Homeಮುಖಪುಟಲೋಕಸಭೆ ಚುನಾವಣೆ: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಮಾಧವಿ ಲತಾ ಯಾರು?

ಲೋಕಸಭೆ ಚುನಾವಣೆ: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಮಾಧವಿ ಲತಾ ಯಾರು?

ಮುಸ್ಲಿಂ ಪ್ರಾಬಲ್ಯದ ಕ್ಷೇತ್ರದಲ್ಲಿ ಹಿಂದುತ್ವ ನಾಯಕಿಗೆ ಗೆಲುವಾಗುತ್ತಾ?

- Advertisement -
- Advertisement -

ದೇಶದ ಪ್ರಮುಖ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾದ ಹೈದರಾಬಾದ್‌ನಿಂದ ಅಸಾದುದ್ದೀನ್ ಓವೈಸಿ ವಿರುದ್ಧ ಈ ಬಾರಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಈ ಮೂಲಕ ಚುನಾವಣಾ ಕಣ ರಂಗೇರಿದೆ.

ಆಲ್‌ ಇಂಡಿಯಾ ಮಜ್ಲಿಸೇ ಇತ್ತಿಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ನಾಯಕ ಮತ್ತು ಹೈದರಾಬಾದ್‌ನ ಹಾಲಿ ಸಂಸದ ಅಸಾಸುದ್ದೀನ್ ಓವೈಸ್ ವಿರುದ್ದ ಹಿಂದುತ್ವ ಮುಖ ಕೊಂಪೆಲ್ಲಾ ಮಾಧವಿ ಲತಾ ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಘೋಷಿಸಿದೆ. ಮುಸ್ಲಿಮರು ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಮತ್ತು ಎಂಐಎಂ ಪಕ್ಷದ ಭದ್ರಕೋಟೆಯಾದ ಪುರಾತನ ನಗರ ಹೈದರಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರಾ? ಎಂಬ ಕುತೂಹಲ ಮೂಡಿದೆ.

‘ಧರ್ಮೋ ರಕ್ಷತಿ ರಕ್ಷಿತಃ (ಧರ್ಮವು ತನ್ನನ್ನು ರಕ್ಷಿಸುವವರನ್ನು ರಕ್ಷಿಸುತ್ತದೆ)” ಎಂದು ಹೈದರಾಬಾದ್ ಕ್ಷೇತ್ರದ ಅಭ್ಯರ್ಥಿಯಾಗಿ ತನ್ನ ಹೆಸರನ್ನು ಘೋಷಣೆಯಾದ ನಂತರ ಮಾಧವಿ ಪ್ರತಿಕ್ರಿಯಿಸಿದ್ದರು.

ಎಐಎಂಐಎಂ ಅಧ್ಯಕ್ಷರೂ ಆಗಿರುವ ಓವೈಸಿ ಅವರು 2004 ರಿಂದ ಹೈದರಾಬಾದ್ ಸಂಸದರಾಗಿದ್ದಾರೆ. ಸತತ ನಾಲ್ಕನೇ ಬಾರಿ ಅವರು ಗೆಲುವು ದಾಖಲಿಸಿದ್ದಾರೆ. ಈ ಬಾರಿ ಗೆದ್ದರೆ ಐದನೇ ಬಾರಿ ಗೆದ್ದಂತಾಗುತ್ತದೆ. ಈ ಹಿಂದೆ, ಅವರ ತಂದೆ ಸುಲ್ತಾನ್ ಸಲಾವುದ್ದೀನ್ ಓವೈಸಿ ಅವರು ಆರು ಬಾರಿ ಹೈದರಾಬಾದ್‌ನಿಂದ ಲೋಕಸಭೆಯ ಪ್ರತಿನಿಧಿಯಾಗಿದ್ದರು.

ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಹೈದರಾಬಾದ್‌ನ ನಿಝಾಮ್ ಕಾಲೇಜಿನಲ್ಲಿ ಸಾರ್ವಜನಿಕ ಆಡಳಿತದಲ್ಲಿ ಬಿಎ ಮತ್ತು ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರದಲ್ಲಿ ಎಂಎ ಪದವಿ ಪಡೆದಿದ್ದಾರೆ. ಹೈದರಾಬಾದ್ ಮೂಲದ ವಿರಿಂಚಿ ಆಸ್ಪತ್ರೆಗಳ ಮುಖ್ಯಸ್ಥರಾಗಿದ್ದಾರೆ. ವಿದ್ಯಾರ್ಥಿ ದಿನಗಳಲ್ಲಿ ಲತಾ ಅವರು ನ್ಯಾಷನಲ್ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಸದಸ್ಯೆಯಾಗಿದ್ದರು. ಅವರು ಭರತನಾಟ್ಯ ನೃತ್ಯಗಾರ್ತಿಯೂ ಹೌದು. ಪ್ರಸ್ತುತ ಹೈದರಾಬಾದ್ ಓಲ್ಡ್ ಸಿಟಿ ವ್ಯಾಪ್ತಿಯ ಯಕುತ್ಪುರ ವಿಧಾನಸಬಾ ಕ್ಷೇತ್ರದಲ್ಲಿ ಲತಾ ಅವರ ಮನೆಯಿದೆ.

ಲೋಪಾಮುದ್ರಾ ಚಾರಿಟೇಬಲ್ ಟ್ರಸ್ಟ್, ಲತಾಮಾ ಫೌಂಡೇಶನ್ ಇತ್ಯಾದಿ ಸಮಾಜಮುಖಿ ಸಂಸ್ಥೆಗಳೊಂದಿಗೆ ಮಾಧವಿ ಲತಾ ಗುರುತಿಸಿಕೊಂಡಿದ್ದಾರೆ. ಅವರ ಪತಿ ವಿಶ್ವನಾಥ್ ಅವರು ವಿರಿಂಚಿ ಆಸ್ಪತ್ರೆಯ ಸಂಸ್ಥಾಪಕರು ಮತ್ತು ಅಧ್ಯಕ್ಷರು. ಲತಾ ಅವರು ಹೈದರಾಬಾದ್‌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮೊದಲ ಮಹಿಳಾ ಅಭ್ಯರ್ಥಿಯಾಗಿದ್ದಾರೆ.

49 ವರ್ಷ ವಯಸ್ಸಿನ ಮಾಧವಿ ಲತಾ ಅವರು, ಈ ಹಿಂದೆ ಹೈದರಾಬಾದ್‌ನ ಓಲ್ಡ್‌ ಸಿಟಿಯಲ್ಲಿ ತ್ರಿವಳಿ ತಲಾಖ್ ವಿರುದ್ಧ ಅಭಿಯಾನ ನಡೆಸಿದ್ದರು. ಈ ಮೂಲಕ ಮುಸ್ಲಿಂ ಮಹಿಳೆಯರನ್ನು ತಲುಪುವ ಪ್ರಯತ್ನ ಮಾಡಿದ್ದರು. ಆರ್ಥಿಕವಾಗಿ ದುರ್ಬಲರಾಗಿರುವ ಮುಸ್ಲಿಂ ಮಹಿಳೆಯರು ಮತ್ತು ಹುಡುಗಿಯರಿಗೆ ಸಹಾಯ ಮಾಡಲು ಅವರು ನಿಧಿಯನ್ನು ಸ್ಥಾಪಿಸಿದ್ದಾರೆ.

ಆರೋಗ್ಯ ಶಿಬಿರ ಏರ್ಪಡಿಸುವುದು, ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಸೇರಿದಂತೆ ಸಮಾಜಮುಖಿ ಕೆಲಸಗಳನ್ನು ಲತಾ ಮಾಡುತ್ತಾ ಬಂದಿದ್ದಾರೆ. ಸ್ವಚ್ಛ ಭಾರತ ಅಭಿಯಾನದಿಂದ ಪ್ರೇರಿತರಾಗಿ 2,176 ಶೌಚಾಲಯಗಳನ್ನು ಅವರು ಸ್ಥಾಪಿಸಿದ್ದಾರೆ. ಹೆಣ್ಣುಮಕ್ಕಳ ಶಿಕ್ಷಣಕ್ಕೆ ಕೂಡ ನೆರವು ಒದಗಿಸುತ್ತಿದ್ದಾರೆ. ಇವೆಲ್ಲದರ ಹೊರತಾಗಿ ಹಿಂದೂ ಧರ್ಮದ ಚಟುವಟಕೆಗಳಲ್ಲಿ ಅವರು ಸಕ್ರಿಯರಾಗಿ ತೊಡಗಿಸಿಕೊಳ್ಳುತ್ತಿದ್ದಾರೆ.

“ಸನಾತನ ಧರ್ಮವು ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ದಾರಿ. ನಾನು ಧರ್ಮ ಮಾರ್ಗದ ಅನುಯಾಯಿಯಾಗಿದ್ದೇನೆ. ನಮ್ಮ ಭರತವರ್ಷದಲ್ಲಿ ಹಿಂದೂ ಧರ್ಮ ರಾಜ್ಯಗಳ ಮೂಲಕ ಪ್ರವರ್ಧಮಾನಕ್ಕೆ ಬಂದ ಹಲವಾರು ರಾಜರಿಂದ ಪ್ರಭಾವಿತಳಾಗಿದ್ದೇನೆ” ಎಂದು ಲತಾ ಭಾನುವಾರ ದೂರವಾಣಿ ಮೂಲಕ ಹೇಳಿರುವುದಾಗಿ ದಿ ಪ್ರಿಂಟ್ ವರದಿ ಮಾಡಿದೆ.

“ನನ್ನ ಸ್ಫೂರ್ತಿ ಕಳೆದ ಎರಡು ದಶಕಗಳಿಂದ ಭಾರತದ ಅಭಿವೃದ್ಧಿಯನ್ನು ಸರಿಯಾದ ದಿಕ್ಕಿನಲ್ಲಿ ಮುನ್ನಡೆಸಲು ತನ್ನನ್ನು ತ್ಯಾಗ ಮಾಡುತ್ತಿರುವ ನರೇಂದ್ರ ಮೋದಿ ಜಿಯವರು. ನಮ್ಮ ದೇಶವು ಹಿಂದೆ ಅನೇಕ ಮಹಾನ್ ನಾಯಕರನ್ನು ಕಂಡಿದೆ. ಆದರೆ, ಯಾರೂ ಪ್ರಧಾನಿ ನರೇಂದ್ರ ಮೋದಿ ಜಿಯಂತೆ ನಿಸ್ವಾರ್ಥ, ನಿರ್ಣಾಯಕ ಮತ್ತು ಸ್ಪಷ್ಟ ಉದ್ದೇಶದಿಂದ ಕೆಲಸ ಮಾಡಿಲ್ಲ. ನನ್ನ ಧ್ಯೇಯವೆಂದರೆ ಸ್ಫೂರ್ತಿಯಿಂದ ಮುನ್ನಡೆಯುವುದು. ಮೋದಿಯವರ ನೇತೃತ್ವದಲ್ಲಿ ‘ಅಮೃತ ಕಾಲ’ದಲ್ಲಿ ಭಾರತವನ್ನು ಸೂಪರ್ ಪವರ್ ಮಾಡುವಲ್ಲಿ ನಾವು ಕೆಲಸ ಮಾಡಬೇಕು. ನನ್ನ ಮೇಲೆ ನಂಬಿಕೆ ಇಟ್ಟ ಅಮಿತ್ ಶಾ, ಜೆಪಿ ನಡ್ಡಾ ಮತ್ತು ರಾಜನಾಥ್ ಸಿಂಗ್ ಅವರಿಗೆ ಧನ್ಯವಾದ ಹೇಳುತ್ತೇನೆ” ಎಂದು ಲತಾ ಅವರು ಹೇಳಿದ್ದಾಗಿ ಪ್ರಿಂಟ್ ವರದಿ ತಿಳಿಸಿದೆ.

ಮಾಧವಿ ಲತಾ ಅವರು ತನ್ನನ್ನು ತಾನು ವಾಗ್ಮಿ, ಕಲಾವಿದೆ, ಲೋಕೋಪಕಾರಿ, ವಾಣಿಜ್ಯೋದ್ಯಮಿ, ತಾಯಿ, ಹೆಂಡತಿ ಮತ್ತು ಮಹಿಳೆ ಎಂದು ಬಣ್ಣಿಸಿದ್ದಾರೆ. ನಾನು ಹೈದರಾಬಾದ್‌ಗೆ ಶಾಂತಿ ಮತ್ತು ಸಮೃದ್ಧಿಯನ್ನು ತರುವ ಉದ್ದೇಶ ಹೊಂದಿದ್ದೇನೆ ಎಂದಿದ್ದಾರೆ. ನಗರದ ಇತರ ಭಾಗಗಳು ಅಭಿವೃದ್ಧಿ ಹೊಂದುತ್ತಿರುವಾಗ ಎಐಎಂಐಎಂ ಆಳ್ವಿಕೆ ನಡೆಸುತ್ತಿರುವ ಕ್ಷೇತ್ರವು ಏಕೆ ಅಭಿವೃದ್ಧಿಯಾಗದೆ ಉಳಿದಿದೆ?” ಎಂದು ಲತಾ ಅವರು ಪ್ರಶ್ನಿಸಿದ್ದಾರೆ.

“ಓಲ್ಡ್‌ ಸಿಟಿಯಲ್ಲಿ ಶುಚಿತ್ವವಿಲ್ಲ, ಶಿಕ್ಷಣವಿಲ್ಲ. ಮದರಸಾಗಳಲ್ಲಿ ಮಕ್ಕಳಿಗೆ ಊಟ ಸಿಗುತ್ತಿಲ್ಲ. ಮುಸ್ಲಿಂ ಮಕ್ಕಳು ಬಾಲ ಕಾರ್ಮಿಕರಾಗುತ್ತಿದ್ದಾರೆ, ಅವರಿಗೆ ಭವಿಷ್ಯವಿಲ್ಲ. ಹಿಂದೂ ದೇವಾಲಯಗಳು ಮತ್ತು ಮನೆಗಳನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲಾಗುತ್ತಿದೆ” ಎಂದು ಲತಾ ಅವರು ಟಿಕೆಟ್ ಘೋಷಣೆಯಾದ ಬಳಿಕ ಹೇಳಿದ್ದರು.

“ಹೈದರಾಬಾದ್ ಲೋಕಸಭಾ ಕ್ಷೇತ್ರದ ಮೂಲೆ ಮೂಲೆಗೆ ನಾನು ಸಂಚರಿಸಿದ್ದೇನೆ. ಇಲ್ಲಿಯ ಜನರ ಸಮಸ್ಯೆ ನನಗೆ ಚೆನ್ನಾಗಿ ಗೊತ್ತಿದೆ. ವಿಶೇಷವಾಗಿ ಪಸ್ಮಾಂಡ ಮುಸ್ಲಿಮರನ್ನು ಭೇಟಿಯಾಗಗಿರುವ ನನಗೆ, ಅವರಿಗೆ ಏನು ಬೇಕಿದೆ ಎಂದು ಚೆನ್ನಾಗಿದೆ ಗೊತ್ತಿದೆ. ಹಾಗಾಗಿ, ಸ್ಥಳೀಯರಿಗೆ ಅವರ ಹಕ್ಕುಗಳನ್ನು ದೊರಕಿಸಿಕೊಡುವುದು ನನ್ನ ಚುನಾವಣಾ ಪ್ರಚಾರದ ಥೀಮ್ ಅಗಿರಲಿದೆ ಎಂದು ಲತಾ ಅವರು ತಿಳಿಸಿದ್ದಾಗಿ ಪ್ರಿಂಟ್ ಹೇಳಿದೆ.

“ಎಐಎಂಐಎಂ ಅವರ ಉತ್ತಮ ಕೆಲಸ ಅಥವಾ ಜನಪ್ರಿಯತೆಯ ಕಾರಣದಿಂದ ಗೆದ್ದರೆ ಒಳ್ಳೆಯದು. ಆದರೆ, ಆ ಪಕ್ಷವು ತಮ್ಮ ಮತದಾರರಿಗೆ ತಿಳುವಳಿಕೆಯಿಲ್ಲದ ಕಾರಣ ಅವರನ್ನು ಭಯಭೀತರನ್ನಾಗಿಸಿ ಅಧಿಕಾರದಲ್ಲಿ ಮುಂದುವರಿಯುತ್ತಿದೆ. ನಕಲಿ ಮತಗಳನ್ನು ತೆಗೆದು ಹಾಕುವುದು, ಮತಗಟ್ಟೆಗಳನ್ನು ಸುರಕ್ಷಿತ ವಲಯಗಳಿಗೆ ಸ್ಥಳಾಂತರಿಸುವುದು, ವೆಬ್‌ಕ್ಯಾಮ್‌ಗಳನ್ನು ಸ್ಥಾಪಿಸುವುದು ಮತ್ತು ನೇರ ಪೊಲೀಸ್ ಅಧಿಕಾರಿಗಳು ಮತ್ತು ಕೇಂದ್ರ ಪೊಲೀಸ್ ಪಡೆಗಳನ್ನು ನಿಯೋಜಿಸುವ ಮೂಲಕ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ನಾನು ಭಾರತೀಯ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇನೆ” ಎಂದು ಲತಾ ಹೇಳಿದ್ದಾರೆ.

ಪ್ರಖರ ಹಿಂದುತ್ವವಾದಿ ಮತ್ತು ಹೈದರಾಬಾದ್‌ನ ಗೋಶಮಹಲ್ ವಿಧಾನಸಭೆ ಕ್ಷೇತ್ರದ ಶಾಸಕ ರಾಜಾ ಸಿಂಗ್‌ ಅವರನ್ನು ಓವೈಸಿ ವಿರುದ್ದ ಕಣಕ್ಕಿಳಿಸುವ ಸಾಧ್ಯತೆಯಿದೆ ಎನ್ನಲಾಗಿತ್ತು. ಆದರೆ, ಬಿಜೆಪಿ ಹೈಕಮಾಂಡ್ ಮಾಧವಿ ಲತಾ ಅವರಿಗೆ ಟಿಕೆಟ್ ಕೊಟ್ಟಿದೆ.

ಗೋಶಮಹಲ್ ಹೈದರಾಬಾದ್ ಲೋಕಸಭಾ ಕ್ಷೇತ್ರದಲ್ಲಿರುವ ಏಕೈಕ ಬಿಜೆಪಿ ಹಿಡಿತದ ವಿಧಾನಸಭಾ ಕ್ಷೇತ್ರವಾಗಿದೆ. ಉಳಿದ ಆರು ಕ್ಷೇತ್ರಗಳಲ್ಲಿ ಎಐಎಂನ ಶಾಸಕರಿದ್ದಾರೆ. ಕಳೆದ ಎರಡು ಚುನಾವಣೆಗಳಲ್ಲಿ ಒವೈಸಿ ಅವರು ಹೈದರಾಬಾದ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಗವಂತರಾವ್ ಅವರನ್ನು ಭಾರೀ ಮತಗಳ ಅಂತರದಿಂದ ಸೋಲಿಸಿದ್ದರು.

ಹೈದರಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಓಲ್ಡ್‌ ಸಿಟಿಯೇ ಪ್ರಮುಖ ಪ್ರದೇಶವಾಗಿದೆ. ಇಲ್ಲಿಯೇ ವಿಶ್ವ ಪ್ರಸಿದ್ದ ಚಾರ್‌ಮಿನಾರ್, ಭಾರತ ಅತೀ ದೊಡ್ಡ ಮಸೀದಿಗಳಲ್ಲಿ ಒಂದಾದ ಮಕ್ಕಾ ಮಸ್ಜಿದ್, ನಿಝಾಮರ ಆಡಳಿತ ಕೇಂದ್ರ ಚೌಮೊಹಲ್ಲಾ ಅರಮನೆ, ಪ್ರಸಿದ್ದ ಜಾಮಿಯಾ ನಿಝಾಮಿಯಾ ಕಾಲೇಜು ಇದೆ.

ಭಾರತದಲ್ಲಿ ಮುಸ್ಲಿಮರು ಹೆಚ್ಚಿನ ಸಂಖ್ಯೆಲ್ಲಿರುವ ನಗರಗಳಲ್ಲಿ ಹೈದರಾಬಾದ್ ಕೂಡ ಒಂದು. ಈ ಕ್ಷೇತ್ರದಲ್ಲಿ ಗೆಲ್ಲಬೇಕಾದರೆ ಮುಸ್ಲಿಮರ ಮತಗಳು ನಿರ್ಣಾಯಕವಾಗಿದೆ. ಹಾಗಾಗಿ, ಮಾಧವಿ ಲತಾ ಅವರು ಬಿಜೆಪಿ ಅಭ್ಯರ್ಥಿಯಾದರೂ ಮುಸ್ಲಿಮರ ಜೊತೆ ಚೆನ್ನಾಗಿದ್ದಾರೆ. ಅದರ ಜೊತೆಗೆ ಬಿಜೆಪಿ ಮೂಲ ಸಿದ್ದಾಂತವಾದ ಹಿಂದುತ್ವದಿಂದ ಅವರು ಹೊರತಾಗಿಲ್ಲ. ಉದಾ: ಹೈದರಾಬಾದ್‌ನ ಸೈದಾಬಾದ್‌ನಲ್ಲಿ ಹನುಮಾನ್ ದೇವಸ್ಥಾನದ ಮೇಲೆ ನಿರ್ಮಾಣವಾಗುತ್ತಿರುವ ಸ್ಟೀಲ್ ಬ್ರಿಡ್ಜ್ ವಿರುದ್ದ ಅವರು ಹೋರಾಟ ರೂಪಿಸಿದ್ದಾರೆ. ಸ್ಟೀಲ್ ಬ್ರಿಡ್ಜ್ ಹನುಮಾನ್ ಮಂದಿರದ ಮೇಲೆ ಹಾದು ಹೋಗುವುದರಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಲಿದೆ ಎಂಬುವುದು ಮಾಧವಿ ಅವರ ವಾದ.

ಒಟ್ಟಿನಲ್ಲಿ, ದೇಶದ ಪ್ರಭಾವಿ ಮುಸ್ಲಿಂ ರಾಜಕಾರಣಿ ವಿರುದ್ದ ಅಗ್ನಿ ಪರೀಕ್ಷೆಗಿಳಿದಿರುವ ಮಾಧವಿ ಲತಾ ಅವರು ಗೆಲುವು ದಾಖಲಿಸುತ್ತಾರಾ? ಲತಾ ಅವರ ಸ್ಪರ್ಧೆ ಸೋಲಿಲ್ಲದ ಸರದಾರನಾಗಿರುವ ಅಸಾದುದ್ದೀನ್ ಓವೈಸಿಯ ಮತಗಳ ಮೇಲೆ ಪರಿಣಾಮ ಬೀರುತ್ತಾ? ಲತಾ ಅವರು ಮುಸ್ಲಿಮರ ಮನ ಗೆಲ್ಲುತ್ತಾರಾ? ಇತ್ಯಾದಿಗ ಪ್ರಶ್ನಗಳಿಗೆ ಚುನಾವಣೆ ಉತ್ತರ ನೀಡಬೇಕಿದೆ.

ಇದನ್ನೂ ಓದಿ: ಮೋದಿ ರ್‍ಯಾಲಿಯಲ್ಲಿ ಭಾಗವಹಿಸುವಂತೆ ಸರಕಾರಿ ಉದ್ಯೋಗಿಗಳಿಗೆ ಸೂಚಿಸಿದ ಜಮ್ಮು-ಕಾಶ್ಮೀರ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...