Homeಮುಖಪುಟಏನಿದು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ? ಯಾರೆಲ್ಲಾ ಪಡೆದಿದ್ದಾರೆ?

ಏನಿದು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ? ಯಾರೆಲ್ಲಾ ಪಡೆದಿದ್ದಾರೆ?

- Advertisement -
- Advertisement -

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಭಾರತೀಯ ಚಿತ್ರರಂಗದಲ್ಲಿ ಜೀವಮಾನದ ಸಾಧನೆ ಮಾಡಿದವರಿಗೆ ಭಾರತ ಸರ್ಕಾರವು ನೀಡುವ ಅತ್ಯುತ್ತಮ ವಾರ್ಷಿಕ ಪ್ರಶಸ್ತಿ. ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರು ಪಡೆದಿರುವ ದಾದಾಸಾಹೇಬ್ ಫಾಲ್ಕೆಯವರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಭಾರಿ ಈ ಪ್ರಶಸ್ತಿಗೆ ಹಿಂದಿ ಚಿತ್ರರಂಗದ ಹಿರಿಯ ಪ್ರಸಿದ್ದ ನಟ ಅಮಿತಾಬ್ ಬಚ್ಚನ್‌ರವರು ಭಾಜನರಾಗಿದ್ದಾರೆ.

ಚಿತ್ರಕೃಪೆ: ಸತೀಶ್ ಆಚಾರ್ಯ

ಈ ಪ್ರಶಸ್ತಿಯನ್ನು 1969ರಲ್ಲಿ ಇಂದಿರಾ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರ ಆರಂಭಿಸಿತು. ಈ ಪ್ರಶಸ್ತಿಯನ್ನು ಪ್ರತಿ ವರ್ಷ ‘ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನದ ಸಂದರ್ಭ’ದಲ್ಲಿ ನೀಡಲಾಗುತ್ತದೆ. ಮೊಟ್ಟ ಮೊದಲ ಪ್ರಶಸ್ತಿಯನ್ನು ಬಾಲಿಹುಡ್‌ನ ಖ್ಯಾತ ನಟಿ ದೇವಿಕಾರಾಣೀಯವರಿಗೆ 1969ರಲ್ಲಿ ನೀಡಲಾಯಿತು. 43ನೇ ಪ್ರಶಸ್ತಿಯನ್ನು 1995ರಲ್ಲಿ ಕನ್ನಡದ ಮೇರು ನಟ ಡಾ.ರಾಜ್ ಕುಮಾರ್ ಅವರಿಗೆ ನೀಡಿ ಗೌರವಿಸಲಾಗಿದೆ. ರಾಜ್ ಕುಮಾರ್ ಅವರು ಫಾಲ್ಕೆ ಪ್ರಶಸ್ತಿ ಪಡೆದ ಕನ್ನಡ ಚಿತ್ರರಂಗದ ಏಕೈಕ ನಟರೆಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಈ ಪ್ರಶಸ್ತಿಯನ್ನು ಕೇವಲ ಬೆರಳೆಣಿಕೆಯ ಸಿನಿಮಾಗಳಲ್ಲಿ ಮಿಂಚಿದವರಿಗೆ ನೀಡಲಾಗುವುದಿಲ್ಲ. ಭಾರತೀಯ ಚಿತ್ರರಂಗದಲ್ಲಿ ಸಾಕಷ್ಟು ಅನುಭವ ಮತ್ತು ಚಿತ್ರರಂಗದಲ್ಲಿ ಸುಧೀರ್ಘ ಕೊಡುಗೆ ನೀಡಿದವರಿಗೆ ಭಾರತ ಸರ್ಕಾರ ನೀಡಲಾಗುವ ಪ್ರಶಸ್ತಿ ಇದು.

ಯಾರೂ ಈ ದಾದಾಸಾಹೇಬ್ ಫಾಲ್ಕೆ?

ಮಹಾರಾಷ್ಟ್ರದ ಹಾಗೂ ಭಾರತದ ಬೆಳ್ಳಿತೆರೆಯ ಇತಿಹಾಸದಲ್ಲಿ, ಎಂದೆಂದಿಗೂ ಮರೆಯಲಾರದ ವ್ಯಕ್ತಿಯಾಗಿ ಫಾಲ್ಕೆಯವರು ವಿಜೃಂಭಿಸುತ್ತಿದ್ದಾರೆ. ಭಾರತೀಯ ಚಿತ್ರರಂಗದ ಪಿತಾಮಹರೆಂದು ಕರೆಯಲ್ಪಡುವ ದಾದಾ ಸಾಹೇಬ್ ಫಾಲ್ಕೆಯವರ ಮೂಲ ಹೆಸರು ದುಂಡಿರಾಜ್ ಗೋವಿಂದ ಫಾಲ್ಕೆ. ಇವರು ವೃತ್ತಿಯಲ್ಲಿ ಸಂಸ್ಕೃತ ಪ್ರಾಧ್ಯಾಪಕರು. ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿದ್ದ ಫಾಲ್ಕೆಯವರು ವೃತ್ತಿ ಜೀವನಕ್ಕಾಗಿ ಮುಂಬಯಿಯಲ್ಲಿ ನೆಲೆಸಿದ್ದರು.

ಅದೃಷ್ಟವಶಾತ್ ಇವರಿಗೆ ಮುಂಬೈನ ಪ್ರಸಿದ್ಧ ‘ಜೆ.ಜೆ.ಸ್ಕೂಲ್ ಆಫ್ ಆರ್ಟ್ಸ್‌ನಲ್ಲಿ ಚಿತ್ರಕಲಾ ತರಗತಿ’ಗೆ ಪ್ರವೇಶ ದೊರಕಿತು. ನಂತರ ಮುಂದಿನ ಕಲಿಕೆಗಾಗಿ ‘ಬರೋಡದ ಕಲಾಭವನ’ ಸೇರಿದರು. ಶಿಕ್ಷಣವನ್ನು ಮುಗಿಸಿದ ಇವರಿಗೆ ‘ಸರಕಾರಿ ಪ್ರಾಚ್ಯವಸ್ತು ಇಲಾಖೆ’ಯಲ್ಲಿ ‘ಚಿತ್ರಕಾರ’ರಾಗಿ, ‘ಛಾಯಾಚಿತ್ರಗಾರ’ರಾಗಿ 1903 ರಲ್ಲಿ ‘ಖಾಯಂ ನೌಕರಿ’ಯಲ್ಲಿ ಭರ್ತಿಯಾದರು. ಅಲ್ಲಿ ‘ಪ್ರೊ.ಗುಜ್ಜರ್’ ಎಂಬುವವರು ಇವರ ಆಸಕ್ತಿಯನ್ನು ನೋಡಿ ಛಾಯಾಚಿತ್ರ ವಿಭಾಗದ ಮೇಲ್ವಿಚಾರಕನಾಗಿ ನೇಮಿಸಿದರು. ಅಲ್ಲಿಂದ ಧುಂಡಿರಾಜರು ‘ಫೋಟೋ-ಕೆಮಿಕಲ್ ರಂಗ’ದಲ್ಲಿ ಹಲವಾರು ಸಾಧನೆಗಳನ್ನು ಮಾಡಿದರು.

ಫಾಲ್ಕೆಯವರು ಒಮ್ಮೆ ಬೇಸರ ಕಳೆಯಲೆಂದು “ಲೈಫ್ ಆಫ್ ಕ್ರೈಸ್ಟ್” ಎಂಬ ಇಂಗ್ಲೀಷ್ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಹೋಗಿದ್ದರು. ಚಿತ್ರಮಂದಿರದ ಬಳಿ ಎಸೆದಿದ್ದ ರೀಲಿನ ಸಣ್ಣ ಸಣ್ಣ ತುಣುಕುಗಳನ್ನು ಸಂಗ್ರಹಿಸಿ ಅದನ್ನು ಮಸೂರದ ಸಹಾಯದಿಂದ ನೋಡಿದರು ನಂತರ ಆಟಿಕೆಯ ಸಿನಿಮಾ ಪ್ರದರ್ಶಿಸುವ ಯಂತ್ರವೊಂದನ್ನು, ಸಣ್ಣ ಪ್ರಮಾಣದ ರೀಲನ್ನು ತಂದು ಮನೆ ಗೋಡೆ ಮೇಲೆ ಚಿತ್ರ ಪ್ರದರ್ಶಿಸಿದರು. ಅಲ್ಲಿಂದ ಇವರಿಗೆ ಅಪ್ಪಟ ಭಾರತೀಯ ಚಿತ್ರ ಮಾಡಬೇಕೆಂಬ ಹಂಬಲ ಮೂಡಿತು. ತಮ್ಮ ಸಮಸ್ತ ಆಸ್ತಿಯನ್ನು ಅಡವಿಟ್ಟು, ಚಿತ್ರ ನಿರ್ಮಾಣಕ್ಕೆ ಬೇಕಾಗುವ ಯಂತ್ರೋಪಕರಣಗಳನ್ನು ಖರೀದಿಸಲು ಲಂಡನ್ನಿಗೆ ತೆರಳಿದರು.

ಅಲ್ಲಿನ ‘ಚಿತ್ರ ನಿರ್ಮಾಪಕ ಸಿಸಿಲ್ ‘ ಅವರ ಗರಡಿಯಲ್ಲಿ ಚಲನಚಿತ್ರ ನಿರ್ಮಾಣದ ಎಲ್ಲಾ ವಿಭಾಗಗಳನ್ನು ಅಧ್ಯಯನ ಮಾಡಿ, ಚಿತ್ರ ನಿರ್ಮಾಣದ ಅಚಲ ನಿರ್ಧಾರದೊಂದಿಗೆ ಭಾರತಕ್ಕೆ ಹಿಂದಿರುಗಿದರು. ಫಾಲ್ಕೆಯವರು ತಮ್ಮ ಮನೆಯನ್ನೇ ಫಾಲ್ಕೆ ಫಿಲ್ಮ್ ಸಂಸ್ಥೆಯಾಗಿ ಬಳಸಿಕೊಂಡಿದ್ದರು. ‘ರಾಜಾ ಹರಿಶ್ಚಂದ್ರನ ಕಥೆ’ಯನ್ನು ಸಿನಿಮಾ ಮಾಡಲು ಮುಂದಾದ ಫಾಲ್ಕೆಯವರು ಲೇಖನ, ನಿರ್ಮಾಣ ಕಾರ್ಯ, ನಿರ್ದೇಶನ, ಹಾಗೂ ನಟನೆ ಮತ್ತು ಛಾಯಾಗ್ರಹಣವನ್ನೂ ಒಬ್ಬರೇ ಸಮರ್ಪಕವಾಗಿ ನಿರ್ವಹಿಸಿದರು. ಈ ಚಿತ್ರವೂ ಭಾರತದ ಪ್ರಪಥಮ ಸಿನಿಮಾವೆಂದು ಖ್ಯಾತಿ ಪಡೆಯಿತು.

ಈ ಸಿನಿಮಾದ ಮೂಲಕ ಭಾರತೀಯ ಚಲನಚಿತ್ರರಂಗದ ಮಾಯಾಲೋಕವನ್ನು ಸೃಷ್ಟಿಸಿದ ಕೀರ್ತಿ ಫಾಲ್ಕೆಯವರದ್ದು. ಹಾಗಾಗಿಯೇ ಇವರನ್ನು ಭಾರತೀಯ ಚಿತ್ರರಂಗದ ಪಿತಾಮಹನೆಂದು ಕರೆಯಲಾಗುತ್ತಿದೆ. ಇವರ ನೆನಪಿನಲ್ಲಿ ಕೇಂದ್ರ ಸರ್ಕಾರ ಆರಂಭಿಸಿದ ಪ್ರಶಸ್ತಿ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ. ಜೊತೆಗೆ ಸರ್ಕಾರ ಇವರ ಹೆಸರಿನಲ್ಲಿ ಅಂಚೇ ಚೀಟಿಯನ್ನು ಸಹ ಬಿಡುಗಡೆ ಮಾಡಿತ್ತು.

ನಟ ಯಶ್ ಪಡೆದ ದಕ್ಷಿಣ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಯಾವುದು.

ಭಾರತ ಸರ್ಕಾರ ನೀಡುವ ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ ಅಲ್ಲದೆ, ಫಾಲ್ಕೆಯವರ ಹೆಸರಿನಲ್ಲಿ ಹಲವಾರು ಅಕಾಡೆಮಿಗಳು ಮತ್ತು ಅವಾರ್ಡ್‌ಗಳು ಹುಟ್ಟಿಕೊಂಡಿವೆ. ಅಂತೆಯೆ ದಾದಾಸಾಹೇಬ್ ಫಾಲ್ಕೆ ಇಂಟರ್ ನ್ಯಾಷನಲ್ ಫಿಲ್ಮ ಫೆಸ್ಟ್ ಕೂಡ ಒಂದು. ಇದು ಮೊನ್ನೆ ಹೈದರಾಬಾದ್‌ನಲ್ಲಿ ಕಾರ್ಯಕ್ರಮವನ್ನು ನಡೆಸಿತು. ಮೊತ್ತಮೊದಲ ಬಾರಿಗೆ ಅದು ‘ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ’ಯನ್ನು ನೀಡಿದೆ. ಇದು ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಆ ವರ್ಷ ಹೆಚ್ಚು ಖ್ಯಾತಿ ಪಡೆದ ಮತ್ತು ಉತ್ತಮ ನಟನೆಗೆ ನೀಡಲಾಗುವ ಪ್ರಶಸ್ತಿ. ಕೆಜಿಎಫ್-1 ಸಿನಿಮಾದ ಅಭಿನಯಕ್ಕಾಗಿ ನಟ ಯಶ್ ಈ ಪ್ರಶಸ್ತಿ ವಿಜೇತರಾಗಿದ್ದಾರೆ. ಆದರೆ ಇದು ಭಾರತ ಸರ್ಕಾರ ಪ್ರತಿ ವರ್ಷ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನೀಡಲಾಗುವ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ಯಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...