Homeಮುಖಪುಟಲೋಕಸಭೆ ಚುನಾವಣೆ: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಮಾಧವಿ ಲತಾ ಯಾರು?

ಲೋಕಸಭೆ ಚುನಾವಣೆ: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಮಾಧವಿ ಲತಾ ಯಾರು?

ಮುಸ್ಲಿಂ ಪ್ರಾಬಲ್ಯದ ಕ್ಷೇತ್ರದಲ್ಲಿ ಹಿಂದುತ್ವ ನಾಯಕಿಗೆ ಗೆಲುವಾಗುತ್ತಾ?

- Advertisement -
- Advertisement -

ದೇಶದ ಪ್ರಮುಖ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾದ ಹೈದರಾಬಾದ್‌ನಿಂದ ಅಸಾದುದ್ದೀನ್ ಓವೈಸಿ ವಿರುದ್ಧ ಈ ಬಾರಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಈ ಮೂಲಕ ಚುನಾವಣಾ ಕಣ ರಂಗೇರಿದೆ.

ಆಲ್‌ ಇಂಡಿಯಾ ಮಜ್ಲಿಸೇ ಇತ್ತಿಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ನಾಯಕ ಮತ್ತು ಹೈದರಾಬಾದ್‌ನ ಹಾಲಿ ಸಂಸದ ಅಸಾಸುದ್ದೀನ್ ಓವೈಸ್ ವಿರುದ್ದ ಹಿಂದುತ್ವ ಮುಖ ಕೊಂಪೆಲ್ಲಾ ಮಾಧವಿ ಲತಾ ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಘೋಷಿಸಿದೆ. ಮುಸ್ಲಿಮರು ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಮತ್ತು ಎಂಐಎಂ ಪಕ್ಷದ ಭದ್ರಕೋಟೆಯಾದ ಪುರಾತನ ನಗರ ಹೈದರಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರಾ? ಎಂಬ ಕುತೂಹಲ ಮೂಡಿದೆ.

‘ಧರ್ಮೋ ರಕ್ಷತಿ ರಕ್ಷಿತಃ (ಧರ್ಮವು ತನ್ನನ್ನು ರಕ್ಷಿಸುವವರನ್ನು ರಕ್ಷಿಸುತ್ತದೆ)” ಎಂದು ಹೈದರಾಬಾದ್ ಕ್ಷೇತ್ರದ ಅಭ್ಯರ್ಥಿಯಾಗಿ ತನ್ನ ಹೆಸರನ್ನು ಘೋಷಣೆಯಾದ ನಂತರ ಮಾಧವಿ ಪ್ರತಿಕ್ರಿಯಿಸಿದ್ದರು.

ಎಐಎಂಐಎಂ ಅಧ್ಯಕ್ಷರೂ ಆಗಿರುವ ಓವೈಸಿ ಅವರು 2004 ರಿಂದ ಹೈದರಾಬಾದ್ ಸಂಸದರಾಗಿದ್ದಾರೆ. ಸತತ ನಾಲ್ಕನೇ ಬಾರಿ ಅವರು ಗೆಲುವು ದಾಖಲಿಸಿದ್ದಾರೆ. ಈ ಬಾರಿ ಗೆದ್ದರೆ ಐದನೇ ಬಾರಿ ಗೆದ್ದಂತಾಗುತ್ತದೆ. ಈ ಹಿಂದೆ, ಅವರ ತಂದೆ ಸುಲ್ತಾನ್ ಸಲಾವುದ್ದೀನ್ ಓವೈಸಿ ಅವರು ಆರು ಬಾರಿ ಹೈದರಾಬಾದ್‌ನಿಂದ ಲೋಕಸಭೆಯ ಪ್ರತಿನಿಧಿಯಾಗಿದ್ದರು.

ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಹೈದರಾಬಾದ್‌ನ ನಿಝಾಮ್ ಕಾಲೇಜಿನಲ್ಲಿ ಸಾರ್ವಜನಿಕ ಆಡಳಿತದಲ್ಲಿ ಬಿಎ ಮತ್ತು ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರದಲ್ಲಿ ಎಂಎ ಪದವಿ ಪಡೆದಿದ್ದಾರೆ. ಹೈದರಾಬಾದ್ ಮೂಲದ ವಿರಿಂಚಿ ಆಸ್ಪತ್ರೆಗಳ ಮುಖ್ಯಸ್ಥರಾಗಿದ್ದಾರೆ. ವಿದ್ಯಾರ್ಥಿ ದಿನಗಳಲ್ಲಿ ಲತಾ ಅವರು ನ್ಯಾಷನಲ್ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಸದಸ್ಯೆಯಾಗಿದ್ದರು. ಅವರು ಭರತನಾಟ್ಯ ನೃತ್ಯಗಾರ್ತಿಯೂ ಹೌದು. ಪ್ರಸ್ತುತ ಹೈದರಾಬಾದ್ ಓಲ್ಡ್ ಸಿಟಿ ವ್ಯಾಪ್ತಿಯ ಯಕುತ್ಪುರ ವಿಧಾನಸಬಾ ಕ್ಷೇತ್ರದಲ್ಲಿ ಲತಾ ಅವರ ಮನೆಯಿದೆ.

ಲೋಪಾಮುದ್ರಾ ಚಾರಿಟೇಬಲ್ ಟ್ರಸ್ಟ್, ಲತಾಮಾ ಫೌಂಡೇಶನ್ ಇತ್ಯಾದಿ ಸಮಾಜಮುಖಿ ಸಂಸ್ಥೆಗಳೊಂದಿಗೆ ಮಾಧವಿ ಲತಾ ಗುರುತಿಸಿಕೊಂಡಿದ್ದಾರೆ. ಅವರ ಪತಿ ವಿಶ್ವನಾಥ್ ಅವರು ವಿರಿಂಚಿ ಆಸ್ಪತ್ರೆಯ ಸಂಸ್ಥಾಪಕರು ಮತ್ತು ಅಧ್ಯಕ್ಷರು. ಲತಾ ಅವರು ಹೈದರಾಬಾದ್‌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮೊದಲ ಮಹಿಳಾ ಅಭ್ಯರ್ಥಿಯಾಗಿದ್ದಾರೆ.

49 ವರ್ಷ ವಯಸ್ಸಿನ ಮಾಧವಿ ಲತಾ ಅವರು, ಈ ಹಿಂದೆ ಹೈದರಾಬಾದ್‌ನ ಓಲ್ಡ್‌ ಸಿಟಿಯಲ್ಲಿ ತ್ರಿವಳಿ ತಲಾಖ್ ವಿರುದ್ಧ ಅಭಿಯಾನ ನಡೆಸಿದ್ದರು. ಈ ಮೂಲಕ ಮುಸ್ಲಿಂ ಮಹಿಳೆಯರನ್ನು ತಲುಪುವ ಪ್ರಯತ್ನ ಮಾಡಿದ್ದರು. ಆರ್ಥಿಕವಾಗಿ ದುರ್ಬಲರಾಗಿರುವ ಮುಸ್ಲಿಂ ಮಹಿಳೆಯರು ಮತ್ತು ಹುಡುಗಿಯರಿಗೆ ಸಹಾಯ ಮಾಡಲು ಅವರು ನಿಧಿಯನ್ನು ಸ್ಥಾಪಿಸಿದ್ದಾರೆ.

ಆರೋಗ್ಯ ಶಿಬಿರ ಏರ್ಪಡಿಸುವುದು, ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಸೇರಿದಂತೆ ಸಮಾಜಮುಖಿ ಕೆಲಸಗಳನ್ನು ಲತಾ ಮಾಡುತ್ತಾ ಬಂದಿದ್ದಾರೆ. ಸ್ವಚ್ಛ ಭಾರತ ಅಭಿಯಾನದಿಂದ ಪ್ರೇರಿತರಾಗಿ 2,176 ಶೌಚಾಲಯಗಳನ್ನು ಅವರು ಸ್ಥಾಪಿಸಿದ್ದಾರೆ. ಹೆಣ್ಣುಮಕ್ಕಳ ಶಿಕ್ಷಣಕ್ಕೆ ಕೂಡ ನೆರವು ಒದಗಿಸುತ್ತಿದ್ದಾರೆ. ಇವೆಲ್ಲದರ ಹೊರತಾಗಿ ಹಿಂದೂ ಧರ್ಮದ ಚಟುವಟಕೆಗಳಲ್ಲಿ ಅವರು ಸಕ್ರಿಯರಾಗಿ ತೊಡಗಿಸಿಕೊಳ್ಳುತ್ತಿದ್ದಾರೆ.

“ಸನಾತನ ಧರ್ಮವು ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ದಾರಿ. ನಾನು ಧರ್ಮ ಮಾರ್ಗದ ಅನುಯಾಯಿಯಾಗಿದ್ದೇನೆ. ನಮ್ಮ ಭರತವರ್ಷದಲ್ಲಿ ಹಿಂದೂ ಧರ್ಮ ರಾಜ್ಯಗಳ ಮೂಲಕ ಪ್ರವರ್ಧಮಾನಕ್ಕೆ ಬಂದ ಹಲವಾರು ರಾಜರಿಂದ ಪ್ರಭಾವಿತಳಾಗಿದ್ದೇನೆ” ಎಂದು ಲತಾ ಭಾನುವಾರ ದೂರವಾಣಿ ಮೂಲಕ ಹೇಳಿರುವುದಾಗಿ ದಿ ಪ್ರಿಂಟ್ ವರದಿ ಮಾಡಿದೆ.

“ನನ್ನ ಸ್ಫೂರ್ತಿ ಕಳೆದ ಎರಡು ದಶಕಗಳಿಂದ ಭಾರತದ ಅಭಿವೃದ್ಧಿಯನ್ನು ಸರಿಯಾದ ದಿಕ್ಕಿನಲ್ಲಿ ಮುನ್ನಡೆಸಲು ತನ್ನನ್ನು ತ್ಯಾಗ ಮಾಡುತ್ತಿರುವ ನರೇಂದ್ರ ಮೋದಿ ಜಿಯವರು. ನಮ್ಮ ದೇಶವು ಹಿಂದೆ ಅನೇಕ ಮಹಾನ್ ನಾಯಕರನ್ನು ಕಂಡಿದೆ. ಆದರೆ, ಯಾರೂ ಪ್ರಧಾನಿ ನರೇಂದ್ರ ಮೋದಿ ಜಿಯಂತೆ ನಿಸ್ವಾರ್ಥ, ನಿರ್ಣಾಯಕ ಮತ್ತು ಸ್ಪಷ್ಟ ಉದ್ದೇಶದಿಂದ ಕೆಲಸ ಮಾಡಿಲ್ಲ. ನನ್ನ ಧ್ಯೇಯವೆಂದರೆ ಸ್ಫೂರ್ತಿಯಿಂದ ಮುನ್ನಡೆಯುವುದು. ಮೋದಿಯವರ ನೇತೃತ್ವದಲ್ಲಿ ‘ಅಮೃತ ಕಾಲ’ದಲ್ಲಿ ಭಾರತವನ್ನು ಸೂಪರ್ ಪವರ್ ಮಾಡುವಲ್ಲಿ ನಾವು ಕೆಲಸ ಮಾಡಬೇಕು. ನನ್ನ ಮೇಲೆ ನಂಬಿಕೆ ಇಟ್ಟ ಅಮಿತ್ ಶಾ, ಜೆಪಿ ನಡ್ಡಾ ಮತ್ತು ರಾಜನಾಥ್ ಸಿಂಗ್ ಅವರಿಗೆ ಧನ್ಯವಾದ ಹೇಳುತ್ತೇನೆ” ಎಂದು ಲತಾ ಅವರು ಹೇಳಿದ್ದಾಗಿ ಪ್ರಿಂಟ್ ವರದಿ ತಿಳಿಸಿದೆ.

ಮಾಧವಿ ಲತಾ ಅವರು ತನ್ನನ್ನು ತಾನು ವಾಗ್ಮಿ, ಕಲಾವಿದೆ, ಲೋಕೋಪಕಾರಿ, ವಾಣಿಜ್ಯೋದ್ಯಮಿ, ತಾಯಿ, ಹೆಂಡತಿ ಮತ್ತು ಮಹಿಳೆ ಎಂದು ಬಣ್ಣಿಸಿದ್ದಾರೆ. ನಾನು ಹೈದರಾಬಾದ್‌ಗೆ ಶಾಂತಿ ಮತ್ತು ಸಮೃದ್ಧಿಯನ್ನು ತರುವ ಉದ್ದೇಶ ಹೊಂದಿದ್ದೇನೆ ಎಂದಿದ್ದಾರೆ. ನಗರದ ಇತರ ಭಾಗಗಳು ಅಭಿವೃದ್ಧಿ ಹೊಂದುತ್ತಿರುವಾಗ ಎಐಎಂಐಎಂ ಆಳ್ವಿಕೆ ನಡೆಸುತ್ತಿರುವ ಕ್ಷೇತ್ರವು ಏಕೆ ಅಭಿವೃದ್ಧಿಯಾಗದೆ ಉಳಿದಿದೆ?” ಎಂದು ಲತಾ ಅವರು ಪ್ರಶ್ನಿಸಿದ್ದಾರೆ.

“ಓಲ್ಡ್‌ ಸಿಟಿಯಲ್ಲಿ ಶುಚಿತ್ವವಿಲ್ಲ, ಶಿಕ್ಷಣವಿಲ್ಲ. ಮದರಸಾಗಳಲ್ಲಿ ಮಕ್ಕಳಿಗೆ ಊಟ ಸಿಗುತ್ತಿಲ್ಲ. ಮುಸ್ಲಿಂ ಮಕ್ಕಳು ಬಾಲ ಕಾರ್ಮಿಕರಾಗುತ್ತಿದ್ದಾರೆ, ಅವರಿಗೆ ಭವಿಷ್ಯವಿಲ್ಲ. ಹಿಂದೂ ದೇವಾಲಯಗಳು ಮತ್ತು ಮನೆಗಳನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲಾಗುತ್ತಿದೆ” ಎಂದು ಲತಾ ಅವರು ಟಿಕೆಟ್ ಘೋಷಣೆಯಾದ ಬಳಿಕ ಹೇಳಿದ್ದರು.

“ಹೈದರಾಬಾದ್ ಲೋಕಸಭಾ ಕ್ಷೇತ್ರದ ಮೂಲೆ ಮೂಲೆಗೆ ನಾನು ಸಂಚರಿಸಿದ್ದೇನೆ. ಇಲ್ಲಿಯ ಜನರ ಸಮಸ್ಯೆ ನನಗೆ ಚೆನ್ನಾಗಿ ಗೊತ್ತಿದೆ. ವಿಶೇಷವಾಗಿ ಪಸ್ಮಾಂಡ ಮುಸ್ಲಿಮರನ್ನು ಭೇಟಿಯಾಗಗಿರುವ ನನಗೆ, ಅವರಿಗೆ ಏನು ಬೇಕಿದೆ ಎಂದು ಚೆನ್ನಾಗಿದೆ ಗೊತ್ತಿದೆ. ಹಾಗಾಗಿ, ಸ್ಥಳೀಯರಿಗೆ ಅವರ ಹಕ್ಕುಗಳನ್ನು ದೊರಕಿಸಿಕೊಡುವುದು ನನ್ನ ಚುನಾವಣಾ ಪ್ರಚಾರದ ಥೀಮ್ ಅಗಿರಲಿದೆ ಎಂದು ಲತಾ ಅವರು ತಿಳಿಸಿದ್ದಾಗಿ ಪ್ರಿಂಟ್ ಹೇಳಿದೆ.

“ಎಐಎಂಐಎಂ ಅವರ ಉತ್ತಮ ಕೆಲಸ ಅಥವಾ ಜನಪ್ರಿಯತೆಯ ಕಾರಣದಿಂದ ಗೆದ್ದರೆ ಒಳ್ಳೆಯದು. ಆದರೆ, ಆ ಪಕ್ಷವು ತಮ್ಮ ಮತದಾರರಿಗೆ ತಿಳುವಳಿಕೆಯಿಲ್ಲದ ಕಾರಣ ಅವರನ್ನು ಭಯಭೀತರನ್ನಾಗಿಸಿ ಅಧಿಕಾರದಲ್ಲಿ ಮುಂದುವರಿಯುತ್ತಿದೆ. ನಕಲಿ ಮತಗಳನ್ನು ತೆಗೆದು ಹಾಕುವುದು, ಮತಗಟ್ಟೆಗಳನ್ನು ಸುರಕ್ಷಿತ ವಲಯಗಳಿಗೆ ಸ್ಥಳಾಂತರಿಸುವುದು, ವೆಬ್‌ಕ್ಯಾಮ್‌ಗಳನ್ನು ಸ್ಥಾಪಿಸುವುದು ಮತ್ತು ನೇರ ಪೊಲೀಸ್ ಅಧಿಕಾರಿಗಳು ಮತ್ತು ಕೇಂದ್ರ ಪೊಲೀಸ್ ಪಡೆಗಳನ್ನು ನಿಯೋಜಿಸುವ ಮೂಲಕ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ನಾನು ಭಾರತೀಯ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇನೆ” ಎಂದು ಲತಾ ಹೇಳಿದ್ದಾರೆ.

ಪ್ರಖರ ಹಿಂದುತ್ವವಾದಿ ಮತ್ತು ಹೈದರಾಬಾದ್‌ನ ಗೋಶಮಹಲ್ ವಿಧಾನಸಭೆ ಕ್ಷೇತ್ರದ ಶಾಸಕ ರಾಜಾ ಸಿಂಗ್‌ ಅವರನ್ನು ಓವೈಸಿ ವಿರುದ್ದ ಕಣಕ್ಕಿಳಿಸುವ ಸಾಧ್ಯತೆಯಿದೆ ಎನ್ನಲಾಗಿತ್ತು. ಆದರೆ, ಬಿಜೆಪಿ ಹೈಕಮಾಂಡ್ ಮಾಧವಿ ಲತಾ ಅವರಿಗೆ ಟಿಕೆಟ್ ಕೊಟ್ಟಿದೆ.

ಗೋಶಮಹಲ್ ಹೈದರಾಬಾದ್ ಲೋಕಸಭಾ ಕ್ಷೇತ್ರದಲ್ಲಿರುವ ಏಕೈಕ ಬಿಜೆಪಿ ಹಿಡಿತದ ವಿಧಾನಸಭಾ ಕ್ಷೇತ್ರವಾಗಿದೆ. ಉಳಿದ ಆರು ಕ್ಷೇತ್ರಗಳಲ್ಲಿ ಎಐಎಂನ ಶಾಸಕರಿದ್ದಾರೆ. ಕಳೆದ ಎರಡು ಚುನಾವಣೆಗಳಲ್ಲಿ ಒವೈಸಿ ಅವರು ಹೈದರಾಬಾದ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಗವಂತರಾವ್ ಅವರನ್ನು ಭಾರೀ ಮತಗಳ ಅಂತರದಿಂದ ಸೋಲಿಸಿದ್ದರು.

ಹೈದರಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಓಲ್ಡ್‌ ಸಿಟಿಯೇ ಪ್ರಮುಖ ಪ್ರದೇಶವಾಗಿದೆ. ಇಲ್ಲಿಯೇ ವಿಶ್ವ ಪ್ರಸಿದ್ದ ಚಾರ್‌ಮಿನಾರ್, ಭಾರತ ಅತೀ ದೊಡ್ಡ ಮಸೀದಿಗಳಲ್ಲಿ ಒಂದಾದ ಮಕ್ಕಾ ಮಸ್ಜಿದ್, ನಿಝಾಮರ ಆಡಳಿತ ಕೇಂದ್ರ ಚೌಮೊಹಲ್ಲಾ ಅರಮನೆ, ಪ್ರಸಿದ್ದ ಜಾಮಿಯಾ ನಿಝಾಮಿಯಾ ಕಾಲೇಜು ಇದೆ.

ಭಾರತದಲ್ಲಿ ಮುಸ್ಲಿಮರು ಹೆಚ್ಚಿನ ಸಂಖ್ಯೆಲ್ಲಿರುವ ನಗರಗಳಲ್ಲಿ ಹೈದರಾಬಾದ್ ಕೂಡ ಒಂದು. ಈ ಕ್ಷೇತ್ರದಲ್ಲಿ ಗೆಲ್ಲಬೇಕಾದರೆ ಮುಸ್ಲಿಮರ ಮತಗಳು ನಿರ್ಣಾಯಕವಾಗಿದೆ. ಹಾಗಾಗಿ, ಮಾಧವಿ ಲತಾ ಅವರು ಬಿಜೆಪಿ ಅಭ್ಯರ್ಥಿಯಾದರೂ ಮುಸ್ಲಿಮರ ಜೊತೆ ಚೆನ್ನಾಗಿದ್ದಾರೆ. ಅದರ ಜೊತೆಗೆ ಬಿಜೆಪಿ ಮೂಲ ಸಿದ್ದಾಂತವಾದ ಹಿಂದುತ್ವದಿಂದ ಅವರು ಹೊರತಾಗಿಲ್ಲ. ಉದಾ: ಹೈದರಾಬಾದ್‌ನ ಸೈದಾಬಾದ್‌ನಲ್ಲಿ ಹನುಮಾನ್ ದೇವಸ್ಥಾನದ ಮೇಲೆ ನಿರ್ಮಾಣವಾಗುತ್ತಿರುವ ಸ್ಟೀಲ್ ಬ್ರಿಡ್ಜ್ ವಿರುದ್ದ ಅವರು ಹೋರಾಟ ರೂಪಿಸಿದ್ದಾರೆ. ಸ್ಟೀಲ್ ಬ್ರಿಡ್ಜ್ ಹನುಮಾನ್ ಮಂದಿರದ ಮೇಲೆ ಹಾದು ಹೋಗುವುದರಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಲಿದೆ ಎಂಬುವುದು ಮಾಧವಿ ಅವರ ವಾದ.

ಒಟ್ಟಿನಲ್ಲಿ, ದೇಶದ ಪ್ರಭಾವಿ ಮುಸ್ಲಿಂ ರಾಜಕಾರಣಿ ವಿರುದ್ದ ಅಗ್ನಿ ಪರೀಕ್ಷೆಗಿಳಿದಿರುವ ಮಾಧವಿ ಲತಾ ಅವರು ಗೆಲುವು ದಾಖಲಿಸುತ್ತಾರಾ? ಲತಾ ಅವರ ಸ್ಪರ್ಧೆ ಸೋಲಿಲ್ಲದ ಸರದಾರನಾಗಿರುವ ಅಸಾದುದ್ದೀನ್ ಓವೈಸಿಯ ಮತಗಳ ಮೇಲೆ ಪರಿಣಾಮ ಬೀರುತ್ತಾ? ಲತಾ ಅವರು ಮುಸ್ಲಿಮರ ಮನ ಗೆಲ್ಲುತ್ತಾರಾ? ಇತ್ಯಾದಿಗ ಪ್ರಶ್ನಗಳಿಗೆ ಚುನಾವಣೆ ಉತ್ತರ ನೀಡಬೇಕಿದೆ.

ಇದನ್ನೂ ಓದಿ: ಮೋದಿ ರ್‍ಯಾಲಿಯಲ್ಲಿ ಭಾಗವಹಿಸುವಂತೆ ಸರಕಾರಿ ಉದ್ಯೋಗಿಗಳಿಗೆ ಸೂಚಿಸಿದ ಜಮ್ಮು-ಕಾಶ್ಮೀರ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...