Homeಎಕಾನಮಿಟಿವಿ ಚರ್ಚೆಯಲ್ಲಿ ಬಿಜೆಪಿಯ ಸಂಬಿತ್ ಪಾತ್ರನಿಗೆ ಮುಖಭಂಗ ಮಾಡಿದ ಗೌರವ್ ವಲ್ಲಭ್ ಯಾರು ಗೊತ್ತೆ?

ಟಿವಿ ಚರ್ಚೆಯಲ್ಲಿ ಬಿಜೆಪಿಯ ಸಂಬಿತ್ ಪಾತ್ರನಿಗೆ ಮುಖಭಂಗ ಮಾಡಿದ ಗೌರವ್ ವಲ್ಲಭ್ ಯಾರು ಗೊತ್ತೆ?

ಗೌರವ್ ವಲ್ಲಭ್ ಒಬ್ಬ 'ಚಿನ್ನದ ಪದಕ' ವಿಜೇತ ಕಾಂಗ್ರೆಸ್ ವಕ್ತಾರನಾಗಿದ್ದು ಟಿವಿ ಚರ್ಚೆಯಲ್ಲಿ ಅವರು ಸಂಬಿತ್ ಪಾತ್ರನಿಗೆ ಒಂದು ಟ್ರಿಲಿಯನ್ ಗೆ ಎಷ್ಟು ಸೊನ್ನೆಗಳನ್ನು ಬಳಸುತ್ತಾರೆ ಎಂದು ಕೇಳಿದ ಪ್ರಶ್ನೆ ಎಲ್ಲಾ ಕಡೆ ವೈರಲ್ ಆಗಿದೆ.

- Advertisement -
- Advertisement -

5 ಟ್ರಿಲಿಯನ್ ಮಿಲಿಯನ್‍ಗೆಷ್ಟು ಸೊನ್ನೆ?: ಸೊನ್ನೆ ಎದುರು ಬೆತ್ತಲಾದ ಮೋದಿ ಶಿಷ್ಯ!

ಅಂದು ಮೋದಿ ಸರಕಾರದ ನೂರು ದಿನಗಳ ಪರಾಮರ್ಶೆ ಕುರಿತು ರಾಷ್ಟ್ರೀಯ ಚಾನೆಲ್ ಎಬಿಪ ನ್ಯೂಸ್ ನಲ್ಲಿ ನಡೆದ ಚರ್ಚೆ…. ಕಾಂಗ್ರೆಸ್ಸಿನ ಅಷ್ಟೇನೂ ಫೇಮಸ್ ಅಲ್ಲದ ವಕ್ತಾರನೊಬ್ಬ ಬಿಜೆಪಿಯ ವಟ ವಟ ವಕ್ತಾರ ಸಂಬಿತ್ ಪಾತ್ರನಿಗೆ ಪಾಠ ಕಲಿಸಿದ ವಿಡಿಯೋ ನಿಮ್ಮ ಮುಂದಿದೆ. ವಿಡಿಯೋದ ಸಾರಂಶ ಕೆಳಗಿನಂತಿದೆ.

ಗೌರವ್ ವಲ್ಲಭ್: ಎಲ್ಲಾ ಕ್ಷೇತ್ರಗಳಲ್ಲಿಯೂ ಶೇ.30-40% ಮಾರಾಟ ಕಡಿಮೆಯಾಗಿದೆ.

ಸಂಬಿತ್ ಪಾತ್ರ: ಮೊದಲನೆಯದಾಗ 5 ಟ್ರಿಲಿಯನ್ ಎಕಾನಮಿಯ ನಂತರ ಮೋದಿಯವರು ಉತ್ತಮ ಸಾಧನೆ ಮಾಡಿದ್ದಾರೆ.

ಗೌರವ್ ವಲ್ಲಭ್: ಈ 5 ಟ್ರಿಲಿಯನ್ ಎಕಾನಮಿ ಎಲ್ಲಿದೆ ಸಂಬಿತ್ ಜೀ? ನಿಮಗೆ ನೆನಪಿದೆಯೇ, ಸ್ವಿಸ್ ಬ್ಯಾಂಕ್ ನಿಂದ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಮೋದಿ ಹೇಳಿದ್ದರು.

ಸಂಬಿತ್ ಪಾತ್ರ: ಬರುತ್ತಾ ಇದೆ. ಈ ಪೂರ್ತಿ ಐದು ವರ್ಷದಲ್ಲಿ 2 ಟ್ರಿಲಿಯನ್ ಅನ್ನು ಜೋಡಿಸುತ್ತಿದ್ದೇವೆ. ನಿಮ್ಮೆಲ್ಲರ ಆರ್ಶಿವಾದದಿಂದ ಹಿಂದೂಸ್ತಾನದ ಹಿರಿಮೆಯಿಂದ ಜೋಡಿಸುತ್ತೇವೆ.

ಗೌರವ್ ವಲ್ಲಭ್: ಸಂಬಿತ್ ಬಯ್ಯಾ, 5 ಟ್ರಿಲಿಯನ್ ನಲ್ಲಿ ಎಷ್ಟು ಸೊನ್ನೆ ಬರುತ್ತವೆ ಹೇಳುತ್ತೀರಾ? ಈಗಲೇ ಹೇಳುತ್ತೀರಾ?

ಸಂಬಿತ್ ಪಾತ್ರ: ಹೇಳುತ್ತೇನೆ,

ಸಂಬೀತ್ ಪಾತ್ರಾ ಕಕ್ಕಾಬಿಕ್ಕಿ…..

‘ಒಂದ್ ನಿಮಿಷ, ಹೇಳುತೇನೆ’ ಎನ್ನುವ ಸಂಬೀತ್ ಮರುಕ್ಷಣ ಮೊದಲು ಈ ಪ್ರಶ್ನೆಯನ್ನು ರಾಹುಲ್ ಗಾಂಂಧಿಗೆ ಕೇಳಿ ನಂತರ ಬನ್ನಿ ಎಂದು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಾರೆ.

ಗೌರವ್ ವಲ್ಲಭ್: ಎಬಿಪಿ ನ್ಯೂಸ್ ವೀಕ್ಷಕರು ಇವರ ಜ್ಞಾನವನ್ನು ಅರ್ಥ ಮಾಡಿಕೊಳ್ಳಬೇಕು. ಸುಮ್ಮನೆ 5 ಟ್ರಿಲಿಯನ್, 5 ಟ್ರಿಲಿಯನ್ ಎಂದು ಬೊಗಳುವುದಲ್ಲ, 5 ಟ್ರಿಲಿಯನ್ ಗೆ ಎಷ್ಟು ಸೊನ್ನೆ ಇರುತ್ತವೆ ಎಂದು ನೀವು ಹೇಳಬೇಕು? ಇದು ನನ್ನ ಸವಾಲು ಎನ್ನುತ್ತಾರೆ.

ಕೊನೆಗೆ ಆ ಸಾಮಾನ್ಯ ಕಾಂಗ್ರೆಸ್ ಪ್ರತಿನಿಧಿಯೇ ಮಿಲಿಯನ್, ಬಿಲಿಯನ್ ಟ್ರಿಲಿಯಮಗಗ ಬಗ್ಗೆ ವಿವರಿಸಿ, ಯಾವುದರ ಮುಂದೆ ಎಷ್ಟು ಸೊನ್ನೆಗಳಿರುತ್ತವೆ ಎಂದು ವಿವರಿಸಿದ್ದಾನೆ….

ಈ ಚರ್ಚೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಸಂಬಿತ್ ಪಾತ್ರನಿಗೆ ಮಣ್ಣು ಮುಕ್ಕಿಸಿದ ಈ ಗೌರವ್ ವಲ್ಲಭ್ ಯಾರು ಎಂದು ಬಹಳಷ್ಟು ಜನ ಕೇಳುತ್ತಿದ್ದಾರೆ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಎಂದು ಘೋಷಿಸಬೇಕು, ವಿರೋಧ ಪಕ್ಷಗಳು ಗೌರವ್ ಅವರನ್ನು ತಮ್ಮ ವಕ್ತಾರರನ್ನಾಗಿ ಮಾಡಬೇಕು ಎಂದು ಕೆಲವು ಜನರು ಫೇಸ್ ಬುಕ್ ನಲ್ಲಿ, ಟ್ವಿಟ್ಟರ್ ನಲ್ಲಿ ಬರೆಯುತ್ತಿದ್ದಾರೆ.

ರಾಜಸ್ಥಾನದ ಪಾಲಿ ನಗರದ ನಿವಾಸಿಯಾದ 42 ವರ್ಷದ ಗೌರವ್ ವಲ್ಲಭ್ ಅವರು ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರಾಗಲು ಅಥವಾ ವಿರೋಧ ಪಕ್ಷಗಳ ನಾಯಕರಾಗಲು ನಾನು ಬಯಸುವುದಿಲ್ಲ. ‘ನನಗೆ ಅಂತಹ ಕಲ್ಪನೆ ಇಲ್ಲ’ ಎಂದು ಬಹಳ ವಿನಯವಾಗಿ ಹೇಳಿದ್ದಾರೆ.

ಪಾಲಿಯಲ್ಲಿ ಶಾಲಾ ಶಿಕ್ಷಣದ ನಂತರ ಗೌರವ್ ಜೈಪುರದಿಂದ ಸಿಎ ಅಧ್ಯಯನ ಮಾಡಿದರು. ಗೌರವ್ ಅವರ ಪೋಷಕರು ಪಾಲಿಯ ಸರ್ಕಾರಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಗೌರವ್ 2000-2003ರವರೆಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕ್ ಮ್ಯಾನೇಜ್‌ಮೆಂಟ್ ಪೂನಾದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು. ಇದರೊಂದಿಗೆ ಅವರು ಮಹರ್ಷಿ ದಯಾನಂದ್ ಸರಸ್ವತಿ ವಿಶ್ವವಿದ್ಯಾಲಯದ ಅಜ್ಮೀರ್‌ನಿಂದ ಎಂ.ಕಾಂನಲ್ಲಿ ‘ಚಿನ್ನದ ಪದಕ’ವನ್ನು ಗಳಿಸಿದ್ದಾರೆ.

‘ದಿ ಪ್ರಿಂಟ್’ ನೊಂದಿಗೆ ಮಾತನಾಡಿದ ಅವರು, ‘2017ರವರೆಗೆ ನಾನು ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡುತ್ತಿದೆ, ಆನಂತರ ಭಾರತಕ್ಕೆ ಮರಳಿದೆ. ನಮ್ಮ ದೇಶದಲ್ಲಿ ಮಾಬ್ ಲಿಂಚಿಂಗ್ (ಗುಂಪು ಹಲ್ಲೆ) ಹೆಸರಿನಲ್ಲಿ ಜನರನ್ನು ದ್ವೇಷಕ್ಕೆ ಸಜ್ಜುಗೊಳಿಸಲಾಗುತ್ತಿದೆ. ಇದರ ವಿರುದ್ಧ ಹೋರಾಡಲು ನಾನು ಕಾಂಗ್ರೆಸ್ ಪಕ್ಷದ ಸಿದ್ಧಾಂತದೊಂದಿಗೆ ಸಂಪರ್ಕ ಹೊಂದಿದ್ದೇನೆ. ಆದ್ದರಿಂದ 2018 ರವರೆಗೆ ಪ್ಯಾನೆಲಿಸ್ಟ್ ಆಗಿ ಕೆಲಸ ಮಾಡಿದೆ’ ಎನ್ನುತ್ತಾರೆ.

ಅದರ ನಂತರ ನಾನು ರಾಹುಲ್ ಗಾಂಧಿ ಮತ್ತು ರಂದೀಪ್ ಸುರ್ಜೆವಾಲಾ ಅವರಿಗೆ ಪತ್ರ ಬರೆದು ರಾಷ್ಟ್ರೀಯ ವಕ್ತಾರ ಹುದ್ದೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಬಯಸುತ್ತೇನೆ ಎಂದು ಹೇಳಿದೆ. 2019 ರ ಜನವರಿಯಲ್ಲಿ ಅವರು ನನ್ನ ಮೇಲೆ ವಿಶ್ವಾಸದಿಂದ ಈ ಜವಾಬ್ದಾರಿಯನ್ನು ಒಪ್ಪಿಸಿದರು ಎಂದು ಹೇಳಿದ್ದಾರೆ.

ಬಿಜೆಪಿಯ ದೇವಸ್ಥಾನ ಮತ್ತು ಪೂಜಾ ರಾಜಕೀಯದ ಬಗ್ಗೆ ಮಾತನಾಡಿರುವ ಅವರು, ‘ನಾನು ದಿನಕ್ಕೆ ಮೂರು ಗಂಟೆಗಳ ಕಾಲ ಪೂಜಿಸುತ್ತೇನೆ. ನನಗಿಂತ ಹೆಚ್ಚು ಯಾರೂ ಅಯೋಧ್ಯ ದೇವಾಲಯಗಳಿಗೆ ಹೋಗಿಲ್ಲ. ಜೊತೆಗೆ ಗೌರವ್ ಅವರು 20 ದೇಶಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ

ಗೌರವ್ ಲೋಕಸಭಾ ಸಂಶೋಧನಾ ಫೆಲೋಶಿಪ್ ಅಡಿಯಲ್ಲಿ 2016 ರಲ್ಲಿ ಅವರು ಸುಸ್ಥಿರ ಅಭಿವೃದ್ಧಿ ಗುರಿಗಳ ಬಗ್ಗೆ ಸಂಶೋಧನೆ ನಡೆಸಿದ್ದಾರೆ. ‘ನಾನು ಮೂರು ಪುಸ್ತಕಗಳನ್ನು ಬರೆದಿದ್ದೇನೆ. ನನ್ನ ಸಂಶೋಧನಾ ಪ್ರಬಂಧಗಳನ್ನು ಹಾರ್ವರ್ಡ್ ವಿಶ್ವವಿದ್ಯಾಲಯದಿಂದ 20 ದೇಶಗಳಿಗೆ ಪ್ರಸ್ತುತಪಡಿಸಿದ್ದೇನೆ. ಮಾರ್ಚ್ 2019 ರಲ್ಲಿ, ಎಕ್ಸ್‌ಎಲ್‌ಆರ್‌ಐ ಜಮ್‌ಶೆಡ್‌ಪುರ ಕೂಡ 15 ವರ್ಷಗಳ ಸೇವೆಗಾಗಿ ನನ್ನನ್ನು ಗೌರವಿಸಿತು. ನಾನು 50 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಪ್ರಕಟಣೆಯುಳ್ಳ ಪತ್ರಿಕೆಗಳಿಗೆ ಬರೆದಿದ್ದೇನೆ’ ಎನ್ನುತ್ತಾರೆ.

‘ಟ್ವಿಟರ್‌ನಲ್ಲಿ ದೇಶಪ್ರೇಮವನ್ನು ತೋರಿಸುವುದಿಲ್ಲ’

ಗೌರವ್ ವಲ್ಲಭ್ ರಾಷ್ಟ್ರೀಯತೆಯನ್ನು ಪ್ರಶ್ನಿಸಿ, ‘ರಾಷ್ಟ್ರೀಯತೆಯ ವ್ಯಾಖ್ಯಾನ ಏನು ಎಂದು ನಾನು ಹಲವು ಬಾರಿ ಕೇಳಿದ್ದೇನೆ. ನನಗೆ, ನನ್ನ ಕೆಲಸವನ್ನು ಪ್ರಾಮಾಣಿಕತೆ ಮತ್ತು ಸಮಗ್ರತೆಯಿಂದ ಮಾಡುವುದು ರಾಷ್ಟ್ರೀಯತೆ. ನಾನು ಟ್ವಿಟರ್‌ನಲ್ಲಿ ದೇಶಪ್ರೇಮವನ್ನು ತೋರಿಸುವುದಿಲ್ಲ’ ಎಂದಿದ್ದಾರೆ.

ಕೇವಲ 1,945 ಫೇಸ್‌ಬುಕ್ ಲೈಕ್‌ಗಳು ಮತ್ತು 5000 ಟ್ವಿಟ್ಟರ್ ಫಾಲೋವರ್‌ಗಳನ್ನು ಹೊಂದಿರುವ ಗೌರವ್ ವಲ್ಲಭ್, “ನಾನು ಟ್ವಿಟರ್ ಜಗತ್ತಿನಲ್ಲಿ ಗೆಲ್ಲಲಿಲ್ಲ” ಎಂದು ಹೇಳುತ್ತಾರೆ. ಚರ್ಚೆಗಳಲ್ಲದೆ ನಾನು ಓದುತ್ತೇನೆ ಮತ್ತು ಬರೆಯುತ್ತೇನೆ. ಮುಂದಿನ ತಿಂಗಳು ಪುಸ್ತಕವೂ ಹೊರಬರುತ್ತಿದೆ.’ ಎಂದಿದ್ದಾರೆ.

ಗೌರವ್ ಬಗ್ಗೆ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಜಯವೀರ್ ಶೆರ್ಗಿಲ್, “ಅವರು ಗಣಿತ ಮತ್ತು ಅರ್ಥಶಾಸ್ತ್ರವನ್ನು ಸುಲಭ ಭಾಷೆಯಲ್ಲಿ ವಿವರಿಸುತ್ತಾರೆ, ಜೊತೆಗೆ ಅವರು ಪ್ರಚಾರದಿಂದ ದೂರವಿರುತ್ತಾರೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...