Homeಎಕಾನಮಿಟಿವಿ ಚರ್ಚೆಯಲ್ಲಿ ಬಿಜೆಪಿಯ ಸಂಬಿತ್ ಪಾತ್ರನಿಗೆ ಮುಖಭಂಗ ಮಾಡಿದ ಗೌರವ್ ವಲ್ಲಭ್ ಯಾರು ಗೊತ್ತೆ?

ಟಿವಿ ಚರ್ಚೆಯಲ್ಲಿ ಬಿಜೆಪಿಯ ಸಂಬಿತ್ ಪಾತ್ರನಿಗೆ ಮುಖಭಂಗ ಮಾಡಿದ ಗೌರವ್ ವಲ್ಲಭ್ ಯಾರು ಗೊತ್ತೆ?

ಗೌರವ್ ವಲ್ಲಭ್ ಒಬ್ಬ 'ಚಿನ್ನದ ಪದಕ' ವಿಜೇತ ಕಾಂಗ್ರೆಸ್ ವಕ್ತಾರನಾಗಿದ್ದು ಟಿವಿ ಚರ್ಚೆಯಲ್ಲಿ ಅವರು ಸಂಬಿತ್ ಪಾತ್ರನಿಗೆ ಒಂದು ಟ್ರಿಲಿಯನ್ ಗೆ ಎಷ್ಟು ಸೊನ್ನೆಗಳನ್ನು ಬಳಸುತ್ತಾರೆ ಎಂದು ಕೇಳಿದ ಪ್ರಶ್ನೆ ಎಲ್ಲಾ ಕಡೆ ವೈರಲ್ ಆಗಿದೆ.

- Advertisement -
- Advertisement -

5 ಟ್ರಿಲಿಯನ್ ಮಿಲಿಯನ್‍ಗೆಷ್ಟು ಸೊನ್ನೆ?: ಸೊನ್ನೆ ಎದುರು ಬೆತ್ತಲಾದ ಮೋದಿ ಶಿಷ್ಯ!

ಅಂದು ಮೋದಿ ಸರಕಾರದ ನೂರು ದಿನಗಳ ಪರಾಮರ್ಶೆ ಕುರಿತು ರಾಷ್ಟ್ರೀಯ ಚಾನೆಲ್ ಎಬಿಪ ನ್ಯೂಸ್ ನಲ್ಲಿ ನಡೆದ ಚರ್ಚೆ…. ಕಾಂಗ್ರೆಸ್ಸಿನ ಅಷ್ಟೇನೂ ಫೇಮಸ್ ಅಲ್ಲದ ವಕ್ತಾರನೊಬ್ಬ ಬಿಜೆಪಿಯ ವಟ ವಟ ವಕ್ತಾರ ಸಂಬಿತ್ ಪಾತ್ರನಿಗೆ ಪಾಠ ಕಲಿಸಿದ ವಿಡಿಯೋ ನಿಮ್ಮ ಮುಂದಿದೆ. ವಿಡಿಯೋದ ಸಾರಂಶ ಕೆಳಗಿನಂತಿದೆ.

ಗೌರವ್ ವಲ್ಲಭ್: ಎಲ್ಲಾ ಕ್ಷೇತ್ರಗಳಲ್ಲಿಯೂ ಶೇ.30-40% ಮಾರಾಟ ಕಡಿಮೆಯಾಗಿದೆ.

ಸಂಬಿತ್ ಪಾತ್ರ: ಮೊದಲನೆಯದಾಗ 5 ಟ್ರಿಲಿಯನ್ ಎಕಾನಮಿಯ ನಂತರ ಮೋದಿಯವರು ಉತ್ತಮ ಸಾಧನೆ ಮಾಡಿದ್ದಾರೆ.

ಗೌರವ್ ವಲ್ಲಭ್: ಈ 5 ಟ್ರಿಲಿಯನ್ ಎಕಾನಮಿ ಎಲ್ಲಿದೆ ಸಂಬಿತ್ ಜೀ? ನಿಮಗೆ ನೆನಪಿದೆಯೇ, ಸ್ವಿಸ್ ಬ್ಯಾಂಕ್ ನಿಂದ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಮೋದಿ ಹೇಳಿದ್ದರು.

ಸಂಬಿತ್ ಪಾತ್ರ: ಬರುತ್ತಾ ಇದೆ. ಈ ಪೂರ್ತಿ ಐದು ವರ್ಷದಲ್ಲಿ 2 ಟ್ರಿಲಿಯನ್ ಅನ್ನು ಜೋಡಿಸುತ್ತಿದ್ದೇವೆ. ನಿಮ್ಮೆಲ್ಲರ ಆರ್ಶಿವಾದದಿಂದ ಹಿಂದೂಸ್ತಾನದ ಹಿರಿಮೆಯಿಂದ ಜೋಡಿಸುತ್ತೇವೆ.

ಗೌರವ್ ವಲ್ಲಭ್: ಸಂಬಿತ್ ಬಯ್ಯಾ, 5 ಟ್ರಿಲಿಯನ್ ನಲ್ಲಿ ಎಷ್ಟು ಸೊನ್ನೆ ಬರುತ್ತವೆ ಹೇಳುತ್ತೀರಾ? ಈಗಲೇ ಹೇಳುತ್ತೀರಾ?

ಸಂಬಿತ್ ಪಾತ್ರ: ಹೇಳುತ್ತೇನೆ,

ಸಂಬೀತ್ ಪಾತ್ರಾ ಕಕ್ಕಾಬಿಕ್ಕಿ…..

‘ಒಂದ್ ನಿಮಿಷ, ಹೇಳುತೇನೆ’ ಎನ್ನುವ ಸಂಬೀತ್ ಮರುಕ್ಷಣ ಮೊದಲು ಈ ಪ್ರಶ್ನೆಯನ್ನು ರಾಹುಲ್ ಗಾಂಂಧಿಗೆ ಕೇಳಿ ನಂತರ ಬನ್ನಿ ಎಂದು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಾರೆ.

ಗೌರವ್ ವಲ್ಲಭ್: ಎಬಿಪಿ ನ್ಯೂಸ್ ವೀಕ್ಷಕರು ಇವರ ಜ್ಞಾನವನ್ನು ಅರ್ಥ ಮಾಡಿಕೊಳ್ಳಬೇಕು. ಸುಮ್ಮನೆ 5 ಟ್ರಿಲಿಯನ್, 5 ಟ್ರಿಲಿಯನ್ ಎಂದು ಬೊಗಳುವುದಲ್ಲ, 5 ಟ್ರಿಲಿಯನ್ ಗೆ ಎಷ್ಟು ಸೊನ್ನೆ ಇರುತ್ತವೆ ಎಂದು ನೀವು ಹೇಳಬೇಕು? ಇದು ನನ್ನ ಸವಾಲು ಎನ್ನುತ್ತಾರೆ.

ಕೊನೆಗೆ ಆ ಸಾಮಾನ್ಯ ಕಾಂಗ್ರೆಸ್ ಪ್ರತಿನಿಧಿಯೇ ಮಿಲಿಯನ್, ಬಿಲಿಯನ್ ಟ್ರಿಲಿಯಮಗಗ ಬಗ್ಗೆ ವಿವರಿಸಿ, ಯಾವುದರ ಮುಂದೆ ಎಷ್ಟು ಸೊನ್ನೆಗಳಿರುತ್ತವೆ ಎಂದು ವಿವರಿಸಿದ್ದಾನೆ….

ಈ ಚರ್ಚೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಸಂಬಿತ್ ಪಾತ್ರನಿಗೆ ಮಣ್ಣು ಮುಕ್ಕಿಸಿದ ಈ ಗೌರವ್ ವಲ್ಲಭ್ ಯಾರು ಎಂದು ಬಹಳಷ್ಟು ಜನ ಕೇಳುತ್ತಿದ್ದಾರೆ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಎಂದು ಘೋಷಿಸಬೇಕು, ವಿರೋಧ ಪಕ್ಷಗಳು ಗೌರವ್ ಅವರನ್ನು ತಮ್ಮ ವಕ್ತಾರರನ್ನಾಗಿ ಮಾಡಬೇಕು ಎಂದು ಕೆಲವು ಜನರು ಫೇಸ್ ಬುಕ್ ನಲ್ಲಿ, ಟ್ವಿಟ್ಟರ್ ನಲ್ಲಿ ಬರೆಯುತ್ತಿದ್ದಾರೆ.

ರಾಜಸ್ಥಾನದ ಪಾಲಿ ನಗರದ ನಿವಾಸಿಯಾದ 42 ವರ್ಷದ ಗೌರವ್ ವಲ್ಲಭ್ ಅವರು ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರಾಗಲು ಅಥವಾ ವಿರೋಧ ಪಕ್ಷಗಳ ನಾಯಕರಾಗಲು ನಾನು ಬಯಸುವುದಿಲ್ಲ. ‘ನನಗೆ ಅಂತಹ ಕಲ್ಪನೆ ಇಲ್ಲ’ ಎಂದು ಬಹಳ ವಿನಯವಾಗಿ ಹೇಳಿದ್ದಾರೆ.

ಪಾಲಿಯಲ್ಲಿ ಶಾಲಾ ಶಿಕ್ಷಣದ ನಂತರ ಗೌರವ್ ಜೈಪುರದಿಂದ ಸಿಎ ಅಧ್ಯಯನ ಮಾಡಿದರು. ಗೌರವ್ ಅವರ ಪೋಷಕರು ಪಾಲಿಯ ಸರ್ಕಾರಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಗೌರವ್ 2000-2003ರವರೆಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕ್ ಮ್ಯಾನೇಜ್‌ಮೆಂಟ್ ಪೂನಾದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು. ಇದರೊಂದಿಗೆ ಅವರು ಮಹರ್ಷಿ ದಯಾನಂದ್ ಸರಸ್ವತಿ ವಿಶ್ವವಿದ್ಯಾಲಯದ ಅಜ್ಮೀರ್‌ನಿಂದ ಎಂ.ಕಾಂನಲ್ಲಿ ‘ಚಿನ್ನದ ಪದಕ’ವನ್ನು ಗಳಿಸಿದ್ದಾರೆ.

‘ದಿ ಪ್ರಿಂಟ್’ ನೊಂದಿಗೆ ಮಾತನಾಡಿದ ಅವರು, ‘2017ರವರೆಗೆ ನಾನು ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡುತ್ತಿದೆ, ಆನಂತರ ಭಾರತಕ್ಕೆ ಮರಳಿದೆ. ನಮ್ಮ ದೇಶದಲ್ಲಿ ಮಾಬ್ ಲಿಂಚಿಂಗ್ (ಗುಂಪು ಹಲ್ಲೆ) ಹೆಸರಿನಲ್ಲಿ ಜನರನ್ನು ದ್ವೇಷಕ್ಕೆ ಸಜ್ಜುಗೊಳಿಸಲಾಗುತ್ತಿದೆ. ಇದರ ವಿರುದ್ಧ ಹೋರಾಡಲು ನಾನು ಕಾಂಗ್ರೆಸ್ ಪಕ್ಷದ ಸಿದ್ಧಾಂತದೊಂದಿಗೆ ಸಂಪರ್ಕ ಹೊಂದಿದ್ದೇನೆ. ಆದ್ದರಿಂದ 2018 ರವರೆಗೆ ಪ್ಯಾನೆಲಿಸ್ಟ್ ಆಗಿ ಕೆಲಸ ಮಾಡಿದೆ’ ಎನ್ನುತ್ತಾರೆ.

ಅದರ ನಂತರ ನಾನು ರಾಹುಲ್ ಗಾಂಧಿ ಮತ್ತು ರಂದೀಪ್ ಸುರ್ಜೆವಾಲಾ ಅವರಿಗೆ ಪತ್ರ ಬರೆದು ರಾಷ್ಟ್ರೀಯ ವಕ್ತಾರ ಹುದ್ದೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಬಯಸುತ್ತೇನೆ ಎಂದು ಹೇಳಿದೆ. 2019 ರ ಜನವರಿಯಲ್ಲಿ ಅವರು ನನ್ನ ಮೇಲೆ ವಿಶ್ವಾಸದಿಂದ ಈ ಜವಾಬ್ದಾರಿಯನ್ನು ಒಪ್ಪಿಸಿದರು ಎಂದು ಹೇಳಿದ್ದಾರೆ.

ಬಿಜೆಪಿಯ ದೇವಸ್ಥಾನ ಮತ್ತು ಪೂಜಾ ರಾಜಕೀಯದ ಬಗ್ಗೆ ಮಾತನಾಡಿರುವ ಅವರು, ‘ನಾನು ದಿನಕ್ಕೆ ಮೂರು ಗಂಟೆಗಳ ಕಾಲ ಪೂಜಿಸುತ್ತೇನೆ. ನನಗಿಂತ ಹೆಚ್ಚು ಯಾರೂ ಅಯೋಧ್ಯ ದೇವಾಲಯಗಳಿಗೆ ಹೋಗಿಲ್ಲ. ಜೊತೆಗೆ ಗೌರವ್ ಅವರು 20 ದೇಶಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ

ಗೌರವ್ ಲೋಕಸಭಾ ಸಂಶೋಧನಾ ಫೆಲೋಶಿಪ್ ಅಡಿಯಲ್ಲಿ 2016 ರಲ್ಲಿ ಅವರು ಸುಸ್ಥಿರ ಅಭಿವೃದ್ಧಿ ಗುರಿಗಳ ಬಗ್ಗೆ ಸಂಶೋಧನೆ ನಡೆಸಿದ್ದಾರೆ. ‘ನಾನು ಮೂರು ಪುಸ್ತಕಗಳನ್ನು ಬರೆದಿದ್ದೇನೆ. ನನ್ನ ಸಂಶೋಧನಾ ಪ್ರಬಂಧಗಳನ್ನು ಹಾರ್ವರ್ಡ್ ವಿಶ್ವವಿದ್ಯಾಲಯದಿಂದ 20 ದೇಶಗಳಿಗೆ ಪ್ರಸ್ತುತಪಡಿಸಿದ್ದೇನೆ. ಮಾರ್ಚ್ 2019 ರಲ್ಲಿ, ಎಕ್ಸ್‌ಎಲ್‌ಆರ್‌ಐ ಜಮ್‌ಶೆಡ್‌ಪುರ ಕೂಡ 15 ವರ್ಷಗಳ ಸೇವೆಗಾಗಿ ನನ್ನನ್ನು ಗೌರವಿಸಿತು. ನಾನು 50 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಪ್ರಕಟಣೆಯುಳ್ಳ ಪತ್ರಿಕೆಗಳಿಗೆ ಬರೆದಿದ್ದೇನೆ’ ಎನ್ನುತ್ತಾರೆ.

‘ಟ್ವಿಟರ್‌ನಲ್ಲಿ ದೇಶಪ್ರೇಮವನ್ನು ತೋರಿಸುವುದಿಲ್ಲ’

ಗೌರವ್ ವಲ್ಲಭ್ ರಾಷ್ಟ್ರೀಯತೆಯನ್ನು ಪ್ರಶ್ನಿಸಿ, ‘ರಾಷ್ಟ್ರೀಯತೆಯ ವ್ಯಾಖ್ಯಾನ ಏನು ಎಂದು ನಾನು ಹಲವು ಬಾರಿ ಕೇಳಿದ್ದೇನೆ. ನನಗೆ, ನನ್ನ ಕೆಲಸವನ್ನು ಪ್ರಾಮಾಣಿಕತೆ ಮತ್ತು ಸಮಗ್ರತೆಯಿಂದ ಮಾಡುವುದು ರಾಷ್ಟ್ರೀಯತೆ. ನಾನು ಟ್ವಿಟರ್‌ನಲ್ಲಿ ದೇಶಪ್ರೇಮವನ್ನು ತೋರಿಸುವುದಿಲ್ಲ’ ಎಂದಿದ್ದಾರೆ.

ಕೇವಲ 1,945 ಫೇಸ್‌ಬುಕ್ ಲೈಕ್‌ಗಳು ಮತ್ತು 5000 ಟ್ವಿಟ್ಟರ್ ಫಾಲೋವರ್‌ಗಳನ್ನು ಹೊಂದಿರುವ ಗೌರವ್ ವಲ್ಲಭ್, “ನಾನು ಟ್ವಿಟರ್ ಜಗತ್ತಿನಲ್ಲಿ ಗೆಲ್ಲಲಿಲ್ಲ” ಎಂದು ಹೇಳುತ್ತಾರೆ. ಚರ್ಚೆಗಳಲ್ಲದೆ ನಾನು ಓದುತ್ತೇನೆ ಮತ್ತು ಬರೆಯುತ್ತೇನೆ. ಮುಂದಿನ ತಿಂಗಳು ಪುಸ್ತಕವೂ ಹೊರಬರುತ್ತಿದೆ.’ ಎಂದಿದ್ದಾರೆ.

ಗೌರವ್ ಬಗ್ಗೆ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಜಯವೀರ್ ಶೆರ್ಗಿಲ್, “ಅವರು ಗಣಿತ ಮತ್ತು ಅರ್ಥಶಾಸ್ತ್ರವನ್ನು ಸುಲಭ ಭಾಷೆಯಲ್ಲಿ ವಿವರಿಸುತ್ತಾರೆ, ಜೊತೆಗೆ ಅವರು ಪ್ರಚಾರದಿಂದ ದೂರವಿರುತ್ತಾರೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...