ಮತ್ತು ಅವಾರ್ಡ್‌ಗಳು ಹುಟ್ಟಿಕೊಂಡಿವೆ. ಅಂತೆಯೆ ದಾದಾಸಾಹೇಬ್ ಫಾಲ್ಕೆ ಇಂಟರ್ ನ್ಯಾಷನಲ್ ಫಿಲ್ಮ ಫೆಸ್ಟ್ ಕೂಡ ಒಂದು. ಇದು ಮೊನ್ನೆ ಹೈದರಾಬಾದ್‌ನಲ್ಲಿ ಕಾರ್ಯಕ್ರಮವನ್ನು ನಡೆಸಿತು. ಮೊತ್ತಮೊದಲ ಬಾರಿಗೆ ಅದು ‘ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ’ಯನ್ನು ನೀಡಿದೆ. ಇದು ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಆ ವರ್ಷ ಹೆಚ್ಚು ಖ್ಯಾತಿ ಪಡೆದ ಮತ್ತು ಉತ್ತಮ ನಟನೆಗೆ ನೀಡಲಾಗುವ ಪ್ರಶಸ್ತಿ. ಕೆಜಿಎಫ್-1 ಸಿನಿಮಾದ ಅಭಿನಯಕ್ಕಾಗಿ ನಟ ಯಶ್ ಈ ಪ್ರಶಸ್ತಿ ವಿಜೇತರಾಗಿದ್ದಾರೆ. ಆದರೆ ಇದು ಭಾರತ ಸರ್ಕಾರ ಪ್ರತಿ ವರ್ಷ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನೀಡಲಾಗುವ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ಯಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...