Homeಮುಖಪುಟಜಾತ್ಯತೀತತೆ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಸಂವಿಧಾನ ಸಭೆಯಲ್ಲಿ ಪರ ಯಾರು? ವಿರೋಧ ಯಾರು?

ಜಾತ್ಯತೀತತೆ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಸಂವಿಧಾನ ಸಭೆಯಲ್ಲಿ ಪರ ಯಾರು? ವಿರೋಧ ಯಾರು?

ಗಾಂಧಿಯವರು ಒಂದು ಪ್ರಜಾಪ್ರಭುತ್ವದ ನಿಜವಾದ ಪರೀಕ್ಷೆಯು, ಸಮಾಜವು ತನ್ನ ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದರ ಜೊತೆ ಆಳವಾಗಿ ತಳಕುಹಾಕಿಕೊಂಡಿದೆ ಎಂದು ನಂಬಿದ್ದರು.

- Advertisement -
- Advertisement -

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಸಂವಿಧಾನ ಸಭೆಯಲ್ಲಿ 1949ರಲ್ಲಿ ಜಾತ್ಯತೀತತೆಯ ಕುರಿತು ಚರ್ಚೆ ನಡೆದಾಗಲೆಲ್ಲಾ ಅಂದಿನ ನಾಝಿ ಜರ್ಮನಿ ಮತ್ತು ಫ್ಯಾಸಿಸ್ಟ್ ಇಟಲಿಯ ತಾರತಮ್ಯ ಮತ್ತು ದಮನದ ಸಿದ್ಧಾಂತಗಳಿಂದ ಪ್ರಭಾವಿತರಾಗಿದ್ದ ಬಲ ಪಂಥೀಯರು ಲೇವಡಿ ಮಾಡುತ್ತಿದ್ದರು. ಇದೀಗ ಅವರ ವಾರಸುದಾರರು ಅಧಿಕಾರ ಹಿಡಿದಿದ್ದು, ಅದನ್ನೇ ಹೆಚ್ಚು ಆಕ್ರಮಣಕಾರಿಯಾಗಿ ಮುಂದುವರಿಸಿದ್ದಾರೆ. ಎನ್‌ಆರ್‌ಸಿ, ಸಿಎಎ ಹಿನ್ನೆಲೆಯಲ್ಲಿ ಜಾತ್ಯತೀತತೆ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಸಂವಿಧಾನ ಸಭೆಯಲ್ಲಿ ನಡೆದ ಚರ್ಚೆಯ ಕೆಲ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಅಂದು ಜಾತ್ಯಾತೀತತೆಯ ಕುರಿತು ಬಲಪಂಥೀಯರ ನಿರಂತರ ಲೇವಡಿಯಿಂದ ಆತಂಕಿತರಾದವರಲ್ಲಿ ಜವಾಹರಲಾಲ್ ನೆಹರೂ ಅವರೂ ಒಬ್ಬರಾಗಿದ್ದರು. ಭಾರತದ ಎಲ್ಲಾ ಸಮಸ್ಯೆಗಳಿಗೆ ಜಾತ್ಯತೀತತೆಯೇ ಮೂಲ ಕಾರಣ ಎಂದು ಬಿಂಬಿಸಲಾಗುತ್ತಿದ್ದುದೇ ಇದಕ್ಕೆ ಕಾರಣ.

“ನಾವು ಒಂದು ಜಾತ್ಯತೀತ ರಾಷ್ಟ್ರ ಎಂದು ಹೇಳುವುದರಿಂದ ನಾವು ಅದ್ಭುತವಾದ ಔದಾರ್ಯಪೂರ್ಣವಾದುದನ್ನು ಮಾಡುತ್ತಿದ್ದೇವೆ ಎಂದಾಗಲೀ, ಜಗತ್ತಿಗೆ ನಮ್ಮ ಜೇಬಿನಿಂದ ಏನನ್ನಾದರೂ ಕೊಡುತ್ತಿದ್ದೇವೆ ಎಂದಾಗಲೀ, ನಾವು ಮಾಡಬಾರದನ್ನೇನ್ನಾದರೂ ಮಾಡುತ್ತಿದ್ದೇವೆ ಎಂದಾಗಲೀ ಅರ್ಥವಲ್ಲ. ಜಗತ್ತಿನ ಕೆಲವು ದಾರಿತಪ್ಪಿದ ಮತ್ತು ಹಿಂದುಳಿದ ರಾಷ್ಟ್ರಗಳನ್ನು ಹೊರತುಪಡಿಸಿ ಪ್ರತಿಯೊಂದು ದೇಶವು ಮಾಡಿರುವುದನ್ನೇ ನಾವು ಮಾಡಿದ್ದೇವೆ” ಎಂದು ಅವರು ಸಂವಿಧಾನ ಸಭೆಯಲ್ಲಿ ಹೇಳಿದ್ದರು. ಆ ಮೂಲಕ ನಾಗರಿಕ ಜಗತ್ತಿನಲ್ಲಿ ಒಪ್ಪಿತವಾದ ಜಾತ್ಯತೀತ ತತ್ವಗಳನ್ನು ಸಮರ್ಥಿಸಿದ್ದರು.

 

ದೇಶ ವಿಭಜನೆಯ ಹಿಂಸಾಚಾರದ ಬಳಿಕವೂ ಜಾತ್ಯತೀತತೆಯ ಪರಿಕಲ್ಪನೆಯನ್ನು ಸಮರ್ಥಿಸಬಲ್ಲ ನೈತಿಕ ಸ್ಥೈರ್ಯವಿದ್ದ ಜನರು ಅಂದು ಇದ್ದರೆ, ಇಂದು ಜಾತ್ಯತೀತ ಎಂದು ಹೇಳಿಕೊಳ್ಳುವ ಪಕ್ಷಗಳಲ್ಲಿಯೂ ಈ ನಂಬಿಕೆ ಸವಕಲಾಗುತ್ತಿದೆ. ವಿಭಜನಕಾರಿ ಚಿಂತನೆಗಳಿಗೆ ಹಿಂದುತ್ವ ಪಕ್ಷಗಳ ಬಹಿರಂಗ ನಿಷ್ಟೆಗೆ ಎದುರಾಗಿ, ಜಾತ್ಯತೀತತೆಯ ಪರ ಹಿಂಜರಿಕೆಯ, ಚೈತನ್ಯವಿಲ್ಲದ ಪ್ರತಿರೋಧವಷ್ಟೇ ವ್ಯಕ್ತವಾಗುತ್ತಿದೆ. ವಾಸ್ತವವಾಗಿ ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧ ಪ್ರತಿಭಟಿಸುತ್ತಿರುವವರು ಮಾತ್ರ ರಾಜಕೀಯ ರಂಗದಲ್ಲಿ ಜಾತ್ಯತೀತತೆಯನ್ನು ಪುನಶ್ಚೇತನಗೊಳಿಸುತ್ತಿದ್ದಾರೆ.

ಅಲ್ಪಸಂಖ್ಯಾತರ ಹಕ್ಕುಗಳು

ಗಾಂಧಿಯವರು ಸಂವಿಧಾನ ರಚನಾ ಸಭೆಯ ಸದಸ್ಯರಾಗಿರಲಿಲ್ಲ. ಒಂದು ಪ್ರಜಾಪ್ರಭುತ್ವದ ನಿಜವಾದ ಪರೀಕ್ಷೆಯು, ಸಮಾಜವು ತನ್ನ ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದರ ಜೊತೆ ಆಳವಾಗಿ ತಳಕುಹಾಕಿಕೊಂಡಿದೆ ಎಂದವರು ನಂಬಿದ್ದರು.

ಇಂದಿನಂತೆ ಅಂದೂ ಕೂಡಾ ತಾವು ಗಾಂಧಿಯವರ ಅನುಯಾಯಿಗಳು ಎಂದು ಹೇಳಿಕೊಳ್ಳುವ ಕಾಂಗ್ರೆಸಿಗರಿದ್ದರು. ಆದರೆ, ಅವರು ಗಾಂಧಿಯವರ ಮೇಲಿನ ವಿಚಾರಗಳನ್ನು ತಿರಸ್ಕರಿಸಿ, ಪೌರತ್ವ ಕುರಿತ ಹಿಂದೂತ್ವವಾದಿಗಳ ಸಂಕುಚಿತ ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ಸೀಮಿತಗೊಳಿಸುವ ಪರಿಕಲ್ಪನೆಯನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆಂಬಲಿಸಿದ್ದರು. ಅಂತವರಲ್ಲಿ ಒಬ್ಬರು ಕಾಂಗ್ರೆಸಿಗ ಮಹಾವೀರ ತ್ಯಾಗಿ. ಅಲ್ಪಸಂಖ್ಯಾತರ ಹಕ್ಕುಗಳ ಕುರಿತ ಚರ್ಚೆಯನ್ನು ಮುಂದೂಡಿ, ನಂತರದಲ್ಲಿ ಈ ವಿಷಯದ ಕುರಿತು ನಿರ್ಧರಿಸಬೇಕು ಎಂದು ಅವರು ಸಂವಿಧಾನ ಸಭೆಗೆ ಸಲಹೆ ಮಾಡಿದ್ದರು.

ಅವರದ್ದೇ ನಿಲುವನ್ನೇ ಗೃಹಮಂತ್ರಿ ಅಮಿತ್ ಶಾ ಇತ್ತೀಚೆಗೆ ಸಂಸತ್ತಿನಲ್ಲಿ ನೀಡಿರುವ ಹೇಳಿಕೆಯು ಪ್ರತಿಫಲಿಸುತ್ತದೆ. ತಮಗೆ ವಿಶೇಷ ಅವಕಾಶಗಳನ್ನು ಬೆಂಬಲಿಸುವುದಾದರೆ, ಅಲ್ಪಸಂಖ್ಯಾತರಿಗೆ ಪೌರತ್ವ ತಿದ್ದುಪಡಿ ಕಾಯಿದೆಯನ್ನು ವಿರೋಧಿಸುವ ನೈತಿಕ ಹಕ್ಕಿಲ್ಲ ಎಂದವರು ಹೇಳಿದ್ದರು.

ತ್ಯಾಗಿಯ ವಿಚಾರಗಳನ್ನು ಮತ್ತು ಶಾ ಪುನರುಚ್ಛಾರವನ್ನು ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ನಿರ್ಣಾಯಕವಾಗಿ ತಿರಸ್ಕರಿಸಿದ್ದರು.

“ಈ ಪ್ರಸ್ತಾಪವನ್ನು ಬೆಂಬಲಿಸಲು ಇರುವ ಏಕೈಕ ಕಾರಣವೆಂದರೆ- ಯಾರೂ ಇದನ್ನು ಊಹಿಸಬಹುದು- ಅಲ್ಪಸಂಖ್ಯಾತರ ಹಕ್ಕುಗಳು ಸಾಂಬಂಧಿಕವಾಗಿರಬೇಕು ಎಂಬುದು. ಅದರ (ತ್ಯಾಗಿ ವಾದದ) ಅರ್ಥವೆಂದರೆ ನಾವು ಹಿಂದೂಸ್ಥಾನ್ ಪ್ರದೇಶದಲ್ಲಿರುವ ಅಲ್ಪಸಂಖ್ಯಾತರಿಗೆ ಯಾವುದೇ ಹಕ್ಕುಗಳನ್ನು ನೀಡುವ ಮೊದಲು ಪಾಕಿಸ್ತಾನದ ಸಂವಿಧಾನ ಸಭೆಯು ಅಲ್ಪಸಂಖ್ಯಾತರಿಗೆ ಯಾವ ಹಕ್ಕುಗಳನ್ನು ನೀಡುತ್ತದೆ ಎಂದು ಕಾದುನೋಡಬೇಕು ಎಂಬುದು” ಎಂದು ಅಂಬೇಡ್ಕರ್ ಹೇಳಿದ್ದರು.

ಅವರು ಮುಂದುವರಿದು ಹೀಗೆ ಹೇಳಿದ್ದರು: “ಈಗ ಸ್ವಾಮಿ, ಎಲ್ಲಾ ಮತಬೇಧಗಳೊಂದಿಗೆ ನಾನು ಇಂತಹಾ ಯಾವುದೇ ವಿಚಾರಗಳನ್ನು ವಿರೋಧಿಸಬೇಕು. (ಇಲ್ಲಿನ) ಅಲ್ಪಸಂಖ್ಯಾತರ ಹಕ್ಕುಗಳು ಸಾಪೇಕ್ಷ (ಸಹಜ ಹಕ್ಕುಗಳು) ಹಕ್ಕುಗಳಾಗಿರಬೇಕು. ಬೇರೊಂದು ಪಕ್ಷವು (ಪಾಕಿಸ್ತಾನ) ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರಿಗೆ ಏನು ಮಾಡುತ್ತದೆ ಎಂಬಂತಹ ಯಾವುದೇ ಪರಿಗಣನೆಗೆ ಒಳಪಡಬಾರದು.

ಆದರೆ, ಸಂವಿಧಾನ ದ್ವೇಷಿ ಬಲಪಂಥೀಯರು ಇದೀಗ ಅದನ್ನೇ ಮಾಡುತ್ತಿದ್ದಾರೆ- ಧರ್ಮಾಧರಿತ ಪೌರತ್ವವನ್ನು ತರಲು ಹೊರಟಿರುವ ಮೂಲಕ! ಅವರು ಸಂವಿಧಾನದ ಮೂಲ ಆಶಯಗಳನ್ನು ನಾಶಮಾಡುತ್ತಿದ್ದಾರೆ. ಇದನ್ನು ವಿರೋಧಿಸದಿದ್ದರೇ, ನಮ್ಮ ಪವಿತ್ರ ಸಂವಿಧಾನಕ್ಕೇ ಕುತ್ತು ಬರಬಹುದು!

(ದೇಶ ವಿಭಜನೆಯ ಕಾಲದಲ್ಲಿ ನಿರಾಶ್ರಿತರಾದ ಹಿಂದೂ, ಮುಸ್ಲಿಂ ಮತ್ತು ಸಿಕ್ಖರ ಪೌರತ್ವ ಕುರಿತು ಕೂಡಾ ಬಲಪಂಥೀಯರು ಯಾವ ರೀತಿ ವಿಭಜನಕಾರಿ ನಿಲುವು ತಳೆದಿದ್ದರು ಎಂಬ ಬಗ್ಗೆ ಇನ್ನೊಂದು ಲೇಖನವನ್ನು ನಿರೀಕ್ಷಿಸಿ.)


ಇದನ್ನೂ ಓದಿ: ಧರ್ಮಾಧಾರಿತ ಪೌರತ್ವ: ಇಂದಿನ ಭಾರತದ ಬಗ್ಗೆ 70 ವರ್ಷಗಳ ಹಿಂದೆಯೇ ಚರ್ಚಿಸಿದ್ದ ಸಂವಿಧಾನ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...