Homeಮುಖಪುಟಜಾತ್ಯತೀತತೆ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಸಂವಿಧಾನ ಸಭೆಯಲ್ಲಿ ಪರ ಯಾರು? ವಿರೋಧ ಯಾರು?

ಜಾತ್ಯತೀತತೆ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಸಂವಿಧಾನ ಸಭೆಯಲ್ಲಿ ಪರ ಯಾರು? ವಿರೋಧ ಯಾರು?

ಗಾಂಧಿಯವರು ಒಂದು ಪ್ರಜಾಪ್ರಭುತ್ವದ ನಿಜವಾದ ಪರೀಕ್ಷೆಯು, ಸಮಾಜವು ತನ್ನ ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದರ ಜೊತೆ ಆಳವಾಗಿ ತಳಕುಹಾಕಿಕೊಂಡಿದೆ ಎಂದು ನಂಬಿದ್ದರು.

- Advertisement -
- Advertisement -

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಸಂವಿಧಾನ ಸಭೆಯಲ್ಲಿ 1949ರಲ್ಲಿ ಜಾತ್ಯತೀತತೆಯ ಕುರಿತು ಚರ್ಚೆ ನಡೆದಾಗಲೆಲ್ಲಾ ಅಂದಿನ ನಾಝಿ ಜರ್ಮನಿ ಮತ್ತು ಫ್ಯಾಸಿಸ್ಟ್ ಇಟಲಿಯ ತಾರತಮ್ಯ ಮತ್ತು ದಮನದ ಸಿದ್ಧಾಂತಗಳಿಂದ ಪ್ರಭಾವಿತರಾಗಿದ್ದ ಬಲ ಪಂಥೀಯರು ಲೇವಡಿ ಮಾಡುತ್ತಿದ್ದರು. ಇದೀಗ ಅವರ ವಾರಸುದಾರರು ಅಧಿಕಾರ ಹಿಡಿದಿದ್ದು, ಅದನ್ನೇ ಹೆಚ್ಚು ಆಕ್ರಮಣಕಾರಿಯಾಗಿ ಮುಂದುವರಿಸಿದ್ದಾರೆ. ಎನ್‌ಆರ್‌ಸಿ, ಸಿಎಎ ಹಿನ್ನೆಲೆಯಲ್ಲಿ ಜಾತ್ಯತೀತತೆ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಸಂವಿಧಾನ ಸಭೆಯಲ್ಲಿ ನಡೆದ ಚರ್ಚೆಯ ಕೆಲ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಅಂದು ಜಾತ್ಯಾತೀತತೆಯ ಕುರಿತು ಬಲಪಂಥೀಯರ ನಿರಂತರ ಲೇವಡಿಯಿಂದ ಆತಂಕಿತರಾದವರಲ್ಲಿ ಜವಾಹರಲಾಲ್ ನೆಹರೂ ಅವರೂ ಒಬ್ಬರಾಗಿದ್ದರು. ಭಾರತದ ಎಲ್ಲಾ ಸಮಸ್ಯೆಗಳಿಗೆ ಜಾತ್ಯತೀತತೆಯೇ ಮೂಲ ಕಾರಣ ಎಂದು ಬಿಂಬಿಸಲಾಗುತ್ತಿದ್ದುದೇ ಇದಕ್ಕೆ ಕಾರಣ.

“ನಾವು ಒಂದು ಜಾತ್ಯತೀತ ರಾಷ್ಟ್ರ ಎಂದು ಹೇಳುವುದರಿಂದ ನಾವು ಅದ್ಭುತವಾದ ಔದಾರ್ಯಪೂರ್ಣವಾದುದನ್ನು ಮಾಡುತ್ತಿದ್ದೇವೆ ಎಂದಾಗಲೀ, ಜಗತ್ತಿಗೆ ನಮ್ಮ ಜೇಬಿನಿಂದ ಏನನ್ನಾದರೂ ಕೊಡುತ್ತಿದ್ದೇವೆ ಎಂದಾಗಲೀ, ನಾವು ಮಾಡಬಾರದನ್ನೇನ್ನಾದರೂ ಮಾಡುತ್ತಿದ್ದೇವೆ ಎಂದಾಗಲೀ ಅರ್ಥವಲ್ಲ. ಜಗತ್ತಿನ ಕೆಲವು ದಾರಿತಪ್ಪಿದ ಮತ್ತು ಹಿಂದುಳಿದ ರಾಷ್ಟ್ರಗಳನ್ನು ಹೊರತುಪಡಿಸಿ ಪ್ರತಿಯೊಂದು ದೇಶವು ಮಾಡಿರುವುದನ್ನೇ ನಾವು ಮಾಡಿದ್ದೇವೆ” ಎಂದು ಅವರು ಸಂವಿಧಾನ ಸಭೆಯಲ್ಲಿ ಹೇಳಿದ್ದರು. ಆ ಮೂಲಕ ನಾಗರಿಕ ಜಗತ್ತಿನಲ್ಲಿ ಒಪ್ಪಿತವಾದ ಜಾತ್ಯತೀತ ತತ್ವಗಳನ್ನು ಸಮರ್ಥಿಸಿದ್ದರು.

 

ದೇಶ ವಿಭಜನೆಯ ಹಿಂಸಾಚಾರದ ಬಳಿಕವೂ ಜಾತ್ಯತೀತತೆಯ ಪರಿಕಲ್ಪನೆಯನ್ನು ಸಮರ್ಥಿಸಬಲ್ಲ ನೈತಿಕ ಸ್ಥೈರ್ಯವಿದ್ದ ಜನರು ಅಂದು ಇದ್ದರೆ, ಇಂದು ಜಾತ್ಯತೀತ ಎಂದು ಹೇಳಿಕೊಳ್ಳುವ ಪಕ್ಷಗಳಲ್ಲಿಯೂ ಈ ನಂಬಿಕೆ ಸವಕಲಾಗುತ್ತಿದೆ. ವಿಭಜನಕಾರಿ ಚಿಂತನೆಗಳಿಗೆ ಹಿಂದುತ್ವ ಪಕ್ಷಗಳ ಬಹಿರಂಗ ನಿಷ್ಟೆಗೆ ಎದುರಾಗಿ, ಜಾತ್ಯತೀತತೆಯ ಪರ ಹಿಂಜರಿಕೆಯ, ಚೈತನ್ಯವಿಲ್ಲದ ಪ್ರತಿರೋಧವಷ್ಟೇ ವ್ಯಕ್ತವಾಗುತ್ತಿದೆ. ವಾಸ್ತವವಾಗಿ ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧ ಪ್ರತಿಭಟಿಸುತ್ತಿರುವವರು ಮಾತ್ರ ರಾಜಕೀಯ ರಂಗದಲ್ಲಿ ಜಾತ್ಯತೀತತೆಯನ್ನು ಪುನಶ್ಚೇತನಗೊಳಿಸುತ್ತಿದ್ದಾರೆ.

ಅಲ್ಪಸಂಖ್ಯಾತರ ಹಕ್ಕುಗಳು

ಗಾಂಧಿಯವರು ಸಂವಿಧಾನ ರಚನಾ ಸಭೆಯ ಸದಸ್ಯರಾಗಿರಲಿಲ್ಲ. ಒಂದು ಪ್ರಜಾಪ್ರಭುತ್ವದ ನಿಜವಾದ ಪರೀಕ್ಷೆಯು, ಸಮಾಜವು ತನ್ನ ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದರ ಜೊತೆ ಆಳವಾಗಿ ತಳಕುಹಾಕಿಕೊಂಡಿದೆ ಎಂದವರು ನಂಬಿದ್ದರು.

ಇಂದಿನಂತೆ ಅಂದೂ ಕೂಡಾ ತಾವು ಗಾಂಧಿಯವರ ಅನುಯಾಯಿಗಳು ಎಂದು ಹೇಳಿಕೊಳ್ಳುವ ಕಾಂಗ್ರೆಸಿಗರಿದ್ದರು. ಆದರೆ, ಅವರು ಗಾಂಧಿಯವರ ಮೇಲಿನ ವಿಚಾರಗಳನ್ನು ತಿರಸ್ಕರಿಸಿ, ಪೌರತ್ವ ಕುರಿತ ಹಿಂದೂತ್ವವಾದಿಗಳ ಸಂಕುಚಿತ ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ಸೀಮಿತಗೊಳಿಸುವ ಪರಿಕಲ್ಪನೆಯನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆಂಬಲಿಸಿದ್ದರು. ಅಂತವರಲ್ಲಿ ಒಬ್ಬರು ಕಾಂಗ್ರೆಸಿಗ ಮಹಾವೀರ ತ್ಯಾಗಿ. ಅಲ್ಪಸಂಖ್ಯಾತರ ಹಕ್ಕುಗಳ ಕುರಿತ ಚರ್ಚೆಯನ್ನು ಮುಂದೂಡಿ, ನಂತರದಲ್ಲಿ ಈ ವಿಷಯದ ಕುರಿತು ನಿರ್ಧರಿಸಬೇಕು ಎಂದು ಅವರು ಸಂವಿಧಾನ ಸಭೆಗೆ ಸಲಹೆ ಮಾಡಿದ್ದರು.

ಅವರದ್ದೇ ನಿಲುವನ್ನೇ ಗೃಹಮಂತ್ರಿ ಅಮಿತ್ ಶಾ ಇತ್ತೀಚೆಗೆ ಸಂಸತ್ತಿನಲ್ಲಿ ನೀಡಿರುವ ಹೇಳಿಕೆಯು ಪ್ರತಿಫಲಿಸುತ್ತದೆ. ತಮಗೆ ವಿಶೇಷ ಅವಕಾಶಗಳನ್ನು ಬೆಂಬಲಿಸುವುದಾದರೆ, ಅಲ್ಪಸಂಖ್ಯಾತರಿಗೆ ಪೌರತ್ವ ತಿದ್ದುಪಡಿ ಕಾಯಿದೆಯನ್ನು ವಿರೋಧಿಸುವ ನೈತಿಕ ಹಕ್ಕಿಲ್ಲ ಎಂದವರು ಹೇಳಿದ್ದರು.

ತ್ಯಾಗಿಯ ವಿಚಾರಗಳನ್ನು ಮತ್ತು ಶಾ ಪುನರುಚ್ಛಾರವನ್ನು ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ನಿರ್ಣಾಯಕವಾಗಿ ತಿರಸ್ಕರಿಸಿದ್ದರು.

“ಈ ಪ್ರಸ್ತಾಪವನ್ನು ಬೆಂಬಲಿಸಲು ಇರುವ ಏಕೈಕ ಕಾರಣವೆಂದರೆ- ಯಾರೂ ಇದನ್ನು ಊಹಿಸಬಹುದು- ಅಲ್ಪಸಂಖ್ಯಾತರ ಹಕ್ಕುಗಳು ಸಾಂಬಂಧಿಕವಾಗಿರಬೇಕು ಎಂಬುದು. ಅದರ (ತ್ಯಾಗಿ ವಾದದ) ಅರ್ಥವೆಂದರೆ ನಾವು ಹಿಂದೂಸ್ಥಾನ್ ಪ್ರದೇಶದಲ್ಲಿರುವ ಅಲ್ಪಸಂಖ್ಯಾತರಿಗೆ ಯಾವುದೇ ಹಕ್ಕುಗಳನ್ನು ನೀಡುವ ಮೊದಲು ಪಾಕಿಸ್ತಾನದ ಸಂವಿಧಾನ ಸಭೆಯು ಅಲ್ಪಸಂಖ್ಯಾತರಿಗೆ ಯಾವ ಹಕ್ಕುಗಳನ್ನು ನೀಡುತ್ತದೆ ಎಂದು ಕಾದುನೋಡಬೇಕು ಎಂಬುದು” ಎಂದು ಅಂಬೇಡ್ಕರ್ ಹೇಳಿದ್ದರು.

ಅವರು ಮುಂದುವರಿದು ಹೀಗೆ ಹೇಳಿದ್ದರು: “ಈಗ ಸ್ವಾಮಿ, ಎಲ್ಲಾ ಮತಬೇಧಗಳೊಂದಿಗೆ ನಾನು ಇಂತಹಾ ಯಾವುದೇ ವಿಚಾರಗಳನ್ನು ವಿರೋಧಿಸಬೇಕು. (ಇಲ್ಲಿನ) ಅಲ್ಪಸಂಖ್ಯಾತರ ಹಕ್ಕುಗಳು ಸಾಪೇಕ್ಷ (ಸಹಜ ಹಕ್ಕುಗಳು) ಹಕ್ಕುಗಳಾಗಿರಬೇಕು. ಬೇರೊಂದು ಪಕ್ಷವು (ಪಾಕಿಸ್ತಾನ) ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರಿಗೆ ಏನು ಮಾಡುತ್ತದೆ ಎಂಬಂತಹ ಯಾವುದೇ ಪರಿಗಣನೆಗೆ ಒಳಪಡಬಾರದು.

ಆದರೆ, ಸಂವಿಧಾನ ದ್ವೇಷಿ ಬಲಪಂಥೀಯರು ಇದೀಗ ಅದನ್ನೇ ಮಾಡುತ್ತಿದ್ದಾರೆ- ಧರ್ಮಾಧರಿತ ಪೌರತ್ವವನ್ನು ತರಲು ಹೊರಟಿರುವ ಮೂಲಕ! ಅವರು ಸಂವಿಧಾನದ ಮೂಲ ಆಶಯಗಳನ್ನು ನಾಶಮಾಡುತ್ತಿದ್ದಾರೆ. ಇದನ್ನು ವಿರೋಧಿಸದಿದ್ದರೇ, ನಮ್ಮ ಪವಿತ್ರ ಸಂವಿಧಾನಕ್ಕೇ ಕುತ್ತು ಬರಬಹುದು!

(ದೇಶ ವಿಭಜನೆಯ ಕಾಲದಲ್ಲಿ ನಿರಾಶ್ರಿತರಾದ ಹಿಂದೂ, ಮುಸ್ಲಿಂ ಮತ್ತು ಸಿಕ್ಖರ ಪೌರತ್ವ ಕುರಿತು ಕೂಡಾ ಬಲಪಂಥೀಯರು ಯಾವ ರೀತಿ ವಿಭಜನಕಾರಿ ನಿಲುವು ತಳೆದಿದ್ದರು ಎಂಬ ಬಗ್ಗೆ ಇನ್ನೊಂದು ಲೇಖನವನ್ನು ನಿರೀಕ್ಷಿಸಿ.)


ಇದನ್ನೂ ಓದಿ: ಧರ್ಮಾಧಾರಿತ ಪೌರತ್ವ: ಇಂದಿನ ಭಾರತದ ಬಗ್ಗೆ 70 ವರ್ಷಗಳ ಹಿಂದೆಯೇ ಚರ್ಚಿಸಿದ್ದ ಸಂವಿಧಾನ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...