Homeಮುಖಪುಟಜಾತ್ಯತೀತತೆ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಸಂವಿಧಾನ ಸಭೆಯಲ್ಲಿ ಪರ ಯಾರು? ವಿರೋಧ ಯಾರು?

ಜಾತ್ಯತೀತತೆ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಸಂವಿಧಾನ ಸಭೆಯಲ್ಲಿ ಪರ ಯಾರು? ವಿರೋಧ ಯಾರು?

ಗಾಂಧಿಯವರು ಒಂದು ಪ್ರಜಾಪ್ರಭುತ್ವದ ನಿಜವಾದ ಪರೀಕ್ಷೆಯು, ಸಮಾಜವು ತನ್ನ ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದರ ಜೊತೆ ಆಳವಾಗಿ ತಳಕುಹಾಕಿಕೊಂಡಿದೆ ಎಂದು ನಂಬಿದ್ದರು.

- Advertisement -
- Advertisement -

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಸಂವಿಧಾನ ಸಭೆಯಲ್ಲಿ 1949ರಲ್ಲಿ ಜಾತ್ಯತೀತತೆಯ ಕುರಿತು ಚರ್ಚೆ ನಡೆದಾಗಲೆಲ್ಲಾ ಅಂದಿನ ನಾಝಿ ಜರ್ಮನಿ ಮತ್ತು ಫ್ಯಾಸಿಸ್ಟ್ ಇಟಲಿಯ ತಾರತಮ್ಯ ಮತ್ತು ದಮನದ ಸಿದ್ಧಾಂತಗಳಿಂದ ಪ್ರಭಾವಿತರಾಗಿದ್ದ ಬಲ ಪಂಥೀಯರು ಲೇವಡಿ ಮಾಡುತ್ತಿದ್ದರು. ಇದೀಗ ಅವರ ವಾರಸುದಾರರು ಅಧಿಕಾರ ಹಿಡಿದಿದ್ದು, ಅದನ್ನೇ ಹೆಚ್ಚು ಆಕ್ರಮಣಕಾರಿಯಾಗಿ ಮುಂದುವರಿಸಿದ್ದಾರೆ. ಎನ್‌ಆರ್‌ಸಿ, ಸಿಎಎ ಹಿನ್ನೆಲೆಯಲ್ಲಿ ಜಾತ್ಯತೀತತೆ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಸಂವಿಧಾನ ಸಭೆಯಲ್ಲಿ ನಡೆದ ಚರ್ಚೆಯ ಕೆಲ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಅಂದು ಜಾತ್ಯಾತೀತತೆಯ ಕುರಿತು ಬಲಪಂಥೀಯರ ನಿರಂತರ ಲೇವಡಿಯಿಂದ ಆತಂಕಿತರಾದವರಲ್ಲಿ ಜವಾಹರಲಾಲ್ ನೆಹರೂ ಅವರೂ ಒಬ್ಬರಾಗಿದ್ದರು. ಭಾರತದ ಎಲ್ಲಾ ಸಮಸ್ಯೆಗಳಿಗೆ ಜಾತ್ಯತೀತತೆಯೇ ಮೂಲ ಕಾರಣ ಎಂದು ಬಿಂಬಿಸಲಾಗುತ್ತಿದ್ದುದೇ ಇದಕ್ಕೆ ಕಾರಣ.

“ನಾವು ಒಂದು ಜಾತ್ಯತೀತ ರಾಷ್ಟ್ರ ಎಂದು ಹೇಳುವುದರಿಂದ ನಾವು ಅದ್ಭುತವಾದ ಔದಾರ್ಯಪೂರ್ಣವಾದುದನ್ನು ಮಾಡುತ್ತಿದ್ದೇವೆ ಎಂದಾಗಲೀ, ಜಗತ್ತಿಗೆ ನಮ್ಮ ಜೇಬಿನಿಂದ ಏನನ್ನಾದರೂ ಕೊಡುತ್ತಿದ್ದೇವೆ ಎಂದಾಗಲೀ, ನಾವು ಮಾಡಬಾರದನ್ನೇನ್ನಾದರೂ ಮಾಡುತ್ತಿದ್ದೇವೆ ಎಂದಾಗಲೀ ಅರ್ಥವಲ್ಲ. ಜಗತ್ತಿನ ಕೆಲವು ದಾರಿತಪ್ಪಿದ ಮತ್ತು ಹಿಂದುಳಿದ ರಾಷ್ಟ್ರಗಳನ್ನು ಹೊರತುಪಡಿಸಿ ಪ್ರತಿಯೊಂದು ದೇಶವು ಮಾಡಿರುವುದನ್ನೇ ನಾವು ಮಾಡಿದ್ದೇವೆ” ಎಂದು ಅವರು ಸಂವಿಧಾನ ಸಭೆಯಲ್ಲಿ ಹೇಳಿದ್ದರು. ಆ ಮೂಲಕ ನಾಗರಿಕ ಜಗತ್ತಿನಲ್ಲಿ ಒಪ್ಪಿತವಾದ ಜಾತ್ಯತೀತ ತತ್ವಗಳನ್ನು ಸಮರ್ಥಿಸಿದ್ದರು.

 

ದೇಶ ವಿಭಜನೆಯ ಹಿಂಸಾಚಾರದ ಬಳಿಕವೂ ಜಾತ್ಯತೀತತೆಯ ಪರಿಕಲ್ಪನೆಯನ್ನು ಸಮರ್ಥಿಸಬಲ್ಲ ನೈತಿಕ ಸ್ಥೈರ್ಯವಿದ್ದ ಜನರು ಅಂದು ಇದ್ದರೆ, ಇಂದು ಜಾತ್ಯತೀತ ಎಂದು ಹೇಳಿಕೊಳ್ಳುವ ಪಕ್ಷಗಳಲ್ಲಿಯೂ ಈ ನಂಬಿಕೆ ಸವಕಲಾಗುತ್ತಿದೆ. ವಿಭಜನಕಾರಿ ಚಿಂತನೆಗಳಿಗೆ ಹಿಂದುತ್ವ ಪಕ್ಷಗಳ ಬಹಿರಂಗ ನಿಷ್ಟೆಗೆ ಎದುರಾಗಿ, ಜಾತ್ಯತೀತತೆಯ ಪರ ಹಿಂಜರಿಕೆಯ, ಚೈತನ್ಯವಿಲ್ಲದ ಪ್ರತಿರೋಧವಷ್ಟೇ ವ್ಯಕ್ತವಾಗುತ್ತಿದೆ. ವಾಸ್ತವವಾಗಿ ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧ ಪ್ರತಿಭಟಿಸುತ್ತಿರುವವರು ಮಾತ್ರ ರಾಜಕೀಯ ರಂಗದಲ್ಲಿ ಜಾತ್ಯತೀತತೆಯನ್ನು ಪುನಶ್ಚೇತನಗೊಳಿಸುತ್ತಿದ್ದಾರೆ.

ಅಲ್ಪಸಂಖ್ಯಾತರ ಹಕ್ಕುಗಳು

ಗಾಂಧಿಯವರು ಸಂವಿಧಾನ ರಚನಾ ಸಭೆಯ ಸದಸ್ಯರಾಗಿರಲಿಲ್ಲ. ಒಂದು ಪ್ರಜಾಪ್ರಭುತ್ವದ ನಿಜವಾದ ಪರೀಕ್ಷೆಯು, ಸಮಾಜವು ತನ್ನ ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದರ ಜೊತೆ ಆಳವಾಗಿ ತಳಕುಹಾಕಿಕೊಂಡಿದೆ ಎಂದವರು ನಂಬಿದ್ದರು.

ಇಂದಿನಂತೆ ಅಂದೂ ಕೂಡಾ ತಾವು ಗಾಂಧಿಯವರ ಅನುಯಾಯಿಗಳು ಎಂದು ಹೇಳಿಕೊಳ್ಳುವ ಕಾಂಗ್ರೆಸಿಗರಿದ್ದರು. ಆದರೆ, ಅವರು ಗಾಂಧಿಯವರ ಮೇಲಿನ ವಿಚಾರಗಳನ್ನು ತಿರಸ್ಕರಿಸಿ, ಪೌರತ್ವ ಕುರಿತ ಹಿಂದೂತ್ವವಾದಿಗಳ ಸಂಕುಚಿತ ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ಸೀಮಿತಗೊಳಿಸುವ ಪರಿಕಲ್ಪನೆಯನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆಂಬಲಿಸಿದ್ದರು. ಅಂತವರಲ್ಲಿ ಒಬ್ಬರು ಕಾಂಗ್ರೆಸಿಗ ಮಹಾವೀರ ತ್ಯಾಗಿ. ಅಲ್ಪಸಂಖ್ಯಾತರ ಹಕ್ಕುಗಳ ಕುರಿತ ಚರ್ಚೆಯನ್ನು ಮುಂದೂಡಿ, ನಂತರದಲ್ಲಿ ಈ ವಿಷಯದ ಕುರಿತು ನಿರ್ಧರಿಸಬೇಕು ಎಂದು ಅವರು ಸಂವಿಧಾನ ಸಭೆಗೆ ಸಲಹೆ ಮಾಡಿದ್ದರು.

ಅವರದ್ದೇ ನಿಲುವನ್ನೇ ಗೃಹಮಂತ್ರಿ ಅಮಿತ್ ಶಾ ಇತ್ತೀಚೆಗೆ ಸಂಸತ್ತಿನಲ್ಲಿ ನೀಡಿರುವ ಹೇಳಿಕೆಯು ಪ್ರತಿಫಲಿಸುತ್ತದೆ. ತಮಗೆ ವಿಶೇಷ ಅವಕಾಶಗಳನ್ನು ಬೆಂಬಲಿಸುವುದಾದರೆ, ಅಲ್ಪಸಂಖ್ಯಾತರಿಗೆ ಪೌರತ್ವ ತಿದ್ದುಪಡಿ ಕಾಯಿದೆಯನ್ನು ವಿರೋಧಿಸುವ ನೈತಿಕ ಹಕ್ಕಿಲ್ಲ ಎಂದವರು ಹೇಳಿದ್ದರು.

ತ್ಯಾಗಿಯ ವಿಚಾರಗಳನ್ನು ಮತ್ತು ಶಾ ಪುನರುಚ್ಛಾರವನ್ನು ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ನಿರ್ಣಾಯಕವಾಗಿ ತಿರಸ್ಕರಿಸಿದ್ದರು.

“ಈ ಪ್ರಸ್ತಾಪವನ್ನು ಬೆಂಬಲಿಸಲು ಇರುವ ಏಕೈಕ ಕಾರಣವೆಂದರೆ- ಯಾರೂ ಇದನ್ನು ಊಹಿಸಬಹುದು- ಅಲ್ಪಸಂಖ್ಯಾತರ ಹಕ್ಕುಗಳು ಸಾಂಬಂಧಿಕವಾಗಿರಬೇಕು ಎಂಬುದು. ಅದರ (ತ್ಯಾಗಿ ವಾದದ) ಅರ್ಥವೆಂದರೆ ನಾವು ಹಿಂದೂಸ್ಥಾನ್ ಪ್ರದೇಶದಲ್ಲಿರುವ ಅಲ್ಪಸಂಖ್ಯಾತರಿಗೆ ಯಾವುದೇ ಹಕ್ಕುಗಳನ್ನು ನೀಡುವ ಮೊದಲು ಪಾಕಿಸ್ತಾನದ ಸಂವಿಧಾನ ಸಭೆಯು ಅಲ್ಪಸಂಖ್ಯಾತರಿಗೆ ಯಾವ ಹಕ್ಕುಗಳನ್ನು ನೀಡುತ್ತದೆ ಎಂದು ಕಾದುನೋಡಬೇಕು ಎಂಬುದು” ಎಂದು ಅಂಬೇಡ್ಕರ್ ಹೇಳಿದ್ದರು.

ಅವರು ಮುಂದುವರಿದು ಹೀಗೆ ಹೇಳಿದ್ದರು: “ಈಗ ಸ್ವಾಮಿ, ಎಲ್ಲಾ ಮತಬೇಧಗಳೊಂದಿಗೆ ನಾನು ಇಂತಹಾ ಯಾವುದೇ ವಿಚಾರಗಳನ್ನು ವಿರೋಧಿಸಬೇಕು. (ಇಲ್ಲಿನ) ಅಲ್ಪಸಂಖ್ಯಾತರ ಹಕ್ಕುಗಳು ಸಾಪೇಕ್ಷ (ಸಹಜ ಹಕ್ಕುಗಳು) ಹಕ್ಕುಗಳಾಗಿರಬೇಕು. ಬೇರೊಂದು ಪಕ್ಷವು (ಪಾಕಿಸ್ತಾನ) ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರಿಗೆ ಏನು ಮಾಡುತ್ತದೆ ಎಂಬಂತಹ ಯಾವುದೇ ಪರಿಗಣನೆಗೆ ಒಳಪಡಬಾರದು.

ಆದರೆ, ಸಂವಿಧಾನ ದ್ವೇಷಿ ಬಲಪಂಥೀಯರು ಇದೀಗ ಅದನ್ನೇ ಮಾಡುತ್ತಿದ್ದಾರೆ- ಧರ್ಮಾಧರಿತ ಪೌರತ್ವವನ್ನು ತರಲು ಹೊರಟಿರುವ ಮೂಲಕ! ಅವರು ಸಂವಿಧಾನದ ಮೂಲ ಆಶಯಗಳನ್ನು ನಾಶಮಾಡುತ್ತಿದ್ದಾರೆ. ಇದನ್ನು ವಿರೋಧಿಸದಿದ್ದರೇ, ನಮ್ಮ ಪವಿತ್ರ ಸಂವಿಧಾನಕ್ಕೇ ಕುತ್ತು ಬರಬಹುದು!

(ದೇಶ ವಿಭಜನೆಯ ಕಾಲದಲ್ಲಿ ನಿರಾಶ್ರಿತರಾದ ಹಿಂದೂ, ಮುಸ್ಲಿಂ ಮತ್ತು ಸಿಕ್ಖರ ಪೌರತ್ವ ಕುರಿತು ಕೂಡಾ ಬಲಪಂಥೀಯರು ಯಾವ ರೀತಿ ವಿಭಜನಕಾರಿ ನಿಲುವು ತಳೆದಿದ್ದರು ಎಂಬ ಬಗ್ಗೆ ಇನ್ನೊಂದು ಲೇಖನವನ್ನು ನಿರೀಕ್ಷಿಸಿ.)


ಇದನ್ನೂ ಓದಿ: ಧರ್ಮಾಧಾರಿತ ಪೌರತ್ವ: ಇಂದಿನ ಭಾರತದ ಬಗ್ಗೆ 70 ವರ್ಷಗಳ ಹಿಂದೆಯೇ ಚರ್ಚಿಸಿದ್ದ ಸಂವಿಧಾನ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...