Homeಎಕಾನಮಿಟಿವಿ ಚರ್ಚೆಯಲ್ಲಿ ಬಿಜೆಪಿಯ ಸಂಬಿತ್ ಪಾತ್ರನಿಗೆ ಮುಖಭಂಗ ಮಾಡಿದ ಗೌರವ್ ವಲ್ಲಭ್ ಯಾರು ಗೊತ್ತೆ?

ಟಿವಿ ಚರ್ಚೆಯಲ್ಲಿ ಬಿಜೆಪಿಯ ಸಂಬಿತ್ ಪಾತ್ರನಿಗೆ ಮುಖಭಂಗ ಮಾಡಿದ ಗೌರವ್ ವಲ್ಲಭ್ ಯಾರು ಗೊತ್ತೆ?

ಗೌರವ್ ವಲ್ಲಭ್ ಒಬ್ಬ 'ಚಿನ್ನದ ಪದಕ' ವಿಜೇತ ಕಾಂಗ್ರೆಸ್ ವಕ್ತಾರನಾಗಿದ್ದು ಟಿವಿ ಚರ್ಚೆಯಲ್ಲಿ ಅವರು ಸಂಬಿತ್ ಪಾತ್ರನಿಗೆ ಒಂದು ಟ್ರಿಲಿಯನ್ ಗೆ ಎಷ್ಟು ಸೊನ್ನೆಗಳನ್ನು ಬಳಸುತ್ತಾರೆ ಎಂದು ಕೇಳಿದ ಪ್ರಶ್ನೆ ಎಲ್ಲಾ ಕಡೆ ವೈರಲ್ ಆಗಿದೆ.

- Advertisement -
- Advertisement -

5 ಟ್ರಿಲಿಯನ್ ಮಿಲಿಯನ್‍ಗೆಷ್ಟು ಸೊನ್ನೆ?: ಸೊನ್ನೆ ಎದುರು ಬೆತ್ತಲಾದ ಮೋದಿ ಶಿಷ್ಯ!

ಅಂದು ಮೋದಿ ಸರಕಾರದ ನೂರು ದಿನಗಳ ಪರಾಮರ್ಶೆ ಕುರಿತು ರಾಷ್ಟ್ರೀಯ ಚಾನೆಲ್ ಎಬಿಪ ನ್ಯೂಸ್ ನಲ್ಲಿ ನಡೆದ ಚರ್ಚೆ…. ಕಾಂಗ್ರೆಸ್ಸಿನ ಅಷ್ಟೇನೂ ಫೇಮಸ್ ಅಲ್ಲದ ವಕ್ತಾರನೊಬ್ಬ ಬಿಜೆಪಿಯ ವಟ ವಟ ವಕ್ತಾರ ಸಂಬಿತ್ ಪಾತ್ರನಿಗೆ ಪಾಠ ಕಲಿಸಿದ ವಿಡಿಯೋ ನಿಮ್ಮ ಮುಂದಿದೆ. ವಿಡಿಯೋದ ಸಾರಂಶ ಕೆಳಗಿನಂತಿದೆ.

ಗೌರವ್ ವಲ್ಲಭ್: ಎಲ್ಲಾ ಕ್ಷೇತ್ರಗಳಲ್ಲಿಯೂ ಶೇ.30-40% ಮಾರಾಟ ಕಡಿಮೆಯಾಗಿದೆ.

ಸಂಬಿತ್ ಪಾತ್ರ: ಮೊದಲನೆಯದಾಗ 5 ಟ್ರಿಲಿಯನ್ ಎಕಾನಮಿಯ ನಂತರ ಮೋದಿಯವರು ಉತ್ತಮ ಸಾಧನೆ ಮಾಡಿದ್ದಾರೆ.

ಗೌರವ್ ವಲ್ಲಭ್: ಈ 5 ಟ್ರಿಲಿಯನ್ ಎಕಾನಮಿ ಎಲ್ಲಿದೆ ಸಂಬಿತ್ ಜೀ? ನಿಮಗೆ ನೆನಪಿದೆಯೇ, ಸ್ವಿಸ್ ಬ್ಯಾಂಕ್ ನಿಂದ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಮೋದಿ ಹೇಳಿದ್ದರು.

ಸಂಬಿತ್ ಪಾತ್ರ: ಬರುತ್ತಾ ಇದೆ. ಈ ಪೂರ್ತಿ ಐದು ವರ್ಷದಲ್ಲಿ 2 ಟ್ರಿಲಿಯನ್ ಅನ್ನು ಜೋಡಿಸುತ್ತಿದ್ದೇವೆ. ನಿಮ್ಮೆಲ್ಲರ ಆರ್ಶಿವಾದದಿಂದ ಹಿಂದೂಸ್ತಾನದ ಹಿರಿಮೆಯಿಂದ ಜೋಡಿಸುತ್ತೇವೆ.

ಗೌರವ್ ವಲ್ಲಭ್: ಸಂಬಿತ್ ಬಯ್ಯಾ, 5 ಟ್ರಿಲಿಯನ್ ನಲ್ಲಿ ಎಷ್ಟು ಸೊನ್ನೆ ಬರುತ್ತವೆ ಹೇಳುತ್ತೀರಾ? ಈಗಲೇ ಹೇಳುತ್ತೀರಾ?

ಸಂಬಿತ್ ಪಾತ್ರ: ಹೇಳುತ್ತೇನೆ,

ಸಂಬೀತ್ ಪಾತ್ರಾ ಕಕ್ಕಾಬಿಕ್ಕಿ…..

‘ಒಂದ್ ನಿಮಿಷ, ಹೇಳುತೇನೆ’ ಎನ್ನುವ ಸಂಬೀತ್ ಮರುಕ್ಷಣ ಮೊದಲು ಈ ಪ್ರಶ್ನೆಯನ್ನು ರಾಹುಲ್ ಗಾಂಂಧಿಗೆ ಕೇಳಿ ನಂತರ ಬನ್ನಿ ಎಂದು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಾರೆ.

ಗೌರವ್ ವಲ್ಲಭ್: ಎಬಿಪಿ ನ್ಯೂಸ್ ವೀಕ್ಷಕರು ಇವರ ಜ್ಞಾನವನ್ನು ಅರ್ಥ ಮಾಡಿಕೊಳ್ಳಬೇಕು. ಸುಮ್ಮನೆ 5 ಟ್ರಿಲಿಯನ್, 5 ಟ್ರಿಲಿಯನ್ ಎಂದು ಬೊಗಳುವುದಲ್ಲ, 5 ಟ್ರಿಲಿಯನ್ ಗೆ ಎಷ್ಟು ಸೊನ್ನೆ ಇರುತ್ತವೆ ಎಂದು ನೀವು ಹೇಳಬೇಕು? ಇದು ನನ್ನ ಸವಾಲು ಎನ್ನುತ್ತಾರೆ.

ಕೊನೆಗೆ ಆ ಸಾಮಾನ್ಯ ಕಾಂಗ್ರೆಸ್ ಪ್ರತಿನಿಧಿಯೇ ಮಿಲಿಯನ್, ಬಿಲಿಯನ್ ಟ್ರಿಲಿಯಮಗಗ ಬಗ್ಗೆ ವಿವರಿಸಿ, ಯಾವುದರ ಮುಂದೆ ಎಷ್ಟು ಸೊನ್ನೆಗಳಿರುತ್ತವೆ ಎಂದು ವಿವರಿಸಿದ್ದಾನೆ….

ಈ ಚರ್ಚೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಸಂಬಿತ್ ಪಾತ್ರನಿಗೆ ಮಣ್ಣು ಮುಕ್ಕಿಸಿದ ಈ ಗೌರವ್ ವಲ್ಲಭ್ ಯಾರು ಎಂದು ಬಹಳಷ್ಟು ಜನ ಕೇಳುತ್ತಿದ್ದಾರೆ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಎಂದು ಘೋಷಿಸಬೇಕು, ವಿರೋಧ ಪಕ್ಷಗಳು ಗೌರವ್ ಅವರನ್ನು ತಮ್ಮ ವಕ್ತಾರರನ್ನಾಗಿ ಮಾಡಬೇಕು ಎಂದು ಕೆಲವು ಜನರು ಫೇಸ್ ಬುಕ್ ನಲ್ಲಿ, ಟ್ವಿಟ್ಟರ್ ನಲ್ಲಿ ಬರೆಯುತ್ತಿದ್ದಾರೆ.

ರಾಜಸ್ಥಾನದ ಪಾಲಿ ನಗರದ ನಿವಾಸಿಯಾದ 42 ವರ್ಷದ ಗೌರವ್ ವಲ್ಲಭ್ ಅವರು ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರಾಗಲು ಅಥವಾ ವಿರೋಧ ಪಕ್ಷಗಳ ನಾಯಕರಾಗಲು ನಾನು ಬಯಸುವುದಿಲ್ಲ. ‘ನನಗೆ ಅಂತಹ ಕಲ್ಪನೆ ಇಲ್ಲ’ ಎಂದು ಬಹಳ ವಿನಯವಾಗಿ ಹೇಳಿದ್ದಾರೆ.

ಪಾಲಿಯಲ್ಲಿ ಶಾಲಾ ಶಿಕ್ಷಣದ ನಂತರ ಗೌರವ್ ಜೈಪುರದಿಂದ ಸಿಎ ಅಧ್ಯಯನ ಮಾಡಿದರು. ಗೌರವ್ ಅವರ ಪೋಷಕರು ಪಾಲಿಯ ಸರ್ಕಾರಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಗೌರವ್ 2000-2003ರವರೆಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕ್ ಮ್ಯಾನೇಜ್‌ಮೆಂಟ್ ಪೂನಾದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು. ಇದರೊಂದಿಗೆ ಅವರು ಮಹರ್ಷಿ ದಯಾನಂದ್ ಸರಸ್ವತಿ ವಿಶ್ವವಿದ್ಯಾಲಯದ ಅಜ್ಮೀರ್‌ನಿಂದ ಎಂ.ಕಾಂನಲ್ಲಿ ‘ಚಿನ್ನದ ಪದಕ’ವನ್ನು ಗಳಿಸಿದ್ದಾರೆ.

‘ದಿ ಪ್ರಿಂಟ್’ ನೊಂದಿಗೆ ಮಾತನಾಡಿದ ಅವರು, ‘2017ರವರೆಗೆ ನಾನು ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡುತ್ತಿದೆ, ಆನಂತರ ಭಾರತಕ್ಕೆ ಮರಳಿದೆ. ನಮ್ಮ ದೇಶದಲ್ಲಿ ಮಾಬ್ ಲಿಂಚಿಂಗ್ (ಗುಂಪು ಹಲ್ಲೆ) ಹೆಸರಿನಲ್ಲಿ ಜನರನ್ನು ದ್ವೇಷಕ್ಕೆ ಸಜ್ಜುಗೊಳಿಸಲಾಗುತ್ತಿದೆ. ಇದರ ವಿರುದ್ಧ ಹೋರಾಡಲು ನಾನು ಕಾಂಗ್ರೆಸ್ ಪಕ್ಷದ ಸಿದ್ಧಾಂತದೊಂದಿಗೆ ಸಂಪರ್ಕ ಹೊಂದಿದ್ದೇನೆ. ಆದ್ದರಿಂದ 2018 ರವರೆಗೆ ಪ್ಯಾನೆಲಿಸ್ಟ್ ಆಗಿ ಕೆಲಸ ಮಾಡಿದೆ’ ಎನ್ನುತ್ತಾರೆ.

ಅದರ ನಂತರ ನಾನು ರಾಹುಲ್ ಗಾಂಧಿ ಮತ್ತು ರಂದೀಪ್ ಸುರ್ಜೆವಾಲಾ ಅವರಿಗೆ ಪತ್ರ ಬರೆದು ರಾಷ್ಟ್ರೀಯ ವಕ್ತಾರ ಹುದ್ದೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಬಯಸುತ್ತೇನೆ ಎಂದು ಹೇಳಿದೆ. 2019 ರ ಜನವರಿಯಲ್ಲಿ ಅವರು ನನ್ನ ಮೇಲೆ ವಿಶ್ವಾಸದಿಂದ ಈ ಜವಾಬ್ದಾರಿಯನ್ನು ಒಪ್ಪಿಸಿದರು ಎಂದು ಹೇಳಿದ್ದಾರೆ.

ಬಿಜೆಪಿಯ ದೇವಸ್ಥಾನ ಮತ್ತು ಪೂಜಾ ರಾಜಕೀಯದ ಬಗ್ಗೆ ಮಾತನಾಡಿರುವ ಅವರು, ‘ನಾನು ದಿನಕ್ಕೆ ಮೂರು ಗಂಟೆಗಳ ಕಾಲ ಪೂಜಿಸುತ್ತೇನೆ. ನನಗಿಂತ ಹೆಚ್ಚು ಯಾರೂ ಅಯೋಧ್ಯ ದೇವಾಲಯಗಳಿಗೆ ಹೋಗಿಲ್ಲ. ಜೊತೆಗೆ ಗೌರವ್ ಅವರು 20 ದೇಶಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ

ಗೌರವ್ ಲೋಕಸಭಾ ಸಂಶೋಧನಾ ಫೆಲೋಶಿಪ್ ಅಡಿಯಲ್ಲಿ 2016 ರಲ್ಲಿ ಅವರು ಸುಸ್ಥಿರ ಅಭಿವೃದ್ಧಿ ಗುರಿಗಳ ಬಗ್ಗೆ ಸಂಶೋಧನೆ ನಡೆಸಿದ್ದಾರೆ. ‘ನಾನು ಮೂರು ಪುಸ್ತಕಗಳನ್ನು ಬರೆದಿದ್ದೇನೆ. ನನ್ನ ಸಂಶೋಧನಾ ಪ್ರಬಂಧಗಳನ್ನು ಹಾರ್ವರ್ಡ್ ವಿಶ್ವವಿದ್ಯಾಲಯದಿಂದ 20 ದೇಶಗಳಿಗೆ ಪ್ರಸ್ತುತಪಡಿಸಿದ್ದೇನೆ. ಮಾರ್ಚ್ 2019 ರಲ್ಲಿ, ಎಕ್ಸ್‌ಎಲ್‌ಆರ್‌ಐ ಜಮ್‌ಶೆಡ್‌ಪುರ ಕೂಡ 15 ವರ್ಷಗಳ ಸೇವೆಗಾಗಿ ನನ್ನನ್ನು ಗೌರವಿಸಿತು. ನಾನು 50 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಪ್ರಕಟಣೆಯುಳ್ಳ ಪತ್ರಿಕೆಗಳಿಗೆ ಬರೆದಿದ್ದೇನೆ’ ಎನ್ನುತ್ತಾರೆ.

‘ಟ್ವಿಟರ್‌ನಲ್ಲಿ ದೇಶಪ್ರೇಮವನ್ನು ತೋರಿಸುವುದಿಲ್ಲ’

ಗೌರವ್ ವಲ್ಲಭ್ ರಾಷ್ಟ್ರೀಯತೆಯನ್ನು ಪ್ರಶ್ನಿಸಿ, ‘ರಾಷ್ಟ್ರೀಯತೆಯ ವ್ಯಾಖ್ಯಾನ ಏನು ಎಂದು ನಾನು ಹಲವು ಬಾರಿ ಕೇಳಿದ್ದೇನೆ. ನನಗೆ, ನನ್ನ ಕೆಲಸವನ್ನು ಪ್ರಾಮಾಣಿಕತೆ ಮತ್ತು ಸಮಗ್ರತೆಯಿಂದ ಮಾಡುವುದು ರಾಷ್ಟ್ರೀಯತೆ. ನಾನು ಟ್ವಿಟರ್‌ನಲ್ಲಿ ದೇಶಪ್ರೇಮವನ್ನು ತೋರಿಸುವುದಿಲ್ಲ’ ಎಂದಿದ್ದಾರೆ.

ಕೇವಲ 1,945 ಫೇಸ್‌ಬುಕ್ ಲೈಕ್‌ಗಳು ಮತ್ತು 5000 ಟ್ವಿಟ್ಟರ್ ಫಾಲೋವರ್‌ಗಳನ್ನು ಹೊಂದಿರುವ ಗೌರವ್ ವಲ್ಲಭ್, “ನಾನು ಟ್ವಿಟರ್ ಜಗತ್ತಿನಲ್ಲಿ ಗೆಲ್ಲಲಿಲ್ಲ” ಎಂದು ಹೇಳುತ್ತಾರೆ. ಚರ್ಚೆಗಳಲ್ಲದೆ ನಾನು ಓದುತ್ತೇನೆ ಮತ್ತು ಬರೆಯುತ್ತೇನೆ. ಮುಂದಿನ ತಿಂಗಳು ಪುಸ್ತಕವೂ ಹೊರಬರುತ್ತಿದೆ.’ ಎಂದಿದ್ದಾರೆ.

ಗೌರವ್ ಬಗ್ಗೆ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಜಯವೀರ್ ಶೆರ್ಗಿಲ್, “ಅವರು ಗಣಿತ ಮತ್ತು ಅರ್ಥಶಾಸ್ತ್ರವನ್ನು ಸುಲಭ ಭಾಷೆಯಲ್ಲಿ ವಿವರಿಸುತ್ತಾರೆ, ಜೊತೆಗೆ ಅವರು ಪ್ರಚಾರದಿಂದ ದೂರವಿರುತ್ತಾರೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...