Homeಮುಖಪುಟಜಾತ್ಯತೀತತೆ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಸಂವಿಧಾನ ಸಭೆಯಲ್ಲಿ ಪರ ಯಾರು? ವಿರೋಧ ಯಾರು?

ಜಾತ್ಯತೀತತೆ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಸಂವಿಧಾನ ಸಭೆಯಲ್ಲಿ ಪರ ಯಾರು? ವಿರೋಧ ಯಾರು?

ಗಾಂಧಿಯವರು ಒಂದು ಪ್ರಜಾಪ್ರಭುತ್ವದ ನಿಜವಾದ ಪರೀಕ್ಷೆಯು, ಸಮಾಜವು ತನ್ನ ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದರ ಜೊತೆ ಆಳವಾಗಿ ತಳಕುಹಾಕಿಕೊಂಡಿದೆ ಎಂದು ನಂಬಿದ್ದರು.

- Advertisement -
- Advertisement -

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಸಂವಿಧಾನ ಸಭೆಯಲ್ಲಿ 1949ರಲ್ಲಿ ಜಾತ್ಯತೀತತೆಯ ಕುರಿತು ಚರ್ಚೆ ನಡೆದಾಗಲೆಲ್ಲಾ ಅಂದಿನ ನಾಝಿ ಜರ್ಮನಿ ಮತ್ತು ಫ್ಯಾಸಿಸ್ಟ್ ಇಟಲಿಯ ತಾರತಮ್ಯ ಮತ್ತು ದಮನದ ಸಿದ್ಧಾಂತಗಳಿಂದ ಪ್ರಭಾವಿತರಾಗಿದ್ದ ಬಲ ಪಂಥೀಯರು ಲೇವಡಿ ಮಾಡುತ್ತಿದ್ದರು. ಇದೀಗ ಅವರ ವಾರಸುದಾರರು ಅಧಿಕಾರ ಹಿಡಿದಿದ್ದು, ಅದನ್ನೇ ಹೆಚ್ಚು ಆಕ್ರಮಣಕಾರಿಯಾಗಿ ಮುಂದುವರಿಸಿದ್ದಾರೆ. ಎನ್‌ಆರ್‌ಸಿ, ಸಿಎಎ ಹಿನ್ನೆಲೆಯಲ್ಲಿ ಜಾತ್ಯತೀತತೆ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಸಂವಿಧಾನ ಸಭೆಯಲ್ಲಿ ನಡೆದ ಚರ್ಚೆಯ ಕೆಲ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಅಂದು ಜಾತ್ಯಾತೀತತೆಯ ಕುರಿತು ಬಲಪಂಥೀಯರ ನಿರಂತರ ಲೇವಡಿಯಿಂದ ಆತಂಕಿತರಾದವರಲ್ಲಿ ಜವಾಹರಲಾಲ್ ನೆಹರೂ ಅವರೂ ಒಬ್ಬರಾಗಿದ್ದರು. ಭಾರತದ ಎಲ್ಲಾ ಸಮಸ್ಯೆಗಳಿಗೆ ಜಾತ್ಯತೀತತೆಯೇ ಮೂಲ ಕಾರಣ ಎಂದು ಬಿಂಬಿಸಲಾಗುತ್ತಿದ್ದುದೇ ಇದಕ್ಕೆ ಕಾರಣ.

“ನಾವು ಒಂದು ಜಾತ್ಯತೀತ ರಾಷ್ಟ್ರ ಎಂದು ಹೇಳುವುದರಿಂದ ನಾವು ಅದ್ಭುತವಾದ ಔದಾರ್ಯಪೂರ್ಣವಾದುದನ್ನು ಮಾಡುತ್ತಿದ್ದೇವೆ ಎಂದಾಗಲೀ, ಜಗತ್ತಿಗೆ ನಮ್ಮ ಜೇಬಿನಿಂದ ಏನನ್ನಾದರೂ ಕೊಡುತ್ತಿದ್ದೇವೆ ಎಂದಾಗಲೀ, ನಾವು ಮಾಡಬಾರದನ್ನೇನ್ನಾದರೂ ಮಾಡುತ್ತಿದ್ದೇವೆ ಎಂದಾಗಲೀ ಅರ್ಥವಲ್ಲ. ಜಗತ್ತಿನ ಕೆಲವು ದಾರಿತಪ್ಪಿದ ಮತ್ತು ಹಿಂದುಳಿದ ರಾಷ್ಟ್ರಗಳನ್ನು ಹೊರತುಪಡಿಸಿ ಪ್ರತಿಯೊಂದು ದೇಶವು ಮಾಡಿರುವುದನ್ನೇ ನಾವು ಮಾಡಿದ್ದೇವೆ” ಎಂದು ಅವರು ಸಂವಿಧಾನ ಸಭೆಯಲ್ಲಿ ಹೇಳಿದ್ದರು. ಆ ಮೂಲಕ ನಾಗರಿಕ ಜಗತ್ತಿನಲ್ಲಿ ಒಪ್ಪಿತವಾದ ಜಾತ್ಯತೀತ ತತ್ವಗಳನ್ನು ಸಮರ್ಥಿಸಿದ್ದರು.

 

ದೇಶ ವಿಭಜನೆಯ ಹಿಂಸಾಚಾರದ ಬಳಿಕವೂ ಜಾತ್ಯತೀತತೆಯ ಪರಿಕಲ್ಪನೆಯನ್ನು ಸಮರ್ಥಿಸಬಲ್ಲ ನೈತಿಕ ಸ್ಥೈರ್ಯವಿದ್ದ ಜನರು ಅಂದು ಇದ್ದರೆ, ಇಂದು ಜಾತ್ಯತೀತ ಎಂದು ಹೇಳಿಕೊಳ್ಳುವ ಪಕ್ಷಗಳಲ್ಲಿಯೂ ಈ ನಂಬಿಕೆ ಸವಕಲಾಗುತ್ತಿದೆ. ವಿಭಜನಕಾರಿ ಚಿಂತನೆಗಳಿಗೆ ಹಿಂದುತ್ವ ಪಕ್ಷಗಳ ಬಹಿರಂಗ ನಿಷ್ಟೆಗೆ ಎದುರಾಗಿ, ಜಾತ್ಯತೀತತೆಯ ಪರ ಹಿಂಜರಿಕೆಯ, ಚೈತನ್ಯವಿಲ್ಲದ ಪ್ರತಿರೋಧವಷ್ಟೇ ವ್ಯಕ್ತವಾಗುತ್ತಿದೆ. ವಾಸ್ತವವಾಗಿ ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧ ಪ್ರತಿಭಟಿಸುತ್ತಿರುವವರು ಮಾತ್ರ ರಾಜಕೀಯ ರಂಗದಲ್ಲಿ ಜಾತ್ಯತೀತತೆಯನ್ನು ಪುನಶ್ಚೇತನಗೊಳಿಸುತ್ತಿದ್ದಾರೆ.

ಅಲ್ಪಸಂಖ್ಯಾತರ ಹಕ್ಕುಗಳು

ಗಾಂಧಿಯವರು ಸಂವಿಧಾನ ರಚನಾ ಸಭೆಯ ಸದಸ್ಯರಾಗಿರಲಿಲ್ಲ. ಒಂದು ಪ್ರಜಾಪ್ರಭುತ್ವದ ನಿಜವಾದ ಪರೀಕ್ಷೆಯು, ಸಮಾಜವು ತನ್ನ ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದರ ಜೊತೆ ಆಳವಾಗಿ ತಳಕುಹಾಕಿಕೊಂಡಿದೆ ಎಂದವರು ನಂಬಿದ್ದರು.

ಇಂದಿನಂತೆ ಅಂದೂ ಕೂಡಾ ತಾವು ಗಾಂಧಿಯವರ ಅನುಯಾಯಿಗಳು ಎಂದು ಹೇಳಿಕೊಳ್ಳುವ ಕಾಂಗ್ರೆಸಿಗರಿದ್ದರು. ಆದರೆ, ಅವರು ಗಾಂಧಿಯವರ ಮೇಲಿನ ವಿಚಾರಗಳನ್ನು ತಿರಸ್ಕರಿಸಿ, ಪೌರತ್ವ ಕುರಿತ ಹಿಂದೂತ್ವವಾದಿಗಳ ಸಂಕುಚಿತ ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ಸೀಮಿತಗೊಳಿಸುವ ಪರಿಕಲ್ಪನೆಯನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆಂಬಲಿಸಿದ್ದರು. ಅಂತವರಲ್ಲಿ ಒಬ್ಬರು ಕಾಂಗ್ರೆಸಿಗ ಮಹಾವೀರ ತ್ಯಾಗಿ. ಅಲ್ಪಸಂಖ್ಯಾತರ ಹಕ್ಕುಗಳ ಕುರಿತ ಚರ್ಚೆಯನ್ನು ಮುಂದೂಡಿ, ನಂತರದಲ್ಲಿ ಈ ವಿಷಯದ ಕುರಿತು ನಿರ್ಧರಿಸಬೇಕು ಎಂದು ಅವರು ಸಂವಿಧಾನ ಸಭೆಗೆ ಸಲಹೆ ಮಾಡಿದ್ದರು.

ಅವರದ್ದೇ ನಿಲುವನ್ನೇ ಗೃಹಮಂತ್ರಿ ಅಮಿತ್ ಶಾ ಇತ್ತೀಚೆಗೆ ಸಂಸತ್ತಿನಲ್ಲಿ ನೀಡಿರುವ ಹೇಳಿಕೆಯು ಪ್ರತಿಫಲಿಸುತ್ತದೆ. ತಮಗೆ ವಿಶೇಷ ಅವಕಾಶಗಳನ್ನು ಬೆಂಬಲಿಸುವುದಾದರೆ, ಅಲ್ಪಸಂಖ್ಯಾತರಿಗೆ ಪೌರತ್ವ ತಿದ್ದುಪಡಿ ಕಾಯಿದೆಯನ್ನು ವಿರೋಧಿಸುವ ನೈತಿಕ ಹಕ್ಕಿಲ್ಲ ಎಂದವರು ಹೇಳಿದ್ದರು.

ತ್ಯಾಗಿಯ ವಿಚಾರಗಳನ್ನು ಮತ್ತು ಶಾ ಪುನರುಚ್ಛಾರವನ್ನು ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ನಿರ್ಣಾಯಕವಾಗಿ ತಿರಸ್ಕರಿಸಿದ್ದರು.

“ಈ ಪ್ರಸ್ತಾಪವನ್ನು ಬೆಂಬಲಿಸಲು ಇರುವ ಏಕೈಕ ಕಾರಣವೆಂದರೆ- ಯಾರೂ ಇದನ್ನು ಊಹಿಸಬಹುದು- ಅಲ್ಪಸಂಖ್ಯಾತರ ಹಕ್ಕುಗಳು ಸಾಂಬಂಧಿಕವಾಗಿರಬೇಕು ಎಂಬುದು. ಅದರ (ತ್ಯಾಗಿ ವಾದದ) ಅರ್ಥವೆಂದರೆ ನಾವು ಹಿಂದೂಸ್ಥಾನ್ ಪ್ರದೇಶದಲ್ಲಿರುವ ಅಲ್ಪಸಂಖ್ಯಾತರಿಗೆ ಯಾವುದೇ ಹಕ್ಕುಗಳನ್ನು ನೀಡುವ ಮೊದಲು ಪಾಕಿಸ್ತಾನದ ಸಂವಿಧಾನ ಸಭೆಯು ಅಲ್ಪಸಂಖ್ಯಾತರಿಗೆ ಯಾವ ಹಕ್ಕುಗಳನ್ನು ನೀಡುತ್ತದೆ ಎಂದು ಕಾದುನೋಡಬೇಕು ಎಂಬುದು” ಎಂದು ಅಂಬೇಡ್ಕರ್ ಹೇಳಿದ್ದರು.

ಅವರು ಮುಂದುವರಿದು ಹೀಗೆ ಹೇಳಿದ್ದರು: “ಈಗ ಸ್ವಾಮಿ, ಎಲ್ಲಾ ಮತಬೇಧಗಳೊಂದಿಗೆ ನಾನು ಇಂತಹಾ ಯಾವುದೇ ವಿಚಾರಗಳನ್ನು ವಿರೋಧಿಸಬೇಕು. (ಇಲ್ಲಿನ) ಅಲ್ಪಸಂಖ್ಯಾತರ ಹಕ್ಕುಗಳು ಸಾಪೇಕ್ಷ (ಸಹಜ ಹಕ್ಕುಗಳು) ಹಕ್ಕುಗಳಾಗಿರಬೇಕು. ಬೇರೊಂದು ಪಕ್ಷವು (ಪಾಕಿಸ್ತಾನ) ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರಿಗೆ ಏನು ಮಾಡುತ್ತದೆ ಎಂಬಂತಹ ಯಾವುದೇ ಪರಿಗಣನೆಗೆ ಒಳಪಡಬಾರದು.

ಆದರೆ, ಸಂವಿಧಾನ ದ್ವೇಷಿ ಬಲಪಂಥೀಯರು ಇದೀಗ ಅದನ್ನೇ ಮಾಡುತ್ತಿದ್ದಾರೆ- ಧರ್ಮಾಧರಿತ ಪೌರತ್ವವನ್ನು ತರಲು ಹೊರಟಿರುವ ಮೂಲಕ! ಅವರು ಸಂವಿಧಾನದ ಮೂಲ ಆಶಯಗಳನ್ನು ನಾಶಮಾಡುತ್ತಿದ್ದಾರೆ. ಇದನ್ನು ವಿರೋಧಿಸದಿದ್ದರೇ, ನಮ್ಮ ಪವಿತ್ರ ಸಂವಿಧಾನಕ್ಕೇ ಕುತ್ತು ಬರಬಹುದು!

(ದೇಶ ವಿಭಜನೆಯ ಕಾಲದಲ್ಲಿ ನಿರಾಶ್ರಿತರಾದ ಹಿಂದೂ, ಮುಸ್ಲಿಂ ಮತ್ತು ಸಿಕ್ಖರ ಪೌರತ್ವ ಕುರಿತು ಕೂಡಾ ಬಲಪಂಥೀಯರು ಯಾವ ರೀತಿ ವಿಭಜನಕಾರಿ ನಿಲುವು ತಳೆದಿದ್ದರು ಎಂಬ ಬಗ್ಗೆ ಇನ್ನೊಂದು ಲೇಖನವನ್ನು ನಿರೀಕ್ಷಿಸಿ.)


ಇದನ್ನೂ ಓದಿ: ಧರ್ಮಾಧಾರಿತ ಪೌರತ್ವ: ಇಂದಿನ ಭಾರತದ ಬಗ್ಗೆ 70 ವರ್ಷಗಳ ಹಿಂದೆಯೇ ಚರ್ಚಿಸಿದ್ದ ಸಂವಿಧಾನ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...