Homeಎಕಾನಮಿಟಿವಿ ಚರ್ಚೆಯಲ್ಲಿ ಬಿಜೆಪಿಯ ಸಂಬಿತ್ ಪಾತ್ರನಿಗೆ ಮುಖಭಂಗ ಮಾಡಿದ ಗೌರವ್ ವಲ್ಲಭ್ ಯಾರು ಗೊತ್ತೆ?

ಟಿವಿ ಚರ್ಚೆಯಲ್ಲಿ ಬಿಜೆಪಿಯ ಸಂಬಿತ್ ಪಾತ್ರನಿಗೆ ಮುಖಭಂಗ ಮಾಡಿದ ಗೌರವ್ ವಲ್ಲಭ್ ಯಾರು ಗೊತ್ತೆ?

ಗೌರವ್ ವಲ್ಲಭ್ ಒಬ್ಬ 'ಚಿನ್ನದ ಪದಕ' ವಿಜೇತ ಕಾಂಗ್ರೆಸ್ ವಕ್ತಾರನಾಗಿದ್ದು ಟಿವಿ ಚರ್ಚೆಯಲ್ಲಿ ಅವರು ಸಂಬಿತ್ ಪಾತ್ರನಿಗೆ ಒಂದು ಟ್ರಿಲಿಯನ್ ಗೆ ಎಷ್ಟು ಸೊನ್ನೆಗಳನ್ನು ಬಳಸುತ್ತಾರೆ ಎಂದು ಕೇಳಿದ ಪ್ರಶ್ನೆ ಎಲ್ಲಾ ಕಡೆ ವೈರಲ್ ಆಗಿದೆ.

- Advertisement -
- Advertisement -

5 ಟ್ರಿಲಿಯನ್ ಮಿಲಿಯನ್‍ಗೆಷ್ಟು ಸೊನ್ನೆ?: ಸೊನ್ನೆ ಎದುರು ಬೆತ್ತಲಾದ ಮೋದಿ ಶಿಷ್ಯ!

ಅಂದು ಮೋದಿ ಸರಕಾರದ ನೂರು ದಿನಗಳ ಪರಾಮರ್ಶೆ ಕುರಿತು ರಾಷ್ಟ್ರೀಯ ಚಾನೆಲ್ ಎಬಿಪ ನ್ಯೂಸ್ ನಲ್ಲಿ ನಡೆದ ಚರ್ಚೆ…. ಕಾಂಗ್ರೆಸ್ಸಿನ ಅಷ್ಟೇನೂ ಫೇಮಸ್ ಅಲ್ಲದ ವಕ್ತಾರನೊಬ್ಬ ಬಿಜೆಪಿಯ ವಟ ವಟ ವಕ್ತಾರ ಸಂಬಿತ್ ಪಾತ್ರನಿಗೆ ಪಾಠ ಕಲಿಸಿದ ವಿಡಿಯೋ ನಿಮ್ಮ ಮುಂದಿದೆ. ವಿಡಿಯೋದ ಸಾರಂಶ ಕೆಳಗಿನಂತಿದೆ.

ಗೌರವ್ ವಲ್ಲಭ್: ಎಲ್ಲಾ ಕ್ಷೇತ್ರಗಳಲ್ಲಿಯೂ ಶೇ.30-40% ಮಾರಾಟ ಕಡಿಮೆಯಾಗಿದೆ.

ಸಂಬಿತ್ ಪಾತ್ರ: ಮೊದಲನೆಯದಾಗ 5 ಟ್ರಿಲಿಯನ್ ಎಕಾನಮಿಯ ನಂತರ ಮೋದಿಯವರು ಉತ್ತಮ ಸಾಧನೆ ಮಾಡಿದ್ದಾರೆ.

ಗೌರವ್ ವಲ್ಲಭ್: ಈ 5 ಟ್ರಿಲಿಯನ್ ಎಕಾನಮಿ ಎಲ್ಲಿದೆ ಸಂಬಿತ್ ಜೀ? ನಿಮಗೆ ನೆನಪಿದೆಯೇ, ಸ್ವಿಸ್ ಬ್ಯಾಂಕ್ ನಿಂದ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಮೋದಿ ಹೇಳಿದ್ದರು.

ಸಂಬಿತ್ ಪಾತ್ರ: ಬರುತ್ತಾ ಇದೆ. ಈ ಪೂರ್ತಿ ಐದು ವರ್ಷದಲ್ಲಿ 2 ಟ್ರಿಲಿಯನ್ ಅನ್ನು ಜೋಡಿಸುತ್ತಿದ್ದೇವೆ. ನಿಮ್ಮೆಲ್ಲರ ಆರ್ಶಿವಾದದಿಂದ ಹಿಂದೂಸ್ತಾನದ ಹಿರಿಮೆಯಿಂದ ಜೋಡಿಸುತ್ತೇವೆ.

ಗೌರವ್ ವಲ್ಲಭ್: ಸಂಬಿತ್ ಬಯ್ಯಾ, 5 ಟ್ರಿಲಿಯನ್ ನಲ್ಲಿ ಎಷ್ಟು ಸೊನ್ನೆ ಬರುತ್ತವೆ ಹೇಳುತ್ತೀರಾ? ಈಗಲೇ ಹೇಳುತ್ತೀರಾ?

ಸಂಬಿತ್ ಪಾತ್ರ: ಹೇಳುತ್ತೇನೆ,

ಸಂಬೀತ್ ಪಾತ್ರಾ ಕಕ್ಕಾಬಿಕ್ಕಿ…..

‘ಒಂದ್ ನಿಮಿಷ, ಹೇಳುತೇನೆ’ ಎನ್ನುವ ಸಂಬೀತ್ ಮರುಕ್ಷಣ ಮೊದಲು ಈ ಪ್ರಶ್ನೆಯನ್ನು ರಾಹುಲ್ ಗಾಂಂಧಿಗೆ ಕೇಳಿ ನಂತರ ಬನ್ನಿ ಎಂದು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಾರೆ.

ಗೌರವ್ ವಲ್ಲಭ್: ಎಬಿಪಿ ನ್ಯೂಸ್ ವೀಕ್ಷಕರು ಇವರ ಜ್ಞಾನವನ್ನು ಅರ್ಥ ಮಾಡಿಕೊಳ್ಳಬೇಕು. ಸುಮ್ಮನೆ 5 ಟ್ರಿಲಿಯನ್, 5 ಟ್ರಿಲಿಯನ್ ಎಂದು ಬೊಗಳುವುದಲ್ಲ, 5 ಟ್ರಿಲಿಯನ್ ಗೆ ಎಷ್ಟು ಸೊನ್ನೆ ಇರುತ್ತವೆ ಎಂದು ನೀವು ಹೇಳಬೇಕು? ಇದು ನನ್ನ ಸವಾಲು ಎನ್ನುತ್ತಾರೆ.

ಕೊನೆಗೆ ಆ ಸಾಮಾನ್ಯ ಕಾಂಗ್ರೆಸ್ ಪ್ರತಿನಿಧಿಯೇ ಮಿಲಿಯನ್, ಬಿಲಿಯನ್ ಟ್ರಿಲಿಯಮಗಗ ಬಗ್ಗೆ ವಿವರಿಸಿ, ಯಾವುದರ ಮುಂದೆ ಎಷ್ಟು ಸೊನ್ನೆಗಳಿರುತ್ತವೆ ಎಂದು ವಿವರಿಸಿದ್ದಾನೆ….

ಈ ಚರ್ಚೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಸಂಬಿತ್ ಪಾತ್ರನಿಗೆ ಮಣ್ಣು ಮುಕ್ಕಿಸಿದ ಈ ಗೌರವ್ ವಲ್ಲಭ್ ಯಾರು ಎಂದು ಬಹಳಷ್ಟು ಜನ ಕೇಳುತ್ತಿದ್ದಾರೆ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಎಂದು ಘೋಷಿಸಬೇಕು, ವಿರೋಧ ಪಕ್ಷಗಳು ಗೌರವ್ ಅವರನ್ನು ತಮ್ಮ ವಕ್ತಾರರನ್ನಾಗಿ ಮಾಡಬೇಕು ಎಂದು ಕೆಲವು ಜನರು ಫೇಸ್ ಬುಕ್ ನಲ್ಲಿ, ಟ್ವಿಟ್ಟರ್ ನಲ್ಲಿ ಬರೆಯುತ್ತಿದ್ದಾರೆ.

ರಾಜಸ್ಥಾನದ ಪಾಲಿ ನಗರದ ನಿವಾಸಿಯಾದ 42 ವರ್ಷದ ಗೌರವ್ ವಲ್ಲಭ್ ಅವರು ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರಾಗಲು ಅಥವಾ ವಿರೋಧ ಪಕ್ಷಗಳ ನಾಯಕರಾಗಲು ನಾನು ಬಯಸುವುದಿಲ್ಲ. ‘ನನಗೆ ಅಂತಹ ಕಲ್ಪನೆ ಇಲ್ಲ’ ಎಂದು ಬಹಳ ವಿನಯವಾಗಿ ಹೇಳಿದ್ದಾರೆ.

ಪಾಲಿಯಲ್ಲಿ ಶಾಲಾ ಶಿಕ್ಷಣದ ನಂತರ ಗೌರವ್ ಜೈಪುರದಿಂದ ಸಿಎ ಅಧ್ಯಯನ ಮಾಡಿದರು. ಗೌರವ್ ಅವರ ಪೋಷಕರು ಪಾಲಿಯ ಸರ್ಕಾರಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಗೌರವ್ 2000-2003ರವರೆಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕ್ ಮ್ಯಾನೇಜ್‌ಮೆಂಟ್ ಪೂನಾದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು. ಇದರೊಂದಿಗೆ ಅವರು ಮಹರ್ಷಿ ದಯಾನಂದ್ ಸರಸ್ವತಿ ವಿಶ್ವವಿದ್ಯಾಲಯದ ಅಜ್ಮೀರ್‌ನಿಂದ ಎಂ.ಕಾಂನಲ್ಲಿ ‘ಚಿನ್ನದ ಪದಕ’ವನ್ನು ಗಳಿಸಿದ್ದಾರೆ.

‘ದಿ ಪ್ರಿಂಟ್’ ನೊಂದಿಗೆ ಮಾತನಾಡಿದ ಅವರು, ‘2017ರವರೆಗೆ ನಾನು ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡುತ್ತಿದೆ, ಆನಂತರ ಭಾರತಕ್ಕೆ ಮರಳಿದೆ. ನಮ್ಮ ದೇಶದಲ್ಲಿ ಮಾಬ್ ಲಿಂಚಿಂಗ್ (ಗುಂಪು ಹಲ್ಲೆ) ಹೆಸರಿನಲ್ಲಿ ಜನರನ್ನು ದ್ವೇಷಕ್ಕೆ ಸಜ್ಜುಗೊಳಿಸಲಾಗುತ್ತಿದೆ. ಇದರ ವಿರುದ್ಧ ಹೋರಾಡಲು ನಾನು ಕಾಂಗ್ರೆಸ್ ಪಕ್ಷದ ಸಿದ್ಧಾಂತದೊಂದಿಗೆ ಸಂಪರ್ಕ ಹೊಂದಿದ್ದೇನೆ. ಆದ್ದರಿಂದ 2018 ರವರೆಗೆ ಪ್ಯಾನೆಲಿಸ್ಟ್ ಆಗಿ ಕೆಲಸ ಮಾಡಿದೆ’ ಎನ್ನುತ್ತಾರೆ.

ಅದರ ನಂತರ ನಾನು ರಾಹುಲ್ ಗಾಂಧಿ ಮತ್ತು ರಂದೀಪ್ ಸುರ್ಜೆವಾಲಾ ಅವರಿಗೆ ಪತ್ರ ಬರೆದು ರಾಷ್ಟ್ರೀಯ ವಕ್ತಾರ ಹುದ್ದೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಬಯಸುತ್ತೇನೆ ಎಂದು ಹೇಳಿದೆ. 2019 ರ ಜನವರಿಯಲ್ಲಿ ಅವರು ನನ್ನ ಮೇಲೆ ವಿಶ್ವಾಸದಿಂದ ಈ ಜವಾಬ್ದಾರಿಯನ್ನು ಒಪ್ಪಿಸಿದರು ಎಂದು ಹೇಳಿದ್ದಾರೆ.

ಬಿಜೆಪಿಯ ದೇವಸ್ಥಾನ ಮತ್ತು ಪೂಜಾ ರಾಜಕೀಯದ ಬಗ್ಗೆ ಮಾತನಾಡಿರುವ ಅವರು, ‘ನಾನು ದಿನಕ್ಕೆ ಮೂರು ಗಂಟೆಗಳ ಕಾಲ ಪೂಜಿಸುತ್ತೇನೆ. ನನಗಿಂತ ಹೆಚ್ಚು ಯಾರೂ ಅಯೋಧ್ಯ ದೇವಾಲಯಗಳಿಗೆ ಹೋಗಿಲ್ಲ. ಜೊತೆಗೆ ಗೌರವ್ ಅವರು 20 ದೇಶಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ

ಗೌರವ್ ಲೋಕಸಭಾ ಸಂಶೋಧನಾ ಫೆಲೋಶಿಪ್ ಅಡಿಯಲ್ಲಿ 2016 ರಲ್ಲಿ ಅವರು ಸುಸ್ಥಿರ ಅಭಿವೃದ್ಧಿ ಗುರಿಗಳ ಬಗ್ಗೆ ಸಂಶೋಧನೆ ನಡೆಸಿದ್ದಾರೆ. ‘ನಾನು ಮೂರು ಪುಸ್ತಕಗಳನ್ನು ಬರೆದಿದ್ದೇನೆ. ನನ್ನ ಸಂಶೋಧನಾ ಪ್ರಬಂಧಗಳನ್ನು ಹಾರ್ವರ್ಡ್ ವಿಶ್ವವಿದ್ಯಾಲಯದಿಂದ 20 ದೇಶಗಳಿಗೆ ಪ್ರಸ್ತುತಪಡಿಸಿದ್ದೇನೆ. ಮಾರ್ಚ್ 2019 ರಲ್ಲಿ, ಎಕ್ಸ್‌ಎಲ್‌ಆರ್‌ಐ ಜಮ್‌ಶೆಡ್‌ಪುರ ಕೂಡ 15 ವರ್ಷಗಳ ಸೇವೆಗಾಗಿ ನನ್ನನ್ನು ಗೌರವಿಸಿತು. ನಾನು 50 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಪ್ರಕಟಣೆಯುಳ್ಳ ಪತ್ರಿಕೆಗಳಿಗೆ ಬರೆದಿದ್ದೇನೆ’ ಎನ್ನುತ್ತಾರೆ.

‘ಟ್ವಿಟರ್‌ನಲ್ಲಿ ದೇಶಪ್ರೇಮವನ್ನು ತೋರಿಸುವುದಿಲ್ಲ’

ಗೌರವ್ ವಲ್ಲಭ್ ರಾಷ್ಟ್ರೀಯತೆಯನ್ನು ಪ್ರಶ್ನಿಸಿ, ‘ರಾಷ್ಟ್ರೀಯತೆಯ ವ್ಯಾಖ್ಯಾನ ಏನು ಎಂದು ನಾನು ಹಲವು ಬಾರಿ ಕೇಳಿದ್ದೇನೆ. ನನಗೆ, ನನ್ನ ಕೆಲಸವನ್ನು ಪ್ರಾಮಾಣಿಕತೆ ಮತ್ತು ಸಮಗ್ರತೆಯಿಂದ ಮಾಡುವುದು ರಾಷ್ಟ್ರೀಯತೆ. ನಾನು ಟ್ವಿಟರ್‌ನಲ್ಲಿ ದೇಶಪ್ರೇಮವನ್ನು ತೋರಿಸುವುದಿಲ್ಲ’ ಎಂದಿದ್ದಾರೆ.

ಕೇವಲ 1,945 ಫೇಸ್‌ಬುಕ್ ಲೈಕ್‌ಗಳು ಮತ್ತು 5000 ಟ್ವಿಟ್ಟರ್ ಫಾಲೋವರ್‌ಗಳನ್ನು ಹೊಂದಿರುವ ಗೌರವ್ ವಲ್ಲಭ್, “ನಾನು ಟ್ವಿಟರ್ ಜಗತ್ತಿನಲ್ಲಿ ಗೆಲ್ಲಲಿಲ್ಲ” ಎಂದು ಹೇಳುತ್ತಾರೆ. ಚರ್ಚೆಗಳಲ್ಲದೆ ನಾನು ಓದುತ್ತೇನೆ ಮತ್ತು ಬರೆಯುತ್ತೇನೆ. ಮುಂದಿನ ತಿಂಗಳು ಪುಸ್ತಕವೂ ಹೊರಬರುತ್ತಿದೆ.’ ಎಂದಿದ್ದಾರೆ.

ಗೌರವ್ ಬಗ್ಗೆ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಜಯವೀರ್ ಶೆರ್ಗಿಲ್, “ಅವರು ಗಣಿತ ಮತ್ತು ಅರ್ಥಶಾಸ್ತ್ರವನ್ನು ಸುಲಭ ಭಾಷೆಯಲ್ಲಿ ವಿವರಿಸುತ್ತಾರೆ, ಜೊತೆಗೆ ಅವರು ಪ್ರಚಾರದಿಂದ ದೂರವಿರುತ್ತಾರೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...